<?xml version='1.0' encoding='UTF-8'?><?xml-stylesheet href="http://www.blogger.com/styles/atom.css" type="text/css"?><feed xmlns='http://www.w3.org/2005/Atom' xmlns:openSearch='http://a9.com/-/spec/opensearchrss/1.0/' xmlns:georss='http://www.georss.org/georss' xmlns:gd='http://schemas.google.com/g/2005' xmlns:thr='http://purl.org/syndication/thread/1.0'><id>tag:blogger.com,1999:blog-714642904810204846</id><updated>2012-02-11T21:54:20.321+05:30</updated><category term='ವ್ಯಾಲೆಂಟೈನ್ಸ್ ಡೇ'/><category term='ಕವಿತೆ'/><category term='ಪತ್ರ'/><category term='ಕಥೆ'/><category term='ಕಥೆ? ಕಾಣ್ಕೆ?'/><category term='The boy I love'/><title type='text'>ಮೃಗನಯನೀ</title><subtitle type='html'>ಮನದೊಳಗಿನ ಕಣ್ಣು.....</subtitle><link rel='http://schemas.google.com/g/2005#feed' type='application/atom+xml' href='http://mrugnayanee.blogspot.com/feeds/posts/default'/><link rel='self' type='application/atom+xml' href='http://www.blogger.com/feeds/714642904810204846/posts/default?max-results=100'/><link rel='alternate' type='text/html' href='http://mrugnayanee.blogspot.com/'/><link rel='hub' href='http://pubsubhubbub.appspot.com/'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><generator version='7.00' uri='http://www.blogger.com'>Blogger</generator><openSearch:totalResults>23</openSearch:totalResults><openSearch:startIndex>1</openSearch:startIndex><openSearch:itemsPerPage>100</openSearch:itemsPerPage><entry><id>tag:blogger.com,1999:blog-714642904810204846.post-4998286701426598511</id><published>2011-07-13T22:49:00.003+05:30</published><updated>2011-08-29T14:36:06.405+05:30</updated><title type='text'>ನೆನಪಿಗೂ ನೆರಳ ಬಣ್ಣ</title><content type='html'>ತೊಂಬತ್ತು ವರ್ಷವಾದಮೇಲೂ ಬರೆಯುವ ಆಸಕ್ತಿ ಇರಲು ಸಾಧ್ಯವೇ? ಜಗತ್ತಿನ ದೊಡ್ಡ ದೊಡ್ಡ ಲೇಖಕರೆಲ್ಲಾ ಸಾಯುವವರೆಗೂ ಬರೆಯುತ್ತಿದ್ದರೇ? ಯಾವ ಲೇಖಕನ ಹೆಸರೂ ನೆನಪಿಗೆ ಬರುತ್ತಿಲ್ಲ. ತುಂಬ ಲೇಖಕರನ್ನು ಓದಿದ್ದೇನೆ ಅನ್ನುವುದಂತೂ ನಿಜ. ನಾನು ಸಣ್ಣವಯಸ್ಸಿನಲ್ಲಿ ಇಷ್ಟಪಟ್ಟು ಓದುತ್ತಿದ್ದ ಲೇಖಕ ಅದ್ಯಾರದು? ದಕ್ಷಿಣ ಕನ್ನಡದವರು ಏನೋ ಅಡಿಗ? ಯಾವ ಅಡಿಗ ಮರೆತೇ ಹೋಯಿತಲ್ಲ? ಯಾರನ್ನಾದರೂ ಕೇಳಬೇಕು, ಮೊಮ್ಮೊಗು ಅಗಸ್ತ್ಯನೂ ತುಂಬ ಓದುತ್ತಾನೆ. ’ಅರವಿಂದ ಅಡಿಗ ಇರಬೇಕು ಅಜ್ಜಿ’ ಅಂದ, ಆದರೆ ಅವನಿಗೆ ಕನ್ನಡದ ಲೇಖಕರು ಗೊತ್ತಿರುತ್ತಾರ? ಹೆಸರು ಗೊತ್ತಿಲ್ಲದೇ ಇರುತ್ತದೆಯೇ? ಅರವಿಂದ ಅಡಿಗನೇ ಇರಬೇಕು. ನಾನು ಇಷ್ಟಪಟ್ಟು ಓದುತ್ತಿದ್ದ ಲೇಖಕರ ಹೆಸರೇ ಗೊತ್ತಿಲದ ಮೇಲೆ ನಾನ್ಯಾಕೆ ಬರೆಯಬೇಕು ನನಗೇನಾದರೂ ನೆನಪಿರುವುದು ನಿಜವಾ? &lt;br /&gt;&lt;br /&gt;ಆದರೆ ಅವತ್ತು ನಡೆದದ್ದನ್ನು, ನನ್ನ ಅನಿಸಿಕೆಗಳನ್ನು ಬರೆಯಲೇಬೇಕು ಅಂದುಕೊಂಡಿದ್ದೆನಲ್ಲಾ.. ಈಗ ಯಾಕೋ ಬರೆದೂ ಏನುಪಯೋಗ ಅನ್ನಿಸುತ್ತಿದೆ. ಸುಮ್ಮನೆ ಶ್ರಮ. ಅಗಸ್ತ್ಯನ ಕಾಲೇಜು ಬ್ಯಾಗಿನಿಂದ ಕಳ್ಳಿಯ ಥರ ಪೆನ್ನು ಪುಸ್ತಕ ಕದ್ದಿಟ್ಟುಕೊಳ್ಳುವ ಅವಶ್ಯಕತೆ ಏನಿತ್ತು? ಆತ್ರೇಯನಿಗೆ ಹೇಳಿದ್ದರೆ ಏನೂ ಕೇಳದೆ ಅವನೇ ’ಅಮ್ಮಾ ನೀನು ಹೇಳ್ತಾ ಹೋಗು ನಾನು ಟೈಪ್ ಮಾಡ್ತಿನಿ’ ಅನ್ನುತ್ತಿದ್ದ. ಇಲ್ಲ ಪುಸ್ತಕದಲ್ಲಿ ನಾನೇ ಬರೀತಿನಿ ಅಂತ ಹಟ ಮಾಡಿದ್ದರೂ ಚಂದದ ಪುಸ್ತಕ ಪೆನ್ನು ತಂದುಕೊಡುತ್ತಿದ್ದ. ಆದರೆ ಯಾವಾಗಲಾದರೂ ಏನು ಬರ್ದಿದಿಯ ತೋರ್ಸು ಅಂತ ಕೇಳಿಯೋ ಅಥವ ಅವನ್ಯಾವಾಗಲಾದರೂ ಬಂದು, ನಾನು ಬರೆದಿದ್ದೆಲ್ಲವನ್ನೂ ಓದಿ..... ಅವನಿಂದ ಮುಚ್ಚಿಡುವಂಥದ್ದೇನು ಬರೆಯುತ್ತಿಲ್ಲ. ಅವನಿಂದ ಏನೂ ಮುಚ್ಚಿಡಬೇಕಿಲ್ಲ,&lt;br /&gt;&lt;br /&gt;ಹನ್ನೆರೆಡು ವರ್ಷದ ಆತ್ರೇಯನಿಗೆ ನಾನು ಅವನ ಅಪ್ಪ ಜಗಳವಾಡುತ್ತಿದ್ದುದು, ಅದರ ಕಾರಣ ಎಲ್ಲಾ ಗೊತ್ತಾಗುತ್ತಿತ್ತು. ಅವನಿಗೆ ಎಲ್ಲಾ ಗೊತ್ತಾಗುತ್ತಿದೆ ಅನ್ನುವುದು ನನಗೂ ತಿಳಿದಿತ್ತು. ಆದರೆ ಏನೂ ಮಾಡಲಾಗದೆ ನಿಸ್ಸಹಾಯಕಳಾಗಿದ್ದೆ. ಅವನಿಗೆ ಎಲ್ಲಾ ತಿಳಿದಿದ್ದರೂ ನಾನು ಬರೆದಿದ್ದನ್ನು ಯಾಕೋ ಸಧ್ಯಕ್ಕೆ  ಯಾರೂ ಓದೋದು ಬೇಡಾ ಅನ್ನಿಸುತ್ತಿದೆ. ನನಗೆ ಸಾಕು ಅನ್ನಿಸುವಷ್ಟು ಬರೆದಮೇಲೆ.. ಯಾವುದೋ ಒಂದು ಮಾಲಿನಲ್ಲೋ, ಸಿನಿಮಾ ಥಿಯೇಟರಿನಲ್ಲೋ, ಪಾರ್ಕಿನ ಬೆಂಚಿನಮೇಲೋ ಇಟ್ಟು ಬರಬೇಕು. ಅಲ್ಲಿ ಇನ್ಯಾವುದೋ ಓದುಗನಿಗೆ ಸಿಗಬೇಕು. ಅನಾಮಧೇಯಳಾಗಿ ಬರೆಯಬೇಕು. ಹೆಸರಿನ, ಕಾವ್ಯನಾಮದ, ಇನ್ಯಾವುದೋ ವ್ಯಕ್ತಿತ್ವದ, ಹಂಗಿಲ್ಲದೆ.&lt;br /&gt;&lt;br /&gt;ಓದುಗ, ನಿನಗೆ ಇಷ್ಟವಾಗುತ್ತೋ ಇಲ್ಲವೋ ಅಂತ ಯೋಚಿಸದೆಯೂ ಬರೆಯಬೇಕು. ನೀನು ಕಾಫಿ ಕುಡಿಯಲು ಕಾಫಿ ಅಂಗಡಿಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ, ಇಡೀ ಅಂಗಡಿ ಖಾಲಿಯಾಗಿತ್ತು. ನೀನು ಬಂದು ಕೂತ ಚೇರಿನ ಪಕ್ಕದ, ಅಗಲದ, ಕಲ್ಲಿನ ಬಣ್ಣದ ಇನ್ನೊಂದು ಖುರ್ಚಿಯ ಮೇಲಿದ್ದ ಪುಸ್ತಕವನ್ನು ಸುಮ್ಮನೆ ಕುತೂಹಲದಿಂದ ಎತ್ತಿಕೊಂಡು ಓದಲು ಶುರುಮಾಡಿದ್ದೀಯ ಅಂತ ಕಲ್ಪಿಸಿಕೊಂಡು ನಾನು ಹೇಳಬೇಕಾದ್ದನ್ನ ಬರೆಯುತ್ತಾ ಹೋಗುತ್ತಿದ್ದೇನೆ. ಬರೆದದ್ದನ್ನು ಯಾರೂ ಓದೋಲ್ಲ ಅಂತ ಅನ್ನಿಸಲು ಶುರುವಾದರೆ ಬರೆಯಲು ಆಸಕ್ತಿಯೇ ಇರುವುದಿಲ್ಲ. ಇನ್ಯಾರೋ ಓದುತ್ತಾರೆ ಎಂದು ಗೊತ್ತಾದ ತಕ್ಷಣ ನಮ್ಮ ಸುಪ್ತ ಮನಸ್ಸು ನಮ್ಮನ್ನ ಒಳ್ಳೆಯವರನ್ನಾಗಿ ಬಿಂಬಿಸುತ್ತಾ ಹೋಗುತ್ತೆ, ನಮ್ಮ ತಪ್ಪುಗಳನ್ನು ನಮ್ಮ ಕೆಟ್ಟ ಗುಣಗಳನ್ನು ಹೇಳಿಕೊಂಡರೂ ಅದರಲ್ಲಿ ಸಹಾನುಭೂತಿಯ ಅಪೇಕ್ಷೆ ಇರುತ್ತದೇ ವಿನಹ ಮತ್ತೇನು ಅಲ್ಲ. ಅದಕ್ಕೇ ನಾನ್ಯಾವತ್ತೂ ಡೈರಿಯನ್ನೇ ಬರೆಯಲಿಲ್ಲ ಘಟನೆಗಳನ್ನು ಎಷ್ಟೇ ನಿಷ್ಟೆಯಿಂದ ಬರೀ ಸತ್ಯವನ್ನೇ ಬರೆಯುತ್ತೇನೆ ಅಂತ ಬರೆಯಲು ಕೂತರೂ ಪುಸ್ತಕದಲ್ಲಿ ಚಿತ್ರಿತವಾಗುವ ನಮ್ಮನ್ನು, ವಾಸ್ತವಕ್ಕಿಂತಾ ಒಳ್ಳೆಯವರನ್ನಾಗಿ ಮಾಡಿಕೊಳ್ಳುತ್ತಾ ಹೋಗುತ್ತೇವೆ, ನಮಗೇ ನಾವು ಮೋಸ ಮಾಡಿಕೊಳ್ಳುವ ಹಲವು ಬಗೆಗಳಲ್ಲಿ ಡೈರಿ ಬರೆಯುವುದೂ ಒಂದು. ನನ್ನ ಪ್ರಕಾರ ಮನಸ್ಸಿಗೆ ಗೊತ್ತಿರುವ ಚರಮ ಸತ್ಯವನ್ನ ಬರೆದಾಗಲೀ ಹೇಳಿಯಾಗಲೀ ಖಾಲಿಮಾಡಿಕೊಳ್ಳಲು ಸಾಧ್ಯವಿಲ್ಲ. ಮನಸ್ಸಿಗೆ ಮಾತ್ರ ನಮ್ಮತನ ಗೊತ್ತಿರುತ್ತೆ. ಅದು ಇನ್ಯಾವ ರೀತಿಯಲ್ಲೂ ಪ್ರಕಟಗೊಳ್ಳಲು ಸಾಧ್ಯವಿಲ್ಲ. ಇದೆಲ್ಲಾ ಮುಗಿಯದ ಚರ್ಚೆಗಳು. ಹೋಗಲಿ, ಕಾಫಿ ಕುಡಿಯುತ್ತಾ ಆರಾಮಾಗಿ ಓದು, ಸಕ್ಕರೆ ಜಾಸ್ತಿ ಹಾಕಿಕೊಂಡು ಕುಡಿಯುತ್ತಿಲ್ಲ ತಾನೆ? ಸಕ್ಕರೆ ಕಾಫಿಯ ರುಚಿಯನ್ನು ಕೆಡಿಸಿಬಿಡುತ್ತೆ. ನಿನ್ನ ಗೆಳೆಯನೋ ಗೆಳತಿಯೋ ಬಂದರೆ ಮುಚ್ಚಿಟ್ಟುಬಿಡು. ನಿನಗೊಬ್ಬನಿಗೇ ಕಥೆ ಹೇಳುವುದು ನಾನು.&lt;br /&gt;&lt;br /&gt;ಆವತ್ತಿನ ದಿನದ ಬಗ್ಗೆ ಹೇಳಬೇಕು. ಅದರೆ ನನಗೆ ತುಂಬಾ ಮರೆವು ನಾನು ಹೇಳಿದ್ದನ್ನೆಲ್ಲಾ ನಿಜ ಅಂತ ನಂಬಬೇಡ, ಆದರೆ ನನಗೆ ಸುಳ್ಳು ಹೇಳಿ ದೊಡ್ಡವಳಾಗುವ ಯಾವ ಅವಶ್ಯಕತೆಯೂ ಇಲ್ಲ ಅನ್ನುವುದೂ ನೆನಪಿರಲಿ. ಅಜ್ಜಿಗೆ ಅಲ್‌ಜೈಮರ್ ಶುರುವಾಗಿರಬಹುದಾ ಅಂತ ಮೊಮ್ಮಗ ಅವರಮ್ಮನ ಹತ್ತಿರ ಹೇಳುತ್ತಿದ್ದ. ಇರಬಹುದು. ಆದರೆ ಇಷ್ಟು ಓದಿದಮೇಲೆ ಸುಳ್ಳು ಹೇಳುತ್ತೀನೋ, ನಿಜ ಹೇಳುತ್ತೀನೋ, ಕಲ್ಪಿಸಿಕೊಂಡು ಹೇಳುತ್ತೀನೋ, ಏನೇ ಆದರೂ ಇನ್ನು ಮುಂದೆಯೂ ಓದಿಯೇ ಓದುತ್ತಿಯ ಅನ್ನೋ ನಂಬಿಕೆ ಇದೆ.&lt;br /&gt;&lt;br /&gt;ಅಂದು ನಡೆದದ್ದನ್ನ ಹೇಳುತ್ತೇನೆ. ನನಗೆ ಹೆಚ್ಚು ಕಮ್ಮಿ ಮೂವತ್ತೇಳು ವರ್ಷ. ಸುಮ್ಮನೆ ತೋಟದ ಮನೆಯ ಹೊರಗೆ ಜೋಕಾಲಿ ಮೇಲೆ ಕೂತು ಕವಿತೆಯೊಂದನ್ನ ತಿದ್ದುತ್ತಾ ಕೂತಿದ್ದೆ. ಅಷ್ಟೊತ್ತಿಗೆ ನನ್ನ ಏಳು ಕವನ ಸಂಕಲನಗಳು ಪ್ರಕಟವಾಗಿ(ಒಂಬತ್ತಿರಬಹುದು. ಎಷ್ಟಾದರೆ ಏನು?) ಎರಡಕ್ಕೆ ಎಂಥದೋ ಪ್ರಶಸ್ತಿ ಬಂದಿತ್ತು. ಅವನು ಭಾನುವಾರದ ಎಂದಿನ ಅಭ್ಯಾಸದಂತೆ ನಿಧಾನಕ್ಕೆ ಎದ್ದು ಬಂದ, ಅವನ ತುಟಿಗಳು ಯಾವಾಗಲೂ ಒದ್ದೆಯಾಗಿರುತ್ತದಲ್ಲಾ ಎನ್ನುವ ಗೊತ್ತಿರುವ ಸಂಗತಿಯನ್ನೇ ಮತ್ತೆ ಪ್ರೀತಿಯಿಂದ ನೋಡಿದೆ. ಮತ್ತೆ ಏನೋ ಬರೀತಿದಿಯಾ ಅನ್ಸುತ್ತೆ ಅನ್ನುತ್ತಾ ಪಕ್ಕದಲ್ಲಿ ಕೂತು ಜೋಕಾಲಿ ಜೀಕಿದ. ಅವನು ಪಕ್ಕದಲ್ಲಿ ಕೂತರೂ ಮನಸ್ಸು ಅವನ ತುಟಿಯನ್ನೇ ನೋಡುತ್ತಿತ್ತು. &lt;br /&gt;&lt;br /&gt;ಅಷ್ಟು ಇಷ್ಟವಾಗುವ ಅವನು ಒಮ್ಮೊಮ್ಮೆ ಇದ್ದಕ್ಕಿದ್ದಂತೆ ತಕ್ಷಣಕ್ಕೆ ಬದಲಾಗಿದ್ದಾನೆ, ಇವನು ನನ್ನವನಲ್ಲವೇ ಅಲ್ಲ ಇನ್ಯಾರೋ ಅನ್ನಿಸುತ್ತಿತ್ತು. ಆಕ್ಷಣಕ್ಕೆ ಈ ಅಪರಿಚಿತನ ಜೊತೆ ಏನು ಮಾಡುತ್ತಿದ್ದೇನೆ ಎಂದು ಥಟ್ಟನೆ ಪ್ರಶ್ನೆ ಮೂಡಿ, ನಿಧಾನಕ್ಕೆ ನನ್ನ ಸುತ್ತಮುತ್ತಲಿನ ಪರಿಸರ, ತೆಂಗಿನ ಮರಗಳು, ಮನೆಯ ಹಿಂದಿನ ಮೀನಿನ ಕೊಳ, ಒಂಟಿ ಹುಳಿಮಾವಿನ ಮರ, ಹಸುಗಳು ನೀರು ಕುಡಿಯುವ ಟ್ಯಾಂಕು, ಕೊಬ್ಬರಿ ಒಣಗಿಸಿದ್ದ ಅಟ್ಟ, ದೂರದ ಗದ್ದೆಗಳು, ಅಲ್ಲಿನ ಟ್ರಾಕ್ಟರಿನ ಸದ್ದು ಎಲ್ಲವೂ ನಿಧಾನಕ್ಕೆ ಕರಗುತ್ತಿದೆ ಅನ್ನಿಸಿ ನಾನೊಬ್ಬಳೇ ಅನ್ನಿಸಿಬಿಡುತ್ತಿತ್ತು. ಅವನು ಮಾತಾಡುತ್ತಿರುವುದೆಲ್ಲಾ ನಿಜ ಎಲ್ಲರೂ ಸತ್ಯವಂತರು ಅಂತ ತಿಳಿದಿದ್ದರೂ ತಣ್ಣನೆಯ ಸುಳ್ಳಿನ ಕುಳಿರ್ಗಾಳಿ ನನ್ನ ತಾಕಿ ಚಕಿತಗೊಳಿಸುತ್ತಿತ್ತು.&lt;br /&gt;&lt;br /&gt;ಹೀಗೆ ಒಬ್ಬಂಟಿ ಅನ್ನಿಸಿ ಚಕಿತಗೊಂಡು ಕೂತಾಗಲೆಲ್ಲಾ ಅವನೊಡನೆ ಮಾತು ಶುರು ಮಾಡುವುದು ಕಷ್ಟವಾಗುತ್ತಿತ್ತು. ಅವನೂ ಕೂಡಾ ಏನೂ ಸಂಭಂಧವೇ ಇಲ್ಲದಂತೆ ಕಾರ್ ಸ್ಟಾರ್ಟ್ ಮಾಡಿ ತೋಟದ ಮಧ್ಯೆ ಹೋಗಿಬಿಡುತ್ತಿದ್ದ. ಆದರೆ ಅಂದು ಅವನು ಮಾತಾಡುವವನಂತೆ ಪಕ್ಕ ಬಂದು ಕೂತ ಬಲ ಭುಜದಮೇಲೆ ಹಿತವಾಗಿ ಒರಗಿಕೊಂಡ ಮಾತಾಡದಿದ್ದರೂ ಆ ಉಸಿರಾಟದ ಏರಿಳಿತ ಅವನನ್ನು ಪರಿಚಿತನನ್ನಾಗಿಸುತ್ತಿತ್ತು. ಎಲ್ಲವೂ ನಿಧಾನಕ್ಕೆ ಗೋಚರಿಸತೊಡಗಿತ್ತು ಕಣ್ಮುಚ್ಚಿ ಅವನ ಸ್ಪರ್ಶಕ್ಕೆ ಕಾದು ಕೂತೆ. ಆದರೆ ಅವನು ಹಾಗೆ ಅಂದಿದ್ದಾದರೂ ಏತಕ್ಕೆ. ನಿನ್ನ ಕವಿತೆಗಳಲ್ಲಿ ನನ್ನ ಬಗ್ಗೆ ಬರಿಯಬೇಡ ಅಂದನಲ್ಲ ಹಾಗಂದರೆ ಅದರ ಅರ್ಥವಾದರೂ ಏನು? ನಿನ್ನ ಬಗ್ಗೆ ಬೇಕಾದರೆ ಬರೆದುಕೋ ಅಂದನಲ್ಲಾ, &lt;br /&gt;&lt;br /&gt;ಇಷ್ಟು ವರ್ಷಗಳಲ್ಲಿ ನನ್ನನ್ನು ಅವನು ತನ್ನ ನೆರಳಾಗಿಸಿಕೊಂಡಿದ್ದಾನೆ ಅನ್ನುವುದೂ ಅವನಿಗೆ ತಿಳಿದಿಲ್ಲವೇ? ಪ್ರೀತಿ ಕಾಯ್ದುಕೊಳ್ಳೋದಕ್ಕೆ, ಅವನ ಜೊತೆ ಸಂಭ್ರಮದಿಂದ ಬದುಕುವುದಕ್ಕೆ, ಖುಷಿ ಹಂಚಿಕೊಳ್ಳುವುದಕ್ಕೆ, ದುಖಃದಲ್ಲಿ ಜೊತೆಯಾಗಿರುವುದಕ್ಕೆ, ನಾನು ನನ್ನನ್ನೇ ಇಷ್ಟಿಷ್ಟೇ ಇಷ್ಟಿಷ್ಟೇ ಕಳೆದುಕೊಳ್ಳುತ್ತಾ, ನಿಧಾನವಾಗಿ ಅವನಾಗಿದ್ದು, ನನ್ನ ಇಷ್ಟ ಆಸಕ್ತಿಗಳೆಲ್ಲಾ ಕಳೆದು ಕಲಸಿಹೋಗಿ, ನನ್ನ ಈಗಿನ ಆಸಕ್ತಿಗಳು ನನ್ನವೋ ಅವನವೋ ಎಂದು ತಿಳಿಯದಷ್ಟು ಒಂದಾಗಿರುವುದು, ಮೊದಲು ತುಂಬಾ ಗಮನವಿಟ್ಟು ಅವನಿಗೆ ಬೇಜಾರಾಗದಂತೆ ನಡೆದುಕೊಳ್ಳುತ್ತಿದ್ದುದು ಈಗ ಹಾಗಿರುವುದೇ ನನ್ನ ರೀತಿಯಾಗಿರುವುದು ಇವೆಲ್ಲವೂ ಅವನಿಗೆ ಗೊತ್ತೇ ಇಲ್ಲವೇ? ನನ್ನ ಬಗ್ಗೆ ಬರೆದರೂ ಅವನನ್ನು ನನ್ನಿಂದ ಹೊರಗಿಡುವುದು ಹೇಗೆ?&lt;br /&gt;&lt;br /&gt;ಮನೆಯ ಮುಂದಿನ ಮಲ್ಲಿಗೆ ಬಳ್ಳಿಯ ಬಗ್ಗೆ ಬರೆದರೆ, ಆ ಹೂವು ಅವನಿಗಿಷ್ಟ ಅದಕ್ಕೆ ಅದು ಅಲ್ಲಿದೆ ಅನ್ನೋದನ್ನ ಮರೆತು ಬರೆಯಲು ಹೇಗೆ ಸಾಧ್ಯ? ಈಗ ನನಗೆ ಸೇವಂತಿಗೆಗಿಂತ ಮಲ್ಲಿಗೆಯೇ ಇಷ್ಟವಾಗಲು ಅವನು ಕಾರಣ ತಾನೆ? &lt;br /&gt;&lt;br /&gt;                                * * *&lt;br /&gt;&lt;br /&gt;ನೆನ್ನೆ ನಾನು ಬರೆಯಲು ಕೂತಾಗ ಏನು ಹೇಳುತ್ತಿದ್ದೆ ಅನ್ನೋದು ಮರೆತು ಹೋಗಿದೆ. ಈಗ ಮತ್ತೆ ಓದಿಕೊಂಡರೆ ಎಡವಟ್ಟಾಗಿ ಏನೇನೋ ಬರೆದಿದ್ದೀನಲ್ಲಾ ಹರಿದುಹಾಕೋಣ ಅನ್ನಿಸಿತು. ಆದರೂ ಇರಲಿ. ಅನಾಮಧೇಯ ಲೇಖಕಿ ಏನು ಬರೆದರೂ ಒಂದಕ್ಕೊಂದು ಸಂಭಂಧವಿಲ್ಲದಿದ್ದರೂ ನೀನು ಅಜ್ನಾತ ಓದುಗ ಬೇಕಾದರೆ ಓದುತ್ತೀಯ ಇಲ್ಲವಾದರೆ ಅಲ್ಲೇ ಪುಸ್ತಕಬಿಟ್ಟು ಹೋಗುತ್ತೀಯ. ಅದಕ್ಕೇ ಹರಿದು ಹಾಕದೆ ಬರೆಯುತ್ತಾ ಹೋಗುತ್ತೇನೆ. &lt;br /&gt;&lt;br /&gt;ಇವತ್ತು ಮಧ್ಯಾಹ್ನ ನಾನು ನಿದ್ದೆಯಲ್ಲಿದ್ದಾಗ ಪೇಪರಿನವರು ಯಾರೋ ಸಂದರ್ಶನ ಮಾಡಲು ಬಂದಿದ್ದರಂತೆ. ಮೊಮ್ಮಗ ಬುದ್ದಿವಂತ. ಪ್ರಶ್ನೆಗಳನ್ನ ಬಿಟ್ಟು ಹೋಗಿ ಎದ್ದಮೇಲೆ ತ್ರಾಣವಿದ್ದರೆ ಉತ್ತರ ಬರೆದುಕೊಡುತ್ತಾರೆ ನಾನೇ ಟೈಪ್ ಮಾಡಿ ಮೈಲ್ ಮಾಡುತ್ತೇನೆ ಅಂದಿದ್ದಾನೆ. ಈ ಪತ್ರಕರ್ತರು ಎಷ್ಟೋ ವರ್ಷಗಳಿಂದ ಕೇಳಿದ ಪ್ರಶ್ನೆಗಳನ್ನೇ ಮತ್ತೆ ಮತ್ತೆ ಕೇಳುತ್ತಾರೆ. ದಡ್ಡರಲ್ಲ ಅವರು ಅದೇ ಪ್ರಶ್ನೆಗಳಿಗೆ ಬೇರೆ ಬೇರೆ ಉತ್ತರ ಬೇಕು ಅವರಿಗೆ. ಐದು ವರ್ಷ ಹಿಂದೆ ಹೇಳಿದ ಉತ್ತರಕ್ಕೂ ಈಗಿನ ಉತ್ತರಕ್ಕೂ ಸಾಮ್ಯತೆ ಇಲ್ಲದಿದ್ದರೆ ಅವರಿಗೆ ಖುಷಿ. ಲೇಖಕಿಯ ಅಭಿಪ್ರಾಯದಲ್ಲೇ ಭೇದ ಇದೆ ಎಂದು ಸುದ್ದಿಮಾಡಬಹುದಲ್ಲಾ. ’ಅವರಿಗೆ ಹುಶಾರಿಲ್ಲ ಮುಂದೆ ಯಾವತ್ತಾದರೂ ಉತ್ತರಿಸಬಹುದು’ ಅಂತ ಮೈಲ್ ಮಾಡು ಎಂದೆ. ಪ್ರಶ್ನೆಗಳು ಇಲ್ಲೇ ಇವೆ. ಬೋರು ಹೊಡೆಸಿದರೂ ಓದಿಕೋ..&lt;br /&gt;&lt;br /&gt;ಕವಯಿತ್ರಿಯಾಗಿ ನಿಮ್ಮ ಸ್ಥಾನಮಾನ ಏನು?&lt;br /&gt;ಮಹಿಳಾ ಲೇಖಕರಿಗಿಂತ ಪುರುಷ ಲೇಖಕರಿಗೆ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿದೆ ಅನ್ನಿಸೋಲ್ಲವಾ?&lt;br /&gt;ನಿಮ್ಮ ಗಂಡ ನಿಮಗೆ ಸಪೋರ್ಟಿವ್ ಆಗಿದ್ದರಾ? ಅವರ ಸಾವಿನ ನಂತರವೂ ಅವರ ಜೊತೆ ಬಾಳುವೆ ನಡೆಸಿದಂತೆ ಬರೆದಿರಲ್ಲಾ.. ಅವರಿಲ್ಲದ ಜೀವನ ಕಷ್ಟವಾಗಿತ್ತಾ?&lt;br /&gt;ನೀವು ಬರೆದ ಕಥೆಗಳಲ್ಲೆಲ್ಲಾ ’ಆಟೋಬಯಾಗ್ರಫಿಕಲ್ ಎಲಿಮೆಂಟ್’ ಇದೆ ಎನ್ನುತ್ತಾರಲ್ಲ ನೀವೇನು ಹೇಳುತ್ತೀರಿ?&lt;br /&gt;ಕಥೆ ಕವಿತೆ ಕಾದಂಬರಿ ಕಾಲಮ್ಮುಗಳನ್ನು ಬರೆದಿದ್ದೀರಿ. ಎಲ್ಲವೂ ವಿಬಿನ್ನವಾಗಿರುತ್ತೆ. ಬೇರೆ ಬೇರೆ ಸಾಹಿತ್ಯಿಕ ಪ್ರಕಾರಗಳನ್ನು ಬರೆಯುವಾಗ ಬೇರೆ ಬೇರೆ ಮನಸ್ಥಿತಿಯಲ್ಲಿರುತ್ತೀರ?&lt;br /&gt;ಈಗಿನ ಕಾಲದ ಲೇಖಕಿಯರು ಬೀಡೂಬಿಡುಸಾಗಿ ತಮ್ಮ ಲೈಂಗಿಕ ಜೀವನದ ಬಗ್ಗೆ ಬರೆದುಕೊಳ್ಳುತ್ತಾರೆ ಅದರ ಬಗ್ಗೆ ಜನರು ತಕರಾರೆತ್ತುವುದಿಲ್ಲಾ, ನೀವು ಬರೆದಾಗ ಬಹಳ ವಿರೋಧವಿತ್ತಲ್ಲ ಹೇಗನ್ನಿಸುತ್ತೆ?&lt;br /&gt;ನೀವು ಕನ್ನಡದವರಾಗಿ ಕನ್ನಡದಲ್ಲಿ ಏನೂ ಬರಿಯದೆ ಬರೀ ಆಂಗ್ಲ ಭಾಶೆಯಲ್ಲಿ ಬರೆಯಲು ಕಾರಣವೇನು?&lt;br /&gt;&lt;br /&gt;                                   * * *&lt;br /&gt;ಇಲ್ಲಿರುವ ಕೆಲವು ಪ್ರಶ್ನೆಗಳಿಗಾದರೂ ನಿಜವಾದ ಉತ್ತರಗಳನ್ನು ನನಗೇನನ್ನಿಸುತ್ತೋ ಅದನ್ನೇ ಹೇಳುತ್ತಾ ಹೋಗುತ್ತೇನೆ ನಾನು. ಪೇಪರಿನವರಿಗೆ ಕೊಡುವ ಸಿದ್ಧ ಉತ್ತರಗಳಲ್ಲ. ಯಾವ ಲೇಖಕನೂ ಪೂರ್ಣ ಪ್ರಮಾಣದಲ್ಲಿ ತನಗನ್ನಿಸುವುದನ್ನ ಹಾಗೇ ನೇರವಾಗಿ ಹೇಳುವುದಿಲ್ಲ. ಹಾಗೆ ಪ್ರಕಟಗೊಳ್ಳುವುದಕ್ಕೆ ಸಾವಿರ ಅಡೆತಡೆಗಳಿರುತ್ತವೆ. ಸಮಾಜದ ಅಂಜಿಕೆ ಇರುತ್ತೆ. ಎಲ್ಲದಕ್ಕಿಂತ ಹೆಚ್ಚಾಗಿ ಲೇಖಕನ ಹತ್ತಿರದವರು ತಮಗೆ ಗೊತ್ತಿಲ್ಲದಂತೆಯೇ ಅವನ ಮೇಲೆ ಪ್ರಭಾವ ಬೀರುತ್ತಿರುತ್ತಾರೆ. ಲೇಖಕನ ನಿಜವಾದ ಬರಹ ಎಲ್ಲೋ ಆಳದಲ್ಲೇ ಉಳಿದುಕೊಂಡು, ಸೋಸಿದ ಸಮಾಜ ಸರಿ ಅನ್ನುವ, ಹಿತವೆನ್ನಿಸುವ ಬರಹಗಳು ಹೊರಗೆ ಬರುತ್ತವೆ. ಈ ಕಷ್ಟಕ್ಕೆ ಲೇಖಕಿಯರು ಸಿಲುಕುವುದು ಹೆಚ್ಚು. ಇದರಿಂದ ಹೊರಬರುವುದೋ ಒಳಗೇ ಉಳಿಯುವುದೋ ಅವರವರಿಗೇ ಬಿಟ್ಟಿರುತ್ತೆ. ನಾನು ಹೊರಬರಲು ಪ್ರಯತ್ನಿಸಿದೆ. &lt;br /&gt;&lt;br /&gt;ಸುಮ್ಮನೆ ಬರೆಯುತ್ತಾ ಹೋಗುತ್ತಿದ್ದೆ ನಾನು. ಹಾಗೆ ಸುಮ್ಮನೆ ಬರೆಯುವ ಸ್ವಾತಂತ್ರ ಹುಡುಗಿಯರಿಗಿರುವುದಿಲ್ಲ. ಹಿಂದೆ ಇದೇ ಪ್ರಶ್ನೆಗೆ ಉತ್ತರಿಸುತ್ತಾ ಸಮಾನತೆಯ ಮಾತಾಡಿದ್ದೆ. ಮಹಿಳಾವಾದ ನಗು ತರಿಸುತ್ತಿದ್ದರೂ ಮಹಿಳಾವಾದದ ರೂವಾರಿಯಂತೆ ಆಡಿದ್ದೆ. ನಿಜಕ್ಕೂ ನನಗೆ ಮಹಿಳಾವಾದ ಅಷ್ಟೊಂದು ಪ್ರಭಾವ ಬೀರಿರಲಿಲ್ಲ. ಪ್ರೀತಿ ಕಾಳಜಿಯಿಂದ ನೋಡಿಕೊಂಡ, ಎಲ್ಲರನ್ನೂ ಸಮಾನವಾಗಿ ನೋಡುತ್ತಿದ್ದ ಅಪ್ಪನ ಜೊತೆ ಬೆಳೆದ ನನಗೆ ಯಾವ ವಾದದಲ್ಲೂ ನಂಬಿಕೆ ಇಲ್ಲ. ’ಗಂಡಸು ಹೆಂಗಸು’ ’ಬುದ್ದಿವಂತ ದಡ್ಡ’ ’ಮೇಲು ಜಾತಿ ಕೀಳು ಜಾತಿ’ ’ಪಾಶ್ಚಾತ್ಯ ಪೌರ್ವಾತ್ಯ’ ಅಂತ ವಿಂಗಡಿಸೋಕ್ಕಿಂತ ತರ್ಕದಿಂದ ಯೋಚಿಸಿ ನಡೆಯುವವ ಮತ್ತು ವಿಚಾರಹೀನ ಜನ ಅಂತ ವಿಭಜಿಸುವುದು ಒಳ್ಳೆಯದು. ಜಗತ್ತಿನಲ್ಲಿ ಎರಡೇ ರೀತಿಯ ಜನರಿರುತ್ತಾರೆ ಸ್ಥಿತಿಗತಿಗಳನ್ನ ಅರ್ಥ ಮಾಡಿಕೊಂಡು ವ್ಯವಹರಿಸುವ ಜನ ಒಂದು ರೀತಿಯವರಾದರೆ ಇದಕ್ಕೆ ವಿರುದ್ಧವಾದವರು ಇನ್ನೊಂದು ರೀತಿ. ಆದರೆ ಒಂದು ವಿಚಿತ್ರ ಗಮನಿಸಿದ್ದೀಯ ಎಲ್ಲರೂ ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರುವುದಿಲ್ಲ. ನಮ್ಮೆಲ್ಲರನ್ನ ಸಮಾನವಾಗಿಸುವ ಗುಣ ಏನು ಗೊತ್ತಾ ನಮ್ಮ ನಮ್ಮ ವೈರುಧ್ಯಗಳು. ಪ್ರತಿಯೊಬ್ಬರೂ ಇನ್ನೊಬ್ಬರಿಗಿಂತ ಬೇರೆಯಾಗಿರುತ್ತೇವಲ್ಲ ಅದೇ ನಮ್ಮ ಎಲ್ಲರಲ್ಲಿರುವ ಸಮಾನ ಅಂಶ.&lt;br /&gt;&lt;br /&gt;&lt;br /&gt;ಆವತ್ತು ಜೋಕಾಲಿಯಲ್ಲಿ ಪಕ್ಕದಲ್ಲಿ ಕೂತು ನನ್ನ ಬಗ್ಗೆ ಬರಿಯಬೇಡ ಅಂದಿದ್ದನಲ್ಲ, ನಾನದನ್ನು ಗಂಭೀರವಾಗಿ ತೆಗೆದುಕೊಂಡೇ ಇರಲಿಲ್ಲ. ನನ್ನ ಬರಹಗಳಲ್ಲಿ, ಸಂದರ್ಶನಗಳಲ್ಲಿ, ಸಹಲೇಖಕರೊಡನೆ ಆಡುವ ಮಾತುಗಳಲ್ಲಿ ನಾನು ಯಾವ ಮುಚ್ಚು ಮರೆ ಇಲ್ಲದೆ, ನನ್ನ ಸ್ನೇಹಿತರ ಬಗ್ಗೆ ಅವನ ಸ್ನೇಹಿತೆಯರ ಬಗ್ಗೆ ಹೇಳಿಕೊಳ್ಳುತ್ತಿದ್ದೆ. ಅವನಿಗೆ ಕಿರಿಕಿರಿಯಾಗುತ್ತಿತ್ತೇನೋ. ಬಹಳ ದಿನಗಳ ಮೇಲೆ ’ಫೋರ್‌ವರ್ಡ್’ ಎನ್ನುವ ಚಂದದ ಕವನವನ್ನ ಬರೆದಿದ್ದೆ. ಹಾಗೆ ಅಪರೂಪಕ್ಕೆ ಚಂದದ ಕವಿತೆ ಹುಟ್ಟಿದಾಗ ಮಾತ್ರ ಅವನಿಗೆ ತೋರಿಸುತ್ತಿದ್ದೆ. ನೋಡುತ್ತಿದ್ದ ಹಾಗೇ ಹರಿದು ಹಾಕಿದ. ಯಾಕೆಂದು ನನಗೆ ಅರ್ಥವೇ ಆಗಲಿಲ್ಲ. ’ನನ್ನ ಬಗ್ಗೆ ಬರೆಯಬೇಡ ಎಂದರೆ ಅರ್ಥವಾಗೋಲ್ಲವ ನಿನಗೆ?’ ಎಂದು ಕೂಗಿದ. ನಾನು ಪದ್ಯದ ಇನ್ನೊಂದು ಪ್ರತಿ ಇಟ್ಟುಕೊಂಡಿರಲಿಲ್ಲ. ಹರಿದ ಚೂರುಗಳನ್ನ ಒಟ್ಟು ಮಾಡತೊಡಗಿದೆ ಆಗಲೇ ನನಗೆ ’ಪೀಸಸ್ ಆಫ್ ಆಂಗರ್’ ಕವಿತೆಯ ಸಾಲುಗಳು ಮೂಡತೊಡಗಿದ್ದವು. ಯಾಕೋ ಈ ಎರಡು ಕವಿತೆಗಳನ್ನು ಮರೆಯಲು ಸಾಧ್ಯವೇ ಇಲ್ಲ. ಸ್ವಲ್ಪ ಹೊತ್ತಿನ ನಂತರ ನನ್ನ ಕೋಣೆಯಲ್ಲಿ ಚೂರುಗಳನ್ನು ಹಿಡಿದು ಕೂತವಳಿಗೆ ನಾನು ಹಿಡಿದುಕೊಂಡು ಕೂತಿರುವುದು ಹಾಳೆಯ ಚೂರುಗಳನ್ನೋ ಅಥವಾ ದಾಂಪತ್ಯದ್ದೋ ಎಂದು ಅನುಮಾನವಾಗತೊಡಗಿತ್ತು. ಅವನು ಹೇಳಿದ ಮಾತುಗಳು ಘಣೀರನೆ ಕಿವಿಯಲ್ಲಿ ಮತ್ತೆ ಮತ್ತೆ ಪ್ರತಿಧ್ವನಿಸುತ್ತಿದ್ದವು. "ಕೆಲವು ರಹಸ್ಯಗಳು ಕೆಲವರ ಮಧ್ಯೆಯೇ ಇರಬೇಕು, ಓದುಗ ಅದನ್ನು ಚಪ್ಪರಿಸಿಕೊಂಡು ಓದುತ್ತಾನೆ. ಅದವನಿಗೆ ಮನೋರಂಜನೆ ಅಷ್ಟೇ.. ನೀನು ಒಳ್ಳೆಯ ಕವಯಿತ್ರಿ, ನಿನ್ನ ಕವಿತೆಗಳಲ್ಲಿ ಸಾಹಿತ್ಯಕ ಗುಣ ಇದೆ ಅಂತ ಜನ ನಿನ್ನ ಓದುತ್ತಿಲ್ಲ ನಿನಗೆ ಭಂಡ ಧೈರ್ಯ, ಏನೂ ಮುಚ್ಚಿಡದೆ ರಂಜಕವಾಗಿ ನಿನ್ನ ಪ್ರೇಮಪ್ರಕರಣಗಳ ಬಗ್ಗೆ ಬರೆದುಕೊಳ್ಳುತ್ತೀಯ ಅಂತ ಓದುತ್ತಾರೆ. ನಾನು ನಿನ್ನ ಪ್ರೇಮ ಪ್ರಕರಣಗಳನ್ನ ಹಾದರ ಅಂತ ಕರೆದು ನನ್ನ ಸ್ನೇಹಿತರ ಬಳಿ ಹೇಳಿದರೆ ನಾನು ಹಳೆಯ ಕಾಲದ ಗೂಸಲು, ನನಗೆ ಅಹಂಕಾರ, ಮೇಲ್ ಚಾವಿನಿಸ್ಟಿಕ್ ಪಿಗ್ ನಾನು. ಅದೇ ನೀನೇ ಬರೆದುಕೊಂಡರೆ ಅದು ಮುಕ್ತತೆ. ನಿನ್ನ ಈ ಮುಕ್ತತೆಯಿಂದ ನಮ್ಮ ಸಂಭಂದ ಎಷ್ಟು ಹಾಳಾಗುತ್ತಿದೆ ಅನ್ನೋದು ಅರ್ಥವಾಗೋಲ್ಲವ? ಮಕ್ಕಳ ಮೇಲೆ ಎಂಥ ಪರಿಣಾಮ ಬೀರುತ್ತೆ ಅನ್ನೋದನ್ನ ಯೋಚಿಸಿದ್ದೀಯ? ನೀನು ಏನಾದರೂ ಮಾಡಿಕೋ ನನ್ನ ಬಗ್ಗೆ, ನನ್ನ ಹಳೆಯ ಸ್ನೇಹಿತೆಯರ ಬಗ್ಗೆ, ನನ್ನ ನಿನ್ನ ಸಂಬಂಧದ ಬಗ್ಗೆ ಏನನ್ನೂ ಬರೆಯಬೇಡ’ ಎಂದು ಹೇಳಿ ನಡದೇ ಬಿಟ್ಟ.&lt;br /&gt;&lt;br /&gt;ಇದೇ ಮಾತುಗಳನ್ನು ಆಡಿದ ಅಂತ ಎಣಿಸಬೇಡ. ಈ ಥರದ ಮಾತುಗಳನ್ನ ಆಡಿದ್ದ. ನನಗೆ ಆಗಿದ್ದ ನೋವನ್ನು ನೆನಸಿಕೊಂಡರೆ ಮಾತುಗಳು ಇನ್ನೂ ಕ್ರೂರವಾಗಿದ್ದುವೇನೋ. ಇದಾದ ಮೇಲೆ ನನ್ನ ಸ್ಥಿತಿ ಅಸಹನೀಯವಾಗತೊಡಗಿತ್ತು. ನನ್ನ ಕವಿತೆಗಳಲ್ಲಿ ಸಾಹಿತ್ಯಕ ಗುಣ ಇಲ್ಲವೇ ಎಂದು ಪ್ರಶ್ನಿಸಿಕೊಂಡು ಎಲ್ಲಾ ಕವಿತೆಗಳನ್ನು ಓದತೊಡಗಿದೆ. ಅವನು ಹೇಳಿದಂತೆ ನನ್ನ ಕವಿತೆ ಬೋಲ್ಡ್ ಆಗಿದ್ದರೂ ಅದರಲ್ಲಿ ಪ್ರೀತಿಯ ಹಂಬಲ ಇತ್ತು. ನಾನು ಪ್ರೇಮ ಪ್ರಕರಣಗಳ ಬಗ್ಗೆ ಬರೆದಿದ್ದರೂ ಕಾಮದ ಬಗ್ಗೆ, ದೇಹದ ಹಸಿವಿನ ಬಗ್ಗೆ ಬರೆಯಲಿಲ್ಲ. ಎಲ್ಲಕ್ಕಿಂತಾ ಮುಖ್ಯವಾದದ್ದು ಪ್ರೀತಿ, ಇನ್ಯಾವುದೂ ಅಲ್ಲ ಅನ್ನುವುದು ನನಗೆ ತೀರ ಚಿಕ್ಕ ವಯಸ್ಸಿಗೇ ಹೊಳೆದುಬಿಟ್ಟಿತ್ತು. ಅದೇ ನನ್ನ ಪ್ರತಿಯೊಂದು ಕವಿತೆಯಲ್ಲೂ ಢಾಳಾಗಿ ಕಾಣಿಸುತ್ತಿತ್ತು. ಆದರೂ ಓದುಗರು ನನ್ನ ಪುಸ್ತಕಗಳನ್ನು ಕೊಳ್ಳುವುದು ಮನೋರಂಜನೆಗಾಗಿ, ಚಪ್ಪರಿಸಿಕೊಂಡು ಓದುವುದಕ್ಕೆ ಎನ್ನುವ ಮಾತುಗಳೂ ಸತ್ಯ ಎನ್ನಿಸತೊಡಗಿತು. ಅವನನ್ನು ಒಳಗೊಳ್ಳದೆ, ನನ್ನನ್ನೂ ಬರಹದಲ್ಲಿ ಒಡಮೂಡಿಸದೆ ಬರೆಯಲು ನಿರ್ಧರಿಸಿದೆ.&lt;br /&gt;&lt;br /&gt;ಆಶ್ಚರ್ಯ ಏನು ಗೊತ್ತಾ ಓದುಗ? ನಾನು ಬರೆದದ್ದೆಲ್ಲಾ ಸುಳ್ಳು ಅನ್ನಿಸುತ್ತಿತ್ತು. ಏನು ಬರೆದರೂ ಅದರಲ್ಲಿ ಸತ್ವವಿಲ್ಲ ಅನ್ನಿಸುತ್ತಿತ್ತು. ನಾನು ಪ್ರಕಟಗೊಳ್ಳದೇ ಹೋಗುವ ಕ್ಷಣ ನನ್ನದಲ್ಲ, ನನ್ನ ಬರಹಗಳಲ್ಲಿ ನನ್ನ ಅಂತಃಸತ್ವ ಮೂಡದಿದ್ದರೆ ಅದು ನನ್ನ ಬರಹವಾಗಲು ಹೇಗೆ ಸಾಧ್ಯ? ನನ್ನ ಕಥೆ ಅವನ ಕಥೆ ಬೇರೆಯಾಗಬೇಕು ಅಂದ ಅವನು. ಅವನಿಲ್ಲದ ನನಗೆ ನನ್ನ ಪೂರ್ಣ ಅಸ್ತಿತ್ವವೇ ಇರಲಿಲ್ಲ. ನಾನಿಲ್ಲದ ಅವನು ಅವನೊಳಗಿದ್ದ. ಅವನಿಲ್ಲದ ನಾನು ನನ್ನಲ್ಲಿರಲೇ ಇಲ್ಲ. ಇದನ್ನೇ ಅವನಿಗೆ ಹೇಳಲು ಪ್ರಯತ್ನಿಸಿದೆ. ಎರಡರಲ್ಲಿ ಒಂದನ್ನು ಆರಿಸಿಕೋ ಎಂದ. ಉಸಿರು ಬೇಕೋ ರಕ್ತ ಬೇಕೋ ಎಂದು ಕೇಳಿದ ಹಾಗಾಯಿತು. ಎರಡೂ ಬೇಕಿತ್ತು ನನಗೆ, ನಾನು ಜೀವಂತವಾಗಿರಲು. ಆದರೆ ಉಸಿರು ನನ್ನಿಂದ ಬಿಡುಗಡೆ ಪಡೆದುಕೊಂಡು ನನ್ನ ಜೀವಚ್ಚವವನ್ನಾಗಿ ಮಾಡಿತು. ಅವನು ಬೇರೆ ಹೋದ. ಡಿವೋರ್ಸಿಗೆ ಅಪ್ಲೈ ಮಾಡುತ್ತೇನೆ ಅಂದಿದ್ದ. ನನ್ನಲ್ಲಿನ ರಕ್ತ ಇಂಗಿ ಹೋಗಿತ್ತು. ಇನ್ಯಾರ್ಯಾರೋ ಉಸಿರ ಕೊಡಲು ಬಂದರು. ನನ್ನ ನೆನಪುಗಳಿಗೆ ಬೆಂಕಿ ಹಚ್ಚಲು ಯಾರಿಗೂ ಬಿಡಲಿಲ್ಲ. ಅವಡುಗಚ್ಚಿ, ಉಸಿರು ಬಿಗಿಹಿಡಿದು, ದೃಷ್ಟಿ ಕದಲಿಸದೆ ಬದುಕತೊಡಗಿದೆ. ದಿನೇದಿನೇ ಅವನು ನನ್ನಿಂದ ದೂರವಾಗುತ್ತಿರುವುದು ಅರಿವಾಗುತ್ತಿತ್ತು. ಹೆಚ್ಚು ಮಾತುಕತೆಯಿಲ್ಲದೆ ದಿನಗಳು ಸಾಗತೊಡಗಿದ್ದವು, ಹೀಗೆ ನನ್ನಿಂದ ದೂರವಾಗಲು ಹವಣಿಸುತ್ತಿದ್ದವನು ಇದ್ದಕ್ಕಿದ್ದಂತೆ ಅದ್ಯಾಕೋ ಎಲ್ಲರಿಂದಲೂ ದೂರವಾಗಿಬಿಟ್ಟ.&lt;br /&gt;&lt;br /&gt;ನನ್ನ ಮುಂದಿನ ಬರಹಗಳಲ್ಲಿ ನನ್ನನ್ನೇ ನಾನು ಹುಡುಕತೊಡಗಿದ್ದೆ. ನನ್ನ ಹುಡುಕಾಟಗಳಲ್ಲೆಲ್ಲಾ ಅವನೇ. ನಾನು ಎಲ್ಲದರಿಂದ ಬಿಡುಗಡೆ ಪಡೆಯಲು ಹೊರಟಂತೆ ಬರೆದೆ. ಬದುಕಲಾರದೆ ಬರೆದೆ. ಅವನಿಗೆ ನಾನು ಋಣ ತೀರಿಸುವವಳಂತೆ, ಇನ್ಯಾವ ಸಂಭಂಧಕ್ಕೂ ಓಗೊಡದೆ ಅವನೊಂದಿಗೆ ಬದುಕುತ್ತಿರುವಂತೆ ಬರೆದೆ.  ಇದನ್ನೂ ಕೂಡಾ ನೀನು ನಂಬಬೇಕಿಲ್ಲ ನಾನು ಹೀಗೆ ಬದುಕಿದ್ದಿರಬಹುದು ಅಥವಾ ನಾನು ಕೈಚಾಚಿದ ನನಗೆ ಅದಾಗೇ ದಕ್ಕಿದ ಸಂಭಂದಗಳಲ್ಲಿ ತೀವ್ರವಾಗಿ ಗುಟುಕು ಗುಟುಕಿಗೂ ಅದೇ ಕೊನೆ ಗುಟುಕುವಂತೆ ಬದುಕಿದೆ, ಪ್ರತಿಯೊಬರಲ್ಲೂ ಅವನನ್ನೇ ಹುಡುಕಿರಬಹುದು. ನನಗೆ ನೆನಪಿಲ್ಲ. ಈಗ ಹಿಂತಿರುಗಿ ನೋಡಿದರೆ ಇದೆರೆಡರಲ್ಲಿ ಯಾವುದು ಘಟಿಸಿದ್ದರೂ ಈಗಿನ ನನ್ನ ಬದುಕಿಗೆ ಹೆಚ್ಚಿನ ವೆತ್ಯಾಸವನ್ನೇನೂ ಸೃಷ್ಟಿಸಿಲ್ಲ ಅನ್ನಿಸಿ ಆಶ್ಚರ್ಯವಾಗುತ್ತಿದೆ. ಈ ಇಳೀ ವಯಸ್ಸಿನಲ್ಲಿ ಭುಧ್ಧನ ತತ್ವಗಳು ನನ್ನ ಆಕರ್ಶಿಸುತ್ತಿವೆ. ನನ್ನ ರಾಮನಿಗೆ ಬುದ್ಧನೆಂದು ನಾಮಕರಣ ಮಾಡಿದ್ದೇನೆ. ಮತಾಂತರವಾಗುತ್ತೀಯ ಎಂದು ನಗುತ್ತಾ ಕೇಳಿದ ಆತ್ರೇಯ. ನನ್ನ ಮತಾಂತರವಾಗಿ ಹೋಗಿದೆ ನಿನಗೆ ತಿಳಿದಿಲ್ಲ ಅಷ್ಟೇ ಎಂದು ಹೇಳಿದೆ.&lt;br /&gt;&lt;br /&gt;ನಾನು ಇಷ್ಟೆಲ್ಲಾ ನನ್ನ ಬಗ್ಗೆ ಬರೆದುಕೊಂಡ ಮೇಲೆ ನಾನು ಯಾರು ಅಂತ ಸುಲಭವಾಗಿ ಗುರುತಿಸಿರುತ್ತೀಯ ನೀನು. ಇವತ್ತಿಗೂ ನನಗೆ ನಾನು ಅಜ್ನಾತವಾಗಿರುವಂತೆ ಬರೆಯಲು ಸಾಧ್ಯವೇ ಇಲ್ಲ ನೋಡು. ಅದಕ್ಕೇ ನೀನು ಇದನ್ನ ಓದಬಾರದು. ಬರೆಯುತ್ತಾ ಹೋದರೆ ನನಗೇ ಇನ್ನೂ ಬರೆಯುವ ಆಸೆ ಹೆಚ್ಚಾಗಬಹುದು. ಅಂತೆಯೇ ಕಲ್ಲು ಬೆಂಚಿನ ಮೇಲೆ ಪುಸ್ತಕವನ್ನಿಟ್ಟುಬರುವ ಆಸೆಯೂ.&lt;br /&gt;&lt;br /&gt;                                * * *&lt;br /&gt;ಈ ಪುಟಗಳನ್ನು ಬೆಂಕಿಗೆಸೆಯುವ ಮುಂಚೆ ಕಥೆಯೊಂದ ಹೇಳಬೇಕು. ಇದನ್ನು ಬರೆಯುವಾಗ ನನ್ನ ಅಷ್ಟು ದಿನದಿಂದ ಕಾಡುತ್ತಿದ್ದ ಅನೂಹ್ಯವಾದ ಭಯದಿಂದ ಬಿಡುಗಡೆಯಾದಂತೆ, ಕಳಚಿಕೊಂಡಂತೆ, ನೆಮ್ಮದಿಯಿಂದಿದ್ದೇನೆ. ಇಟಲಿಯ ಡ್ಯೂಕ್ ಒಬ್ಬನ ಕಥೆ ಇದು. (ಅವನದೋ ಅವನ ಹೆಂಡತಿಯದೋ?) ಅವನು ತನ್ನ ಹೆಂಡತಿಯ ಪೇಂಟಿಂಗ್ ಅನ್ನು ತೋರಿಸಿ ಅವಳ ಬಗ್ಗೆ ಹೇಳುತ್ತಾ ಹೋಗುತ್ತಾನೆ. ನಗು ಮುಖದ ವಿನಯವಂತ ಹುಡುಗಿಯವಳು, ಯಾರ ಮುಂದೆಯೂ ತನ್ನ ಹೆಚ್ಚುಗಾರಿಕೆಯನ್ನ ತೋರಿಸಿಕೊಳ್ಳದೆ ಇರುತ್ತಿದ್ದ ಆ ಹುಡುಗಿ ಕೆಲಸದವನಿಗೂ ಕೂಡಾ ಧನ್ಯವಾದ ಹೇಳುವುದನ್ನು ಮರೆಯುತ್ತಿರಲಿಲ್ಲ. ಎಲ್ಲರಿಗೂ ಅವಳ ನಗು ಮುಖದ ಪರಿಚಯವಿರುತ್ತೆ. ಡ್ಯೂಕ್‌ಗೆ ತನ್ನ ಹೆಂಡತಿ ಘನತೆಗೆ ತಕ್ಕಂತೆ ನಡೆಯುತ್ತಿಲ್ಲ ಅನ್ನಿಸುತ್ತದೆ. ಅವಳಿಗೆ ನಿನ್ನ ನಡತೆಯನ್ನು ತಿದ್ದಿಕೋ ಎಂದು ಹೇಳುವುದಕ್ಕೂ ಅವನ ಅಭಿಮಾನ ಅಡ್ಡಬರುತ್ತದೆ. ಅದಕ್ಕೆ ಅವನು ತನ್ನ ಭಟರಿಗೆ ಅಪ್ಪಣೆ ಕೊಡಿಸುತ್ತಾನೆ. ಅವಳ ನಗು ಧನ್ಯವಾದಗಳೆಲ್ಲಾ ಕೊನೆಗೊಳ್ಳುತ್ತವೆ. I gave orders and all smiles stopped ಎಂಬುದನ್ನ ಅವಳ ಕೊಲೆಯಾಯಿತು ಎಂದು ಸರಿಯಾಗಿ ಅರ್ಥಮಾಡಿಕೊಳ್ಳುವ ಜನ. I didn't like his going away from me and he died ಅಂತ ಬರೆದರೆ ಗಂಡನ ಸಾವಿನ ಬಗ್ಗೆ ದುಃಖಿಸುತ್ತಿದ್ದಾಳೆ ಎಂದು ತಪ್ಪಾಗಿ ಅರ್ಥಮಾಡಿಕೊಂಡರು. ಅಥವಾ ತಪ್ಪು ನನ್ನದೂ ಇರಬಹುದು.&lt;br /&gt;               - ॑ ॑-॑&lt;br /&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4998286701426598511?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4998286701426598511/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4998286701426598511' title='3 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4998286701426598511'/><link rel='self' type='application/atom+xml' href='http://www.blogger.com/feeds/714642904810204846/posts/default/4998286701426598511'/><link rel='alternate' type='text/html' href='http://mrugnayanee.blogspot.com/2011/07/blog-post.html' title='ನೆನಪಿಗೂ ನೆರಳ ಬಣ್ಣ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>3</thr:total></entry><entry><id>tag:blogger.com,1999:blog-714642904810204846.post-1771204094839887230</id><published>2010-11-11T20:27:00.004+05:30</published><updated>2010-11-12T18:11:00.557+05:30</updated><title type='text'>ದೂರದ ದಾರಿಯೂ ನೀವಿದ್ದರೆ ಹತ್ತಿರ..</title><content type='html'>&lt;a onblur="try {parent.deselectBloggerImageGracefully();} catch(e) {}" href="http://3.bp.blogspot.com/_CV70S6yiPjU/TNwVrraaVEI/AAAAAAAAACo/BzpKyp2ndsE/s1600/Invitation.jpg"&gt;&lt;img style="float:right; margin:0 0 10px 10px;cursor:pointer; cursor:hand;width: 229px; height: 320px;" src="http://3.bp.blogspot.com/_CV70S6yiPjU/TNwVrraaVEI/AAAAAAAAACo/BzpKyp2ndsE/s320/Invitation.jpg" border="0" alt=""id="BLOGGER_PHOTO_ID_5538325481890927682" /&gt;&lt;/a&gt;&lt;br /&gt;ಅವತ್ತು, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆ ಬರೆಯಲು ಶುರು ಮಾಡಿದಾಗ ನನಗೆ ಟೈಪ್ ಮಾಡುವುದು, ಬ್ಲಾಗು ಕಮೆಂಟುಗಳು ಇದ್ಯಾವುದರ ಗಂಧ ಗಾಳಿಯೂ ಇರಲಿಲ್ಲ. ಅಮರ ಶ್ರೀನಿಧಿ ಸೋಮು ಇವರೆಲ್ಲರೂ ಈ ಜಗತ್ತಿಗೆ ನನ್ನ ಪರಿಚಯಿಸಿದವರು, ಬ್ಲಾಗ್ ಮಾಡಿಕೊಟ್ಟು ಅದಕ್ಕೊಂದು ಚಂದದ ಹೆಸರಿಟ್ಟು ನನ್ನ ಬರಹಗಳನ್ನ ಟೈಪ್ ಮಾಡಿಕೊಟ್ಟ ಅವರೆಲ್ಲರೂ ಅಷ್ಟೊಂದು ಪ್ರೀತಿಯಿಂದ ಇಷ್ಟೆಲ್ಲಾ ಸಹಾಯ ಮಾಡಿದರು, ನೀವುಗಳು ನನ್ನ ಕಥೆಗಳನ್ನ ಓದಿ ನಾನು ತಪ್ಪು ಮಾಡಿದಾಗಲೆಲ್ಲಾ ತಿದ್ದಿ, ನಿಮಗಿಷ್ಟವಾದದ್ದನ್ನ ಹೇಳಿ ನನ್ನ ಪ್ರೋತ್ಸಾಹಿಸಿದ್ದೀರಿ. ಈ ಸಂಭ್ರಮದ ಸಮಯದಲ್ಲಿ ನಿಮ್ಮನ್ನೆಲ್ಲ ಹೇಗೆ ನೆನಪಿಸಿಕೊಳ್ಳದೆ ಇರಲಿ? ಅಂಕಿತ ಪ್ರಕಾಶನದವರು ನನ್ನ ಕಥಾ ಸಂಕಲನ &lt;span style="font-weight:bold;"&gt;ನಡೆದಷ್ಟು ದಾರಿ ದೂರ &lt;/span&gt;ಹೊರತರುತ್ತಿದ್ದಾರೆ. ಈ ತಿಂಗಳ ಹದಿನೇಳರಂದು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ದ್ ಕಲ್ಚರ್ ನಲ್ಲಿ ಬಿಡುಗಡೆ. ದಯವಿಟ್ಟು ಬನ್ನಿ. ಕಾಯುತ್ತಿರುತ್ತೇನೆ. ಅಲ್ಲಿ ಸಿಗೋಣ,&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-1771204094839887230?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/1771204094839887230/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=1771204094839887230' title='10 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/1771204094839887230'/><link rel='self' type='application/atom+xml' href='http://www.blogger.com/feeds/714642904810204846/posts/default/1771204094839887230'/><link rel='alternate' type='text/html' href='http://mrugnayanee.blogspot.com/2010/11/blog-post.html' title='ದೂರದ ದಾರಿಯೂ ನೀವಿದ್ದರೆ ಹತ್ತಿರ..'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><media:thumbnail xmlns:media='http://search.yahoo.com/mrss/' url='http://3.bp.blogspot.com/_CV70S6yiPjU/TNwVrraaVEI/AAAAAAAAACo/BzpKyp2ndsE/s72-c/Invitation.jpg' height='72' width='72'/><thr:total>10</thr:total></entry><entry><id>tag:blogger.com,1999:blog-714642904810204846.post-4593814110696048109</id><published>2010-10-13T15:24:00.005+05:30</published><updated>2010-10-13T15:29:15.819+05:30</updated><title type='text'>ನಡೆದಷ್ಟೂ ದಾರಿ ದೂರ</title><content type='html'>&lt;span style="font-weight:bold;"&gt;ಭೀಮನ ಕಣ್ಣಲ್ಲಿ ಹಿಡಂಬೆ ಎಂಬ ಕಮಲಪಾಲಿಕೆ &lt;/span&gt;&lt;br /&gt;&lt;br /&gt;ವನವಾಸ ಶುರುವಾಗಿ ತಿಂಗಳಾಗುತ್ತಾ ಬಂದಿತ್ತು. ಉಳಿದ ಐದು ಜನರೂ ಕಾಡಿನ ಜೀವನಕ್ಕೆ ನಿಧಾನವಾಗಿ ಹೊಂದಿಕೊಳ್ಳುತ್ತಿದ್ದರೂ ಭೀಮನಿಗೆ ಸರಿಹೋಗುತ್ತಲೇ ಇರಲಿಲ್ಲ. ಅದರಲ್ಲೂ ಕೃಷ್ಣೆ ಸಾಮಾನ್ಯ ಹೆಂಗಸರಂತೆ ಕಷ್ಟಪಡುವುದನ್ನು ನೋಡಿದಾಗಲೆಲ್ಲ ರೋಷ ಉಕ್ಕುತ್ತಿತ್ತು. ಕಷ್ಟ ಪಡದೆ ವಿಧಿಯೇ ಇಲ್ಲ ಅಂತಾದರೆ ಒಂದು ಥರ ಆದರೆ ಕಣ್ಮುಂದೆಯೇ ಇದೆಯಲ್ಲಾ ಪರಿಹಾರ.&lt;br /&gt;ಆ ಯೋಚನೆಯನ್ನು ಮನಸ್ಸಿಗೆ ಪೂರ್ತಿಯಾಗಿ ತಂದುಕೊಳ್ಳಲೂ ಕಸಿವಿಸಿ. ಏನೋ ಒಂಥರಾ ಮುಜುಗರ ಇಕ್ಕಟ್ಟಿಗೆ ಸಿಲುಕಿದ ಹಾಗೆ. ಹಾಗೇನು ಮುಜುಗರ ಪಟ್ಟುಕೋಬೇಕಿಲ್ಲ, ಹೀಗಾಗಿದೆ ಅಂತ ತಿಳಿಸಿದರೆ ಸಾಕು. ಅಷ್ಟಕ್ಕೂ ಏನಾಗಿದೆ ಅಂತ ತಿಳಿಸಲೂ ಬೇಕಿಲ್ಲ. ಹಾಗೇ ಸ್ವಲ್ಪ ದಿನ ಹೋಗಿದ್ದು ಬಂದು ಬಿಡಬಹುದು. ಆದರೆ ಧರ್ಮ ಒಪ್ಪಬೇಕಲ್ಲ. ಕಾರಣ ಹೇಳಿಯೇ ಹೇಳುತ್ತಾನೆ. ಅವಳಾದರೂ ಸುಮ್ಮನಿದ್ದಾಳ? ಯಾರೂ ಇರಲಿಲ್ಲ ಅಂತ ನನ್ನ ಬಳಿ ಬಂದಿರಿ. ರಾಜ್ಯ ಹೋಗಿಲ್ಲದಿದ್ದರೆ ನನ್ನ ನೆನಪೂ ಆಗುತ್ತಿರುತ್ತಿರಲಿಲ್ಲ ಅಲ್ಲವೇ ಅನ್ನುತ್ತಾಳೆ. ಉಸಿರುಕಟ್ಟಿಸುತ್ತಾಳೆ. ನೀನು ಹೇಳ್ತಿರೋದೆ ಸರಿ, ಹೀಗಾಗಿ ಹೋಯ್ತು. ನೀನೇ ದಿಕ್ಕು ಅಂತ ನೇರವಾಗೇ ಹೇಳಿದ್ರೆ? ಹೌದು, ಆಗ ನೆನಪಿಸಿಕೊಳ್ಳಲಿಲ್ಲ ನಂದು ತಪ್ಪು. ಅದನ್ನ ಒಂದು ಸತಿ ಒಪ್ಪಿಕೊಂಡ್ರೆ ಆಯ್ತಲ್ಲ? ಖಂಡಿತ ಚನ್ನಾಗೇ ನೋಡ್ಕೊತಾಳೆ. ಇಂದ್ರಪ್ರಸ್ಥದ ಜೀವನ ಅಲ್ದೇ ಹೋಗಬಹುದು ಆದ್ರೆ ಹಿಂಗೆ ನಿರ್ಗತಿಕರ ಥರ ಅಂತೂ ಇರ್ಬೇಕಿಲ್ಲ. ಸರಿ ಅಣ್ಣನಿಗೆ ಹೋಗಿ ಹೇಳೋದೇ ಅಂತ ನಿಶ್ಚಯಿಸಿ ಎದ್ದು ನಿಂತ ಭೀಮ. &lt;br /&gt;ಆದರೆ ಎದ್ದು ನಿಂತವನು ಹೆಜ್ಜೆ ಇಡುವ ಮೊದಲೇ ಕೃಷ್ಣೆಯ ನೆನಪಾಯಿತು. ಬೇಜಾರು ಮಾಡ್ಕೊತಾಳೆ. ಅವಳು ಇವಳನ್ನ ಹೇಗೆ ಕಾಣ್ತಾಳೋ? ಮತ್ತೆ ಕೂತುಕೊಂಡ. ತಲೆ ಧಿಮಿ ಧಿಮಿ ಅನ್ನುತ್ತಿತ್ತು. ಬೇಜಾರು ಯಾಕ್ ಮಾಡ್ಕೊಬೇಕು. ಅವ್ಳಿಗೇ ಹೇಳ್ತಿನಿ. ಅರ್ಥ ಮಾಡ್ಕೊತಾಳೆ ಅನ್ನೋ ನಿಶ್ಚಯವು ಮೂಡೋ ಮೊದಲೇ ಕರಗಿ ಹೋಯಿತು. ಕೃಷ್ಣೆ ಬೇಜಾರಾದ್ರೂ ಅಂದು ತೋರ್ಸಲ್ಲ. ಯಾವತ್ತೂ ಅಂದು ತೋರ್ಸಿಲ್ಲ. ಏನೆ ಆರ್ದ್ರೂ ನಿಂಗೇ ಅರ್ಥವಾಗಬೇಕು ಅದಾಗೇ ಅರ್ಥ ಆಗ್ದಿದ್ರೆ, ಅರ್ಥ ಮಾಡ್ಸಿಯೂ ಪ್ರಯೋಜನ ಇಲ್ಲ ಅನ್ನೋದು ಯಾವತ್ತಿನ ಮತು ಅವಳದು. ಭೀಮ ಮತ್ತೆ ನಿಧಾನವಾಗಿ ಯೋಚಿಸಿದ. ಹೆಂಗಿದ್ರು ಕಮಲಪಾಲಿಕೆಯನ್ನು ಬಿಟ್ಟು ಬಂದು ವರ್ಷಗಳೇ ಕಳೆದಿದೆ. ಬಿಟ್ಟು ಬರೋವಾಗ್ಲೇ ಬೇಜಾರು ಮಾಡಿಯಾಗಿದೆ, ವಾಪಸ್ಸು ಬರ್ತಿನಿ ಅಂತ ಮಾತೇನೂ ಕೊಟ್ಟಿಲ್ಲ. ಕರೆದಾಗ ಬರಬೇಕು ಅಂತ ಹೇಳಿದ್ದೀನಿ, ಕರೆಯುವ ಅವಕಾಶ ಬಂದಿಲ್ಲ ಅಷ್ಟೆ. ಈಗ ಹೋದ್ರೆ ಇವಳಿಗೂ ಬೇಜಾರು. ಮಾತಾಡದೆ ಏನನ್ನೂ ಹೇಳದೆ ಮೌನವಾಗಿ ಕೊಲ್ಲುತ್ತಾಳೆ. ಮೊದಲೇ ದ್ಯೂತ ಸಭೇಲಿ ಸಾಕಷ್ಟು ಬೇಜಾರು ಮಾಡಿದ್ದಾಗಿದೆ ಅಂತೆಲ್ಲಾ ಯೋಚಿಸಿ ಸರಿ ಅವಳಲ್ಲಿಗೆ ಹೋಗೋದು ಬೇಡ ಅಂತ ನಿರ್ಧರಿಸಿದ.&lt;br /&gt;&lt;br /&gt;&lt;br /&gt;&lt;br /&gt;&lt;span style="font-weight:bold;"&gt;ಶ್ರೀಧರನ ನೆನಪಿನಲ್ಲಿ ಇಳಾ ಎಂಬ ಹಿಡಂಬೆ&lt;/span&gt;&lt;br /&gt;&lt;br /&gt;ಇನ್ನು ಮುಂದೆ ಓದೋಕ್ಕೆ ಸಾಧ್ಯವೇ ಇಲ್ಲ ಅನ್ನಿಸಿ ಬುಕ್ ಮಾರ್ಕನ್ನು ಇಟ್ಟು ಕಣ್ಣು ಮುಚ್ಚಿದ ಶ್ರಿಧರ. ಹೀಗೆ ನೆನಪುಗಳು ತೊಳಸಿಕೊಂಡು ತೊಳಸಿಕೊಂಡು ಬರುವಾಗ ಓದಲಾದರೂ ಹೇಗೆ ಸಾಧ್ಯ? ಭೀಮನನ್ನು ಬೈದರೆ ನನಗ್ಯಾಕೆ ಸಿಟ್ಟು ಬರಬೇಕು, ಲಂಕೇಷರನ್ನು ಓದೋವಾಗಲೂ ಹಿಂಗೇ ಆಗುತ್ತಿತ್ತು. ಅವರ ಕಥೆಗಳನ್ನು ಕಂಡರೆ ದ್ವೇಶ ಹುಟ್ಟಬೇಕು, ಅಷ್ಟು ಹಿಂಸೆ. ಯಾವ ಕಾರಣಕ್ಕೂ ಓದಬಾರದು ಅಂದುಕೊಂಡು ಮುಚ್ಚಿಡುತ್ತಿರಲಿಲ್ಲವ? ಸಾಯಲಿ ಎಸೆದು ಬಿಡೋಣ ಅನ್ನೋಷ್ಟು ಸಿಟ್ಟು ಬಂದರೂ. ಅಲ್ಲಾ ಸುಮ್ಮಸುಮ್ಮನೆ ತಲೆನೋವು ಬರಿಸಿಕೊಳ್ಳಲು ಹುಚ್ಚಾ? ಓದುತ್ತಾ ಹೋದಹಾಗೆಲ್ಲಾ ತಲೆಯೊಳಗೆ ಒಂಥರಾ ಯಾವುದೋ ಯೋಚನೆ. ನಿದ್ದೆ ಬಾರದೆ ಮಾರನೆ ದಿನವೆಲ್ಲಾ ತಲೆ ಧಿಂ ಅನ್ನುತ್ತಿರುತ್ತಲ್ಲ ಹಾಗೇ.. ಹಾಗೇನು, ಅದೇ ಆಗೋದು. ಎಲ್ಲಾ ಕಂಗೆಡಿಸೋ ಕಥೆಗಳು. ನನ್ನ ತಪ್ಪು, ಸ್ವಾರ್ಥ, ಅಹಂಕಾರ ಇನ್ನೂ ನನ್ನೊಳಗಿನ ಬೇಡದ್ದ ಭಾವನೆಗಳನ್ನೆಲ್ಲಾ ಹೊಡದೆಬ್ಬಿಸುವಂಥಾ ಕಥೆಗಳು. ನೂರಾರು ಪುಟಗಳ ಕಾದಂಬರಿಗಳನ್ನ ಸರಾಗವಾಗಿ ಕೆಲವೇ ಗಂಟೆಗಳಲ್ಲಿ ಓದಿ ಮುಗಿಸಿಬಿಡಬಹುದು. ಲಂಕೇಶರ ಒಂದು ಕಥೆ ಓಂದೇ ಏಟಿಗೆ ಓದಿ ಮುಗಿಸಲು ಕಷ್ಟ. ಸ್ವಲ್ಪ ಓದುತ್ತಾಲೇ ಇನ್ನೇನೋ ನೆನಪಾಗಿ, ಸಣ್ಣತನಗಳು ಹೊರಬಂದ ಘಟನೆಗಳು, ಮರತೇ ಬಿಟ್ಟಿದ್ದ ಮಾತುಗಳು ಎಲ್ಲಾ ಸುಪ್ತ ಮನಸ್ಸಿನಿಂದ ಹೊರಬಂದು ಕಿರಿಕಿರಿ ಮಾಡಿ, ಕಾಡಿ, ಹಿಂಸೆ ಮಾಡಿ ಅಯ್ಯೋ ದಮ್ಮಯ್ಯಾ.. &lt;br /&gt;ಲಂಕೆಷ್ ಆದರೆ ಒಂದು ರೀತಿಗೆ ಸಮ. ವೈಯಕ್ತಿವಾಗಿ ಗೊತ್ತಿಲ್ಲದವರು, ಅವರು ಬರೆದಿದ್ದನ್ನು ಒಳಮನಸ್ಸು ತನ್ನ ಜೀವನದ ಯಾವುದಕ್ಕೋ ತಳುಕಿ ಹಾಕುವಾಗಲೂ ಒಂಥರಾ ಆಚೆ ಉಳಿದ ಭಾವ ಇರುತ್ತಿತ್ತು. ಆದರೆ ಇವಳು? ಇವಳು ಬರೆದಿರೋದನ್ನ ಇನ್ಯಾರದೋ ಜೀವನಕ್ಕೆ ಸಮೀಕರಿಸಲು ಹೇಗೆ ಸಾಧ್ಯ? &lt;br /&gt;&lt;br /&gt;ನಾವಾಡಿಕೊಳ್ಳುತ್ತಿದ್ದ ಮಾತುಗಳೇ. ಭೈರಪ್ಪನವರ ಪರ್ವ ಓದೋಕ್ಕೆ ಮೊದಲೂ ಅವಳಿಗೆ ಭೀಮನೆಂದರೆ ಇಷ್ಟ. ಅದು ಓದಿದಮೇಲಂತೂ ಇನ್ನೂ. ಮಸಾಲೆ ತಿಂದು ಬರೋಣ ಅಂತ ಕ್ಯಾಂಟೀನಿಗೆ ಎಳೆದುಕೊಂಡು ಹೋದರೆ ಇವಳದು ಮತ್ತೆ ಭೀಮ ಹಿಡಂಬಿಯ ಮಾತು. ಮಹಾಭಾರತದ ಕಥೆ ಏನಾದರಾಗಲಿ. ಹಿಡಂಬಿಗೆ ತುಂಬ ಮೋಸವಾಯಿತು. ಮತ್ತೆ ವಾದ ತೆಗೆಯುವಳು. ಅಲ್ಲಾ, ನೀನೇ ಹೇಳು. ಅಷ್ಟು ಮುಚ್ಚಟೆಯಿಂದ ನೋಡಿಕೊಳ್ಳುತ್ತಿದ್ದ ಹಿಡಂಬಿ ಇದ್ದೂ ವನವಾಸದ ಕಾಲದಲ್ಲಿ ಅವಳಲ್ಲಿಗೆ ಹೋಗುವ ಯೋಚನೆ ಒಬ್ಬ ಪಾಂಡುಪುತ್ರನಿಗೂ ಹೊಳೆಯಲಿಲ್ಲವೆಂದರೆ ಆಶ್ಚರ್ಯ. ಹೋಗ್ಲಿ, ಭೀಮಾನಾದ್ರು ಈ ಬಗ್ಗೆ ಯೋಚನೆ ಮಾಡಬಹುದಿತ್ತಲ್ಲ? ಯಕೆ ಹೋಗ್ಲಿಲ್ಲ ಅವ್ಳ್ ಹತ್ರ? ನೆನಪಾಗಲಿಲ್ಲ ಅಂದ್ರೆ ನಂಬಕ್ಕಾಗಲ್ಲ. ಅರವತ್ತು ವರ್ಷದ ನನ್ನ ಚಿಕ್ಕ್ ತಾತ ಅವರು ಕಾಲೇಜಿನಲ್ಲಿ ಓದುತ್ತಿದ್ದಾಗ ಜೊತೆಗೋದುತ್ತಿದ್ದ ಹುಡುಗಿಯ ಬಗ್ಗೆ ನೆನಪಿಸಿಕೊಂಡು ಹೇಳುವಾಗ, ಒಂದು ವರ್ಷ ಸಂಸಾರ ಮಾಡಿ ಜೊತೆಗಿದ್ದ ಹೆಂಡತಿಯ ನೆನಪು ಬರಲಿಲ್ಲ ಅಂದರೆ ವಿಚಿತ್ರ. ಆದರೆ ಸರಿಯಾಗಿ ಯುದ್ಧದ ಹೊತ್ತಿಗೆ ಸಹಾಯ ಮಾಡಲು ಅವಳ ಮಗ ಅವಳ ಜನ ಬೇಕು. ಯೋಚನೆ ಮಾಡು, ಭೈರಪ್ಪನವರು ಬರೆದಿರೋದು ಸರಿ. ಎಲ್ಲಾ ಕುಂತಿಯಿಂದಲೇ ಆದದ್ದು. ಅಲ್ಲ ನಿಜಕ್ಕೂ ಭೀಮನ ತಪ್ಪೇ ಅಲ್ಲ, ಭೀಮ ಅಂತವನಲ್ಲ. ವ್ಯಾಸರೇ ಸರಿ ಇಲ್ಲ, ಬರೀ ಘಟನೆಗಳನ್ನ ಹೇಳಿಬಿಟ್ಟರೆ ಆಯಿತಾ ಸೂಕ್ಷ್ಮಗಳು ಬೇಡ? ವ್ಯಾಸರನ್ನು ಬೈದದ್ದಾಯಿತು, ಹಂಗಂತ ಇಳಾ ಆಗ ವ್ಯಾಸರ ಭಾರತವನ್ನ ಓದಿಕೊಂಡಿದ್ದಳು ಅಂತಲ್ಲ, ವ್ಯಾಸರನ್ನು ಬಯ್ಯುವಾಗ ಅವನನ್ನು ಓದಿಕೊಂಡಿದ್ದೀವಾ ಇಲ್ಲವಾ ಅನ್ನೋದೆಲ್ಲಾ ನೆನಪಿಗೆ ಬರೋಲ್ಲ. ನೆನಪಿಗೆ ಬಂದರೂ ಓದದಿದ್ದರೇನಂತೆ ವ್ಯಾಸರು ಖಂಡಿತ ಹಿಡಂಬಿಯನ್ನ ಕದೆಗಣಿಸಿದ್ದಾರೆ. ಅದಕ್ಕೇ ನೋಡು ಪರ್ವ ಇಷ್ಟ ಆಗೋದು. ಮತ್ತೆ ಪರ್ವಕ್ಕೆ ತಂದು ನಿಲ್ಲಿಸಿದ್ದಳು. ಇಷ್ಟೊತ್ತೂ ಸುಮ್ಮನೆ ಕೂತಿದ್ದ ಅನಂತಮೂರ್ತಿಗಳ ಪ್ರಕಾಂಡ ಶಿಷ್ಯ ಶಿವಪ್ರಸಾದ ಭೈರಪ್ಪನವರನ್ನು ಟೀಕಿಸತೊಡಗಿದ. ಮಾತಿಗೆ ಮಾತು ಬೆಳೆದು ನೀ ವಾದ ಮಾಡ್ಬೇಕು ಅಂತ ಮಾಡ್ತಿಯ, ಸುಮ್ಮನೆ ಬಯ್ಯೋದಂದ್ರೆ ನಿಂಗ್ ಖುಷಿ ನಾನು ಮೂರ್ತಿಗಳನ್ನೇನಾದ್ರೂ ಅಂದ್ನ? ನಂಗೆ ಇಬ್ಬರೂ ಲೇಖಕರೂ ಇಷ್ಟ. ಒಂದು ಕೃತಿಯನ್ನ ಲೇಖಕನ ಹಂಗಿಲ್ಲದೆ ಓದಿಕೊಳ್ಳೋಕ್ಕೆ ಬರೋವರ್ಗೂ ಉದ್ಧಾರ ಆಗೋಲ್ಲ. ಮಸಾಲ ದೋಸೆ ಹೆಂಗಿದೆ? ಎಷ್ಟು ಹೈಜೀನಿಕ್ ಆಗಿ ಮಾಡಿದಾನೆ? ಅನ್ನೋದು ಮುಖ್ಯ ಯಾರು ಮಾಡಿದ್ದು ಅನ್ನೋದಲ್ಲ ಅಂತೆಲ್ಲಾ ಯಾವುದ್ಯಾವುದಕ್ಕೋ ಹೋಲಿಸಿ ಮಾತು ಮುಗಿಸಿದ್ದಳು. ಶಿವಪ್ರಸಾದ್ ಅನಂತಮೂರ್ತಿ ಭೈರಪ್ಪನವರ ವಿಷಯ ಮಧ್ಯೆ ತಂದಿದ್ದು ಇಷ್ಟವಾಗದಿದ್ದರೂ, ನನಗ್ಯಾಕೋ ಕೃತಿಯನ್ನ ಲೇಖಕನ ಹಂಗಿಲ್ಲದೆ ಓದಿಕೊಳ್ಳಬೇಕು ಅನ್ನೋದನ್ನ ಒಪ್ಪಿಕೊಳ್ಳೋಕ್ಕೆ ಆಗಿರಲಿಲ್ಲ.&lt;br /&gt;&lt;br /&gt;ಇಳಾಳಿಗೆ ತನ್ನ ಬಗ್ಗೆ ಏನನ್ನಿಸುತ್ತಿತ್ತು ಅಂತ ಶ್ರೀಧರ ಯೋಚಿಸಲು ಶುರು ಮಡಿದ. ನೀನು ನನ್ನ ಭೀಮ ಅನ್ನುತ್ತಿದ್ದಳು. ಆದರೆ, ಹಿಡಂಬಿಯ ಹಾಗೆ ಅವಳಾಗೇ ನನ್ನ ಬಳಿ ಬಂದಿರಲಿಲ್ಲ, ಛೇ ನಮ್ಮಗಳನ್ನ ನಾವು ಪುರಾಣದ ಪಾತ್ರಗಳಿಗೇಕೆ ಹೋಲಿಸಿಕೊಳ್ಳಬೇಕು? ನಾವು ಯಾರು ಅಂತ ಕಂಡುಕೊಳ್ಳೋಕ್ಕೆ ಅವಕಾಶವೇ ಕೊಡದಂತೆ ಚಿಕ್ಕಂದಿನಿಂದ ನೀನು ನಿನ್ನ ತಾತನ ಹಾಗೆ, ಬ್ರಂಹಾಂಡ ಸಿಟ್ಟು. ಆದ್ರೆ ನನ್ನ ಥರ ಮೃದು ಮನಸ್ಸು ಅನ್ನುತ್ತಿದ್ದ ಅಮ್ಮನಿಮ್ದ ಹಿಡಿದು, ನೀನು ಅವನ ಹಾಗೆ ಮಾತು ಕಮ್ಮಿ ಇನ್ಯಾರದೋ ರೀತಿ ನಿನ್ನ ಧ್ವನಿ ಇನ್ನು ಏನೇನೋ.. ಎಲ್ಲರೂ ಹೋಲಿಸುವವರೇ. ನಾನ್ಯರು ಅಂತ ಇವತ್ತಿಗೂ ನನಗೇ ಗೊತ್ತಾಗದ ಹಾಗೆ. ನನ್ನ ಭೀಮನಿಗೆ ಹೋಲಿಸುತ್ತಿದ್ದ, ಭೀಮನನ್ನು ಅಷ್ಟು ಇಷ್ಟ ಪಡುತ್ತಿದ್ದ ಇವಳು ಈಗ ಭೀಮನನ್ನ ಬೇರೆ ರೀತಿಯಲ್ಲಿ ಚಿತ್ರಿಸಿದ್ದಾಳೆ. ಪುರಾಣದ ಪಾತ್ರಗಳ ಸ್ವಭಾವ ಮನುಷ್ಯರ ಈಗಿನ ನಡವಳಿಕೆಗಳ ಆಧಾರದ ಮೇಲೆ ಚಿತ್ರಣಗೊಳ್ಳುತ್ತೆ. ಯೋಚನೆಯೇ ಮಾಡದ, ನೇರಾ ನೇರ ಮನಸ್ಸಿನ, ಇಕ್ಕಟ್ಟಿಗೆ ಸಿಕ್ಕಿ ಹಾಕಿಕೊಂಡಿದ್ದ ಮಗುವಿನ ಹೃದಯದ ಭೀಮ, ಯೋಚನೆ ಮಾಡುವ, ಯಾರ್ಯಾರಿಗೆ ಏನೇನನಿಸುತ್ತೆ? ಅಂತ ಲೆಕ್ಕ ಹಾಕುವ ಭೀಮನಾಗಿ ಹೋಗುತ್ತಾನೆ. ಅವಳಿಗೆ ಫೋನ್ ಮಾಡಿ ಬಾಯಿಗೆ ಬಂದಂತೆ ಕೊಳಕು ಪದಗಳಲ್ಲಿ ಬೈಯ್ಯಬೇಕು ಅನ್ನಿಸಿತು. ಹೀಗೆ ಪುರಾಣವನ್ನ ಮನಸ್ಸಿಗೆ ಬಂದಂತೆ ಚಿತ್ರಿಸಲು ಅವಳಿಗೆ ಹಕ್ಕನ್ನು ಕೊಟ್ಟೋರು ಯಾರು? ಫೋನ್ ಮಾಡಿದರೂ ಬಯ್ಯಲಂತೂ ಆಗೋದಿಲ್ಲ ಅನ್ನೋದೂ ಹೊಳೀತು. ಬಯ್ಯೋದು ಹೋಗ್ಲಿ ಮಾತಾಡಿಸೋಕ್ಕಾದರೂ ಅವಳು ಫೋನ್ ಎತ್ತಬೇಕಲ್ಲ.&lt;br /&gt;&lt;br /&gt;&lt;span style="font-weight:bold;"&gt;ಶ್ರೀಧರ ನಿರ್ಭಾವುಕನಾಗಿ ಓದಿದ ಮತ್ತಷ್ಟು ಪುಟಗಳು&lt;/span&gt;&lt;br /&gt;&lt;br /&gt;ಎಣಸಿಕೊಂಡಳು, ಇಂದಿಗೆ ಸರಿಯಾಗಿ ಎಂಟು ವರ್ಷ ನಾಲ್ಕು ತಿಂಗಳು, ಇವನು ಹುಟ್ಟೋದನ್ನೀ ಕಾಯುತ್ತಿದ್ದಂತೆ ಹೊರಟರಲ್ಲ ಎಲ್ಲರೂ. ನಿನ್ನ ಕರ್ತವ್ಯ ಅಷ್ಟೇ ಅಂತ ವೇದವ್ಯಾಸರು ಹೇಳಿದರು ಎನ್ನುವ ನೆಪ ಬೇರೆ. ಇವನಾದರೂ ಇರಬಹುದಿತ್ತು. ಅವರಿಗೆಲ್ಲ ಕಷ್ಟವಾಗುತ್ತಿತ್ತು. ಹೌದು, ಸುಖಭೋಗಗಳ ನಡುವೆ ಬೆಳೆದವರ ಕಷ್ಟವೇ ಇದು, ಸುಲಭವಾಗಿ ಕಾರ್ಪಣ್ಯಗಳಿಗೆ, ಬದಲಾವಣೆಗಳಿಗೆ ಹೊಂದಿಕೊಳ್ಳೋಲ್ಲ. ಆದರೂ ಅವರಿಗೆ ಹಿಂಸೆಯಾಗದಂತೆ ನಡೆದುಕೊಳ್ಳುತ್ತಿರಲಿಲ್ಲವಾ ನಾನು? ಯಾರಿಗಾದರೂ ಎದುರು ಮಾತಾಡಿದ್ದೆನಾ? ಅಣ್ಣ ಸತ್ತ ನಂತರ  ಕಿರ್ಮೀರನ ಮಕ್ಕಳು ತಾವೇ ಮುಖಂಡರಾಗಬೇಕು ಅಂತ ಎಷ್ಟು ಕಷ್ಟ ಪಟ್ಟರು, ಭೀಮ ಇಲ್ಲದೇ ಹೋಗಿದ್ದರೆ ಅವರೇ ಯಾರಾದರೂ ಬಲವಂತವಾಗಿ ಮದುವೆ ಮಾಡಿಕೊಂಡು.. ಸಧ್ಯ ಹಾಗಾಗಲಿಲ್ಲ. ಸಣ್ಣಂದಿನಿಂದಲೂ ನನಗೆ, ಎಲ್ಲಾದರೂ ಹೋಗಬೇಕು, ಕಾಡುಗಳಿಂದ, ಆಕಾಷ ಕಾಣದಂತೆ ಮುಚ್ಚುವ ಮರಗಳಿಂದ ದೂರ ತುಂ ದೂರಕ್ಕೆ, ಯಾವುದಾದರೂ ಬಯಲಿನಲ್ಲಿ ಅಂಗಾತ ಮಲಗಿಕೊಂಡು ನಕ್ಷತ್ರ ಎಣಿಸಬೇಕು, ಬೇಕಾದಾಗ ಕಾಡಿಗೆ ಹೋಗಿ ಸಾಕಷ್ಟು ಮಾಂಸ ಹಣ್ಣು ತಂದಿಟ್ಟುಕೊಂಡು ಬೇರೇನನ್ನಾದರೂ ಮಾಡಬೇಕು, ಎಲ್ಲಾ ಕಾಡು ಬಯಲು ಝರಿ ಸುತ್ತಬೇಕು, ಹುಡುಗರಂತಿರಬೇಕು ಸುಮ್ಮನೆ ಕೂರಬಾರದು.. ಕನಸುಗಳಿಗೆ ಕಟ್ಟೆಯಲ್ಲಿ? &lt;br /&gt;&lt;br /&gt;ರಾಜಕುಮಾರನೊಬ್ಬನನ್ನು ಮದುವೆಯಾಗುತ್ತೇನೆಂದು ಕನಸೂ ಕಂಡಿರಲಿಲ್ಲ. ಮನುಷ್ಯರೆಲ್ಲಾ ದುರ್ಬಲರಾದ ಆಟಿಕೆಗಳಂತೆ ಕಾಣುತ್ತಿದ್ದರು. ಘನವಲ್ಲದ ಯಾವುದೂ ನನ್ನ ಯಾವತ್ತೂ ಆಕರ್ಷಿಸಿದ್ದಿಲ್ಲ. ಅಂಥದ್ದರಲ್ಲಿ ಮನುಷ್ಯರಲ್ಲೊಬ್ಬನಾದ ಇವನನ್ನು ನಾನು ಹಾಗೆ ಬಯಸಿ ಬಯಸಿ ಮದುವೆಯಾಗುತ್ತೇನೆಂದು ಯಾರು ಕಂಡಿದ್ದರು? ನಿಜಕ್ಕೂ ಅವನು ಮನುಷ್ಯರಂತೆಲ್ಲಿದ್ದ? ಅವನ ಅಗಲ ಬುಜ, ತೋಳುಗಳನ್ನು ನೋಡಿದವಳಿಗೆ ಅವನ ಅಪ್ಪುಗೆಯೊಳಗೆ ಪುಡಿಪುಡಿಯಾಗಬೇಕು ಅನ್ನಿಸಿತ್ತು, ನಾಭಿಯಾಳದಲ್ಲಿ ಭೋರ್ಗರೆತ. ನಾಚಿಕೆಯೇ ಇಲ್ಲದವಳಂತೆ ಹೋಗಿ ಕೇಳುವವರೆಗೂ ಅವನು ತಿರಸ್ಕರಿಸಬಹುದು ಎಂದು ಹೊಳೆದೇ ಇರಲಿಲ್ಲ, ಅವನು ತಿರಸ್ಕರಿಸುವ ಒಪ್ಪಿಕೊಳ್ಳುವ ಮೊದಲೇ ಅಣ್ಣ ಬಂದುಬಿಟ್ಟನಲ್ಲ.. ಪಾಪ ಅನ್ನಿಸುತ್ತಿದೆ.. ಭೀಮನನ್ನು ನೋಡಿಯೇ ಅರ್ಥ ಮಾಡಿಕೊಳ್ಲಬೇಕಿತ್ತು. ಅವನು ಸಾಮಾನ್ಯನಲ್ಲ ಅಂತ. ಇಲ್ಲ ಅಣ್ಣನಿಗೆ ಅಹಂಕಾರ, ಅಲ್ಲದೆ ಯಾವತ್ತೂ ಯೊಚನೆ ಮಾಡುವ ಸ್ವಭಾವವೇ ಅಲ್ಲ ಅಣ್ಣನದು, ಮನುಷ್ಯರಲ್ಲವಾ ಅನ್ನೋ ಉಡಾಫೆಯಿಂದಲೇ ಎಗರಿ ಬಿದ್ದ. ಅಣ್ಣನ ಜೊತೆ ನಿಂತು ಹೋರಾಡಿದ್ದರೆ? ಇಲ್ಲ, ಇನ್ನೂ ನಾವು ಹತ್ತು ಜನ ಇದ್ದರೂ ಭೀಮ ಭೀಮನೇ... ಜೊತೆಗೆ ಅವನೊಬ್ಬ ಎದ್ದು ನಿಂತನಲ್ಲ ಬಿಲ್ಲು ಬಾಣ ಹಿಡಿದುಕೊಂಡು, ಇದೆಲ್ಲಾ ಈಗ ಹೊಳಿಯುತ್ತೆ. ಆಗ ನಿಜಕ್ಕೂ ನನ್ನ ಆವಾಹಿಸಿಕೊಂಡಿದ್ದು ಅವರಿಬ್ಬರ ಕಾದಾಟ. ಅಣ್ಣ ಪ್ರಾಣಿಗಳ ಮೇಲೆ ಎಗರುವಂತೆ ಅವುಗಳಿಗೆ ಪೆಟ್ಟುಕೊಡುವಂತೆ ಭೀಮನ ಮೇಲೆ ಎಗರುತ್ತಿದ್ದರೆ, ಭೀಮನದು ಲೆಕ್ಕಾಚಾರದ ಹೊಡೆತ. ಹೊಡೆದಾಡುವುದನ್ನು ಹೇಳಿಕೊಡುವುದಕ್ಕೂ ಅವರಿಗೆ ಗುರುಗಳಿರುತ್ತಾರೆ ಅಂತ ಗೊತ್ತಾಗಿದ್ದು ಆಮೇಲೆ. ಇವನು ಯೋಚನೆ ಮಾಡುವ ಮೊದಲೇ ಅವರಮ್ಮನೇ, ಹೂಂ ಒಪ್ಪಿಕೋ ಭೀಮ ಅವಳನ್ನು ಮದುವೆ ಮಾಡಿಕೋ ಅಂದುಬಿಟ್ಟರಲ್ಲಾ...  ಅವನಿಗೇ ಆಶ್ಚರ್ಯ ಆಗುವಂತೆ. ಅವನು ನಿರಾಕರಿಸುವ ಹೊತ್ತಿಗೆ ಆ ಗಡ್ಡದ ವ್ಯಾಸ ಎಲ್ಲಿಂದಲೋ ಹೇಳಿಮಾಡಿಸಿದಂತೆ ಬಂದನಲ್ಲ, ಅವನ ಮಾತನ್ನು ಮೀರುವ ಹಾಗೇ ಇಲ್ಲವಂತೆ. ಆ ಬಿಲ್ಲು ಬಾಣದವನ ಮುಖದಲ್ಲಿ ತೆಳ್ಳಗೆ ಕಂಡೂಕಾಣದಂತೆ ಹರಡಿದ್ದು ತಿರಸ್ಕಾರವೇ ಇರಬೇಕು. ಇಲ್ಲಿರುವವರೆಗೂ ಅವನು ನನ್ನೆಡೆಗೆ ನಮ್ಮವರೆಡೆಗೆ ಬಿಗಿಯಾಗೇ ಇದ್ದ. ಅರ್ಥವಿಲ್ಲದ ಅಹಂಕಾರ. &lt;br /&gt;ಮೊದಮೊದಲು ಕಸಿವಿಸಿ ಪಟ್ಟುಕೊಳ್ಳುತ್ತಿದ್ದ ಭೀಮ ನಿಧಾನಕ್ಕೆ ನನಗೆ ಅಂಟಿಕೊಂಡುಬಿಟ್ಟಿದ್ದ. ಆದರೆ ಕೆಲವೇ ತಿಂಗಳು ಅದು. ಘಟೋದ್ಘಜ ಹೊಟ್ಟೆಯಲ್ಲಿ ಹೊರಳಲು ಶುರುಮಾಡಿದ್ದ ಅಷ್ಟೇ, ಅವರಮ್ಮ ಬಂದು ಹೆಳಿದರಲ್ಲ, ಮಗು ಹುಟ್ಟಿದಮೇಲೆ ನಾವು ಹೊರಡುತ್ತೇವೆ ಅಂತ. ಹುಚ್ಚು ಕೋಪ ಬಂದಿತ್ತು ನನಗೆ. ಅಲ್ಲೇ ಅವಳನ್ನು ಪುಡಿಪುಡಿ ಮಾಡಿಬಿಡುವಷ್ಟು. ಆದರೆ ಭೀಮನ ಅಮ್ಮ ಸುಮ್ಮನಾದೆ. ಭೀಮನಿಗೆ ಹೇಳುತ್ತೇನೆ, ಅವನು ಹೊರಡೋಕ್ಕೆ ಒಪ್ಪಬೇಕಲ್ಲ ಅಂದುಕೊಂಡು ಅವನನ್ನು ಕೇಳಿದರೆ ಅವನು ಕಣ್ಣಿಗೆ ಕಣ್ಣು ಕೊಟ್ಟು ಮಾತಾಡುತ್ತಲೇ ಇರಲಿಲ್ಲ. ಇವನಿಗೂ ಸಾಕಾಗಿ ಹೋಗಿದೆ ಅಂತ ಅಳು ಒತ್ತರಿಸಿಕೊಂಡು ಬಂದಿತ್ತು. ಈಗಲೇ ಹೊರಟು ಹೋಗಿ ಅಂದೆ. ಅವರಮ್ಮ ಮೊಮ್ಮೊಗನ ಮುಖ ನೋಡಿಯೇ ಹೋಗೋದು ಅಂತ ಹಟ ಹಿಡಿದರು. ನಿಜಕ್ಕೂ ಹೋಗಲು ಆತರವಾಗಿದ್ದು ಇವನಿಗೆ. ನಮ್ಮ ಜೊತೆ ಬರುತ್ತೀಯ ಎಂದು ಮಾತಿಗೂ ಕೇಳಲಿಲ್ಲ. ರಾಕ್ಷಸಿಯ ಜೊತೆ ಇದಾನೆ ಎಂದರೆ ಇವನ ಮಾನ ಮಕ್ಕಾಗುವುದಿಲ್ಲವ? ಅವತ್ತಿನಿಂದ ಅವನ ಜೊತೆ ಸುತ್ತಾಡುವುದನ್ನು ನಿಲ್ಲಿಸಿಬಿಟ್ಟೆ, ಮಾತೂ ಎಣಿಸಿದಹಾಗೆ, ನಾನು ನನ್ನ ಹೊಟ್ಟೆಯಲ್ಲಿದ್ದ ಕಂದ, ಅವನೂ ಒಂದೆರೆಡು ಬಾರಿ ಮಾತಾಡಲು ಪ್ರಯತ್ನಿಸಿದೆ ಎನಿಸಿಕೊಳ್ಳಲು ಸಮಾಧಾನ ಮಾಡಲು ಬಂದವನಂತೆ ಮಾಡಿ ಆಮೆಲೆ ಸುಮ್ಮನಾಗಿಬಿಟ್ಟಿದ್ದ. ಹೊರಡುವ ಮೊದಲು ಎಷ್ಟು ಕೊಸರಿಕೊಂಡರೂ ಬಿಡದೆ ಮೂಳೆಗಳು ಮುರಿಯುವಂತೆ ಅಪ್ಪಿಕೊಂಡು ಕಣ್ಣೀರು ಸುರಿಸಿದನಲ್ಲಾ? ಏನರ್ಥ ಅವನದು? ಈ ನಾಟಕಗಳಿಗೆಲ್ಲಾ ಕಲ್ಲಾಗಿ ಹೋಗಿದ್ದೆ ನಾನು. ಹ್ಮ್ ಮ್.. ನಿಟ್ಟುಸಿರೆಳೆದುಕೊಂಡಳು. &lt;br /&gt;ತೆಲೆ ಎತ್ತಿದರೆ ಘತೋಧ್ಗಜ ನಿಂತಿದ್ದ ಏನೋ ಕೇಳಬೇಕೆನ್ನುವಂತೆ ಎಷ್ಟೊತ್ತಿಂದ ನಿಂತಿದ್ದನೋ ಹೇಳು ಸನ್ನೆ ಮಾಡಿದೆ.. ಅವರು ಕಾಡಲ್ಲಿ ನಮ್ಮ ಜೊತೆ ಬಂದು ಇರುತ್ತಾರ? ಬರ್ಬರೀಕ ಹೇಳುತ್ತಿದ್ದ ಅವರು ಹನ್ನೆರೆಡು ವರ್ಷ ಕಾಡಲ್ಲಿ ಇರಬೇಕು ಅಂತ ಆಗಿದೆಯಂತೆ. ಅದಕ್ಕೇ ಇಲ್ಲೇ ಬಂದು ಇರ್ತಾರೆ ನೋಡು ಬೇಕಾದ್ರೆ ಅಂತಿದಾನೆ.. ಸಂಭ್ರಮ ನಿರೀಕ್ಷೆಗಳಿಂದ ಹೇಳಿದ. ಬರ್ಬರೀಕ ಹೇಳಿದ್ದು ನಿಜವಿರಲಿ ಎಂದು ಬೇಡುವಂತೆ. ಆದರೆ ಅವನು ಬರುವುದಿಲ್ಲವೆಂದು ನನಗಿಂತಾ ಚನ್ನಾಗಿ ಯಾರಿಗೆ ಗೊತ್ತಿರಬೇಕು? &lt;br /&gt;&lt;br /&gt;&lt;span style="font-weight:bold;"&gt;ಕಾಡುತ್ತಿರುವುದು ಅವಳಾ? ತನ್ನೊಳಗಿನ ಭಯವಾ?&lt;/span&gt;&lt;br /&gt;&lt;br /&gt;ಮತ್ತೆ ಪುಸ್ತಕ ಮುಚ್ಚಿದ ಶ್ರೀಧರ. ಮತ್ತದೇ ದಿಮಿಗುಟ್ಟುವ ತಲೆ, ಸೋತ ಸೋತ ಭಾವ.. ಕೋಪವನ್ನ ಹೇಗಾದರಾದರೂ ಹರಿಬಿಡಬೇಕು... ಕಥಾರ್ಸಿಸ್. ಈ ಪುಸ್ತಕವನ್ನ ಚಾಕುವಿನಿಂದ ಚುಚ್ಚಿದರೆ ಅವಳಿಗೆ ನೋವಾಗಬಹುದಾ? ಚುಚ್ಚಿದ ತಕ್ಷಣ ರಕ್ತದಂತೆ ಪದಗಳು ಸೋರಿಹೋದರೆ.. ನಿಜಕ್ಕೂ ಚಲ್ಲಿಹೋಗಬಹುದೇನೊ ಎನ್ನುವ ಅನುಮಾನವಿರುವವನಂತೆ ಪೂರ್ತಿ ಓದಿದಮೇಲೆ ಚುಚ್ಚೋಣ ಅಂದುಕೊಂಡ. ಅವಳನ್ನು ನಾನ್ಯಾಕೆ ಬಿಟ್ಟು ಬಂದೆ ಸಾವಿರ ಸಲ ಕೇಳಿಕೊಂಡಾಗಿದೆ. ಸಾವಿರ ಸಲಕ್ಕೂ ಬೇರೆ ಬೇರೆ ಉತ್ತರಗಳು. ನಿಜವಾದ ಉತ್ತರ ಯಾವುದು? ಅವಳು ಕಂಡುಕೊಂಡ ಉತ್ತರವಂತೂ ಅಲ್ಲ.. ಅವಳು ಸಾಕಾಗಿ ಅವಳಿಂದ ದೂರ ಹೋಗಿ ಸುಖವಾಗಿರಲು.. ಅವಳ ಗಂಡುಬೀರಿತನದಿಂದ ಹೆದರಿಕೊಂಡು ಸಾಕಾಗಿ ಬಂದಿದ್ದಲ್ಲ.. ಯಾಕೋ ನನಗೆ ಯಾರ ಜೊತೆಗೂ ಇರಲು ಸಾಧ್ಯವಿಲ್ಲ ಅನ್ನಿಸುತ್ತೆ. ಪ್ರೀತಿಯಂದರೇನು ಅನ್ನುವ ಉತ್ತರ ಕಂಡುಕೊಳ್ಳಲು ಸಾಧ್ಯವಾಗದೆ ಉಳಿದು ಹೋಗಿದ್ದೇನೆ. ಇದೆಲ್ಲಾ ಅರ್ಥವಾಗುತ್ತಾ ಅವಳಿಗೆ? ಪ್ರೀತಿಸುವವರ ಜೊತೆಗಿದ್ದರೆ ಮಾತ್ರ ಪ್ರೀತಿ ಅರ್ಥ ಆಗೋದು ಅನ್ನುವಂಥ ವ್ಯರ್ಥ ಮಾತುಗಳನ್ನಾಡುತ್ತಾಳೇನೋ ಈಗಲೂ.. ಯಾಕೆ ನನಗೆ ಯಾರನ್ನಾದರೂ ಪ್ರೀತಿಸಲು ಸಾಧ್ಯವೇ ಆಗಿಲ್ಲ? ಸುಮ್ಮನೇ ಜೊತೆಗಿರುತ್ತಾ, ಒಬ್ಬರಿಗೊಬ್ಬರಿಗೆ ಸಹಾಯವಾಗುತ್ತಾ ಅವರ ಸುಖ ದುಖಗಳಲ್ಲಿ ಭಾಗಿಯಾಗುವುದನ್ನೇ ಪ್ರೀತಿ ಅನ್ನುವುದಾದರೆ, ಅಂಥದು ಯಾರ ಜೊತೆಗಾದರೂ ಆಗಬಹುದಲ್ಲಾ? ಆಗ ಅವಳಿದ್ದಳು, ಅವಳು ಅತ್ತರೆ ಪಾಪ ಅನ್ನಿಸುತ್ತಿತ್ತು. ನನಗೆ ಬೇಜಾರಾದರೆ ಅವಳು ಏನಾಯ್ತೋ ಅಂತ ಕೇಳುತ್ತಿದ್ದಳು. ಅದೇ ಅವಳ ಜಾಗದಲ್ಲಿ ಯಾರೇ ಇದ್ದರೂ ನಾನು ಹಾಗೇ ರಿಯಾಕ್ಟ್ ಮಾಡ್ತಿದ್ದೆ, ಅವಳೂ ಅಷ್ಟೇ. ಅದ್ಯಾಕೆ ಅವಳಿಗೆ ಅರ್ಥವಾಗಲಿಲ್ಲ? ಅರ್ಥವಾಗುವುದಿಲ್ಲ? &lt;br /&gt;&lt;br /&gt;ಸಿನಿಮಾಗಳನ್ನ ನೋಡಿದರೆ ನಗು ಬರುತ್ತಿತ್ತು. ಅವನು ಪ್ರೀತಿಸಿದ ಹುಡುಗಿ, ‘ನಿ ಇಷ್ಟ ಇಲ್ಲ’ ಅಂತಲೋ, ಅಥವ ಹೇಳಲೇ ಬಾರದ ಗಹನವಾದ ವಿಷಯದಂತೆ ಸುಮ್ಮನಿದ್ದುಬಿಡುವ ಸುಂದರಿ, ಅವಳು ಸಿಗದೆ ದುಃಖಿಸುವ ಅಳುವ, ನೋವಿದ್ದರೂ ಅಥವ ನೋವಿನಲ್ಲಿ(ಅದು ನೋವಾ? ಮತ್ತೆ ಪ್ರಶ್ನೆ?) ಹಾಡುವ ಹುಡುಗ, ಅವಳನ್ನು ದಕ್ಕಿಸಿಕೊಳ್ಳುವುದಕ್ಕೆ ಅವನು ಪಡುವ ಪರಿಪಾಟಲು, ಕೊನೆಗೂ ಸಿಗುವ, ಸಿಗದೇ ಬೇರ್ಯಾರನ್ನೋ ಮದುವೆಯಾಗಿ ಹೋಗುವ, ಇಲ್ಲ ಸತ್ತೇ ಹೋಗುವ ಹುಡುಗಿ. ಎಂಥದೋ ಒಂದು. ಅಂತೂ ಸಿನೆಮಾ ಮುಗಿಯುತ್ತದೆ. ಎಲ್ಲರ ಜೀವನದಲ್ಲೂ ಅಷ್ಟೇ. ಅವನು ಅವಳು ಸಿಗುವವರೆಗೆ ಅದು ಸಿನೆಮಾ, ಆಮೇಲೆ? ಪ್ರೀತಿಯ ಮೊದಲ ಹಂತಗಳು ಮುಗಿದು ‘ನಾನು ಅವನಿಗೇ-ಅವಳು ನನ್ನವಳು’ ಅಂತ ಸ್ಥಾಪಿತವಾದಮೇಲೆ? ಪ್ರೀತಿ ಅಂದರೇನು ಅಂತ ಪ್ರಶ್ನೆ ಹುಟ್ಟುತ್ತದಲ್ಲಾ? ಎಷ್ಟು ತಡಕಾಡಿದರೂ ಉತ್ತರವೇ ಸಿಗದಂಥಾ ಪ್ರಶ್ನೆ, ಅದ್ಯಾಕೆ ಹಾಗೆ? ಒಬ್ಬರಿಗೊಬ್ಬರು ಅಭ್ಯಾಸವಾಗುತ್ತಾ ಹೋಗುತ್ತಾರೆ, ಅವನಿಗೆ ಪೆಟ್ಟಾದರೆ ಇವಳಿಗೆ ಚಿಂತೆಯಾಗುವುದಕ್ಕೆ ಶುರುವಾಗುತ್ತದೆ, ಇವಳು ಅವತ್ಯಾವತ್ತೋ ಊಟ ಮಾಡದೆ ಮಲಗಿದಳು ಅಂತ ಅವನಿಗೆ ಬೇಜಾರು. ಇಂಥದೇ ನೂರು ಥರಾವರಿ ಘಟನೆಗಳಲ್ಲಿ ಒಬ್ಬರಿಗೆ ಇನ್ನೊಬ್ಬರ ಬಗ್ಗೆ ಕಾಳಜಿ. ಯಾರೇ ಹತ್ತಿರದವರಿಗಾದರೂ ಕಾಳಜಿ ತೋರಿಸುವುದಿಲ್ಲವಾ?? ಕಾಳಜಿಗೂ ಪ್ರೀತಿಗೂ ವೆತ್ಯಾಸ ಉಂಟಲ್ಲ? ಹೌದಾ ಇದೆಯಾ? ಅವನು ಇನ್ನೊಬ್ಬ ಹುಡುಗಿಯನ್ನು ತುಂಬ ಹೊತ್ತು ಮಾತಾಡಿಸಿದರೆ ಇವಳೊಳಗೆ ಧಗ ಧಗ. ಮುನಿಸು ಜಗಳ. ‘ನಾನವನನ್ನು ಪ್ರೀತಿಸೋದರಿಂದ ನಂಗೆ ಹೊಟ್ಟೆ ಉರಿಯುತ್ತೆ, ಪ್ರೀತಿನೇ ಇಲ್ಲಾ ಅಂದಿದ್ರೆ ಏನೂ ಅನ್ನಿಸುತ್ತಿಲಿಲ್ಲ’. ಎಲ್ಲಾ ಕಾಲದ ಪೊಸೆಸ್ಸಿವ್ ಹುಡುಗ ಹುಡುಗಿಯರ ಸ್ಟಾಂಡರ್ಡ್ ಸಮರ್ಥನೆ. ಪ್ರಕಾಶ ಒಮ್ಮೆ ಮಾತಾಡಿದ್ದು ನೆನಪಿಗೆ ಬಂತು. “ಸೈಟ್ ನಂದು. ಅವ್‌ನ್ಯಾರೋ ಬೇವರ್ಸಿ ಬಂದು ಬೇಲಿಹಾಕಿದಾನೆ. ಅವರಪ್ಪನ ಮನೆ ಗಂಟು ಅನ್ನೋ ಥರ. ಅದಕ್ಕೇ ಹೊಟ್ಟೆ ಉರಿಯತ್ತೆ ಬೇರೆಯವರಾಗಿದ್ರೆ ನಂಗೇನ್ ಅನ್‌ಸ್ತಿರ್ಲಿಲ್ಲ” ಅಂದಿದ್ದ. ಹಾಗಾದ್ರೆ ‘ಐ ಓನ್ ದಿಸ್’ ಅನ್ನೋದಕ್ಕೂ ‘ಐ ಲವ್’ ಅನ್ನೋದಕ್ಕೂ ವೆತ್ಯಾಸ ಇಲ್ವಾ? ಪ್ರೀತಿ ದೈಹಿಕ ಸ್ಥಿತಿಗತಿಗಳಿಗೆ ಸಂಭಂದಿಸಿದ್ದಾ? ಇಲ್ಲ ಮನಸ್ಸಿಂದಾ? ಕೊನೆ ಮೊದಲಿರದ ಪ್ರಶ್ನೆಗಳು. &lt;br /&gt;ಈ ಪ್ರಶ್ನೆಗಳಿಗೆ ಉತ್ತರ ಸಿಗದೆ ಯಾರನ್ನಾದರೂ ಪ್ರೀತಿಸುತ್ತಿದ್ದೇನೆ ಅನ್ನುವ ಧೈರ್ಯವಾದರೂ ಹೇಗೆ ಬರಬೇಕು ನನಗೆ? ಪ್ರೀತಿ ಇರದೇನೇ ಅದು ಅರ್ಥವಾಗದೇನೇ ಮದುವೆಯಾಗಿ ನರಳುವುದಕ್ಕಿಂತ ಈಥರದ ಜೀವನ ವಾಸಿ ಎಂದು ಆಯ್ದುಕೊಂಡೆ. ಇವಳ್ಯಾರು ನನ್ನ ಕಾಡೋದಕ್ಕೆ?&lt;br /&gt;&lt;br /&gt;&lt;span style="font-weight:bold;"&gt;ಹಿಡಂಬೆಯ ಸ್ವಗತದಲ್ಲಿ ಪೂರ್ವಾಪರದ ಹಳಹಳಿಕೆ&lt;/span&gt;&lt;br /&gt;&lt;br /&gt;ಕಾಮಕಂಟಕೆ ಇನ್ನೂ ಮಂಕಾಗಿದ್ದಳು.. ಮಗುವೊಂದು ಇಲ್ಲದೇ ಹೋಗಿದ್ದರೆ? ನೆನೆಸಿಕೊಳ್ಳಲೂ ಭಯವಾಯಿತು ಹಿಡಂಬೆಗೆ. ತನಗಾದರೂ ಗಂಡ ಬದುಕಿದ್ದಾನೆ ಎಂಬುದು ತಿಳಿದಿತ್ತು. ನಾನು ವಂಚನೆಗೊಳಗಾದ ಭಾವನೆಯಲ್ಲಿ ನರಳುತ್ತಿದ್ದರೂ ಅವನು ಬದುಕಿದ್ದಾನೆ ಎಂದಾದರೂ ಬರಬಹುದು ಅನ್ನೋ ಸುಳ್ಳು ನಿರೀಕ್ಷೆಯಾದರೂ ಇತ್ತಲ್ಲಾ. ಇವಳಿಗೆ ಕಣ್ಣ ಮುಂದೆಯೇ ಕಾದಾಡಿ ಸತ್ತ ಗಂಡನ ನೆನಪು ಕಬಳಿಸಿ ನುಂಗುವುದಿಲ್ಲವೇ? ಅವಳು ಬದುಕಬೇಕು ತನ್ನ ಮಗುವಿಗಾದರೂ. ಅಯ್ಯೋ ಅವನಿಗೋಸ್ಕರ ಕಾದಾಡಿ ಸತ್ತೆಯಲ್ಲಾ ಮಗನ ಮೇಲೆ ಭೀಮನ ಮೇಲೆ ಅಸಾಧ್ಯ ಸಿಟ್ಟು ಬಂತು. ವಾಪಸ್ಸು ನಡೆದು ಹೋಗಿ ಅಂದು ನಡೆದ ಘಟನೆಗಳನ್ನು ಬದಲಿಸುವ ಶಕ್ತಿಯಿದ್ದಿದ್ದರೆ ಅನ್ನಿಸಿತು. ಘಟೋದ್ಗಜ ಆ ಯುದ್ಧಕ್ಕೆ ಹೋಗುವ ಮೊದಲು ಎಳೆದುಕೊಂಡು ಬರಬೇಕಿತ್ತು. ಸಹಾಯ ಮಾಡಿ ಎಂದು ಅವರ ಕಡೆಯವರು ಬಂದು ಕರೆದರಲ್ಲ. ಸ್ವತಹ ಅವನಮ್ಮ ಕುಂತಿ ಪತ್ರ ಕಳುಹಿಸಿದ್ದಳು. ನಾನು ಮಗನಿಗೆ ಹೋಗು ಅನ್ನಲಿಲ್ಲ, ಹೋಗಬೇಡ ಅನ್ನಬಹುದಿತ್ತು. ಆದರೆ ಹುಟ್ಟಿಸಿದವನಿಗೂ iಗುವಿನ ಮೇಲೆ ಅಧಿಕಾರ ಇರುತ್ತದಲ್ಲ, ಬರೀ ಹುಟ್ಟಿಸಿದ ಕಾರಣಕ್ಕಾದರೂ. ಮಗ ಹೊರಟು ನಿಂತ ಯಾವುದೋ ನಿಶ್ಚಯ ಮೂಡಿದವನಂತೆ. ಹಠ ಬಿಡದ ಎಳೆ ಪ್ರಾಯದ ಹೆಂಡತಿಯೂ ಹೊರಟು ನಿಂತಳು. ಇದೆಲ್ಲಾ ಭೀಮನಿಂದಲೇ ಆದದ್ದು ಕೊಂದುಹಾಕಬೇಕು ಅವನನ್ನು ಅನ್ನಿಸಿತು. &lt;br /&gt;ಕೋಪದಿಂದ ಹೊರಟವಳು ನದಿಯ ಬಳಿ ಬಂದು ಕೂತಿದ್ದಳು. ಹುಳುಗಳು ಮೂಡಿಸುವ ಚಿಕ್ಕಚಿಕ್ಕ ಅಲೆಗಳನ್ನು ಗಮನಿಸುತ್ತಾ. ಯಾರೋ ಬರುತ್ತಿರಬೇಕು ಅನ್ನಿಸಿತು. ಬರ್ಬರೀಕ ಓಡುತ್ತಾ ಬಂದು ಏದುಸಿರಿನಲ್ಲಿ ಹೇಳಿದ ಅವರು ಬಂದು ಕಾಡಿನ ಹೊರಗೆ ಬೀಡು ಬಿಟ್ಟಿದ್ದಾರೆ ತಮ್ಮ ಅಪ್ಪಣೆಯಿದ್ದರೆ ಒಳಗೆ ಬರುತ್ತಾರಂತೆ ಭಟನೊಬ್ಬನನ್ನು ಕಳುಹಿಸಿದ್ದರು. ಯಾರ್ಯಾರಿದ್ದಾರೆ ಕೇಳಿದಳು. ಭೀಮ ಕೊನೆಗೂ ಬಂದಿದಾನೆ ಅನ್ನುವುದು ಬರ್ಬರೀಕ ಹೇಳುವ ಮೊದಲೇ ಹೊಳೆಯಿತು. ಕುಂತಿಯ ಹೆಸರು ಕೇಳಿದೊಡನೆ ಎದ್ದು ನಿಂತಳು. &lt;br /&gt;ದುಖದ ಕಟ್ಟೆ ಒಡೆಯಿತು. ಕುಂತಿ ಕಣ್ಣಿಟ್ಟು ನೋಡುತ್ತಿರಲಿಲ್ಲ. ಹೇಳಬೇಕಾದ್ದನ್ನು ಹೇಳಿ ನ್ನಿಸೂರಾದ ಕುಂತಿಯ ನಿಟ್ಟುಸಿರಿನಿಂದ ಕಿಡಿ ತಾಕಿಸಿಕೊಂಡ ಹಿಡಂಬಿಯ ಕೋಪ ಅವಳನ್ನೇ ದಹಿಸುತ್ತಿತ್ತು. ಈ ಹೆಂಗಸು ನನ್ನ ಬಳಿ ಬರುವುದೇ ನನ್ನ ಬರಿದಾಗಿಸುವುದಕ್ಕೆ, ಉಗುಳು ನುಂಗುವುದೂ ಯಮಯಾತನೆ. ಎಲ್ಲಾ ಮೊಮ್ಮೊಕ್ಕಳೂ ಮರಿಮಕ್ಕಳೂ ಸತ್ತು ಹೋಗಿದ್ದಾರೆ. ಅದಕ್ಕೇ ಕೊನೆಗೆ ಯಾರೂ ಇಲ್ಲದಕ್ಕೆ ನನ್ನ ಮೊವ್ಮೂಗ ಬೇಕು. ರಾಕ್ಷಸ ರಕ್ತ ಈಗ ಅಸಹ್ಯವಾಗುವುದಿಲ್ಲವಾ? ತಲೆತಗ್ಗಿಸಿಕೊಂಡೇ ಕೂತಿದ್ದ ಭೀಮನನ್ನು ದುರುದುರು ನೋಡಿದಳು. ಕಾಮಕಂಟಕೆಗೆ ಭೀಮ ದೇವರು. ಇವರು ಸತ್ತಾಗ ಹೇಗೆ ದೇಹವನ್ನು ತಬ್ಬಿಕೊಂಡು ಅತ್ತರು ಗೊತ್ತಾ ಹಿಡಂಬಿ? ಕೊನೆಗೆ ದ್ರೌಪದಿ ಬಹಳ ಹೊತ್ತು ಸಮಾಧಾನ ಮಾಡಬೇಕಾಯಿತು. ಇವನೂ ತಾತನನ್ನು ತುಂಬ ಹಚ್ಚಿಕೊಂಡಿದ್ದಾನೆ. ಅವಳು ಸಾವಿರ ಸಲ ಹೇಳಿದ್ದಳು. ಅವಳಿಗೆ ಹೋಗಲು ಮನಸ್ಸಿದೆ ಖಂಡಿತ ನನ್ನ ಉತ್ತರಕ್ಕಾಗಿ ಕಾಯುತ್ತಿರುತ್ತಾಳೆ. ಇನ್ನು ಉಗುಳು ನುಂಗಲಾಗುವುದೇ ಇಲ್ಲಾ.. “ನೀನೂ ಬಂದು ಬಿಡು ಹಿಡಂಬಿ ಇಲ್ಲ್ಯಾಕೆ ಇರಬೇಕು ಕಾಡಿನಲ್ಲಿ ಕಷ್ಟಪಟ್ಟುಕೊಂಡು..” ಉಸುರಿದಳು ಕುಂತಿ. ಅಸಹ್ಯವಾಗಿ ವಾಂತಿಬರುವಂತಾಯಿತು. ತಲೆತಿರುಗಿ ಬಿದ್ದುಬಿಡುತ್ತೇನೆ ಎಂದುಕೊಂಡಳು. ಅವತ್ಯಾವತ್ತೂ ನಾನು ಒಬ್ಬಂಟಿಯಾಗುತ್ತೇನೆ ಎನ್ನೋದು ಹೊಳೆಯಲಿಲ್ಲವಾ? ನಿಧಾನವಾಗಿ ಎದ್ದು ತನ್ನ ಮರದ ಪೊಟರೆಯನ್ನು ಸೇರಿಕೊಂಡಳು. ಭೀಮ ಒಳಹೋಗಲು ನೋಡಿದ ಅದರ ಬಾಗಿಲು ಭಧ್ರವಾಗಿ ಮುಚ್ಚಿತ್ತು.&lt;br /&gt;&lt;br /&gt;&lt;span style="font-weight:bold;"&gt;ಮುಗಿದಿದ್ದು ಕಾದಂಬರಿಯಷ್ಟೇ ನೆನಪುಗಳಿಗೆ ಕೊನೆಯಿಲ್ಲ&lt;/span&gt;&lt;br /&gt;&lt;br /&gt;ಶ್ರೀಧರ ಯೋಚಿಸತೊಡಗಿದ. ಅಲ್ಲ ಕಾದಂಬರಿಯೊಂದನ್ನು ಮುಗಿಸುವ ರೀತಿಯೇ ಇದು? ಅವಳ ಮನಸ್ಸಿನಲ್ಲಿರೋದಾದರೂ ಏನು? ಏನಿದೆಲ್ಲದರ ಅರ್ಥ? ನಾನವಳನ್ನು ಎಲ್ಲರಿಂದ ದೂರವಾಗುವಂತೆ ಮಾಡಿ ಒಂಟಿ ಮಾಡಿದೆ ಎನ್ನುವುದಾ? ಕಾಲೇಜಿನ ಕೊನೆಯ ದಿನಗಳು ನೆನಪಾಗತೊಡಗಿದವು.. ಸಧ್ಯ ಕೊನೇಗೂ ಪರೀಕ್ಷೆ, ಕ್ಲಾಸು, ಅಸೈನ್ಮೆಂಟು, ಅಟೆಂಡೆನ್ಸುಗಳಿಗೆಲ್ಲಾ ವಿದಾಯ. ನೆಮ್ಮದಿಯಾಗಿ ಕೆಲಸ ಮಾಡಿಕೊಂಡು ನಮ್ಮ ದುಡ್ಡು ನಾವು ದುಡಿದುಕೊಂಡು ಇರಬಹುದು, ಎಂದು ಖುಶಿಯಾಗುತ್ತಿದ್ದರೆ, ಅಯ್ಯೋ ಮುಗಿದೇ ಹೋಯಿತಲ್ಲಾ.. ಇಲ್ಲಿನ ಖುಷಿ, ಕೇರ್‌ಲೆಸ್ ಜೀವನ, ಹುಡುಗಿಯರನ್ನು ಚುಡಾಯಿಸುವುದು, ಎಲ್ಲದಕ್ಕೂ ಟಾಟಾ ಹೇಳಬೇಕು. ಇನ್ನು ಜವಾಬ್ದಾರಿಗಳು ಬೆಂಬಿಡದ ಬೇತಾಳದಂತೆ ಹೆಗಲೆರುತ್ತವೆ ಎನ್ನುವ ಚಿಂತೆ ಇನ್ನೊಂದೆಡೆ. ಅಲ್ಲದೆ ನನಗೆ ಅವಳಿಗುತ್ತರಿಸುವುದಿತ್ತು, ಮುಂದೇನು ಎನ್ನುವ ಪ್ರಶ್ನೆ ಎದುರಾದಾಗಲೆಲ್ಲಾ ನಾನು ಮೌನಿ. ನನಗೆ ಅವಳು ಹೇಳುತ್ತಿದ್ದ ಪ್ರೀತಿಯ ವ್ಯಾಖ್ಯೆ ಅರ್ಥವಾಗುತ್ತಿರಲಿಲ್ಲ. ಅವಳು ಖಂಡಿತ ಬೇಕು ಅನ್ನಿಸುತ್ತಿದ್ದಳು. ಅವಳ ಅಪ್ಪುಗೆಯ ಸುಖ, ಅವಳೊಡನೆ ಮಾತು, ಸಾಹಿತ್ಯ, ಅಪರೂಪಕ್ಕೆ ಆಡುತ್ತಿದ್ದ ಬ್ಯಾಡ್ಮಿಂಟನ್, ಬೆಳಗ್ಗಿನ ವಾಕ್‌ಗಳು, ಎಲ್ಲವೂ ಚಂದವೇ ಆದರೆ ಪ್ರೀತಿ? ನನಗೆ ಉತ್ತರಿಸಲು ತಿಳಿಯುತ್ತಿರಲಿಲ್ಲ. ಅವಳ ಕಣ್ಣುಗಳ ತುಂಬ ಪ್ರಶ್ನೆ. ಅವಳು ಬಾಯಿಬಿಟ್ಟು ಕೇಳುತ್ತಿರಲಿಲ್ಲ ಅಷ್ಟೆ. ಕೇಳುವಂಥ ಸಂದರ್ಭಕ್ಕೆ ಅವಕಾಶವೇ ಕೊಡದಂತೆ ತಪ್ಪಿಸಿಕೊಂಡು ಬಂದಿದ್ದೆ. &lt;br /&gt;ಅವಳು, ಹಳೆಯ ಸ್ನೇಹಿತರು ಜೊತೆಯಲ್ಲಿಲ್ಲದೆ ಮೊದಮೊದಲು ಹಿಂಸೆಯಾಗುತ್ತಿತ್ತು. ಆಮೇಲೆ ಮತ್ತೆ ಎಲ್ಲಾ ಸರಿ ಹೋಯಿತಲ್ಲ. ಯಾರೂ ಅನಿವಾರ್ಯವಲ್ಲ ಅನ್ನುವ ಸತ್ಯವನ್ನು ಗಟ್ಟಿಮಾಡುತ್ತಾ. ಯಾವಾಗಲೂ ಒಬ್ಬರ ಬದಲಿಗೆ ಇನ್ನೊಬ್ಬರು ಸಿಕ್ಕೇ ಸಿಗುತ್ತಾರೆ.&lt;br /&gt;ಅಷ್ಟೊಂದು ನೋವು ಕೊಟ್ಟಿದ್ದೇನಾ? ನಾನೂ ಅವಳನ್ನು ಮಿಸ್ ಮಾಡಿಕೊಳ್ಳುತ್ತಿದ್ದುದಂತೂ ಹೌದು. ಆದರೆ ನಿಧಾನಕ್ಕೆ ಅಭ್ಯಾಸವಾಯಿತಲ್ಲ. ಅವಳಿಗೆ ಆಗಲಿಲ್ಲವಾ? ಇನ್ನೂ ನನ್ನ ಬಗ್ಗೆ ಯೋಚಿಸಿ ತಲೆಕೆಡಿಸಿಕೊಳ್ಳುತ್ತಾಳೆ ಎನ್ನುವುದೂ ಖುಶಿಯನ್ನೇನು ಉಂಟುಮಾಡುತ್ತಿಲ್ಲ. ಆದರೆ ಪಾಪ ಅನ್ನಿಸುತ್ತೆ. ಹೌದೇನೆ ನಿಜವಾಗಲೂ ಇನ್ನೂ ಅಷ್ಟು ಇಷ್ಟ ಪಡ್ತಿಯ? ಅಂತ ಮುದ್ದುಗರೆಯುತ್ತಾ ಕೇಳಬೇಕು ಅನ್ನಿಸುತ್ತೆ. ಆದರೆ ಅಷ್ಟಕ್ಕೇ ಅವಳದನ್ನ ಪ್ರೀತಿ ಅಂತ ತಪ್ಪು ಅರ್ಥ ಮಾಡಿಕೊಂಡರೆ.. ಭಯವಾಯಿತು.  ಇಲ್ಲ, ಅದನ್ನೆಲ್ಲಾ ಮೀರಿ ಬೆಳದಿರುತ್ತಾಳೆ. ಅವಳಿಗೆ ಉತ್ತರಗಳನ್ನು ಕೊಡಲೇ ಬೇಕು. ಪ್ರಶ್ನೆಗಳನ್ನೆತ್ತಿದ್ದಾಳೆ, ಉತ್ತರಗಳನ್ನೂ ಕೇಳಲಿ. ನೇರವಾಗಿ ಮನೆಗೇ ಹೋಗುತ್ತೇನೆ, ಹೇಗೆ ಅವಾಯ್ಡ್ ಮಾಡುತ್ತಾಳೆ ನೋಡೋಣ. &lt;br /&gt;ಯೋಚಿಸುತ್ತಾ ಶ್ರೀಧರ ಕಾದಂಬರಿಯ ಕೊನೆಯ ಪುಟಗಳತ್ತ ಕಣ್ಣು ಹಾಯಿಸಿದ. ಧೀರೇಂದ್ರ ಆಚಾರ್ಯರು ಬರೆದ ಬೆನ್ನುಡಿ ಕಾಣಿಸಿತು. ಅದರ ಶೀರ್ಶಿಕೆಯೇ ಕುತೂಹಲ ಮೂಡಿಸಿತು.&lt;br /&gt;&lt;br /&gt;&lt;span style="font-weight:bold;"&gt;ಪುರಾಣವನ್ನು ವರ್ತಮಾನಕ್ಕೆ ಒಗ್ಗಿಸುವ ವಿಫಲ ಯತ್ನ&lt;/span&gt;&lt;br /&gt;&lt;br /&gt;ಇಳಾ ಅವರ ಕಾದಂಬರಿಯನ್ನು ನಾನು ಓದುವುದಕ್ಕೆ ಎತ್ತಿಕೊಂಡಾಗ ಇದ್ದ ಕುತೂಹಲ ಓದಿ ಮುಗಿಸುವ ಹೊತ್ತಿಗೆ ಇರಲಿಲ್ಲ. ಇಳಾ ಭಾಷೆ, ಯೋಚಿಸುವ ರೀತಿ, ಕಥೆ ಹೇಳುವ ಶೈಲಿ ಎಲ್ಲದರಲ್ಲೂ ನವ್ಯೋತ್ತರದ ಛಾಪಿದೆ. ಆದರೆ ನನ್ನ ತಕರಾರಿರುವುದು ಅವರ ಕಾದಂಬರಿಯ ವಸ್ತುವಿನ ಬಗ್ಗೆ. ಪುರಾಣವನ್ನು ಪುರಾಣವನ್ನಾUಯೇ ನೋಡುವ ಏಕಾಗ್ರತೆಯನ್ನು ಲೇಖಕಿ ಬೆಳಸಿಕೊಂಡಿಲ್ಲ. ಪುರಾಣದ ಕಥೆಗಳನ್ನು ತಿರುಚಬಾರದು ಅನ್ನುವುದು ನನ್ನ ವಾದವಲ್ಲ. ಆದರೆ ಒಂದು ಪಾತ್ರದ ಸಂವಿಧಾನವನ್ನು ಯೋಚನಾ ಕ್ರಮವನ್ನು ಬದಲಾಯಿಸುವುದು ಮೂಲ ಲೇಖಕನಿಗೆ ಮಾಡುವ ಅನ್ಯಾಯ. ಈ ಕಾಲಘಟ್ಟದ ಜನರ ಆಲೋಚನೆ, ತಲ್ಲಣ, ಭಗ್ನಪ್ರೇಮ, ಯಾಚನೆ, ಆಕ್ರೋಶ ಮತ್ತು ವಿರಹಗಳನ್ನು ಹಿಡಂಬಿಯ ಪಾತ್ರಕ್ಕೆ ಆರೋಪಿಸುತ್ತಾರೆ ಇಳಾ.&lt;br /&gt;ವೇದವ್ಯಾಸರು ದೊಡ್ಡ ಲೇಖಕರಾಗುವುದು ಇಂಥಾ ವಿಚಾರದಲ್ಲೇ. ಅವರ ಹುಟ್ಟು ಬದುಕಿನ ಕಥೆ ಎಲ್ಲರಿಗೂ ತಿಳಿದಿರುವುದೇ. ಆದರೆ ಎಲ್ಲೂ ಅದರ ಪ್ರಭಾವ ಮಹಾಭಾರತದ ಮೇಲೆ ಆಗಿಲ್ಲ. ಅವರ ಏಕಾಂತದ ಯೋಚನೆಗಳು ನೋವುಗಳು ಕಾದಂಬರಿಯ ಪಾತ್ರಗಳನ್ನು ಪ್ರಭಾವಿಸಿಲ್ಲ. ದಾರ್ಶನಿಕನಿಗೆ ಇರಬೇಕಾದ ಗುಣ ಅದು. ಅವನು ತನ್ನನ್ನು ಹೊರಗಿಟ್ಟುಕೊಂಡು, ಕಥೆ ಕಟ್ಟುತ್ತಾ ಹೋಗುತ್ತಾನೆ. ಹಾಗಾದಾಗಲೇ ಲೇಖಕನ ಹಂಗಿಲ್ಲದೆಯೂ ಒಂದು ಕೃತಿ ನಮಗಿಷ್ಟವಾಗುತ್ತದೆ.&lt;br /&gt;ಹಿಡಿಂಬೆ ರಾಕ್ಷಸ ಕುಲಕ್ಕೆ ಸೇರಿದವಳು. ಕಾಡಿನಲ್ಲಿ ವಾಸಿಸುವವರೆ ಜೀವನಕ್ರಮ ಯೋಚನೆಗಳು ಎಲ್ಲಾ ಬೇರೆ ಬೇರೆ. ಭೀಮ ಅವಳನ್ನು ಕೂಡುವ ಮೂಲಕ ಆಕೆಯನ್ನು ಪುನೀತನಾಗಿಸಿದ್ದಾನೆ. ಅವಳಿಗೊಂದು ಮಗುವನ್ನು ಕೊಟ್ಟು, ಮೊದಲೇ ಆದ ಒಪ್ಪಂದದ ಪ್ರಕಾರ ಬಿಟ್ಟು ಹೋಗಿದ್ದಾನೆ. ಅಲ್ಲದೆ ಘಟೋಧ್ಗಜ ಭೀಮ ಯುದ್ಧಕ್ಕೆ ಮೊದಲೇ ಭೇಟಿಯಾಗಿರುತ್ತಾರೆ. ಭೀಮ ಸೌಗಂಧಿಕಾ ಪುಷ್ಪವನ್ನು ತರೋಕ್ಕೆ ಹೋಗಿ ತುಂಬ ದಿನ ಬರದೇ ಇದ್ದಾಗ ಸಹಾಯ ಮಾಡೋದಕ್ಕೆ ಘಟೋದ್ಗಜನನ್ನು ಕರೆಯುತ್ತಾಳೆ ಕುಂತಿ, ರಾಜಸೂಯಯಾಗದ ಸಂಧರ್ಭದಲ್ಲಿ ಘಟೋದ್ಗಜ ಇಂದ್ರನನ್ನು ಸೋಲಿಸಿ ಕಪ್ಪವನ್ನು ತಂದಿರುತ್ತಾನೆ. ಪಾಂಡವರು ವನವಾಸ ಕಾಲದಲ್ಲಿ ಗಂಧಮಾದನ ಪರ್ವತದದಲ್ಲಿ ಸಂಚರಿಸುತ್ತಿದ್ದ ವೇಳೆ ಆಯಾಸಗೊಂಡು ದ್ರೌಪದಿ ಮೂರ್ಛಿತಳಾಗಿ ಬೀಳುತ್ತಾಳೆ. ಆಗ ಘಟೋಧ್ಗಜ ಅವಳನ್ನು ಹೆಗಲಮೇಲೆ ಕೂರಿಸಿಕೊಂಡು ಬಂದು ನಾರಾಯಣಾಶ್ರಮದಲ್ಲಿ ಬಿಡುತ್ತಾನೆ. ಅಲ್ಲದೆ ಅಭಿಮನ್ಯು ಮತ್ತು ವತ್ಸಲೆಯರ ಮದುವೆ ಮಾಡ್ಸುವಲಿಯೂ ಘಟೋಧ್ಗಜ ಮಹತ್ವದ ಪಾತ್ರ ವಹಿಸುತ್ತಾನೆ.&lt;br /&gt;ಹೀಗಾಗಿ ಭೀಮನದಾಗಲಿ, ಕುಂತಿಯದಾಗಲೀ ತಪ್ಪು ಎಂದು ನಿರ್ಧಾರಕ್ಕೆ ಬರುವುದು ತಪ್ಪಾಗುತ್ತದೆ. ಹಿಡಂಬಿಯ ಯೋಚನಾ ಲಹರಿ ಈ ಕಾಲದ ಹೆಣ್ಣು ಮಕ್ಕಳ ಯೋಚನಾ ಲಹರಿಯೇ ಹೊರತು ಆ ಪಾತ್ರದ್ದಲ್ಲ. ಆದರಿಂದ ಅದು ಆರೋಪಿತ ಚಿಂತನೆ. ಹೀಗಾಗಿ ಹಿಡಂಬೆಯ ಪಾತ್ರಕ್ಕೆ ಲೇಖಕಿ ನ್ಯಾಯ ಒದUಸಿಲ್ಲ. ಮತ್ತು ಅದಕ್ಕೆ ಪ್ರಾಪ್ತವಾಗಬೇಕಾದ ಪುರಾಣದ ಗುಣ ಪ್ರಾಪ್ತವಾಗಿಲ್ಲ.&lt;br /&gt;ಇಷ್ಟಾಗಿಯೂ ಈ ಕಾದಂಬರಿಯನ್ನು ಕುತೂಹಲದಿಂದ ಓದಿಕೊಳ್ಳಬಹುದು. ಕೊಂಚ ಅಧ್ಯಯನ, ಭಾವನೆಗಳ ಮೇಲೆ ಹತೋಟಿಮತ್ತು ವರ್ತಮಾನ-ಪುರಾಣದ ನಡುವಿನ ತೆಳುಗೆರೆಯನ್ನು ಕಂಡುಕೊಳ್ಳುವ ಕಣ್ಣಿದ್ದರೆ ಇದು ಮತ್ತಷ್ಟು ಉತ್ತಮ ಕೃತಿಯಾಗುತ್ತಿತ್ತು ಎಂಬುದು ನನ್ನ ವಿನಮ್ರ ಅನಿಸಿಕೆ.&lt;br /&gt;&lt;br /&gt;&lt;span style="font-weight:bold;"&gt;ವಿಮರ್ಶೆಯ ಹೊಸಿಲಾಚೆಗೆ ಅವಳ ನೆನಪಿನ ಘಮಲು&lt;/span&gt;&lt;br /&gt;&lt;br /&gt;ಬಾಲ್ಕನಿಗೆ ಹೋಗಿ ತನ್ನ ಇಷ್ಟದ ಸಿಗರೇಟನ್ನು ಹಚ್ಚುವ ಮೊದಲೊಮ್ಮೆ ಧೀಘವಾಗಿ ಉಸಿರೆಳೆದುಕೊಂಡ. ವರ್ಜೀನಿಯಾ ಟೊಬ್ಯಾಕೋ ಘ್ಂ ಎನ್ನುತ್ತಿತ್ತು. ಜಾರಿಬೀಳದಂತೆ ನಿಧಾನವಾಗಿ ಕಟ್ಟೆಯಮೇಲೆ ಕೂತು ಸಿಗರೇಟು ಹತ್ತಿಸಿದ. ಬೆರಳತುದಿಯ ಜೀವಕೋಶವೂ ನೆಮ್ಮದಿಯಾಗಿ ಕಾಲುಚಾಚಿದಂತೆ ಅನ್ನಿಸಿತು. ವಿಮರ್ಶಕನಿಗೆ ಅವಳ ಬದುಕಿನ ಬಗ್ಗೆ ಏನುತಿಳಿದಿದೆ? ಅವನು ಕೃತಿಯನ್ನ ಮಾತ್ರ ವಿಮರ್ಶೆ ಮಾಡಬಲ್ಲ. ಹಿಡಂಬಿಯ ಯೋಚನಾ ಲಹರಿ ಈ ಕಾಲದ ಹೆಣ್ಣು ಮಕ್ಕಳ ಯೋಚನಾ ಲಹರಿ ಎಂದು ಹೊರಗಿನವನಾದ ವಿಮರ್ಶಕನಿಗೆ ಜವರಲೈಸ್ ಮಾಡಿಬಿಡುವುದು ಸುಲಭ. ಆದರೆ ಸ್ವಂತ ಬದುಕು ಕೃತಿಯನ್ನ ಪ್ರಭಾವಿಸುವ ರೀತಿ, ಅದರೆ ಸಾಂದ್ರತೆ ಹೊರಗಿನವರಿಗೆ ಹೇಗೆ ತಿಳಿಯಬೇಕು ಅನ್ನಿಸಿತು. ಆದರೆ ಮನುಷ್ಯ ಮನುಷ್ಯನನ್ನು ಬದುಕಿಯೆ ಪ್ರಭಾವಿಸಬೇಕು, ಕೃತಿ, ಕಲ್ಪನೆ, ಸ್ಂಶೋಧನೆ, ಕಲೆ ಎಲ್ಲವೂ ಇನ್ನೊಬ್ಬರನ್ನ ಇಂಪ್ರೆಸ್ ಮಾಡಬಹುದು ಆದರೆ ಪ್ರಭಾವಿಸಲು ಸಾಧ್ಯವಿಲ್ಲ ಅನ್ನುವುದೂ ಹೊಳೆಯಿತು. ತಲೆಯೊಳಗೆ ಮತ್ತದೇ ರುಮುರುಮು.. ವಿಮರ್ಶಕನ ಮಾತುಗಳು ಅವಳು ಹೇಳಿದ್ದಕ್ಕೆಲ್ಲಾ ಅರ್ಥವಿಲ್ಲವೆಂಬಂತೆ, ನಿರಾಕರಿಸುವಂತೆ ತೋರುತ್ತಿತ್ತು. ವಿಮರ್ಶಕನ ಪಾಲಿಗೆ ಬರೀ ಮಹಾಭಾರತ ಇದು. ಆದರೆ ನನ್ನ ಪಾಲಿಗೆ ನನ್ನ ಕಥೆಯೂ ಅಲ್ಲವೇ? ಕೇಳಿಕೊಂಡ ಅನುಮಾನವಾಯಿತು.. ಇಷ್ಟೆಲ್ಲಾ ನನ್ನ ಭ್ರಮೆ ಮಾತ್ರವಾ? ಕಾದಂಬರಿಗೂ ನನಗೂ ನಿಜಕ್ಕೂ ಸಂಭಂಧವೇ ಇಲ್ಲವೇ? ಅರ್ಥವಾಗಲಿಲ್ಲ. ಮತ್ತೊಂದು ಸಿಗರೇಟನ್ನು ಹತ್ತಿಸಿದ.. ಅರ್ಥವಾಗದ ಯಾವುದನ್ನೂ ನಾನು ಮಾಡುವುದಿಲ್ಲ ಎನ್ನುವ ಹಳೆಯ ನಿಶ್ಚಯ ನೆನಪಾಯಿತು. ಒಳಗೆ ಬಂದರೆ ಟೀಪಾಯಿಯ ಮೇಲೆ ‘ನಾನು ಹಿಡಿಂಬೆ’ ಕಾದಂಬರಿ ಅನಾಥ ಬಿದ್ದಿತ್ತು. ಯಾರೋ ಕಲಾವಿದ ದೊಡ್ಡ ಸ್ಥನಗಳ ಸಪೂರ ಸೊಂಟದ ಬೊಗಸೆ ಕಣ್ಣುಗಳ ಕಪ್ಪಗಿನ ಸುಂದರಿಯೊಬ್ಬಳ ರೇಖಾ ಚಿತ್ರ ಬರೆದು ಮುಖಪುಟ ವಿನ್ಯಾಸ ಮಾಡಿದ್ದ. &lt;br /&gt;ಶ್ರೀಧರ ತನಗೇ ಗೊತ್ತಿಲ್ಲದ ಹಾಗೆ ಅಂಗೈಯನ್ನು ಮೂಗಿನ ಹತ್ತಿರ ತಂದು ಉಸಿರೆಳೆದುಕೊಂಡ. ಇಳಾಳ ಮೈಯ್ಯ ಕಂಪು ಇನ್ನೂ ಹಾಗೇ ಇದೆ ಅನ್ನಿಸಿತು. &lt;br /&gt;( ಅಕ್ಕ ವಿಶ್ವಕನ್ನಡ ಸಮ್ಮೇಳನದ ಕಥಾಸ್ಪರ್ಧೆಯಲ್ಲಿ ಎರಡನೆ ಬಹುಮಾನ ಪಡೆದ ಕತೆ)&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4593814110696048109?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4593814110696048109/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4593814110696048109' title='10 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4593814110696048109'/><link rel='self' type='application/atom+xml' href='http://www.blogger.com/feeds/714642904810204846/posts/default/4593814110696048109'/><link rel='alternate' type='text/html' href='http://mrugnayanee.blogspot.com/2010/10/blog-post.html' title='ನಡೆದಷ್ಟೂ ದಾರಿ ದೂರ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>10</thr:total></entry><entry><id>tag:blogger.com,1999:blog-714642904810204846.post-8931515391186892014</id><published>2010-09-04T09:58:00.003+05:30</published><updated>2010-09-04T10:23:26.355+05:30</updated><title type='text'>ಪಂಚರಂಗಿ ನೋಡಿದೆ...</title><content type='html'>ಥೇಟ್ ಕಾಯ್ಕಿಣಿ ಸ್ಟೈಲಿನ ಶುರು ಎಲ್ಲಿ ಕೊನೆ ಯಾವುದು ಎಂದು ಗೊತ್ತಾಗದ ಕಥೆಗಳು, ಎಡಿಟಿಂಗ್ ಟೇಬಲ್ಲಿನಲ್ಲಿ ಕೂತು ಮಾಡಿದಂಥಾ ಸ್ಕ್ರೀನ್ ಪ್ಲೇಗಳು, ಗಣೇಶ್ ಬಾಯಲ್ಲಿ ಹೇಳಿಸಿದ್ರೆ ಬರೀ ಬೋರು ಹೊಡೆಸುವಂಥ ಹಳೇ ಕಾಮಿಡಿ ಅನಿಸುತ್ತಿದ್ದ, ಆದರೆ ದಿಗಂತ್ ಬಾಯಲ್ಲಿ ಕಾಮಿಡಿಯೂ ಪನ್ನೂ ಅನ್ನಿಸುವ ಸೂಪರ್ ಡೈಲಾಗ್ ಗಳು,ಇಷ್ಟವಾಗುವ ಸರ್ಕಾಸ್ಟಿಕ್ ಹಾಡುಗಳು,ಜೀರ್ಣಿಸಿಕೊಳ್ಳಲಾಗದ ಸತ್ಯಗಳು,ನೈಜವೆನಿಸುವ ದಿಗಂತ್ ಆಕ್ಟಿಂಗಳು,ಎಂದಿನಂತೆ ಇಶ್ಟವಾಗುವ ಅನಂತ್ ನಾಗ್, ಸುಧಾ ಬೆಳವಾಡಿ ಇನ್ನಿತರುಗಳು, ಮರ ಸುತ್ತುವ ಕಾರ್ಯಕ್ರಮವಿಲ್ಲದೆ, ಮರ ಹತ್ತಿಸಿ, ತೀರಾ ಬೋರು ಹೊಡಿಸದೆ ಡಿಫರೆಂಟಾಗಿ ಪ್ರೀತಿ, ಮದುವೆ ಮಾಡಿಸಿದ ರೀತಿಗಳು, ಥಟ್ಟನೆ ಅರ್ಥವಾಗಿಬಿಡುವ ’ಗಿಜಿಬಿಜಿ ಆ ಆ ಆ,ಗಿರಿಗಿರಿ ಕಯ ಕಯ ಕೊ ಕೊ ಕೊ,ಲಬೊ ಲಬೋ’ಗಳು, ಹಾಡಿಗಷ್ಟೇ ಸೀಮಿತವಾಗಿದ್ದರೆ ಚನ್ನಾಗಿರುತ್ತಿದ್ದ ಕಾಯ್ಕಿಣಿ ಎಂಟ್ರೆನ್ಸ್ ಗಳು, ಹೆಚ್ಚಾಗೇ ಮೂಗು ತೂರಿಸುವ ಯೋಗ್ರಾಜ್ ಭಟ್ ಸೌಂಡುಗಳು, ಮಾಸಿಗೂ ಪಿವಿಆರ್ ಜನಕ್ಕೂ ಕೇಟರ್ ಮಾಡುವ ಸ್ಕ್ರೀನ್ ಪ್ಲೇಗಳು, ಹೇಳಿಸಿಕೊಳ್ಳುವ ಕಥೆ ಇಲ್ಲದಿದ್ದರೂ ಎರಡೂವರೆ ಗಂಟೆಕಾಲ ಎಂಟರ್ಟೈನ್ ಮಾಡಿ ಚಂದದ ಮೆಸೇಜು ರವಾನೆ ಮಾಡುವ ಯೋಗ್ರಾಜ್ ಭಟ್ಟರ ನಿರ್ದೇಶನಗಳು, ಅವರ ಚಂದದ ಸಿನಿಮಾಗಳು, ನೋಡಿಬಂದ ನಾವುಗಳು ನೋಡಿಬರಬಹುದಾದ ನೀವುಗಳು. ಮತ್ತೆ ಎಂದಿನ ಹಾಗೆ ಜೀವನ ನಡೆಸುವ ಎಲ್ಲರುಗಳು.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-8931515391186892014?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/8931515391186892014/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=8931515391186892014' title='11 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/8931515391186892014'/><link rel='self' type='application/atom+xml' href='http://www.blogger.com/feeds/714642904810204846/posts/default/8931515391186892014'/><link rel='alternate' type='text/html' href='http://mrugnayanee.blogspot.com/2010/09/blog-post.html' title='ಪಂಚರಂಗಿ ನೋಡಿದೆ...'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>11</thr:total></entry><entry><id>tag:blogger.com,1999:blog-714642904810204846.post-1047228665165928456</id><published>2010-04-25T22:24:00.002+05:30</published><updated>2010-04-25T22:28:28.112+05:30</updated><title type='text'>ಅವನು ಪರ-ಪುರುಷ</title><content type='html'>ನಾನ್ಯಾವತ್ತೂ ಸಾವಿಗಾಗಿ ಕಾಯಲಿಲ್ಲ, ಸಾವು ‘ಹಾಗಿರತ್ತೆ, ಹೀಗಿರತ್ತೆ’ ಅಂತ ಕಲ್ಪಿಸಿಕೊಳ್ಳಲಿಲ್ಲ, ಭಯ ಪಡಲಿಲ್ಲ, ಉಲ್ಲಾಸಗೊಳ್ಳಲಿಲ್ಲ, ‘ಹೇಗೆ ಬರಬಹುದು?’ ಅಂತ ಯೋಚಿಸುತ್ತಾ ಕೂರಲಿಲ್ಲ.&lt;br /&gt;&lt;br /&gt;ಸಾವಿನಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭವಲ್ಲ, ಅವನ ಬರವನ್ನು ಆದಷ್ಟು ಮುಂದೆ ಹಾಕಲು ಪ್ರಯತ್ನಿಸಿದೆ, ಏನೇನೋ ನಾಟಕ ಆಡಿದೆ, ಬರುವವರು ಬರದೇ ಇರುತ್ತಾರೆಯೆ? ಬಂದೇ ಬಂದ. ನಾನವನಿಗೆ ಕಾಯುತ್ತಿರಲ್ಲಿಲ್ಲ ಎಂದು ತಿಳಿದಿತ್ತೇನೋ ಎನ್ನುವಂತೆ ಹುಡುಕಿಕೊಂಡು ನನಗಾಗಿಯೇ ಬಂದ, ನನ್ನ ಹೊತ್ತೊಯ್ಯುವುದಕ್ಕೆ. &lt;br /&gt;&lt;br /&gt;ಖುಶಿಯಾಗಿಯೇ ಇದ್ದವನು ಇದ್ದಕ್ಕಿದ್ದಂತೆ ಕೋಪಿಸಿಕೊಂಡವನಂತೆ ಒಬ್ಬನೇ ಹೊರಟು ನಿಂತ, ಯಾರೋ ಕಾಶಿಗೆ ಅಂದರು. ಖುಶಿಯಾಯಿತು ನನಗೆ. ಆದರೆ ಅಪ್ಪನೇ ಅವನ ಬಳಿ ಹೋಗಿ ರಮಿಸಿ ಕಾಲು ತೊಳೆದು ಮತ್ತೆ ಕರೆತಂದರು. ಆಮೇಲೆ ತಿಳಿಯಿತು ಅದೆಲ್ಲಾ ಸುಮ್ಮನೆಯಂತೆ ನಾಟಕವಂತೆ, ಆಟವಂತೆ. ‘ಸಾಯೋಆಟ’ದಲ್ಲಿ ಇನ್ನ್ಯಾವ ಆಟ? ಇನ್ನ್ಯಾಕೆ ಆಟ? ಯೋಚಿಸಿದೆ. &lt;br /&gt;&lt;br /&gt;ನನಗೆ ಪುನರ್ಜನ್ಮದಲ್ಲಿ ನಂಬಿಕೆಯಿರಲಿಲ್ಲ. ರುಗ್ಣಶಯ್ಯೆಯಲ್ಲಿ ಮಲಗಿಸಿಕೊಂಡು ಇದು ಸಾವಲ್ಲ ಹೊಸ ಜನ್ಮ ಅಂತ ನಂಬಿಕೆ ಹುಟ್ಟಿಸಲು ಪ್ರಯತ್ನಿಸಿದ. ಎಲ್ಲಿಗೋ ಹೊರಟು ನಿಂತೆವು. ಎಲ್ಲಿಗೆ ಎಂದು ನಾನು ಕೇಳಲಿಲ್ಲ. ಪ್ರಶ್ನೆಗಳು ಆವಿಯಾಗಿ ಹೋಗಿದ್ದವು. ಉತ್ತರಗಳು ಯಾವ ವ್ಯತ್ಯಾಸವನ್ನೂ ಸೃಷ್ಟಿಸುತ್ತಿರಲಿಲ್ಲ. ಅಪ್ಪ ಅಮ್ಮ ಎಲ್ಲರೂ ಅಳುತ್ತಿದ್ದರು. ನನಗೆ ಗೊತ್ತಾಗುತ್ತಿತ್ತು "ಪುತ್ರ ಶೋಕಂ ನಿರಂತರಂ". ಮನೆಯವರಿಗೆಲ್ಲಾ ಸೂತಕ. &lt;br /&gt;&lt;br /&gt; &lt;br /&gt;ಸಾವಿನ ಮನೆಯಲ್ಲಿ ನಿಶ್ಚಲ ನಿದ್ದೆ . Grave is a fine safe place but none do there embrace ಅಂದಿದ್ದ ಕವಿಮಾತು ಸುಳ್ಳಾಗಿದ್ದು ಯೋಚಿಸಿ ನಕ್ಕೆ. ನಾನು ನಕ್ಕಿದ್ದು ಇನ್ನೇನೋ ಅರ್ಥ ಕೊಟ್ಟಿರಬೇಕು ಸಾವಿನ ನಂತರದ ಯೋಚನೆಗಳೂ ‘ಬಾಹುಬಂಧನ ಚುಂಬನ’. &lt;br /&gt;&lt;br /&gt;ಈಗೆಲ್ಲಾ ಬದಲಾಗಿ ಹೋಗಿದೆ. ಇಂಥ ಸಾವಿನಿಂದಾಗುವ ಮತ್ತೊಂದು ಹುಟ್ಟಿನ ಬಗ್ಗೆ ಅದು ಹುಟ್ಟಿದ ಕ್ಷಣದಿಂದ ಸಾವಿಗೆ ವಿವಿಧ ರೀತಿಯಲ್ಲಿ ತಯಾರಾಗುವುದರ ಬಗ್ಗೆ ಆಶ್ಚರ್ಯ ಪಡುತ್ತೇನೆ.ನಿಧಾನಕ್ಕೆ ಈ ಬದುಕು ಇಷ್ಟವಾಗುತ್ತಿದೆ. ಬದುಕು ಎಂದಾಕ್ಷಣ ಸಾವು ಆತ್ಮಹತ್ಯೆ ಮಾಡಿಕೊಂಡಿದೆ. ಈಗೆಲ್ಲಾ ಅಯೋಮಯ ‘ಹುಟ್ಟಿನಿಂದ ಸಾವಿನೆಡೆಗೆ’ ಎಂಬುದು ಸುಳ್ಳಾಗಿ, ಸಾವಿಗೆ ತಯಾರಾಗುತ್ತಿರುವ ಹೊಸಹುಟ್ಟು ನನ್ನಲ್ಲಿ ಜೀವ ಕಳೆ ತುಂಬಿದೆ. ಹುಟ್ಟುಸಾವುಗಳ ವಿಷಯಕ್ಕೇ ಹೋಗದೆ ನಿರಾತಂಕವಾಗಿದೆ. ನನ್ನ ಪ್ರತಿ ಕ್ಷಣವೂ ಜೀವಂತವಾಗಿಸುತ್ತಿದೆ. ಸಾವೆಂದುಕೊಂಡವನು ಪ್ರೀತಿಯಿಂದ ಜೀವಹಿಂಡುತ್ತಾನೆ.&lt;br /&gt;&lt;br /&gt;ನನಗೀಗ ಪುನರ್ಜನ್ಮದಲ್ಲಿ ನಂಬಿಕೆ ಇದೆ.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-1047228665165928456?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/1047228665165928456/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=1047228665165928456' title='11 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/1047228665165928456'/><link rel='self' type='application/atom+xml' href='http://www.blogger.com/feeds/714642904810204846/posts/default/1047228665165928456'/><link rel='alternate' type='text/html' href='http://mrugnayanee.blogspot.com/2010/04/blog-post_25.html' title='ಅವನು ಪರ-ಪುರುಷ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>11</thr:total></entry><entry><id>tag:blogger.com,1999:blog-714642904810204846.post-5206944639759053472</id><published>2010-04-05T08:47:00.002+05:30</published><updated>2010-04-05T08:53:31.126+05:30</updated><title type='text'>ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ</title><content type='html'>ಇಷ್ಟು ಬೆಳಬೆಳಗ್ಗೆ ಕಾಲ್ ಮಾಡುತ್ತಿರೋದು ಯಾರು ಅನ್ನುವುದಕ್ಕಿಂತ, ಏನು ಸುದ್ದಿಯೊ ಅನ್ನೋ ಗಾಬರಿ ಚಕ್ರಪಾಣಿಯ ಮನಸ್ಸನ್ನು ಹೊಕ್ಕಿತು. ರೂಮಿನಲ್ಲಿ ಮಲಗಿರುವ ಹೆಂಡತಿಯನ್ನು ಏಳಿಸಲು ಮನಸಾಗಲಿಲ್ಲ, ಇನ್ನೊಂದು ರೂಮಿನಲ್ಲಿ ರಾತ್ರಿಯೆಲ್ಲಾ ಅಳುತ್ತಿದ್ದ ಮಗುವನ್ನು ಸಮಾಧಾನ ಪಡಿಸುತ್ತಿದ್ದ ಮಗಳು ಈಗಿನ್ನೂ ಮಲಗಿದ್ದಾಳೆ, ಮತ್ತೆ ಮಗುವಿಗೆ ಎಚ್ಚರವಾದರೆ ಏನು ಗತಿ ಎಂದುಕೊಂಡು ಮಾಡುತ್ತಿದ್ದ ಟ್ಯೂಶನ್ನನ್ನು ನಿಲ್ಲಿಸಿ ಸ್ವಲ್ಪ ಭಯದಿಂದಲೇ ಫೋನ್ ಎತ್ತಿಕೊಂಡವರಿಗೆ ಕೇಳಿಸಿದ್ದು ರಂಗರಾಯರ ಪತ್ನಿ ಸೀತಮ್ಮನ ಧ್ವನಿ! ‘ಟ್ಯೂಷನ್ ಮುಗಿದಮೇಲೆ ಮನೆ ಕಡೆ ಬಂದು ಹೋಗ್ತಿರಾ, ಸ್ವಲ್ಪ ಮಾತಾಡೋದಿತ್ತು’ ಎಂದಾಗ ಚಕ್ರಪಾಣಿಗೆ ವಿಚಿತ್ರ ಅನ್ನಿಸಿದ್ದು ಮಾತ್ರವಲ್ಲ ಅವರು ಏನು ಹೇಳುತ್ತಿದ್ದಾರೆ ಎಂದೂ ಅರ್ಥ ಆಗಲಿಲ್ಲ. ‘ರಂಗರಾಯರ ಆರೋಗ್ಯ ಸರಿ ಇದೆ ತಾನೆ?’ ಎಂದು ಕೇಳಿ ಇಂಥಾ ಎಡವಟ್ಟು ಪ್ರಶ್ನೆಯನ್ನ ಕೇಳಿದೆ ಎಂದುಕೊಂಡು, ಸರಿ ಬರುತ್ತೇನೆ ಎಂದು ಫೋನ್ ಇಟ್ಟು ಮತ್ತೆ ಮನೆ ಪಾಠದ ಕೋಣೆಗೆ ಬಂದರು.&lt;br /&gt;‘ವೇವ್ಸ್’ ಪಾಠವನ್ನ ಅದೆಷ್ಟು ವರ್ಷಗಳಿಂದ, ಸುಮಾರು ೨೭ ಅಲ್ಲ ಅಲ್ಲ ೨೯ ವರ್ಷಗಳಿಂದ ಪಾಠ ಮಾಡುತ್ತಿದ್ದಾರೆ ಮೊದಮೊದಲು ಪ್ರತೀ ನಾಲ್ಕೈದು ವರ್ಷಗಳಿಗೊಮ್ಮೆ ಸಿಲಬಸ್ ಅಪ್ಡೇಟ್ ಆಗುತ್ತಿತ್ತು. ಈ ಸಿ.ಇ.ಟಿ ಭರಾಟೆಯೆಲ್ಲ ಶುರುವಾದಮೇಲೆ ತಾವೇ ಪ್ರತೀ ವರ್ಷವೂ ಪ್ರತಿಯೊಂದು ವಿಷಯದಲ್ಲೂ ಹೊಸಾ ಬದಲಾವಣೆಗಳಾಗಿವೆಯೇ ಎಂದು ನೋಡಿ ತಿಳಿದುಕೊಳ್ಳುತ್ತಿದ್ದರು. ಪಾಠದ ಮಕ್ಕಳಿಗೆ ಸಹಾಯವಾಗಲೆಂದು. ವಿನಿತಾ ನೆನಪಾದಳು, ‘ಶುದ್ದ ಸೋಮಾರಿ, ಯಾವತ್ತೂ ಏನನ್ನೂ ಅಪ್ಡೇಟ್ ಮಾಡಿಕೊಳ್ಳೋಲ್ಲ, ನಾನೇ ಆಗಾಗ ಫೋನು ಮಾಡಿ ಹೊಸ ವಿಷಯಗಳನ್ನು ಓದು ಎಂದು ಹೇಳಿಕೊಡಬೇಕು.’ ಎಂದು ಮಗಳ ಮೇಲೆ ಹುಸಿ ಮುನಿಸು. ತಮ್ಮ ಮಗಳು ತಮ್ಮಂತೆಯೇ ಫಿಸಿಕ್ಸ್‌ನಲ್ಲಿ ಎಂ.ಎಸ್.ಸಿ ಮಾಡಿ ಅದೂ ಗೋಲ್ಡ್ ಮೆಡಲ್ ತೆಗೆದುಕೊಂಡು ಪಾಸಾದಾಗ ಉಂಟಾದ ಹೆಮ್ಮೆ ಆ ಸಂಗತಿ ಇವತ್ತಿಗೂ ತರುವ ನೆಮ್ಮದಿ ನೆನೆದು ಎದೆ ತಂತಾನೇ ಉಬ್ಬಿತು. ಇವರ ಮನಸ್ಸಿನಲ್ಲಿ ನಡೆಯುತ್ತಿರುವುದಕ್ಕೂ ಪಾಠ ಮಾಡುತ್ತಿರುವುದಕ್ಕೂ ಏನೂ ಸಂಭಂದವಿಲ್ಲವೆಂಬಂತೆ ಫ್ರೀಕ್ವೆನ್ಸಿ ವೇವ್ಲೆಂತ್ ವೆಲಾಸಿಟಿಗಳ ಬಗ್ಗೆ ಅಡೆತಡೆ ಇಲ್ಲದೆ ಹೇಳುತ್ತಾ ಅವತ್ತಿನ ಪಾಠ ಮುಗಿಸಿದರು. ಮತ್ತು ಹಾಗೆ ಮಾಡಿದ್ದಕ್ಕೆ ಅಚ್ಚರಿ ಪಟ್ಟುಕೊಂಡರು. ಮಕ್ಕಳು ಎಂದಿನಂತೆ ಅರ್ದಂಬರ್ದ ಕೇಳಿಸಿಕೊಂಡು ಅರ್ದಂಬರ್ಧ ಮಲಗಿ ಎದ್ದು ಹೋದರು, ಅವರ ನಂತರ ಇನ್ನೊಂದು ಬ್ಯಾಚು. ಆ ಬ್ಯಾಚಿನ ಮಕ್ಕಳು ಬರೋದರೊಳಗೆ ಹೆಂಡತಿ ಮಾಡಿಟ್ಟ ಹೊಸ ಹಾಲಿನ ಹಬೆಯಾಡುತ್ತಿರುವ ಕಾಫಿ ಹೀರುತ್ತಾ ‘ರಾಧಾ, ವಿನಿತಾಗೆ ಫೋನ್ ಮಾಡಿ ಒಂದೆರೆಡು ದಿನಕ್ಕೆ ಬಂದು ಹೋಗು ಅಂತ ಹೇಳು, ನೋಡಬೇಕು ಅನ್ನಿಸ್ತಿದೆ. ನಾಳೆ ಶುಕ್ರವಾರ, ಶನಿವಾರ ಹಾಫ್ ಲೀವ್ ಹಾಕಿ ಬರೋಕ್ಕೆ ಹೇಳು.’ ಅಂದು ಕಾಫಿಯ ಕೊನೆಯ ಸಿಪ್ ಹೀರಿ ಇನ್ನೊಂದು ಬ್ಯಾಚಿನ ಮಕ್ಕಳಿಗೆ ಪಾಠ ಮಾಡಲು ಹೋದರು. &lt;br /&gt;&lt;br /&gt;ಟ್ಯೂಷನ್ ಮುಗಿಸಿ ಎಂದಿನಂತೆ ಆರಾಮಾಗಿ ಕಾಲೇಜಿಗೆ ಹೋಗಿ ಮಧ್ಯಾನ ಊಟಕ್ಕೆ ಬಂದರೆ ಸೀತಮ್ಮ ಕೂತಿದ್ದರು. ‘ಓ ಸಾರಿ ಮರೆತುಬಿಟ್ಟಿದ್ದೆ, ಕಾಲೇಜಿನಲ್ಲಿ ನೆನಪಾಯ್ತು ಸಂಜೆ ಬರೋಣ ಅಂತಿದ್ದೆ...ಊಟ ಮಾಡೋಣ ಬನ್ನಿ-’ ಎನ್ನುತ್ತಿರುವಾಗಲೇ ಅವರು ‘ನೀವು ಊಟ ಮುಗಿಸಿ’ ಎಂದಾಗ ಅವರ ಧ್ವನಿಯಿಂದಲೇ ಏನೋ ಗಂಭೀರವಾದದ್ದೇ ಆಗಿದೆ ಎಂದು ಕಸಿವಿಸಿಯಾಯಿತು. ಬಿಸಿಬೇಳೆ ಬಾತು ಮೊಸರನ್ನವನ್ನ ಹಾಕಿಕೊಡುತ್ತಾ ‘ಬೆಳಗ್ಗೇನೇ ಹೋಗೋದಲ್ವ ಏನ್ ಮರ್ವೋ ನಿಮ್ಗೆ, ಅವಾಗ್ಲಿಂದ ಕಣ್ಣಲ್ ನೀರ್ ಬಿಟ್ಕೊತಿದಾರೆ, ಮಗ್ಳಿಂದೇನೋ ತೊಂದ್ರೆ ಆಗಿದೆ ಏನು ಅಂತ ವಿವರವಾಗಿ ತಿಳ್ಕೊಳಿ’ ಎಂದು ಸಿಡುಕಿದರು ರಾಧಾ.&lt;br /&gt;&lt;br /&gt;* *&lt;br /&gt;ಆಟೋ ಸದ್ದಾಗಿದ್ದು ಕೇಳುತ್ತಲೇ ವಿನಿ ಬಂದಳು ಅಂತ ದೊಡ್ಡ ಮಗಳು ಸುನಿತಾ ಬಾಗಿಲು ತೆರೆಯಲು ಹೋದಳು. ‘ಹಸೀ ಬಾಣಂತಿ ಹಿಂಗೆ ಗಾಳಿಗೆ ಹೋಗ್ತಿಯಲ್ಲ ಚೂರು ಭಯ ಇಲ್ಲ’ ಬೈದರು ಅಮ್ಮ. ಚಕ್ರಪಾಣಿ ಮಗಳನ್ನು ನೋಡಿದರು ‘ಸ್ವಲ್ಪ ದಪ್ಪಗಾಗಿದಾಳೆ’. ಬೆಂಗಳೂರು ಪ್ರಭಾವ ಅಂದುಕೊಂಡು ಕೆಲಸ ಹೇಗೆ ಆಗುತ್ತಿದೆ, ಕಾಲೇಜಿನಲ್ಲಿ ಏನು ತೊಂದರೆ ಇಲ್ಲವಲ್ಲ? ಎಷ್ಟು ಪಾಠ ಮುಗಿಸಿದ್ದಾಳೆ? ಮಕ್ಕಳು ಚುರುಕಿದ್ದಾರ? ಎಂದೆಲ್ಲಾ ವಿಚಾರಿಸಿಕೊಂಡರು. ಫೋನಿನಲ್ಲೇ ಎಲ್ಲಾ ಹೇಳಿ-ಕೇಳಿಯಾಗಿದ್ದರೂ ಮತ್ತೆ ಮತ್ತೆ ‘ಇನ್ನೇನು ವಿಷಯ’ ‘ಇನ್ನೇನು ವಿಷಯ’ ಅಂತ ಅಮ್ಮ ಮಗಳು ಮಾತಾಡಿಕೊಂಡರು. ರಾತ್ರಿ ಪಕ್ಕ ಮಲಗಿದ ಹೆಂಡತಿಯನ್ನು ಇನ್ನೇನಂತೆ ಎಂದು ಕೇಳಿದಾಗ ಮಗಳನ್ನು ಐ.ಎ.ಎಸ್ ಹುಡುಗನೊಬ್ಬ ಇಷ್ಟಪಟ್ಟು ಮದುವೆಗೆ ಪ್ರಪೋಸ್ ಮಾಡಿದ್ದಾನೆ ಇವಳು ಮನೆಯಲ್ಲಿ ಕೇಳಬೇಕು ಅವರು ಒಪ್ಪಿದರೆ ಪರವಾಗಿಲ್ಲ ಎಂದು ಹೇಳಿ ಬಂದಿದ್ದಾಳೆ ಎಂಬ ಸಂಗತಿಯನ್ನ ಹೆಂಡತಿ ಹೀಗೆ ನಿರುಮ್ಮಳವಾಗಿ ಹೇಳಿ ನಿದ್ದೆ ಹೋಗಿಬಿಡುತ್ತಾಳೆ ಎಂದು ನಿರೀಕ್ಷಿಸಿರಲಿಲ್ಲ... ನಿದ್ದೆ ಹಾರಿ ಹೋಯಿತು. &lt;br /&gt;&lt;br /&gt;ಬೆಳಗ್ಗೆ ರಂಗರಾಯರ ಮನೆಯಲ್ಲಿ ಮಾತಾಡಿದ್ದನ್ನು ಮನಸ್ಸಿನಲ್ಲೇ ಮೆಲಕು ಹಾಕುತ್ತಾ, ಅವರ ಮಗಳು ಶ್ವೇತಾಳಿಗೆ ಗಂಡು ಹುಡುಕಲು ಶುರು ಮಾಡಿದ ಸಂಧರ್ಭವನ್ನು ನೆನಪಿಸಿಕೊಂಡರು. ಮುದ್ದಾಗಿ ಬೆಳೆದ ಹುಡುಗಿಯ ಚರ್ಮದ ಮೇಲೆ ಅಲ್ಲಲ್ಲಿ, ಬೆರಳ ತುದಿ, ತುಟಿಯ ಕೊನೆ, ಪಾದದ ಮಧ್ಯೆ ಸಣ್ಣದಾಗಿ ಚರ್ಮ ಬಿಳಿಯಾಗಲು ಶುರುವಾದಾಗ ಸೀತಮ್ಮ ಘಾಬರಿಯಾಗಿ ಔಶಧಿಗಳನ್ನ ಮಾಡಲು ಶುರು ಮಾಡಿದ್ದು, ಸ್ಪೆಶಲಿಷ್ಟುಗಳಿಗೆ ತೋರಿಸಿದ್ದು, ಧರ್ಮಸ್ಥಳದ ಶಾಂತಿವನದಲ್ಲಿ ತಿಂಗಳುಗಟ್ಟಲೆ ಪ್ರಕೃತಿ ಚಿಕಿತ್ಸೆ ಕೊಡಿಸಿದ್ದು ನಿರೀಕ್ಷಿಸಿದಷ್ಟು ಫಲ ಕೊಡಲಿಲ್ಲ. ವಯಸ್ಸು ೨೭ ಆದರೂ ಯಾರೂ ಮದುವೆಯಾಗಲು ಮುಂದೆ ಬರಲಿಲ್ಲ. ಸಾಕಾಗಿಹೋಗಿದ್ದ ರಂಗರಾಯರು ಕೊನೆಯ ಪ್ರಯತ್ನವೆಂಬಂತೆ ‘ಟೈಮ್ಸ್ ಆಫ್ ಇಂಡಿಯಾ’ ‘ಇಂಡಿಯನ್ ಎಕ್ಸಪ್ರೆಸ್ಸ್’ ಪೇಪರುಗಳ ಮ್ಯಾಟ್ರಿಮೋನಿಯಮ್ ಕಾಲಮ್ಮಿನಲ್ಲಿ ಮಗಳ ಹೆಸರನ್ನು ಸೇರಿಸಿದರು, ಏನನ್ನೂ ಮುಚ್ಚಿಡಲಿಲ್ಲ. ಮಗಳಿಗೆ ಹೀಗಾಗಿದೆ ಆದರೆ ಒಳ್ಳೆಯ ಕೆಲಸದಲ್ಲಿದ್ದಾಳೆ, ಸ್ಟೇಟ್ ಬ್ಯಾಂಕಿನಲ್ಲಿ ಆಫೀಸರ್, ಚನ್ನಾಗಿ ಓದಿಕೊಂಡಿದ್ದಾಳೆ, ಅದ್ಭುತವಾಗಿ ಅಡುಗೆ ಮಾಡುತ್ತಾಳೆ ಇತ್ಯಾದಿ ಇತ್ಯಾದಿ. ಯಾರಿಂದಾದರೂ ಉತ್ತರ ಬರುತ್ತೆ ಅಂತ ಉಹುಂ ಸತ್ಯವಾಗಲೂ ಅಂದುಕೊಂಡಿರಲಿಲ್ಲ... ಕೆಲವರಿಗೆ ಎಷ್ಟು ಹುಡುಕಿದರೂ ಸಿಗೋದಿಲ್ಲ, ಕೆಲವು ಮಕ್ಕಳು ತಾವೇ ಹುಡುಕಿಕೊಂಡುಬಿಡುತ್ತವೆ...&lt;br /&gt;&lt;br /&gt;ಇತ್ತ ವಿನಿತಾಗೂ ನಿದ್ದೆ ಬರಲಿಲ್ಲ ಅಮ್ಮ ಹೇಳಿದ ವಿಷಯ ಮನಸ್ಸು ಕೆಡೆಸಿತ್ತು. ಅವನು ಬಂದು ಹೋದ ದಿನ ಶ್ವೇತ ಎಷ್ಟು ಖುಶಿಯಾಗಿದ್ದಳು ಎಂದುಕೊಳ್ಳುತ್ತಾ ವಿನಿತಾ ಅವತ್ತಿನ ಘಟನೆಗಳನ್ನು ನೆನಪಿಸಿಕೊಳ್ಳತೊಡಗಿದಳು. ಶ್ವೇತಾ ಖುಷಿಯಲ್ಲಿ ಒಂದು ಹೆಜ್ಜೆಗೆ ನಾಲ್ಕು ಹೆಜ್ಜೆ ಹಾರುತ್ತಾ ಮನೆಯೊಳಗೆ ಬರುತ್ತಲೇ “ಇವತ್ತು ಒಬ್ಬ ಬಂದಿದ್ದ ಕಣೇ ‘ಚಿರಾಗ್’ ಅಂತ ಹೆಸರು ‘ಚಿರಾಗ್ ವಸಿಷ್ಠ’ ” ಅನ್ನುತ್ತಾ ಸಂಭ್ರಮಿಸಿದ್ದು ನೆನಪಾಯಿತು. ಶ್ವೇತಾಳ ಅಪ್ಪ ಅಮ್ಮ ಅವತ್ತು ಯಾವುದೋ ಮದುವೆಗೆ ಬೇರೆ ಊರಿಗೆ ಹೋಗಿದ್ದರು. ಮನೆಯಲ್ಲಿ ಇವಳೊಬ್ಬಳೇ. ಯಾವುದೋ ಹಳೇ ಸಿನೆಮಾ ನೋಡುತ್ತಾ ಕೂತಿದ್ದಳಂತೆ. ಆಗ ಕಾಲಿಂಗ್ ಬೆಲ್ ಸದ್ದಾಗಿದ್ದು ಕೇಳಿಸಿತು. ಬಾಗಿಲು ಹೋಗಿ ತೆರೆದರೆ ಇವಳನ್ನು ಗುರುತಿಸಿದ್ದು ಅವನು. ‘ಪೇಪರಿನಲ್ಲಿ ಮ್ಯಾಟ್ರಿಮೋನಿಯಲ್ ಆಡ್ ನೋಡಿದೆ ನನ್ನ ಹೆಸರು ಚಿರಾಗ್ ಅಂತ.’ ಎಂದು ಅವನು ಪರಿಚಯ ಮಡಿಕೊಂಡ ತಕ್ಷಣ ಇವಳಿಗೆ ಛೆ! ನಾನು ನೈಟಿಲಿರಬಾರದಿತ್ತು ಅನ್ನಿಸಿತ್ತು. ಹಾಗೆ ಬಂದವನು ಇವಳಿಗೆ ಇಷ್ಟವಾಗಿ ಹೋಗಿದ್ದ. ಮೊದಲ ದಿನವೇ ಬಹಳಷ್ಟು ಮಾತಾಡಿಕೊಂಡಿದ್ದರು. ಚನ್ನೈನಿಂದ ಮತ್ತೆ ಬರೋದು ಕಷ್ಟ, ಫೋಟೋ ಮೈಲ್ ಮಾಡ್ತಿನಿ. ನಿಮ್ಮ ಅಪ್ಪ ಅಮ್ಮ ಒಪ್ಪಿಗೆ ಕೊಟ್ರೆ ಫೋನ್‌ನಲ್ಲಿ ಮಾತಾಡೋಣ ಅಂತ ಹೇಳಿ ಹೋಗಿದ್ದ. ‘ಅಷ್ಟು ಚನ್ನಾಗಿದಾನೆ. ಸಬ್ ಇನ್ಸ್‌ಪೆಕ್ಟರ್ ಬೇರೆ. ಹೇಗಿದಾನೆ ಗೊತ್ತಾ ಮ್ಯಾನ್ಲಿ ಆಗಿ. ನನ್ನ ಇಷ್ಟ ಪಟ್ಟು ಹುಡುಕೊಂಡು ಬಂದಿದಾನೆ ನೋಡು. ನನ್ನ ಕ್ವಾಲಿಟೀಸ್ ಎಲ್ಲಾ ಇಷ್ಟ ಆಯ್ತಂತೆ’ ಅಂತವಳು ಖುಷಿ ಪಡುತ್ತಿದ್ದರೆ ವಿನಿತಾಗ್ಯಾಕೋ ಅನುಮಾನವಾಗುತ್ತಿತ್ತು. ‘ಎನೇ ಇರ್ಲಿ ಶ್ವೇತಾ ಯಾರನ್ನೂ ಹಾಗೆ ನಂಬಬೇಡ ಅವನ ಬಗ್ಗೆ ಎಲ್ಲಾ ವಿಚಾರಿಸೋಕ್ಕೆ ಹೇಳು,’ ಅನ್ನುವ ವಿನಿತಾಳ ಎಚ್ಚರಿಕೆಯ ಮಾತುಗಳಿಗೆ, ‘ಇಲ್ಲ ಕಣೇ, ಅವನು ಖಂಡಿತ ಸುಳ್ಳು ಹೇಳ್ತಿಲ್ಲ ನಂಗೊತ್ತು. ನಾಳೆ ಫೊಟೋ ಮೈಲ್ ಮಾಡ್ತಾನಲ್ಲ ನೋಡು ಬೇಕಾದ್ರೆ. ಅಷ್ಟಕ್ಕೂ ಅವ್ನ ಬಗ್ಗೆ ಎಲ್ಲಾ ಪ್ರೂಫ್ ಕೊಟ್ಟು ಹೋಗಿದಾನೆ ಕಣೇ. ನಾನೇ ಅವ್ನು ಕೆಲ್ಸ ಮಾಡೋ ಪೋಲಿಸ್ ಡಿಪಾರ್ಟ್ಮೆಂಟ್‌ಗೆ ಫೋನ್ ಮಾಡಿ ಯಾರೋ ಬೇರೆಯವರು ವಿಚಾರಿಸೋ ಥರ ವಿಚಾರಿಸಿ ನೋಡ್ದೆ. ಅವ್ನು ಹೇಳಿರೋ ಇನ್ಫರ್ಮೇಷನ್ ಎಲ್ಲಾ ಕರೆಕ್ಟು.’ ಅಂದ್ಲು. ಆದರೂ ವಿನಿತಾಗೆ ಸಮಾಧಾನವಿರಲಿಲ್ಲ. ‘ಯಾವುದಕ್ಕೂ ಜೋಪಾನ ಅಪ್ಪ ಅಮ್ಮ ಏನಂದ್ರು’ ಕೇಳಿದಳು. ಅವರಪ್ಪ ಅಮ್ಮನಿಗೂ ಸ್ವಲ್ಪ ಅನುಮಾನ ಇದ್ದೇ ಇತ್ತು. ಇವಳು ಫೋಟೋ ತೋರಿಸಿದ್ದಳು. ವಿನಿತಾಗಂತೂ ಫೋಟೋ ನೋಡಿದ ಕೂಡಲೇ ಇವನನ್ನೆಲ್ಲೋ ನೋಡಿದೀನಿ ಅನ್ನಿಸಿತು. ಆದರೆ ಯಾರಿರಬಹುದು ಎಂದು ತಲೆಕೆಡಿಸಿಕೊಳ್ಳಲು ಹೋಗಲಿಲ್ಲ. ಮಾರನೇ ದಿನ ಇವಳು ಬ್ಯಾಂಕಿನ ಕೆಲಸ ಮುಗಿಸಿ ಮನೆಗೆ ಬಂದಾಗ ಇವಳಮ್ಮ ಇವಳನ್ನು ತಬ್ಬಿಕೊಂಡು ಕಣ್ಣಿನಲ್ಲಿ ನೀರು ತುಂಬಿಕೊಂಡಿದರು. ಚಿರಾಗ್ ವಸಿಷ್ಠ ಶ್ವೇತಾಳ ತಾಯಿ ತಂದೆಯ ಜೊತೆ ಫೋನ್‌ನಲ್ಲಿ ಮಾತಾಡಿದ್ದ. ‘ನನಗೆ ಪರಿಚಯ ಮಾಡಿಸಿಕೊಡೇ..’ ಅಂತ ವಿನಿ ಅವಳನ್ನು ಗೋಳುಹುಯ್ದುಕೊಂಡ ಮರುದಿನವೇ ವಿನಿತಾಗೂ ಅವನಿಂದ ಕಾಲು ಬಂದಿತ್ತು. ಯಾಕೋ ಧ್ವನಿ ಸ್ವಲ್ಪ ಕೀರಲು ಅನ್ನಿಸುತ್ತಿದ್ದರೂ ಅವನು ಮಾತಾಡುತ್ತಿದ್ದ ಧಾಟಿ ಖುಷಿ ಕೊಡುತ್ತದೆ ಅಂದುಕೊಂಡಳು. &lt;br /&gt;&lt;br /&gt;ಶ್ವೇತಾಳಿಗೆ ತಿಂಗಳಿಗೊಂದು ಗಿಫ್ಟು ಬರಲು ಶುರುವಾಯಿತು. ಚಿನ್ನದ ಸರ, ಬಳೆ ಹೀಗೇ.. ಇಷ್ಟು ದಿನವಾದರೂ ಚಿರಾಗ್‌ನನ್ನು ಬಿಟ್ಟರೆ ಅವರ ಮನೆಯವರ್ಯಾರೂ ಶ್ವೇತಾಳ ಮನೆಯವರ ಬಳಿ ಮಾತಾಡಿರಲಿಲ್ಲ. ಅವನಿಗೆ ತಂದೆ ತಾಯಿ ಇಲ್ಲ. ಇರುವ ಸಂಭಂದಿಕರಾದ ಚಿಕ್ಕಪ್ಪ ಚಿಕ್ಕಮ್ಮ ಅಮೇರಿಕಾದಲ್ಲಿದ್ದರು. ಆರು ತಿಂಗಳಾದಮೇಲೆ ಬರ್ತಾರೆ ಆಗ ಮನೆಗೇ ಬಂದು ಮಾತಾಡ್ತಾರೆ ಅಂದಿದ್ದ. ಅದ್ಯಾಕೋ ಏನೇನೋ ಕಾರಣಗಳಿಂದ ಶ್ವೇತಾಳ ಅಪ್ಪ ಅಮ್ಮನಿಗೆ ಅವನನ್ನು ಮುಖತಹ ಭೇಟಿ ಮಾಡಲಾಗಿರಲೇ ಇಲ್ಲ. ಇವಳೇ ಬ್ಯಾಂಕಿನ ಕೆಲಸದ ಮೇಲೆ ಬೆಂಗಳೂರಿಗೆ ಹೋದಾಗ ಅವನೂ ಚನ್ನೈಯಿಂದ ಬರುತ್ತಿದ್ದ ಹೀಗೆ ಆಗಾಗ ಅವರಿಬ್ಬರೂ ಭೇಟಿಯಾಗುತ್ತಿದ್ದರು. ಎಂಟು ತಿಂಗಳಾದರೂ ಅವನ ಚಿಕ್ಕಪ್ಪ ಚಿಕ್ಕಮ್ಮ ಬರುವ ಸುದ್ದಿಯೇ ಇರಲಿಲ್ಲ. ರಂಗರಾಯರಿಗೆ ಅನುಮಾನವಾಗಿ, ಶ್ವೆತಾಳಿಗೆ ಗೊತ್ತಾಗದಂತೆ ಚಿನ್ನದಂಗಡಿಗೆ ಹೋಗಿ ಅಸಲಿ ಒಡವೆಯೋ ನಕಲಿಯೋ ಎಂದು ತೊರಿಸಿಕೊಂಡು ಬಂದರು. ಚಿನ್ನದ ಒಡವೆಗಳೇ. ಮೋಸಮಾಡುವ ಪೈಕಿಯಾದರೆ ಹಾಗೆ ಚಿನ್ನದ ಒಡವೆಗಳನ್ನ ದುಬಾರಿ ವಸ್ತುಗಳನ್ನ ಯಾಕೆ ಕಳುಹಿಸುತ್ತಾರೆ ಅಂದುಕೊಂಡು ಸುಮ್ಮನಾದರು. ಅದಲ್ಲದೇ ಅವನು ಇವರಿಗೆ ಹದಿನೈದು ದಿನಕ್ಕೊಂಮ್ಮೆ ತಪ್ಪದೇ ಮಾತಾಡುತ್ತಿದ್ದ. ಹೀಗೆ ಎಷ್ಟು ದಿನಗಳಾದರೂ ಅವರ ಮನೆಯವರು ಮದುವೆಯ ಬಗ್ಗೆ ಸುದ್ದಿಯೇ ಎತ್ತಿರಲಿಲ್ಲ. &lt;br /&gt;&lt;br /&gt;ಮೊನ್ನೆ ಅನುಮಾನವಾಗಿ ಏನಾದರಾಗಲಿ ಹೋಗಿ ಮಾತಾಡಿಸಿಕೊಂಡು ಬರೋಣ ಅಂತ ರಂಗರಾಯರು ಯಾರಿಗೂ ಹೇಳದೇ ಅವನಿರುವ ಊರಿಗೆ, ಅಲ್ಲಿನ ಪೋಲೀಸ್ ಸ್ಟೇಶನ್‌ಗೆ ಹೋಗಿದ್ದಾರೆ. ಅಲ್ಲಿ ನೋಡಿದರೆ ಚಿರಾಗ್ ಎನ್ನುವ ಹೆಸರಿನವರು ಯಾರೂ ಇಲ್ಲ. ಬೇರೆ ಯಾವುದೋ ಮನುಷ್ಯ ಕೂತಿದ್ದಾನೆ. ಫೋಟೋಲಿ ನೋಡಿದ ಮನುಷ್ಯನಿಗೂ ಇವನಿಗೂ ಯಾವುದೇ ಸಂಭಂಧ ಇಲ್ಲ. ರಂಗರಾಯರಿಗೆ ನಾವು ಮೋಸ ಹೋದೆವು ಎಂದು ತಿಳಿದುಹೋಯಿತು. ಘಾಬರಿಗೊಂಡು ಅಲ್ಲೆಲ್ಲಾ ವಿಚಾರಿಸಿ ಸುತ್ತಾಡಿ ಹುಡುಕಾಡಿದ್ದಾರೆ ಆ ಮುಖದ ಮನುಷ್ಯನ ಸುಳಿವೇ ಇಲ್ಲ ಎಂದು ತಿಳಿದ ಮೇಲೆ ರಾತ್ರಿ ಹೆಂಡತಿಗೆ ಕಾಲ್ ಮಾಡಿದ್ದಾರೆ. ಮಗಳಿಗೆ ಈ ವಿಷಯವನ್ನು ತಿಳಿಸುವುದು ಹೇಗೆ ಎಂದು ತಲೆಕೆಡಸಿಕೊಂಡು ಬೆಳಗಿನವರೆಗೂ ನಿದ್ದೆಗೆಟ್ಟ ಸೀತಮ್ಮ ಬೆಳಗಾಗುತ್ತಲೇ ಚಕ್ರಪಾಣಿಯವರಿಗೆ ಫೋನ್ ಮಾಡಿದ್ದಾರೆ. &lt;br /&gt;&lt;br /&gt;ಸೀತಮ್ಮನನ್ನು ಮಾತಾಡಿಸಲು ಬಂದ ಚಕ್ರಪಾಣಿಗೆ ಇವರು ಮೋಸ ಹೋಗಿದ್ದಾರೆ ಎಂದು ಮನಸ್ಸಿನಲ್ಲಿ ಧೃಢವಾಗುತ್ತಿರುವಾಗಲೇ ಶ್ವೇತಾ ಬ್ಯಾಂಕಿನಿಂದ ಮನೆಗೆ ಬಂದಿದ್ದಾಳೆ. ಅವನ ಜೊತೆ ಮಾತಾಡಿಕೊಂಡು ಬಂದವಳು, ಇವರನ್ನು ನೋಡಿದ ತಕ್ಷಣ ‘ಇನ್ನೊಂದ್ ಸ್ವಲ್ಪ ಹೊತ್ತು ಬಿಟ್ಟು ಮಾತಾಡ್ತಿನಿ ಕಣೋ, ಎಂದು ಫೋನಿನಲ್ಲಿ ಹೇಳಿ. ‘ಹೇಗಿದೀರಾ ಅಂಕಲ್? ವಿನಿತಾ ಬಂದಿದಾಳ?’ ಎಂದು ವಿಚಾರಿಸಿಕೊಂಡು ‘ಚಿರಾಗ್ ಫೋನ್ ಮಾಡಿದ್ದ ಅಮ್ಮ, ಯಾವ್ದೋ ಹೊಸಾ ಮಾಡಲ್ ಮೊಬೈಲ್ ಬಂದಿದಿಯಂತೆ ೧೭ಸಾವರದ್ದು ನಿಂಗೆ ಕೊಡ್‌ಸ್ತಿನಿ ಅಂದ’ ಎಂದು ಹೇಳುತ್ತಿದ್ದರೆ ಸೀತಮ್ಮನೂ ಚಕ್ರಪಾಣಿಯೂ ಘಾಬರಿಯಿಂದ ಕಕ್ಕಾಬಿಕ್ಕಿಯಾಗಿ ಕೂತಿದ್ದರು.&lt;br /&gt;&lt;br /&gt;ವಿನಿತಾಗೆ ತಲೆ ಚಿಟ್ಟುಹಿಡಿಯುವಷ್ಟು ಹಿಂಸೆಯಾಗುತ್ತಿತ್ತು. ಶ್ವೇತಾಳ ಕಷ್ಟಗಳನ್ನ, ಅವಳು ತನ್ನ ಚರ್ಮದ ಖಾಯಿಲೆಯಿಂದ ಅನುಭವಿಸುತ್ತಿದ್ದ ಅವಮಾನವನ್ನ ಹತ್ತಿರದಿಂದ ನೊಡಿದ್ದ ಅವಳಿಗೆ ಶ್ವೇತಾ ಈಗ ಇನ್ನೊಂದು ಆಘಾತವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ ಅನ್ನಿಸಿತು. ನಾಳೆ ರಂಗರಾಯರ ಮನೆಗೆ ಅಪ್ಪನ ಜೊತೆ ತಾನೂ ಹೋಗಬೇಕು ಅಂತ ನಿಶ್ಚಯಿಸಿಕೊಂಡಳು.&lt;br /&gt;                            * * *  &lt;br /&gt;&lt;br /&gt;ರಂಗರಾಯರು ಮನೆಗೆ ಬಂದಮೇಲೆ ಅವನ ಬಗ್ಗೆ ಇನ್ಯಾವುದಾದರೂ ಇನ್ಫರ್ಮೇಶನ್ ಸಿಗಬಹುದಾ ಎಂದು ತಿಳಿಯಲು ಶ್ವೇತಾ ಮನೆಯಲ್ಲಿಲ್ಲದಿರುವ ಹೊತ್ತಿನಲ್ಲಿ  ಅವಳ ಬೀರುವನ್ನ ಜಾಲಾಡಿದ್ದಾರೆ ಅಲ್ಲಿ ಅವರಿಗೆ ಸಿಕ್ಕಿದ್ದು ಕ್ರೆಡಿಟ್ ಕಾರ್ಡಿನ ಬಿಲ್ಲುಗಳು, ಆ ಬಿಲ್ಲುಗಳಲ್ಲಿ ಅವನು ಇವಳಿಗೆ ಕಳಿಸಿದ ಒಡವೆಗಳ ವಿವರಗಳಿವೆ ಎಲ್ಲಿ, ಯಾವತ್ತು ತೆಗೆದುಕೊಂಡಿದ್ದು? ಎಷ್ಟು ಬೆಲೆ ಇತ್ಯಾದಿ. ಎಲ್ಲವೂ ಶಿವಮೊಗ್ಗದ ಅಡ್ರಸ್ಸುಗಳೇ ಇವಳ ಕ್ರೆಡಿಟ್ ಕಾರ್ಡಿನಿಂದಲೇ ಪೇ ಆಗಿದೆ. ಇವಳಿವಳಿಗೇ ಇವಳು ಆ ಒಡವೆಗಳನ್ನು ಕೊರಿಯರ್ ಮಾಡಿರುವ ಚೀಟಿಗಳು. ಹುಡುಗರು ಹಾಕಿಕೊಳ್ಳುವಂಥಾ ಪ್ಯಾಂಟು ಶರ್ಟುಗಳು. ರಂಗರಾಯರಿಗೆ ಶಾಕ್ ಆಗಿ ಹೋಯಿತು ಮಗಳು ಮೋಸ ಮಾಡುತ್ತಿದ್ದಾಳ? ಅಥವ ಮಗಳಿಗೆ ಹುಚ್ಚು ಹಿಡಿದಿದೆಯಾ? ಏನೂಂದೂ ಅರ್ಥವಾಗಲಿಲ್ಲ. ವಿನಿತಾ ಮತ್ತು ಚಕ್ರಪಾಣಿ ರಂಗರಾಯರ ಮನೆಗೆ ಬರುವ ಹೊತ್ತಿಗೆ ರಂಗರಾಯರು ಟೇಬಲ್ಲಿನ ಮೇಲೆ ಕೊರಿಯರ್ ಚೀಟಿಗಳು ಕ್ರೆಡಿಟ್ ಕಾರ್ಡಿನ ಬಿಲ್ಲುಗಳನ್ನು ಹರಡಿಕೊಂಡು ಕೂತಿದ್ದರು.&lt;br /&gt;&lt;br /&gt;ನಡೆದದ್ದನ್ನು ವಿವರಿಸಿದಾಗ ಚಕ್ರಪಾಣಿಗೂ ತಲೆನೋವು ಶುರುವಾಯಿತು. ‘ಚಿರಾಗ್‌ನನ್ನು ಎಲ್ಲೋ ನೋಡಿದ್ದೆ ಅಂತ ನೆನಪು ಎಲ್ಲಿ ಅಂತ ಎಷ್ಟು ಯೋಚಿಸಿದರೂ ಗೊತ್ತಾಗುತ್ತಿಲ್ಲ’ ಅಂದಳು ವಿನಿತಾ. ಹಾಗಾದರೆ ಚಿರಾಗ್ ಇರುವುದು ನಿಜ ಆದರೆ ಅವನು ಪೋಲೀಸ್ ಅಲ್ಲ. ನಮ್ಮ ಹುಡುಗಿಯ ತಲೆಕೆಡಸಿದ್ದಾನೆ ಇವತ್ತು ಎಲ್ಲದಕ್ಕೂ ಒಂದು ಅಂತ್ಯ ಕಾಣಿಸಬೇಕು ಶ್ವೇತಾಳನ್ನ ನೇರವಾಗಿ ಕೇಳಿಬಿಡೋಣ ಏನಾದರಾಗಲಿ ಅಂತ ನಿಶ್ಚಯಿಸಿದರು. ಅವಳು ಮನೆಗೆ ಬರುವವರೆಗೂ ಏನಾಗಿರಬಹುದು? ಹೇಗೆ ಪಾಪದ ಹುಡುಗಿ ಮೋಸ ಹೋಗಿರಬಹುದು? ಅಂತ ಮಾತಾಡಿಕೊಂಡರು. ಸೀತಮ್ಮ ಸದ್ದಿಲ್ಲದೆ ಬಿಕ್ಕುತ್ತಿದ್ದರು. ಸಮಯ ಸಾಗುತ್ತಲೇ ಇಲ್ಲವೇನೋ ಅನ್ನಿಸುತ್ತಿತ್ತು. ಕೊನೆಗೆ ಆರುಗಂಟೆಯ ವೇಳೆಗೆ ಶ್ವೇತಾ ಎಂದಿನಂತೆ ಫೋನಿನಲ್ಲಿ ಚಿರಾಗ್ ಜೊತೆ ಮಾತಾಡಿಕೊಂಡು ಬಂದಳು, ವಿನಿತಾಳ ಮುಖ ನೋಡಿ ಅವಳ ಕಣ್ಣರಳಿತು ವಿನಿತಾ ಪೇಲವವಾಗಿ ನಕ್ಕಳು, ಅಲ್ಲಿಯವರೆಗೂ ಒಂದೂ ಮಾತಾಡದೆ ಕುಳಿತಿದ್ದ ಸೀತಮ್ಮ ಬಿಕ್ಕುತ್ತಾ ‘ಏನೇ ಶ್ವೇತಾ ಇದು ನಿನಗೆ ನೀನೇ ಒಡವೆಗಳನ್ನು ಕಳಿಸಿಕೊಂಡಿದ್ದೀಯಾ..’ ಎಂದು ಅವಳ ಮುಂದೆ ಆ ಎಲ್ಲಾ ಚೀಟಿಗಳನ್ನು ಹಿಡಿದರು ಶ್ವೇತಾಳ ಮುಖದಲ್ಲಿ ಆಶ್ಚರ್ಯ. ಅವಳ ರೂಮಿನಿಂದ ಹುಡುಗರು ಹಾಕಿಕೊಳ್ಳೋ ಪ್ಯಾಂಟ್, ಟಿ ಷರ್ಟ್,  ಕ್ಯಾಪ್‌ಗಳನ್ನು ತಂದ ರಂಗರಾಯರು ಅವುಗಳನ್ನು ಶ್ವೆತಾಳ ಮುಂದೆ ಹಿಡಿದರು. ಶ್ವೇತಾಳ ಚಹರೆ ಬದಲಾಯಿತು ರಂಗರಾಯರ ಕುತ್ತಿಗೆ ಹಿಸುಕುತ್ತಾ ‘ಶ್ವೇತಂಗೆ ಏನಾದ್ರು ಮಾಡಿದ್ರೆ ಸಾಯಿಸ್ಬಿಡ್ತಿನಿ’ ‘ಶ್ವೇತಾಗೆ ಏನಾದ್ರು ಮಾಡಿದ್ರೆ ಸಾಯಿಸ್ಬಿಡ್ತಿನಿ’ ಅಂತ Pರುಚಿಕೊಂಡಳು. ಅವಳ ಕೈಯಿಂದ ರಂಗರಾಯರನ್ನು ಬಿಡಿಸುವ ಹೊತ್ತಿಗೆ ವಿನಿತಾ ಚಕ್ರಪಾಣಿ ಸೀತಮ್ಮ ಸೋತು ಹೋಗಿದ್ದರು. ಚಕ್ರಪಾಣಿ ಕೊಟ್ಟ ಹೊಡೆತಕ್ಕೆ ಶ್ವೇತ ತಲೆತಿರುಗಿ ಬಿದ್ದಿದ್ದಳು. ಸೀತಮ್ಮ ಆದ ಘಾಬರಿಗೆ ಬಿಕ್ಕುವುದನ್ನು ನಿಲ್ಲಿಸಿದ್ದರು. ಶ್ವೇತಾಳ ವರ್ತನೆ ಅರ್ಥವೇ ಆಗದೆ ರಂಗರಾಯರು ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಭೂತ ಪ್ರೇತಗಳು ಇರೋದು ನಿಜವಿರಬಹುದಾ ಎಂಬ ಅನುಮಾನಕ್ಕೆ ತುತ್ತಾದರು. ಚಕ್ರಪಾಣಿ, ಶ್ವೇತಾಗೆ ಏನಾದ್ರು ಮಾಡಿದ್ರೆ ಸಾಯಿಸ್ಬಿಡ್ತಿನಿ ಅಂತ ಅವಳೇ ಅವಳ ಬಗ್ಗೆ ಹೇಳುತ್ತಿದ್ದರ ಅರ್ಥವೇನು? ಪ್ರಶ್ನೆಯಾಗುತ್ತಿದ್ದರೆ ವಿನಿತಾಗೆ ನೆನಪಾದದ್ದು ಡಾ.ಕೌಶಿಕ್. ಪಿ.ಯು.ಸಿ ಯಲ್ಲಿ ಚಕ್ರಪಾಣಿಯವರ ಟ್ಯೂಶನ್ನಿಗೆ ಬರುತ್ತಿದ್ದ ಹುಡುಗ ಎಂ.ಬಿ.ಬಿ.ಎಸ್ ಮುಗಿಸಿ ಸೈಕ್ಯಾಟ್ರಿಯಲ್ಲಿ ಪಿಜಿ ಮುಗಿಸಿ ಶಿವಮೊಗ್ಗದ ಮಾನಸಾದಲ್ಲಿ ಸೈಕ್ಯಾಟ್ರಿಸ್ಟ್ ಆಗಿದ್ದ. ಅವನು ಪಿ.ಯು.ಸಿ ಯಲ್ಲಿ ವಿನಿತಾಳ ಕ್ಲಾಸ್ ಮೇಟ್ ಕೂಡಾ ಆಗಿದ್ದ. ಅವನಿಗೆ ಫೋನ್ ಮಾಡಿ ನೆಡದದ್ದನ್ನು ತಿಳಿಸಿದರು. ಕೌಶಿಕ್ ಅಲ್ಲಿನ ಡಾಕ್ಟರ್ ಒಬ್ಬರಿಗೆ ಫೋನ್ ಮಾಡಿ ಮತ್ತು ಬರುವ ಇಂಜೆಕ್ಷನ್ ಕೊಡಲು ಹೇಳಿ ತಕ್ಷಣ ಶ್ವೇತಾಳನ್ನು ಮಾನಸಾಕ್ಕೆ ಕರೆದುಕೊಂಡು ಬರಲು ಹೇಳಿದ. &lt;br /&gt;&lt;br /&gt;                              * * *&lt;br /&gt;ಚಕ್ರಪಾಣಿ ಮಲ್ಟಿಪಲ್ ಪರ್ಸನಾಲಿಟಿ ಡಿಸಾರ್ಡರ್ ಬಗ್ಗೆ ಕೇಳದೆ ಏನೂ ಇಲ್ಲ, ಅದರ ಬಗ್ಗೆ ಬಂದಿದ್ದ ಅನ್ನಿಯನ್ ಸಿನಿಮಾವನ್ನ ವಿನಿ ಬಲವಂತ ಮಾಡಿ ತೋರಿಸಿದ್ದಳು, ಅದಲ್ಲದೆ ಸಿಡ್ನಿ ಶಲ್ಡನ್ ಎಂಬ ಲೇಖಕನ ‘ಟೆಲ್ ಮೆ ಯುವರ್ ಡ್ರೀಮ್ಸ್’ ಕಾದಂಬರಿಯೂ ಇದಕ್ಕೆ ಕುರಿತಾದದ್ದೇ.. ಆದರೆ? ‘ಆದರೆ ಇದೆಂತಾ ರೀತಿಯದ್ದು, ನಾನು ಇಂಥಾ ಮಲ್ಟಿಪಲ್ ಪರ್ಸನಾಲಿಟಿ ಡಿಸಾರ್ಡರ್ ಬಗ್ಗೆ ಕೇಳೇ ಇಲ್ಲವಲ್ಲ? ಪ್ರಶ್ನೆಯಾದರು. ಸರ್ ಇದು ಡಿಸೋಸಿಯೇಟಿವ್ ಡಿಸಾರ್ಡಗಳ ರೀತಿಯಲ್ಲಿ ಒಂದು ಬಗೆ.. ವಿವರಿಸಲು ತೊಡಗಿದ ಕೌಶಿಕ್.. ಡಿಸೋಸಿಯೇಟಿವ್ ಡಿಸಾರ್ಡರ್ ಅಂದ್ರೆ ಇದರಲ್ಲಿ ಮೂರು ವಿಧ ಅಮ್ನೇಶ್ಯ ಫ್ಯೂಗ್ ಮತ್ತು ಮಲ್ಟಿಪಲ್ ಪರ್ಸನಾಲಿಟಿ ಡಿಸಾರ್ಡರ್. ಯಾವುದೋ ಆಘಾತದಿಂದಲೋ, ಇನ್ನು ತಡಿಯಲಿಕ್ಕೆ ಆಗೋಲ್ಲ ಅನ್ನೋವಂಥ ಸ್ಟ್ರೆಸ್ ಆದಾಗ, ಈಗಿರೋ ಸ್ಥಿತಿಯನ್ನ ಭರಿಸಲು ಸಾಧ್ಯವಿಲ್ಲ ಅನ್ನೋವಂಥ ಸ್ಥಿತಿ ತಲುಪಿದಾಗ ಇರೋಸ್ಥಿತಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಡುತ್ತೆ ಮನಸ್ಸು, ಈ ಪ್ರಯತ್ನಗಳೇ ಅಮ್ನೇಶ್ಯ (ಅಂದರೆ ಮರೆವು, ಆಟೋ ಬಯಾಗ್ರಾಫಿಕಲ್ ಅಥವಾ ಸಿಟುಯೇಶನಲ್ ಇತ್ಯದಿ) ಫ್ಯೂ ಗ್,(ಇರೋ ಸ್ಥಿತಿಯಿಂದ ಇರೋ ಜಾಗದಿಂದ ಓಡಿಹೋಗಿಬಿಡುವುದು, ಮತ್ತೆ ಹೀಗೆ ಓಡಿ ಹೋದವರಿಗೆ ತಮ್ಮ ಜೀವನದ ಬಗ್ಗೆ ಪೂರ್ತಿ ಮರೆತು ಹೋಗಿ ಬಿಟ್ಟಿರುತ್ತದೆ) ಹಾಗೂ ಮಲ್ಟಿಪಲ್ ಪರ್ಸನಾಲಿಟಿ ಡಿಸಾರ್ಡರ್ ಆಗಿ ಪರಿವರ್ತನೆ ಗೊಳ್ಳುತ್ತದೆ. ಈಗ ಶ್ವೇತಾಳಿಗೆ ಆಗಿರುವುದೂ ಇದೇ. ಅಷ್ಟು ದಿನದಿಂದ ಗಂಡು ಹುಡುಕುತ್ತಿರುವ ನಿಮ್ಮ ಚಟುವಟಿಕೆಗಳು, ಅವರ ಸ್ನೇಹಿತೆಯರಿಗೆಲ್ಲಾ ಮಕ್ಕಳಾಗಿ ಮದುವೆಯಾಗಿದ್ದರೂ ತನಗೆ ಆಗದಿರುವುದು, ಇವೆಲ್ಲಾ ಅವಳ ಅನ್‌ಕಾನ್‌ಶಸ್ ಮೈಂಡಿನ ಮೇಲೆ ಸಾಕಷ್ಟು ಪರಿಣಾಮ ಬೀರಿವೆ, ಇಂಥಾ ಯಾವುದೋ ಸನ್ನಿವೇಶದಲ್ಲೇ ಅವಳಲ್ಲಿ ‘ಅವನು’ ಹುಟ್ಟಿಕೊಂಡಿದ್ದಾನೆ. ಆವನಿಗೊಂದು ಚಂದದ ಅವಳಿಗೆ ಇಷ್ಟವಾಗೋ ಹೆಸರಿದೆ, ಅವನ ಸ್ವಭಾವಗಳೆಲ್ಲವೂ ಖುಷಿಕೊಡುವಂಥದ್ದೇ ಯಾಕೆಂದರೆ ನನ್ನ ಹುಡುಗ ಹಿಂಗಿರಬೇಕು ಅನ್ನುತ್ತಿದ್ದ ಅವಳ ಒಳ ಮನಸ್ಸು, ‘ದಿ ಅನ್ ಕಾನ್‌ಶಸ್ ಮೈಂಡ್’ ಅವನನ್ನು ಸೃಷ್ಟಿಸಿದೆ, ಚಿರಾಗ್ ಅನ್ನುವ ಹುಡುಗ ಸೃಷ್ಟಿಯಾಗಿರೋದೇ ಹೀಗೆ. ಅವನು ನೋಡೋಕ್ಕೆ ಅವಳಿಗೆ ಇಷ್ಟವಾಗುವ ಆಕ್ಟರ್ ಥರ ಇದಾನೆ, ನೋಡಿದ ತಕ್ಷಣ ನನಗೂ ಅವನನ್ನು ಎಲ್ಲೋ ನೋಡಿದ್ದೇನೆ ಅನ್ನಿಸಿತು ಅವನು ಹಿಂದಿ ಸೀರಿಯಲ್ ಒಂದರಲ್ಲಿ ಆಕ್ಟ್ ಮಾಡುತ್ತಾನೆ. ಅವನ ಫೋಟೋವನ್ನ ತನಗೆ ತಾನೇ ಮೈಲ್ ಮಾಡಿಕೊಂಡಿದ್ದಾಳೆ ತನ್ನ  ಹುಡುಗ ಹೀಗೇ ಇದಾನೆ ಅಂತ ನಿಮ್ಮ ಮಗಳು ಕಲ್ಪಿಸಿಕೊಂಡಿದ್ದಾಳೆ. ಅದನ್ನೇ ನಂಬಿದ್ದಾಳೆ. ಅಶ್ಟೇ ಕೇರ್ಫುಲ್ ಆಗಿ ನಿಮಗೂ ಅವಳಿಗೂ ಗೊತ್ತಾಗದಂತೆ ಅವನು ಇನ್ನೊಬ್ಬ ಹುಡುಗನೇ ಎಂಬಂತೆ ಸನ್ನಿವೇಶಗಳನ್ನ ಅವಳ ಒಳ ಮನಸ್ಸು ಸೃಷ್ಟಿಸಿದೆ, ಅವರಿಬ್ಬರೂ ಗಂಟೆಗಟ್ಟಲೆ ಮಾತಾಡಿಕೊಂಡಿದ್ದಾರೆ. ಅವನು ಇವಳಿಗೆ ಗಿಫ್ಟ್ ಕಳಿಸಿದ್ದಾನೆ. ಅವಳ ಪಾಲಿಗೆ ನಮ್ಮ ನಿಮ್ಮಶ್ಟೇ ಅವನೂ ಜೀವಂತ. ಈ ಎರೆಡು ಪರ್ಸನಾಲಿಟೀಸ್‌ಗೂ ಒಬ್ಬರ ಬಗ್ಗೆ ಇನ್ನೊಬ್ಬರಿಗೆ ಚನ್ನಾಗಿ ಗೊತ್ತು-’ ತಾನು ಹೇಳುತ್ತಿರುವುದು ಮುಂದೆ ಕೂತಿರುವವರಿಗೆ ಅರ್ಥವಾಗುತ್ತಿದೆಯೋ ಇಲ್ಲವೂ ಅನುಮಾನದಲ್ಲಿ ಮಾತು ನಿಲ್ಲಿಸಿದ ಕೌಶಿಕ್. ಒಬ್ಬಳು ಹುಡುಗಿಯಲ್ಲಿ ಹುಡುಗನ ಪರ್ಸನಾಲಿಟಿ ಹುಟ್ಟಿಕೊಳ್ಳೋಕ್ಕೆ ಹೇಗೆ ಸಾಧ್ಯ? ತಮ್ಮ ಪ್ರಶ್ನೆ ಮುಂದಿಟ್ಟರು ಚಕ್ರಪಾಣಿ. ಒಂದು ಹುಡುಗಿಯಲ್ಲಿ, ಇನ್ನೊಂದು ಹುಡುಗಿ ಹುಟ್ಟಿಕೊಳ್ಳೋದು, ಅಥವಾ ಐದು ವರ್ಶದ ಮಗುವಿನ ವ್ಯಕ್ತಿತ್ವ ಹುಟ್ಟಿಕೊಳ್ಳೋದು ಎಷ್ಟು ಸಹಜವೋ ಇದೂ ಅಷ್ಟೇ ಸಹಜ. ಹುಡುಗ ಹುಡುಗಿ ಅನ್ನೋ ಲಿಂಗ ವ್ಯತ್ಯಾಸವನ್ನಾಗಾಲಿ ದೊಡ್ಡವರು ಚಿಕ್ಕವರು ಎಂಬ ವಯಸ್ಸಿನ ವ್ಯತ್ಯಾಸವನ್ನಿಟ್ಟುಕೊಂಡಾಗಲೀ ನಮ್ಮ ಒಳ ಮನಸ್ಸು ಇನ್ನೊಂದು ವ್ಯಕ್ತಿತ್ವವನ್ನ ಸೃಷ್ಟಿಸೋಲ್ಲ. ತನ್ನನ್ನು ಕಾಡುತ್ತಿರುವ ಸಮಸ್ಯೆಗಳಿಗೆ, ಅದಕ್ಕೆ ಸರಿಹೋಗುವಂಥ ಅದನ್ನು ನಿವಾರಿಸುವಂಥ ವ್ಯಕ್ತಿತ್ವಗಳು ಹುಟ್ಟಿಕೊಳ್ಳುತ್ತವೆ. ಅಲ್ಲಿ ಒಬ್ಬ ಹುಡುಗ ಮಾತ್ರ ಇಲ್ಲ ಇನ್ನೊಂದು ಹುಡುಗಿಯೂ ಇದ್ದಾಳೆ, ಶ್ವೆತಾಳಿಗಿಂತ ಪವರ್‌ಫುಲ್ ಆದ ಪರ್ಸನಾಲಿಟಿ ಅವಳದು ಅವಳೇ ರಂಗರಾಯರನ್ನು ಆಗ ಕೊಲ್ಲಲು ಹೊರಟಿದ್ದು. ಇದಕ್ಕೆ ಡಿಫೆನ್ಸ್ ಮೆಕ್ಯಾನಿಸಮ್ ಅನ್ನುತ್ತಾರೆ. ಇವಳ ಒಳಗೆ ಇನ್ನೆಷ್ತು ಪರ್ಸನಾಲಿಟಿಗಾಳು ಅಡಗಿ ಕುಳಿತಿವೆಯೋ ಗೊತ್ತಿಲ್ಲಾ. ಅವನ್ನೆಲ್ಲಾ ಒಂದೊಂದಾಗಿ ಹೊರತೆಗೆಯಬೇಕು. ‘ಈಗ ಹುಟ್ಟಿಕೊಂಡಿರೋ ಇನ್ನೆರೆಡು ಪರ್ಸನಾಲಿಟಿಗಳೂ ನಿನ್ನವೇ. ಅದನ್ನು ನೀನೇ ಸೃಷ್ಟಿಸಿಕೊಂಡಿದ್ದೀಯ’ ಅಂತ ನಿಮ್ಮ ಮಗಳಿಗೆ ಅರ್ಥ ಮಾಡಿಸಬೇಕು, ಅವಳ ಸುತ್ತ ಇರುವ ಸ್ಟ್ರೆಸ್ ಕಮ್ಮಿ ಮಾಡಬೇಕು ಇದಕ್ಕೆಲ್ಲಾ ತುಂಬ ಸಮಯವಾಗಬಹುದು.. ಕೌಶಿಕ್ ಹೇಳುತ್ತಾ ಹೋದ, ಅವನು ಹೇಳಿದ್ದನ್ನ ಸರಿಯಾಗಿ ಅರ್ಥ ಮಾಡಿಕೊಳ್ಳಲು ಕಷ್ಟ ಪಡುತ್ತಿದ್ದ ಚಕ್ರಪಾಣಿ, ರಂಗರಾಯರ ಮಧ್ಯೆ ಮೌನ ಹರಡಿತ್ತು. &lt;br /&gt;&lt;br /&gt;ಆ ರೂಮಿನಿಂದ ಹೊರಬಂದ ಮೇಲೆ ರಂಗರಾಯರು ಏನನ್ನೋ ನಿಶ್ಚಯಿಸಿದವರಂತೆ ‘ನಾನಿದನ್ನ ಅವ್ಳಿಗೆ ಹೇಳ್ಬಾರ್ದು ಅನ್ಕೊಂಡಿದಿನಿ. ಅವ್ಳು ಈ ಸ್ಥಿತಿಲೇ ಖುಷಿಯಾಗಿದಾಳೆ ಹಾಗೇ ಭ್ರಮೇಲೇ ಇದ್ದು ಬಿಡ್ಲಿ’ ಅಂದರು. ಚಕ್ರಪಾಣಿಗೆ ಯಾಕೋ ತಮ್ಮ ಮಗಳು ಹೆಂಡತಿಯ ನೆನಪಾಯಿತು ಅವರು ಸುಖವಾಗಿದ್ದಾರ? ಅವರಿಗೇನು ಚಿಂತೆಯಿಲ್ಲವಾ? ಮಗ ನಿಜಕ್ಕೂ ನೆಮ್ಮದಿಯಾಗಿದ್ದಾನ ಅವನನ್ನೇನು ಕಾಡುತ್ತಿಲ್ಲವಾ? ನಿಜಕ್ಕೂ ನಾನು ಬದುಕಿದ ರೀತಿ ನನ್ನಲ್ಲಿ ಉಲ್ಲಾಸ ತುಂಬಿದೆಯಾ? ಅಥವಾ ಎಲ್ಲವೂ ಸರಿ ಇದೆ ಎನ್ನುವ ನಂಬಿಕೆಯಲ್ಲಿ ಇಷ್ಟು ದಿನ ಬದುಕಿಬಿಟ್ಟೆನಾ? ಎಲ್ಲಾರೂ ಇಂಥಾ ಒಂದಲ್ಲಾ ಒಂದು ಭ್ರಮೆಯಲ್ಲಿ ಬದುಕುತ್ತಿದ್ದೇವೇನೋ ಎಂದು ಯೋಚಿಸುತ್ತಾ ಏನನ್ನೂ ಉತ್ತರಿಸದೆ ಸುಮ್ಮನಾದರು. ನಾನು ನಿಜವಾಗಲೂ ನಾನೇನಾ ಅನ್ನುವ ಪ್ರಶ್ನೆ ಅವರ ಮೈಮನಸ್ಸುಗಳನ್ನು ತಾಗಿಯೂ ತಾಗದಂತೆ ಸವರಿಕೊಂಡು ಹೋಯಿತು.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-5206944639759053472?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/5206944639759053472/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=5206944639759053472' title='9 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/5206944639759053472'/><link rel='self' type='application/atom+xml' href='http://www.blogger.com/feeds/714642904810204846/posts/default/5206944639759053472'/><link rel='alternate' type='text/html' href='http://mrugnayanee.blogspot.com/2010/04/blog-post.html' title='ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>9</thr:total></entry><entry><id>tag:blogger.com,1999:blog-714642904810204846.post-4524468706252055942</id><published>2010-03-19T19:44:00.006+05:30</published><updated>2010-03-23T14:32:28.138+05:30</updated><category scheme='http://www.blogger.com/atom/ns#' term='ಕವಿತೆ'/><title type='text'>ಜಯಲಕ್ಷ್ಮಿಯ ಕವಿತೆಗಳು</title><content type='html'>ಜಯಲಕ್ಷ್ಮೀ ನನ್ನ ಸ್ನೇಹಿತೆ. ತುಂಬ ಮಾತಾಡುವ ಲವಲವಿಕೆಯಿಂದಿರುವ ಅದರೆ ಸಣ್ಣಪುಟ್ಟ ವಿಶಯಗಳನ್ನೂ ಮನಸ್ಸಿಗೆ ಹಚ್ಚಿಕೊಂಡು ತಳಮಳಿಸುವ ಹುಡುಗಿ. ಹೊಸದಾಗಿ ಭೇಟಿಯಾದವರೊಂದಿಗೂ ಕೂಡಾ ಪಕ್ಕದಮನೆಯ ಹುಡುಗಿ ಅನ್ನಿಸಿಬಿಡುವಷ್ಟು ಸರಾಗ ಸರಾಗ. ಒಂದಷ್ಟು ಚಂದದ, ಕಾಡುವ, ಪ್ರಶ್ನೆಗಳನ್ನು ಹುಟ್ಟುಹಾಕುವ, ಕವಿತೆಗಳನ್ನ ಬರೆದಿದ್ದಾಳೆ. ಜಲಪಾತ ಎನ್ನುವ ಬ್ಲಾಗ್ ಒಂದನ್ನು ತೆರೆದಿದ್ದಾಳೆ. ಜಲಪಾತ ಅನ್ನೋ ಹೆಸರೇ ಯಾಕೆ ಎಂದು ಕೇಳಿದರೆ ’ನಾನೂ ಜಲಪಾತದಂತೆ ಕಣೇ ಒಮ್ಮೆ ಉಕ್ಕಿ ಹರಿದರೆ, ಇನ್ನೊಮ್ಮೆ ಬರಡು ಮೊಗದೊಮ್ಮೆ ಭೋಗರೆತ ಇನ್ಯಾವಾಗಲೋ ತಣ್ಣನೆ ಹರಿಯುವ ಝರಿ’ ಅಂದಳು. &lt;a href="http://jalapaata.blogspot.com"&gt;jalapaata.blogspot.com&lt;/a&gt; ಇದು ಅವಳ ಬ್ಲಾಗ್ ವಿಳಾಸ. ಅವಳ ಕವಿತೆಗಳನ್ನು ಓದಿ ತಪ್ಪುಗಳನ್ನು ತಿದ್ದಿ ಸರಿಗಳನ್ನು ಗುರುತಿಸಿ finetune ಮಾಡಿದರೆ ಅವಳು ಇನ್ನೂ ಚಂದದ ಕವಿತೆಗಳನ್ನ ಬರೆಯುತ್ತಾಳೆ ಅನ್ನೋ ನಂಬಿಕೆ ನನ್ನದು. ಅವಳ ಜೊತೆ ನೀವಿರುತ್ತೀರಲ್ಲ..&lt;br /&gt;&lt;br /&gt;ನನಗೆ ತುಂಬ ಇಷ್ಟವಾದ ಅವಳ ಒಂದು ಕವಿತೆಯನ್ನ &lt;a style="color: rgb(255, 153, 0); font-weight: bold;" href="http://jalapaata.blogspot.com"&gt;ಇಲ್ಲಿ&lt;/a&gt; ಹಾಕಿದ್ದೇನೆ. ನಿಮಗೂ ಇಷ್ಟವಾಗಬಹುದು.&lt;br /&gt;&lt;br /&gt;&lt;br /&gt;ಅವಳಲ್ಲ&lt;br /&gt;&lt;br /&gt;ನಾನು ಆ ಹುಡುಗಿಯಲ್ಲ&lt;br /&gt;ನಾನು ನಿಮ್ಮ ಕಲ್ಪನೆಯೊಳಗಿಲ್ಲ&lt;br /&gt;ನನ್ನಲ್ಲಿ ಮಾತುಗಳಿಲ್ಲ... ನಿಮ್ಮನ್ನು ಮೆಚ್ಚಿಸಲು&lt;br /&gt;ನಾನು ನಿಮ್ಮ ಸೀತೆಯಾಗಲಿಲ್ಲ&lt;br /&gt;ತಲೆತಗ್ಗಿಸಿ ಗೊಂಡಾರಣ್ಯಕ್ಕೆ ನಡೆಯಲಿಲ್ಲ&lt;br /&gt;ನಿಮ್ಮ ಬೆನ್ನ ಹಿಂದೆ ನನಗಾಗಿ ಹುಡುಕಾಡಿದಿರಿ&lt;br /&gt;ನಿಮ್ಮ ಬಗಲಿಗೆ ಕಣ್ಣು ಹಾಯಿಸಲಿಲ್ಲ&lt;br /&gt;ನಿಮಗಿಷ್ಟ, ನಿಮ್ಮ ಬೆನ್ನ ಹಿಂದಿನ ಹೆಜ್ಜೆ&lt;br /&gt;ಆದರೆ ಹೆಜ್ಜೆಯಮೇಲೊಂದು ಹೆಜ್ಜೆ&lt;br /&gt;ಉಸುಕಿನಲ್ಲೊಂದು ಆಳದ ಗುರುತು&lt;br /&gt;ನಿಮಗೆ ಕಾಣಲೇ ಇಲ್ಲ&lt;br /&gt;&lt;br /&gt;ನಿಮ್ಮ ಕನಸೊಳಗೆ ನಾನು ಬರಲಿಲ್ಲವೆಂದಿರಿ&lt;br /&gt;ಕನಸುಗಣ್ಣಿನ ನನ್ನ ನೋಟಕೆ ನಿಮ್ಮ ನೋಟ ಬೆರೆಯಲಿಲ್ಲ&lt;br /&gt;ಬಾಗಿದ ಕಣ್ರೆಪ್ಪೆ ನಿಮಗೆ ಪ್ರಿಯವಾಗಿತು&lt;br /&gt;ನನ್ನ ಕಣ್ ಬಿಂಬವಾದ ನಿಮ್ಮ ಕನಸು&lt;br /&gt;ಕನಸು ತೋಯ್ದು ಹರಿದ ನಿರೀಕ್ಷೆಯ ಹನಿ&lt;br /&gt;ನಿಮ್ಮ ಕಲ್ಪನೆಯ ಹುಡುಕಾಟದಲಿ ಇಂಗಿಹೋಯಿತು&lt;br /&gt;ಅವಳು ಹುಡುಗಿಯೇ...? ಎಂಬ ನಿಮ್ಮ ಪ್ರಶ್ನೆಯೊಂದಿಗೆ...&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4524468706252055942?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4524468706252055942/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4524468706252055942' title='2 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4524468706252055942'/><link rel='self' type='application/atom+xml' href='http://www.blogger.com/feeds/714642904810204846/posts/default/4524468706252055942'/><link rel='alternate' type='text/html' href='http://mrugnayanee.blogspot.com/2010/03/blog-post_19.html' title='ಜಯಲಕ್ಷ್ಮಿಯ ಕವಿತೆಗಳು'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>2</thr:total></entry><entry><id>tag:blogger.com,1999:blog-714642904810204846.post-5971476345349364797</id><published>2010-02-28T08:46:00.000+05:30</published><updated>2010-03-01T20:01:13.700+05:30</updated><title type='text'>ಹೊರಟು ನಿಂತ ಅವಳಿಗೆ ...</title><content type='html'>ಹೊರಟು ನಿಂತ ಹುಡುಗೀ,&lt;br /&gt;&lt;br /&gt;WHEN we two parted   &lt;br /&gt;  In silence and tears,   &lt;br /&gt;Half broken-hearted   &lt;br /&gt;  To sever for years…&lt;br /&gt;&lt;br /&gt;   &lt;br /&gt;… If I should meet thee   &lt;br /&gt;  After long years,  &lt;br /&gt;How should I greet thee?   &lt;br /&gt;  With silence and tears.   &lt;br /&gt;  &lt;br /&gt;ಈ ಸಾಲುಗಳನ್ನ ಬಳಸಿಕೊಳ್ಳದೆ ನಾನು ಹೇಳಬೇಕಾದ್ದನ್ನು ಶುರು ಮಾಡಲು ಸಾಧ್ಯವೇ ಇಲ್ಲವೇನೊ ? ಬೈರನ್ ಕವನದ ಸಾಲುಗಳಿವು. ಅವರು ಬೇರೆಯಾಗಿದ್ದಾರೆ, ಅವಳೇ ಬಿಟ್ಟುಹೋಗಿದ್ದಾಳ? ಇವನು ಇನ್ನು ಜೊತೆಗಿರೋಕ್ಕಾಗಲ್ಲಾ ಬೇರೆಬೇರೆಯಾಗೋಣ ಅಂದಿದ್ದಾನ? ಅಥವ ಇಷ್ಟು ದಿನ ಆದದ್ದಾಯಿತು ಇನ್ನು ನಮ್ಮ ದಾರಿ ನಮಗೆ ಅಂತ ಮಾತಾಡಿಕೊಂಡು ಅಗಲಿದ್ದಾರ? ಅದನ್ನೆಲ್ಲಾ ಊಹಿಸುತ್ತಾ ಕೂತುಕೊಳ್ಳಬಹುದು, ಆದರೆ ಕವಿ ಬೇರೆಯಾದ ಕ್ಷಣದ ಬಗ್ಗೆ ನೆನೆಸಿಕೊಂಳ್ಳುತ್ತಾ ಈಗಿನ ತನ್ನ ಸ್ಥಿತಿಯ ಬಗ್ಗೆ ಹೇಳುತ್ತಾನೆ. ಹೇಳುತ್ತಾನೆ ಏನು ನೋವಿನಲ್ಲಿ ಮಾತಾಡುತ್ತಾನೆ ಅವನಿಗೇನೋ ನಂಬಿಕೆ ಮುಂದೆ ಭೇಟಿಯಾಗುತ್ತೇವೆ, ಆಗ ಅವಳ ಪಕ್ಕ ನಾನಿರಬೇಕಾದ ಜಾಗದಲ್ಲಿ ಇನ್ಯಾರೋ ಇರುತ್ತಾನೆ ಅನ್ನುವುದೂ ತಿಳಿದಿದೆ. ಹಾಗೆ ಭೇಟಿಯಾದಾಗ ಹೇಗೆ ಮಾತಾಡಿಸಲೇ ನಿನ್ನ? ‘With silence and tears?’ ಅಂತ ಪ್ರಶ್ನೆಯಾಗುತ್ತಾನೆ ಅವನು.&lt;br /&gt;&lt;br /&gt;ಹಿಂದಿನ ಕಾಲದ ಅಸಫಲ ಪ್ರೀತಿಗಳು ಹಾಗೇ ಇದ್ದವು. ಆಗ ಇದ್ದ ಸಾವಿರಾರು ಅಡೆತಡೆಗಳ ನಡುವೆಯೂ ಪ್ರೀತಿ ಚಿಮ್ಮುತ್ತಿತ್ತಲ್ಲಾ ಆಶ್ಚರ್ಯವಾಗುತ್ತೆ. ಬಡವ ಶ್ರೀಮಂತ ಮೇಲು ಜಾತಿ ಕೀಳು ಜಾತಿ ಅಪ್ಪ ಅಮ್ಮ ಸಮಾಜದ ಭಯ, ಯಾವುದೋ ಕೆಲಸದ ಮೇಲೆ ದೂರದ ಊರಿಗೆ ಹೋಗೋ ಹುಡುಗ ಎಷ್ಟು ದಿನವಾದರೂ ಬರದೇ ಇರೋದು ಇವೆಲ್ಲವುಗಳ ನಡುವೆಯೂ ಪ್ರೀತಿಸುತ್ತಿದ್ದರು. ಪ್ರೀತಿಸುವುದು ಮಾತ್ರವಲ್ಲ ಆ ಪ್ರೀತಿಯನ್ನ ಪಡೆದುಕೊಳ್ಳೋದೂ ಅಷ್ಟೇ ಕಷ್ಟದ್ದಾದ್ದರಿಂದ ‘ದೇವದಾಸ್ ಪಾರ್ವತಿ’ ಥರಹದ ಕಥೆಗಳು ಎಲ್ಲೆಲ್ಲೂ ಹರಡಿಕೊಂಡಿದ್ದವು. ಅವಳು ಹಿರಿಯರ ಒತ್ತಡವನ್ನು ಸಹಿಸಲಾರದೆ ಆತ್ಮಹತ್ಯೆ ಪ್ರಯತ್ನಗಳೆಲ್ಲಾ ವಿಫಲವಾಗಿ ಕೊನೆಗೆ ಭಾವನೆಗಳನ್ನೆಲ್ಲ ಬರಡು ಮಾಡಿಕೊಂಡು, ಯಾರೊಡನೆಯೋ ಜೀವನ ಸಾಗಿಸುತ್ತಿದ್ದಳು. ಇವನು ಮದುವೆಯೇ ಆಗದೇ ಅವಳ ನೆನಪಿನಲ್ಲೇ ಉಳಿದುಬಿಡುತ್ತಿದ್ದ. ಕೆಲವಷ್ಟು ಜನ ಬಿಟ್ಟಿರಲಾರದೆ ಜೊತೆಗಿರಲು ಬಿಡದ ಸಮಾಜವನ್ನೂ ಎದುರಿಸುವ ಧೈರ್ಯವಿಲ್ಲದೆ ಅಮರರಾಗುತ್ತಿದ್ದರು. ಅಂಥದ್ದರಲ್ಲೂ ಕೆಲವರು ಎದುರು ಹಾಕಿಕೊಂಡು ಬದುಕಿ ತೋರಿಸುತ್ತಿದ್ದರು.&lt;br /&gt;&lt;br /&gt;ಈಗ ಪ್ರೀತಿಸಿದವರು ಬೇರೆಯಾಗಲು ಕಾರಣಗಳನ್ನ ಹುಡುಕಿಕೊಂಡು ಹೋಗಬೇಕು. ಅಪ್ಪ ಅಮ್ಮ ಅಷ್ಟು ರಿಜಿಡ್ ಅಗಿಲ್ಲ, ಜಾತಿ ಅನ್ನೋದು ಕನ್ಸಿಡರ್ ಮಾಡ್ಬಹುದಾದ್ದಂಥ ವಿಷಯವೇ ಅಲ್ಲ, ಶ್ರೀಮಂತ ಬಡವ ಅನ್ನೋದು ಮುಖ್ಯವಾಗೋಲ್ಲ, ದೂರ ಇದ್ದರೆ ಫೋನು ಇಂಟರ್ನೆಟ್ ಇದೆ. &lt;br /&gt;ಲಷ್ಮೀನಾರಾಯಣ ಭಟ್ಟರ ಅಶ್ವಥ್ ಹಾಡಿದ &lt;br /&gt;&lt;br /&gt;ಹಿಂದೆ ಹೇಗೆ ಚಿಮ್ಮುತಿತ್ತು ಕಣ್ಣ ತುಂಬ ಪ್ರೀತಿ &lt;br /&gt;ಇಂದು ಯಾಕೆ ಜ್ವಲಿಸುತಿದೆ ಏನೋ ಶಂಕೆ ಭೀತಿ &lt;br /&gt;&lt;br /&gt;ಸಾಲುಗಳು ನೆನಪಾಗುತ್ತಿವೆ. ಅವರು ಹಾಡಿದ್ದು ಪ್ರೇಮಿಗಳ ಎರಡು ಸ್ಥಿತಿಯ ಬಗ್ಗೆ ಅದು ಪ್ರೇಮದ ಸ್ಥಿತಿಯೂ ಆಗಿದೆಯಾ ಅಂತ ಅನುಮಾನ ನನಗೆ. ಅದೆಲ್ಲಾ ಹೋಗಲಿ ಬಿಡು, ಸಮಯ ಕಳೆಯುವುದಕ್ಕೆ, ಪ್ರೀತಿ ಅಂದರೆ ಇದೇನಾ ಅಂತ ಎಕ್ಪೆರಿಮೆಂಟ್ ಮಾಡೋದಕ್ಕೆ, ಎಲ್ಲರೂ ಪ್ರೀತಿಸುತ್ತಿದ್ದಾರೆ ನಾನೂ ಪ್ರೀತಿಸಬೇಕು ಅಂತಂದುಕೊಂಡು ಪ್ರೀತಿಸುವವರ ಬಗ್ಗೆ ಮಾತಾಡುವುದರಲ್ಲಿ ಅರ್ಥವಿಲ್ಲ ಕಣೇ. ಪ್ರೀತಿಸಿದವರೆಲ್ಲಾ ಮದುವೆಯಾಗಲೇಬೇಕಿಲ್ಲ, ಪ್ರೀತಿಯ ಅಂತ್ಯ ಮದುವೆಯಲ್ಲ ಅಂತೆಲ್ಲಾ ಮಾತಾಡುತ್ತೀವಲ್ಲಾ ಹಾಗಾದರೆ ಹೇಳೇ ಸಖಿ ಪ್ರೀತಿಯಂದರೇನು? ಆ ಕ್ಷಣದ ಆನಂದವಾ, ಒಟ್ಟಿಗೆ ಇದ್ದಷ್ಟು ದಿನದ ಅನುಭವಗಳಾ? ಇಲ್ಲಾ ಸಂತೃಪ್ತ ಕಾಮವಾ? ಇದೆಲ್ಲಾ ಆದಮೇಲೆ ‘move on’ ಅಂದು ಬೇರೆಯಾಗುವುದಾ ಅಂತ ಅರ್ಥ ಮಾಡಿಕೊಳ್ಳಲು ತಿಣುಕಾಡುತ್ತಿದ್ದೇನೆ. ‘ಮೂವ್ ಆನ್’ ಪದದ ಅರ್ಥವೇ ಬೇರೆ ಅಲ್ಲವಾ? ನಿಜವಾದ ಪ್ರೀತಿಯೇ ಇಲ್ಲದಿದ್ದರೆ ಮೂವ್ ಆಗುವುದು ಎಲ್ಲಿಗೆ? ಪ್ರೀತಿ ಅನ್ನೊದು ಬರೀ ಇಷ್ಟೇ ಅಲ್ಲ ಅನ್ನೋದಂತೂ ಗೊತ್ತು. ಇಂಥಾ ಪ್ರೀತಿಗೆ ಮೂವ್ ಆನ್ ಅನ್ನೋ ಪದವೂ ಬೇಕಿಲ್ಲ. ಒಂದು ಜಾಗದಲ್ಲಿದ್ದರಲ್ಲವೇ ಬೇರೆ ಕಡೆಗೆ ಹೋಗೋದು? &lt;br /&gt;&lt;br /&gt;ಮೊದಲಿನ ಹಾಗೆ ಈಗ ಯಾರು ಪ್ರೀತಿಸುತ್ತಾರೋ, ಔಟ್ ಡೇಟೆಡ್ ಥರ ಮಾತಾಡಬೇಡ ಅನ್ನಬಹುದು ನೀನು. ಪ್ರೀತಿಗೆ ಮೊದಲು ಕೊನೆ ಇದೆಯಾ ಅಂತ ಕೇಳಿಕೊಳ್ಳುತ್ತೇನೆ ನಾನು. ನನ್ನ ತುಂಬೆಲ್ಲಾ ಬರೀ ಪ್ರಶ್ನೆಗಳು. ಹಿಂದಿನ ಕಾಲದ ಪ್ರೇಮಿಗಳಿಗೆ ಆಪ್ಶನ್ಸ್‌ಸೇ ಇರಲಿಲ್ಲ. ಅವರ ಜಗತ್ತು ಇಷ್ಟು ವಿಶಾಲವಾಗಿರಲಿಲ್ಲ. ಅಲ್ಲಿ ಇಷ್ಟು ವೈವಿಧ್ಯಗಳಿರಲಿಲ್ಲ. ನಮಗೆ ನೂರಾರು ದಾರಿಗಳು. ಸಾವಿರಾರು ಆಯ್ಕೆಗಳು ದಿನಾ ಯಾರ್ಯಾರನ್ನೋ ಭೇಟಿಯಾಗುತ್ತೇವೆ ಒಬ್ಬರಿಗಿಂತ ಇನ್ನೊಬ್ಬರು ಭಿನ್ನ ಒಬಳ್ಳಿಗಿಂತ ಇನ್ನೊಬ್ಬಳು ಸುರಸುಂದರಿ, ಮತ್ತೊಬ್ಬ ಮತ್ತಷ್ಟು ಬುದ್ದಿವಂತ, ಇನ್ಯಾರೋ ಬುದ್ದಿವಂತೆ, ಮತ್ತೆಲ್ಲೋ ಪ್ರಭುದ್ದ ಹುಡುಗ. ಪ್ರೀತಿಮಾಡಿದ ಮೇಲೆ ತಪ್ಪು ಮಾಡಿದೆನಾ ಅನ್ನಿಸತೊಡಗುತ್ತದೆ. ಅವನಿಗಿಂತ ಇನ್ನೊಬ್ಬ ವಾಸಿ ಅನ್ನಿಸುತ್ತನೆ. ಇವಳಾಗಿದ್ದರೆ ಇನ್ನೂ ಹೆಚ್ಚು ಅರ್ಥಮಾಡಿಕೊಳ್ಳುತ್ತಾಳೇನೋ? ಕೇಳಿಕೊಳ್ಳುತ್ತದೆ ಮನಸ್ಸು. ಆಯ್ಕೆಗಳು ಕಂಡ ತಕ್ಷಣ ಪ್ರೀತಿ ಬದಲಾಗುವುದಾದರೆ ಅದು ಪ್ರೀತಿಯೇ ಅಲ್ಲ.&lt;br /&gt;&lt;br /&gt;‘love is not love which alters when alteration finds’&lt;br /&gt; &lt;br /&gt;ನಾವು ಯಾರನ್ನಾದರೂ ಪ್ರೀತಿಸಿದ್ದೇ ಆದರೆ, ಅವರನ್ನ ನಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಬೆಳಬೇಕು ಕಣೇ. ‘ನೀನು ಇದ್ದಂತೆ ನಿನ್ನ ಪ್ರೀತಿಸುತ್ತೇನೆ ನೀನೇನು ಬದಲಾಗಬೇಕಿಲ್ಲ’ ಅನ್ನೋದೆಲ್ಲಾ ಬೊಗಳೆ. ನಾನು ನಿರೀಕ್ಷಿಸಿದಂಥ ಹುಡುಗಿಯನ್ನ ಪ್ರೀತಿಸಿದ್ದರೆ ಅವಳು ಬದಲಾಗಬೇಕಿಲ್ಲ ಹೌದು. ನೀನು ಪ್ರೀತಿಸೋ ಹುಡುಗ ನಿನ್ನ ಇಷ್ಟದಂತಿದ್ದರೆ, ನೀನು ಹಾಗಿರೋ ಹೀಗಿರೋ ಅಂತೆಲ್ಲಾ ಹೇಳಬೇಕಿಲ್ಲ. ಹಂಗಿಲ್ಲದೇ ಹೋದರೇ ಅವರಿಗೆ ಹಿಂಸೆ ಮಾಡದೆ ಅವರನ್ನು ಬದಲಾಯಿಸಲು ಪ್ರಯತ್ನಿಸಬೇಕು. ಪ್ರೀತಿ ಏನನ್ನೂ ಬದಲಾಯಿಸುತ್ತದೆ ಅನ್ನೋದನ್ನ ನಂಬುತ್ತೀಯಲ್ಲ. ಅವಳು ಹೆದರಿಕೆ ಸ್ವಭಾವದವಳಾ ಲೆಟ್ ಹಿಂ ಮೇಕ್ ಹರ್ ಟಫ್, ಅವನಿಗೆ ಇನ್ಸೆಕ್ಯುರಿಟಿಯಾ ಇವಳು ನಂಬಿಕೆ ತುಂಬಲಿ, ಅವಳು ಪೊಸೆಸ್ಸಿವಾ? ಟೀಚ್ ಹರ್ ಹೌ ಟು ಗಿವ್ ಸ್ಪೇಸ್. ಅವನಿಗೆ ಕೀಳರಿಮೆಯಾ? ನಾಟ್ ಹಾಪನಿಂಗ್ ಅನ್ನಿಸುತ್ತಾನ? ತಲೆಚಿಟ್ಟು ಹಿಡಿಯುವಂತೆ ಬಡ ಬಡ ಮಾತಾಡುತ್ತಾಳ? ಅಸಾಧ್ಯ ಸಿಟ್ಟಾ? ಪ್ರತಿಯೊಂದನ್ನು ನಿಭಾಯಿಸುವುದಕ್ಕೆ ದಾರಿಗಳಿವೆ. ಪ್ರೀತಿಯಲ್ಲಿ ನಿಷ್ಟೆ, ನಂಬಿಕೆ, ಕಾಳಜಿ, ಒಟ್ಟಿಗೆ ಬೆಳೆಯುವ, ಹಿರಿದಾಗುವ, ನಂಗೆ ಅರವತ್ತು ವಷವಾದಾಗಲೂ ನಿನ್ನ ತೊಡೆಯಮೇಲೆ ಹೀಗೇ ಮಲಗಬೇಕು ಕಣೋ ಅನ್ನೋ ಕನಸುಗಳು ಉಸಿರನಿಡುವೆ ಹೆಸರಕೊಡುವೆ ಅನ್ನುವ ಸಂಬ್ರಮ ಎಲ್ಲವೂ ಇವತ್ತಿಗೂ ನಿಜ. ಹಾಗೆ ಪ್ರೀತಿಯನ್ನ ಕೊನೆವರೆಗೂ ಕಾಯ್ದುಕೊಂಡಾಗಲೇ ನಾವು ಕನಸಿದ್ದೆಲ್ಲಾ ನಿಜವಾಗುತ್ತದೆ, ಪ್ರೀತಿಸಿದಮೇಲೆ ಪ್ರೀತಿಯನ್ನ ಕಾಪಿಟ್ಟುಕೊಳ್ಳುವ, ಅದನ್ನ ಹಿತವಾಗಿಬೆಳೆಸಿ, ಅವರಜೊತೆಗಿರುವ ಕನಸಿರುವವರು ಇದ್ದಾರೆ, ಪ್ರೀತಿ ಇದ್ದರೆ ಹಾಗೇ ಇರಬೇಕು.&lt;br /&gt;&lt;br /&gt;ಇಶ್ಟೆಲ್ಲಾ ಆದರೂ ಇನ್ನೇನೋ ಆಗಿಬಿಡತ್ತೆ. ಲವ್ ಜಿಹಾದ್ ಅನ್ನೋ ಶಬ್ಧ ಎಲ್ಲಿಂದಲೋ ಬಾಂಬ್‌ನಂತೆ ಎರಗುತ್ತದೆ, ಒಬ್ಬೊಬ್ಬ ಅಮ್ಮಂದಿರು ಮಕ್ಕಳ ಪ್ರೀತಿ ಪ್ರೇಮವನ್ನ ಸಹಿಸದೆ ತೀರ ತಾವೇ ಸಾವಿನ ಕದ ತಟ್ಟಲ ಹೋಗುತ್ತಾರೆ, ನಾವೆಷ್ಟೇ ನಿಷ್ಟೆಯಿಂದ ಪ್ರೀತಿಸಿದರೂ ಅಲ್ಲೊಬ್ಬಳು ಬೇಕಂತಲೇ ಬಿಟ್ಟು ಹೋಗುತ್ತಾಳೆ, ಇನ್ನೊಬ್ಬನಿಗೆ ಪ್ರೀತಿ ಪ್ರೇಮ ಯಾಕೋ ಸಾಕು ಅನ್ನಿಸಿ ಸನ್ಯಾಸತ್ವದ ಕಡೆ ವಾಲುತ್ತಾನೆ. ಬಾ ನಿನ್ನ ನೋಡಿಕೊಳ್ಳುತ್ತೇನೆ ಅಂತ ಕರೆದುಕೊಂಡು ಹೋದವ ಅವಳಿಗೆ ಸರಿಯಾದ ನೆಲೆಯನ್ನೇ ಕಲ್ಪಿಸುವುದಿಲ್ಲ. ಇನ್ನು ಕೆಲವರಿಗೆ ಎಲ್ಲವೂ ಬೇಕು ಅವರೂ ನಿಮ್ಮನ್ನ ಪ್ರೀತಿಸುತ್ತಾರೆ ಆದರೆ ಕೊನೆಯ ಕ್ಷಣದಲ್ಲಿ ಕಮಿಟ್ಮೆಂಟ್ ಬೇಡ ಅನ್ನಿಸಿಬಿಡತ್ತೆ ಹೀಗೆಲ್ಲಾ ಆಗಿ ಪ್ರೀತಿ ಸುಳ್ಳು ಅನ್ನಿಸತೊಡಗುತ್ತಲ್ಲ ಅದು ನರಕ ಯಾತನೆ. ಬೇರೇನೂ ಬೇಡಾ ಅನ್ನಿಸಿ, ಕೆಲವರು ಜೀವನದಿಂದ ವಿಮುಖರಾದರೆ, ಇನ್ನೊಂದಷ್ಟು ಜನ ಸಾವೇ ಮೇಲು ಅಂದುಕೊಳ್ಳುತ್ತಾರೆ, ಮತ್ಯಾರೋ ಬದುಕು, ಸಮಾಜ ಅವರನ್ನು ತಾಳಲಾರದಂಥ ಸ್ಥಿತಿಗೆ ತಳ್ಳಿಕೊಳ್ಳುತ್ತಾರೆ. ಇದ್ಯಾವುದೂ ಆಗಬಾರದು ನಮ್ಮನ್ನು ಬಿಟ್ಟು ಹೋದವರನ್ನ ನಾವು ಸೇರಲಾರದವರನ್ನ ನಾವು ಪ್ರೀತಿಸಿದ್ದಂತೂ ಸತ್ಯ. ಹಾಗೆ ನಿಶ್ಕಲ್ಮತೆಯಿಂದ ಪ್ರೀತಿಸಲು ನಮಗೆ ಸಾಧ್ಯವಾಯಿತಲ್ಲ, ಅದು ನಮ್ಮ ಖುಷಿ. ಅಷ್ಟು ನಮ್ಮಲ್ಲಿರಲಿ, ಸಿಗಲಾರದವರ ಬಗ್ಗೆ ಕಾತರ, ಕಾದ ಕಾವ ಬೇಸರ ಬೇಡ. ಇಂಥ ಸಂದರ್ಭಗಳಲ್ಲಿ ‘ವಿ ಶುಡ್ ಮೂವ್ ಆನ್’ ನಮ್ಮನ್ನು ಇವೆಲ್ಲವುಗಳಿಂದ ಹೊರತರುವ ಪ್ರಯತ್ನಗಳನ್ನು ಮಾಡಬೇಕು. ನಮಗೆ ಖುಷಿ ತರುವಂಥದ್ದನ್ನು ಕಂಡುಕೊಳ್ಳಬೇಕು, ಹಾಗೇ ಬಾಳಬೇಕು. ಇಂಥದೇನಾದರೂ ಆದಾಗ ಅದರಿಂದ ಹೊರಬರುವ ವಿಧಾನಗಳು ನಮ್ಮ ಡಿಫೆ ನ್ಸ್ ಮೆಖ್ಯಾನಿಸಮ್‌ನಲ್ಲೇ ಇದೆ. ಅದನ್ನ ಹುಡುಕಿದರೆ ಸಾಕು ನಾನೇನೂ ಹೇಳ್ಬೇಕಿಲ್ಲ.&lt;br /&gt;&lt;br /&gt;ಅದಕ್ಕೇ ಹುಡುಗಿ ಅವನನ್ನು ನೀನು ಬಿಟ್ಟುಬರಬಾರದು, ಯಾವುದಾದರೂ ಸಂಭಂಧದಿಂದ ಕಳಚಿಕೊಳ್ಳುವುದು ಸುಲಭ ಅದನ್ನು ನಿಷ್ಟೆಯಿಂದ ಪ್ರೀತಿಯಿಂದ ನಿಭಾಯಿಸುವುದು ನಿನ್ನಲ್ಲಿ ಜೀವನೋತ್ಸಾಹವನ್ನ ತುಂಬುತ್ತದೆ. ಅವನಿಗೆ ನಿನ್ನ ಪ್ರೀತಿಯನ್ನ ಅರ್ಥ ಮಾಡಿಸು, ಅವನನ್ನು ಅಷ್ಟು ಪ್ರೀತಿಸುವ ನೀನು ಸುಮ್ಮಸುಮ್ಮನೆ ಚಿಕ್ಕ ಕಾರಣಗಳಿಗೆಲ್ಲಾ ಬಿಟ್ಟು ಬರಬಾರದು. ನೀನು ಬಿಟ್ಟು ಬರುತ್ತೇನೆ ಎಂದು ಹೊರಟರೆ ಅವನು ಖಂಡಿತಾ ಹೇಳಿ ಹೋಗು ಕಾರಣ ಎಂದು ಕೇಳಿಯೇ ಕೇಳುತ್ತಾನೆ. ಹೇಳಲು ನಿನ್ನಲ್ಲಿ &lt;br /&gt;ಕಾರಣಗಳಿವೆಯಾ, ಕೇಳಿಕೋ. &lt;br /&gt;ಬಹುಶಃ ನಿನ್ನಲ್ಲಿ ಹೇಳಬಹುದಾದ, ಅವನನ್ನು ಒಪ್ಪಿಸಬಹುದಾದ ಕಾರಣಗಳೇ ಇರುವುದಿಲ್ಲ.&lt;br /&gt;ಯಾಕೆಂದರೆ,&lt;br /&gt;&lt;br /&gt;ಒಂದುಹೆಣ್ಣಿಗೊಂದುಗಂಡು &lt;br /&gt;ಹೇಗೋ ಸೇರಿ ಹೊಂದಿಕೊಂಡು &lt;br /&gt;ಕಾಣದೊಂದ ಕನಸ ಕಂಡು&lt;br /&gt;ದುಃಖ ಹಗುರ ಎನುತಿರೆ&lt;br /&gt;ಪ್ರೇಮವೆನಲು ಹಾಸ್ಯವೇ?&lt;br /&gt;&lt;br /&gt;ಇಂತಿ,&lt;br /&gt;ನಿನ್ನೊಳಗಿನ ನೀನು&lt;br /&gt;&lt;br /&gt;(ವಿಜಯ ಕರ್ನಾಟಕದಲ್ಲಿ ಫೆಬ್ರವರಿ 14ರಂದು ಪ್ರಕಟವಾದ ಬರಹ)&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-5971476345349364797?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/5971476345349364797/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=5971476345349364797' title='6 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/5971476345349364797'/><link rel='self' type='application/atom+xml' href='http://www.blogger.com/feeds/714642904810204846/posts/default/5971476345349364797'/><link rel='alternate' type='text/html' href='http://mrugnayanee.blogspot.com/2010/03/blog-post.html' title='ಹೊರಟು ನಿಂತ ಅವಳಿಗೆ ...'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>6</thr:total></entry><entry><id>tag:blogger.com,1999:blog-714642904810204846.post-4821500792131750259</id><published>2009-11-17T02:02:00.001+05:30</published><updated>2009-11-17T09:26:22.321+05:30</updated><title type='text'>ಒಂದು ಸೂಜಿಯ ಕಣ್ಣು</title><content type='html'>‘ಈ ಸರ್ತಿ ತಪ್ಸ್ದೆ ಬಾ. ರಥ-ಪ್ರತಿಷ್ಠೆ ಮತ್ತೆ ಮತ್ತೆ ಆಗಲ್ಲ. ಮಕ್ಕಳಿಗೆ ರಜ ಹಾಕ್ಸು ಆ ಚಿಕ್ಕ್-ಚಿಕ್ಕ ಕ್ಲಾಸುಗಳಿಗೆ ಏನಾಗತ್ತೆ? ನಾ ಅಳಿಯಂದ್ರಿಗೂ ಫೋನ್ ಮಾಡಿ ಹೇಳ್ತಿನಿ’ ಅಂತ ಅಪ್ಪ ಸ್ವಲ್ಪ ಗದರಿಸಿಯೇ ಹೇಳಿದ್ದರು. ಅಲ್ಲದೆ ನನಗೂ ಹೋಗಬೇಕು ಅನ್ನಿಸಿದ್ದರಿಂದ ಬ್ಯಾಂಕಿಗೆ ರಜ ಹಾಕಿ ಮಕ್ಕಳಿಬ್ಬರನ್ನೂ ಕರದುಕೊಂಡು ಊರಿಗೆ ಬಂದಿದ್ದೆ. &lt;br /&gt;ಇವನು ‘ಅವತ್ತೊಂದು ದಿನ ಬಂದು ಹೋಗ್ತಿನಿ ಮೊದ್ಲೇ ಬರೋಕ್ಕೆ ಕಷ್ಟ’ ಅಂದಿದ್ದ. ನನಗಂತೂ ಯಾಕೋ ಊರಿಗೆ ಹೋದರೆ ಸಾಕು ಅನ್ನಿಸಿಬಿಟ್ಟಿತ್ತು. ಹಾಗೆ ಅನ್ನಿಸಿದ್ದು ಅಪ್ಪ ಫೋನು ಮಾಡಿ ಕರೆದಮೇಲೆ, ಅದಕ್ಕೆ ಮೊದಲೇ ಎಲ್ಲಾದರೂ ದೂರ ಹೋಗಬೇಕು ಅನ್ನಿಸುತ್ತಿತ್ತು. ಭಾನುವಾರದ ಔಟಿಂಗ್ಗಳು, ಆಗೀಗ ಚಿಕ್ಕ ಪುಟ್ಟ ಟೂರುಗಳು, ಸಿನೆಮಾ, ಪುಸ್ತಕಗಳು, ಸ್ನೇಹಿತರು, ಬ್ಯಾಂಕಿನ ಕೆಲಸ ಎಲ್ಲವೂ ಏಕತಾನತೆ. ಖುಷಿ ಸಂತೋಷಗಳೂ ಏಕತಾನತೆಯನ್ನ ತರಬಹುದಾ? ಬಿ.ಎಯಲ್ಲಿ ನಿಯೋಕ್ಲಾಸಿಕ್ ಕಾಲದ ಪದ್ಯಗಳನ್ನು ಮಾಡುತ್ತಾ ‘ಎಲಿಜಬಬತಿಯನ್ ಏಜ್ ನಲ್ಲಿ ಎಲ್ಲೆಲ್ಲೂ ಸುಖ, ಸಂತೋಷ, ಸ್ವೇಚ್ಚೆ ಎಷ್ಟು ಹೆಚ್ಚಾಯಿತೆಂದರೆ ಕೊನೆಕೊನೆಗೆ ಜನಕ್ಕೆ ಇದೆಲ್ಲಾ ಸಾಕು ಜೀವನದಲ್ಲಿ ಏನಾದರೂ ಕಟ್ಟುಪಾಡುಗಳಿರಬೇಕು ಅಂದುಕೊಂಡು ಪ್ಯೂರಿಟನ್ ಆಗಲು ಹೊರಟರು, ತಮ್ಮ ಜೀವನದಲ್ಲಿ ಒಂದಷ್ಟು ನೀತಿ ನಿಯಮಗಳಿರಬೇಕು ಅಂದುಕೊಂಡವರಿಗೆ ಕಾವ್ಯದಲ್ಲೂ ನೀತಿನಿಯಮಗಳಿರಬೇಕು ಅನ್ನಿಸಿತು, ಅದಕ್ಕೆ ಆಗಿನ ಕಾವ್ಯದಲ್ಲಿ ಕಲ್ಪನೆಗಿಂತ ಬುದ್ದಿವಂತಿಕೆಗೆ, ಭಾವನೆಗಳಿಗಿಂತ ಪದಪುಂಜಗಳಿಗೆ, ವಿಷಯಕ್ಕಿಂತ ಬರೆಯುವ ರೀತಿಗೆ ಹೆಚ್ಚು ಪ್ರಾಧಾನ್ಯತೆ..’ ಎಂದು ಪಾಟೀಲ್ ಸರ್ ಹೇಳುತ್ತಿದ್ದ ಮಾತುಗಳು ನೆನಪಾಗುತ್ತಿವೆ.&lt;br /&gt;ಊರಿಗೆ ಬಂದ ಸ್ವಲ್ಪ ಹೊತ್ತಿನಲ್ಲೇ ನನ್ನ ಚಿಕ್ಕ ವಯಸ್ಸಿನ ಬುದ್ದಿ ಮತ್ತೆ ಜಾಗೃತವಾಯಿತು. ಊರು ತಿರುಗಲು ಹೊರಟೆ, ಎಂದಿನಂತೆ ಗಂಡುಬೀರಿ ಥರ. ಮಕ್ಕಳು ನನಗಿಂತಾ ಮೊದಲೇ ಎಲ್ಲೋ ಆಡಲು ಹೋಗಾಗಿತ್ತು. ತೇರು ಮನೆಯ ಅಂಗಡಿಯ ಬಳಿ ನನ್ನ ಜೊತೆಯವರು, ನನಗಿಂತಾ ವಯಸ್ಸಿನಲ್ಲಿ ಸ್ವಲ್ಪ ದೊಡ್ಡವರಾದ ಅಣ್ಣಂದಿರೆಲ್ಲ ಕಗ್ಗ ಹಾಕುತ್ತಾ ಕೂತಿದ್ದರು. ಅವರು ನಗುತ್ತಿರುವುದು, ಬೀದಿಯ ಈಚೆ ಬದಿಗೂ ಕೇಳಿಸುತ್ತಿತ್ತು. &lt;br /&gt;‘ಓ.. ಶ್ರೀದೇವಿ! ಆಗ್ಲೇ ಬಂದ ಆಟೋ ನಿಮ್ ಮನೆ ಕಡೆ ಹೋಗೋದನ್ನ ನೋಡ್ದೆ. ನೀನೇ ಇರ್ಬೇಕು ಅನ್ಸಿತ್ತು. ಇಷ್ಟ್ ಲೇಟಾಗ್ ಬರದಾ? ಬಾ ಕೂತ್ಕೊ’ ಒಳಗೆ ಕರೆದೆ ಕೇಶವ. ಎಲ್ಲರನ್ನೂ ಮಾತಾಡಿಸುತ್ತಾ ಒಳಗೆ ಹೋದೆ. ಕೇಶವನ ಹೆಂಡತಿ ವೈದೇಹಿ ಮತ್ತು ನಾನು ಒಳಗಿಂದಲೇ ಈ ಗಂಡಸರ ಮಾತುಗಳನ್ನು ಕೇಳಿಸಿಕೊಂಡು ನಗುತ್ತಿದ್ದೆವು. ಮೊದಲಿನ ಹಾಗೆ ಅವರುಗಳ ಮಧ್ಯೆ ಹೋಗಿ ಕೂರೋದಕ್ಕೆ ಆಗೋದೇ ಇಲ್ಲವಲ್ಲ ಅನ್ನಿಸಿತು. ‘ಮೂರ್ತಿ, ಜನ್ನ, ನಾಣಿ ಎಲ್ಲಾ ಎಲ್ಲಿ ಕಾಣಿಸ್ತಾ ಇಲ್ಲ’ ಕೇಳಿದೆ. ನಾಣಿ ಇಲ್ಲೇ ಕೂತಿದ್ದ ಮೂರ್ತಿ ಬಂದಮೇಲೆ ಅವರಿಬ್ಬರೂ ಏನೇನೋ ಫಿಲಾಸಫಿಕಲ್ ಚರ್ಚೆಗಳಲ್ಲಿ ಮುಳುಗಿ ಹೋಗಿ, ಹಾಗೇ ಮಾತಾಡಿಕೊಂಡು ಎದ್ದು ಹೋದರು ಎಂದ ಕೇಶವ, ನಿನ್ನ ಬೆಸ್ಟ್ ಫ್ರೆಂಡ್ ಜನ್ನಂಗೆ ಸ್ಕೂಲಲ್ಲಿ ತುಂಬಾ ಕೆಲ್ಸ ಅಂತೆ, “ಅಯ್ಯೋ ನಿಂಗೊತ್ತಿಲ್ಲ ವೆಂಕಿ, ಈ ಸಲ ಗಾಂಧಿ ಜಯಂತಿಗೆ ವಿಶೇಷ ಕಾರ್ಯಕ್ರಮಗಳನ್ನೆಲ್ಲಾ ಹಮ್ಮಿಕೊಂಡಿದೀವಿ, ಅದ್ರ ಎಲ್ಲಾ ಜವಬ್ದಾರಿನೂ ನಂಗೇ ವಹಿಸಿದಾರೆ ಹೆಡ್ಮಾಷ್ಟ್ರು. ಅಕ್ಟೋಬರ್ ಎರಡಕ್ಕೆ ಇನ್ನು ಎರಡೇ ವಾರ ಉಳ್ದಿರೋದು. ನಾನು ರಥಪ್ರತಿಷ್ಠೆ ದಿವ್ಸ ರಜ ಹಾಕಿಬರ್ತಿನಿ, ನೀವು ಆರಾಮಾಗಿ ಇದ್ದೋಗಿ” ಜನ್ನನ ಮಾತುಗಳನ್ನ ಅದೇ ದಾಟಿಯಲ್ಲಿ ಅನುಕರಿಸುತ್ತಾ ಹೇಳಿದ ವೆಂಕಿಯ ಮಾತಿಗೆ ಎಲ್ಲರೂ ನಕ್ಕರು. &lt;br /&gt;ಕೇಶವ ವ್ಯಾಪಾರ ಮಾಡುವುದನ್ನೇ ನಾನು ಗಮನಿಸುತ್ತಿದ್ದೆ, ಅಂಗಡಿಗೆ ಬಂದವರಿಗೆ ತಕ್ಕಡಿಗೆ ತೊಗರಿಬೇಳೆ, ಬೆಲ್ಲ, ಅಕ್ಕಿ, ರವೆ ಇಂಥವನ್ನು ಹಾಕುವಾಗ ಎಷ್ಟು ಜೋರಾಗಿ ಹಾಕುತ್ತಿದ್ದ ಎಂದರೆ ಅವನು ಹಾಕಿದ ರಭಸಕ್ಕೆ ಬೊಟ್ಟಿರುವ ಭಾಗಕ್ಕಿಂತಾ ಸಾಮಾನಿರುವ ಭಾಗವೇ ಕೆಳಗೆ ಹೋಗಿ ವ್ಯಾಪಾರ ಮಾಡಲು ಬಂದವರಲ್ಲಿ ಆ ಕ್ಷಣಕ್ಕೆ ಕೇಶವನೇ ಮೋಸಹೋಗುತ್ತಿದ್ದಾನೆಂಬ ಭ್ರಮೆ ಹುಟ್ಟುವಂತೆ ಮಾಡಿ, ತಕ್ಷಣವೇ ಆ ಸಾಮಾನನ್ನು ಪ್ಲಾಸ್ಟಿಕ್ ಕವರಿಗೆ ಸುರಿದು ಮುಗ್ದವಾದ ಮುಖಭಾವದಲ್ಲಿ ನಿಲ್ಲುತ್ತಿದ್ದ. ಹೀಗೆ ಪ್ರತಿ ಬಾರಿಯೂ ಅಷ್ಟೋ ಇಷ್ಟೋ ಉಳಿಸುತ್ತಿದ್ದ ಹಾಗೂ ಒಟ್ಟು ಮೊತ್ತಕ್ಕಿಂತ ಕೊಂಚ ಕಡಿಮೆಯೇ ತೆಗೆದುಕೊಂಡು ಒಳ್ಳೆಯವನಂತೆ ಎಲ್ಲರಿಗೂ ಕಾಣಿಸುತ್ತಿದ್ದ.&lt;br /&gt;ಅವನನ್ನೇ ಗಮನಿಸುತ್ತಾ ಕೂತಿದ್ದಾಗ, ದೂರದಲ್ಲಿ ಹೆಂಗಸೊಬ್ಬಳು ಬರುವುದು ಕಣಿಸಿತು, “ಅಲ್ಲಿ ಬರ್ತಿರೋದು ದೇಜಿ ಹೆಂಡ್ತಿ ತಾನೆ?” ಕೇಳಿದೆ. “ಅಯ್ಯೋ ಮತ್ತೆ ಬಂದ್ಲೇನೇ? ಈ ದೇಜಿದು ಎಂಟುನೂರು ರುಪಾಯ್ ಸಾಲ ಆಗಿದೆ ಒಂದು ದಮ್ಮಡಿ ವಾಪಸ್ ಬಂದಿಲ್ಲ. ಅವ್ನು ಬಂದ್ರೆ ಸಾಲ ಕೊಡಲ್ಲ ಅಂತ ಈಗ ಹೆಂಡ್ತಿನ ಕಳ್ಸಕ್ ಶುರು ಮಾಡಿದಾನೆ. ಈ ಮುದ್ಕಿ ಹ್ಯಾಪ್ ಮೋರೆ ಹಾಕ್ಕಂಡ್ ಅಂಗ್ಡಿ ಮುಂದೆ ನಿಂತಿದ್ರೆ ನೋಡಕ್ಕಾಗಲ್ಲ. ವೈದೇಹಿ ನೀನೇ ಅವ್ಳನ್ನ ಕಳ್ಸು ನಾ ಒಳ್ಗೆ ಹೋಗ್ತಿನಿ” ಅನ್ನುತ್ತಾ ಎದ್ದ. ನನಗೂ ಇದನ್ನೆಲ್ಲಾ ನೋಡುತ್ತಾ ಸಣ್ಣದಾಗಿ ಹಿಂಸೆ ಆಗುತ್ತಿತ್ತು. “ನಾ ತೋಟದ್ ಕಡೆ ಹೋಗ್ ಬರ್ತಿನಿ”ಅಂತ ಎದ್ದೆ. “ಸಂಜೆ ಮನೆಕಡೆ ಬಾರೆ, ಅಪ್ಪ ಹೇಳ್ತಿದ್ರು, ಅದೇನೋ ಬ್ಯಾಂಕಿನ ವ್ಯವಹಾರದ ಮಾತು ಆಡ್ಬೇಕಂತೆ” ಅಂದ ವೆಂಕಿಗೆ ಸರಿ ಎನುತ್ತಾ ತೋಟಗಳ ದಾರಿಯ ಕಡೆ ಹೊರಟೆ.                                         &lt;br /&gt;೨&lt;br /&gt;ತೋಟಗಳ ದಾರಿಯಲ್ಲಿ ಒಬ್ಬಳೇ ನಡೆಯುತ್ತಾ ಹೋಗುತ್ತಿದ್ದರೆ ಮನಸ್ಸು ಯಾಕೋ ಆಹಾ ಅನ್ನುವಷ್ಟು ಹಗುರಾಗಿದೆ ಅನ್ನಿಸುತ್ತಿತ್ತು. ಮೈಸೂರಿನಲ್ಲಿ ಬಿ.ಎ ಓದುತ್ತಿರುವ ಸಮಯದಲ್ಲಿ, ರಜೆಯಲ್ಲಿ ಊರಿಗೆ ಬಂದಾಗ ತೋಟಕ್ಕೆ ಹೋಗಿ ವರ್ಡ್ಸ್ ವರ್ಥ್ನ ‘ರೆಸಲ್ಯೂಶನ್ ಅಂಡ್ ಇಂಡಿಪೆಂಡೆನ್ಸ್’, ‘ಶಿ ಡ್ವೆಲ್ಟ್ ಅಮಂಗ್ ದಿ ಅನ್ಟ್ರಾಡನ್ ವೇಸ್’, ಕೀಟ್ಸಿನ ‘ಓಡ್ ಟು ಅ ನೈಟಿಂಗೇಲ್’ ಪದ್ಯಗಳನ್ನ ಕನ್ನಡಕ್ಕೆ ಅನುವಾದ ಮಾಡುತ್ತಿದ್ದ ದಿನಗಳು ನೆನಪಾದವು. ಮದುವೆಯಾದಮೇಲೆ ಬರೆಯುವುದನ್ನೇ ಬಿಟ್ಟುಬಿಟ್ಟೆನಲ್ಲಾ. ಮತ್ತೆ ಬರೆಯಲು ಶುರು ಮಾಡಬೇಕು. ಅಂದುಕೊಂಡೆ &lt;br /&gt;ಇದ್ದಕ್ಕಿದ್ದ ಹಾಗೆ ದೇಜಿ ನೆನಪಾದ. ಅವನು ಹುಲಿಕೆರೆಗೆ ಬಂದಿದ್ದು ನಾನು ಸ್ಕೂಲಿನಲ್ಲಿದ್ದಾಗ. ಎಂಟನೇ ಕ್ಲಾಸೋ ಒಂಭತ್ತನೇಕ್ಲಾಸೋ ಇರಬೇಕು. ಒಂದು ಬೆಳಿಗ್ಗೆ ಅವನು ಅವನ ಹೆಂಡತಿ, ಅವನ ಮಗ ಹಾಲಿನಂಗಡಿಯ ಪಕ್ಕದ ಪುಟ್ಟ ಮನೆಯಲ್ಲಿ ಸ್ಥಾಪಿತರಾಗಿದ್ದರು. ಅವನಿಲ್ಲಿಗೆ ಯಾಕೆ ಬಂದ ಅಲ್ಯಾಕೆ ಠಿಕಾಣಿ ಹೂಡಿದ್ದಾನೆ ಎಂಬ ಕುತೂಹಲಕ್ಕೆ ಉತ್ತರವಾಗಿ ಎರಡೇ ದಿನದಲ್ಲಿ ಒಂದು ಟೇಲರ್ ಅಂಗಡಿ ತೆರೆದು ತನ್ನ ನಗು ಮತ್ತು ಹೊಲಿಗೆ ಮಿಷನ್ನೊಂದಿಗೆ ಪ್ರತ್ಯಕ್ಷವಾಗಿದ್ದ. ನಮ್ಮೂರಲ್ಲೂ ಟೇಲರ್ ಅಂಗಡಿ ತೆಗೆದ ಅವನ ಹುಚ್ಚುತನ ನೋಡಿ ಅವನುದ್ಧಾರ ಆಗಲ್ಲ ಏಂದು ರಘುಮಾವ ತೀರ್ಪುಕೊಟ್ಟುಬಿಟ್ಟಿದ್ದರು. &lt;br /&gt;ನಮ್ಮೂರಲ್ಲೂ ಒಬ್ಬ ಟೇಲರ್ ಇದ್ದಾನೆ ಎಂದು ಹೇಳಿಕೊಳ್ಳೋದಕ್ಕೇ ನಮಗೆಲ್ಲ ಹೆಮ್ಮೆಯಾಗುತ್ತಿತ್ತು. ಅಷ್ಟುದಿನ ಹುಲಿಕೆರೆ, ಕಣಿಯಾರು, ಅಗ್ರಹಾರ, ಕ್ಯಾತ್ನಳ್ಳಿ, ಕೊರಟಿಕೆರೆ, ಬರಗೂರು ಮುಂತಾದ ಊರಿನವರೂ ಬಟ್ಟೆ ಹೊಲಿಸಿಕೊಳ್ಳಲು ಅರಕಲಗೂಡಿನವರೆಗೂ ಹೋಗಬೇಕಾಗಿತ್ತು. ಇವನು ಬಂದದ್ದೇ ಅವರೆಲ್ಲರಿಗೂ ‘ನಾವೂ ಮುಂದುವರೀತಿದಿವಿ’ ಅನ್ನೋ ಲಾಂಛನವನ್ನ ಹಾಕಿಕೊಂಡ ಹಾಗೆ ಅನ್ನಿಸಿತೇನೊ. ಅಲ್ಲಿವರೆಗೂ ಅಮ್ಮಂದಿರೆಲ್ಲಾ ಬ್ಲೌಸನ್ನು ತಾವೇ ಕೈಯಲ್ಲಿ ಹೊಲಿದುಕೊಂಡು ಹಾಕಿಕೊಳ್ಳುತ್ತಿದ್ದರು. ಅಪ್ಪ, ಯುಗಾದಿಗೆ, ದೀಪಾವಳಿಗೆ, ನವರಾತ್ರಿಗೆ ಅಂತ ವರ್ಷದಲ್ಲಿ ಮೂರು ಸರ್ತಿ ಅರಕಲಗೂಡಿಗೆ ಕರೆದುಕೊಂಡು ಹೋಗಿ ತಾವೂ ಶರ್ಟು ಹೊಲಿಯೋಕ್ಕೆ ಕೊಟ್ಟು ನಮಗೂ ಲಂಗ ಬ್ಲೌಸು ಹೊಲಿಸಿಕೊಡುತ್ತಿದ್ದರು. ಅದೇ ದೊಡ್ಡ ಸಂಭ್ರಮ ನಮಗೆ. ಹಬ್ಬಕ್ಕೆ ಇನ್ನೆರೆಡು ತಿಂಗಳಿದೆ ಅನ್ನುವಾಗಲೇ, ಅಮ್ಮ ಅರಕಲಗೂಡಿಗೆ ಯಾವಾಗ ಹೋಗೋದು ಎಂದು ಅಪ್ಪನಿಗೆ ದುಂಬಾಲು ಬೀಳುತ್ತಿದ್ದಳು. ಅಪ್ಪ ಇವತ್ತು ಕರಕೊಂಡ್ ಹೋಗ್ತಿನಿ ನಾಳೆ ಕರ್ಕೊಂಡ್ ಹೋಗ್ತಿನಿ ಅಂತ ಮುಂದೆ ತಳ್ಳುತ್ತಾ ಹಬ್ಬಕ್ಕೆ ಹದಿನೈದು ದಿನ ಇದೆ ಅನ್ನುವಾಗ ನಮ್ಮನ್ನೆಲ್ಲಾ ಕರೆದುಕೊಂಡು ಹೋಗುತ್ತಿದ್ದರು. ಅಮ್ಮನಿಗೆ ಈ ಬಟ್ಟೆ ಹೊಲಿಸುವ ಕಾರ್ಯಕ್ರಮದಿಂದ ಸಾಕುಬೇಕಾಗಿ ಹೋಗುತ್ತಿತ್ತು. &lt;br /&gt;ಅರಕಲಗೂಡಿನ ವೈಶಾಲಿ ಟೇಲರಿಂಗ್ ಹಾಲಿನ ರಾಜಶಟ್ಟಿ ಒಂದು ರಾಶಿ ಬಟ್ಟೆಗಳ ನಡುವೆ ದುಶ್ಯಾಸನನ ಥರ ಕೂತಿರುತ್ತಿದ್ದ. ನಾವು ಬಟ್ಟೆ ತೆಗೆದುಕೊಂಡು ಹೋಗಿ ಕೊಟ್ಟೆರೆ ನಮ್ಮನ್ನೊಮ್ಮೆ ಕಣ್ಣೆತ್ತಿ ನೋಡಿ ಹಳೇ ಪುಸ್ತಕದಲ್ಲಿ ಏನನ್ನೋ ಗೀಚಿಕೊಂಡು ಮುಂದಿನವಾರ ಶಂಕರ್ ಮೋಟಾರ್ಸ್ ನಲ್ಲಿ ಕಳ್ಸ್ಕೊಡ್ತಿನಿ ಹೋಗಿ ಅಂದು ನಮ್ಮ ಬಟ್ಟೆಯನ್ನೂ ಆ ರಾಷಿಯೊಳಗೆ ಮಾಯ ಮಾಡುತ್ತಿದ್ದ. ಅವನಿಗೆ ಅದರಲ್ಲಿ ನಮ್ಮ ಬಟ್ಟೆ ಹ್ಯಾಗೆ ಗೊತ್ತಾಗುತ್ತೆ ಅಂತ ನನಗೆ ಯಾವಾಗಲೂ ಆಶ್ಚರ್ಯವಾಗುತ್ತಿತ್ತು. ನಾನು ನನ್ನ ಬಟ್ಟೆಯಮೇಲೆ ಮೂಲೆಯೊಂದರಲ್ಲಿ ಸಣ್ಣದಾಗಿ ಎಸ್.ಡಿ ಎಂದು ಬರೆದಿಡುತ್ತಿದ್ದೆ. ಆದರೆ ಅವನು ಹೊಲಿದುಕೊಟ್ಟ ಬಟ್ಟೆಯಲ್ಲಿ ಎಷ್ಟು ಹುಡುಕಿದರೂ ಆ ಹಸ್ತಾಕ್ಷರ ನನಗೆ ಸಿಗುತ್ತಲೇ ಇರಲಿಲ್ಲ.&lt;br /&gt;ಒಂದು ವಾರದಲ್ಲಿ ಕಳಿಸಿಕೊಡುತ್ತೇನೆ ಎಂದರೂ ಬಟ್ಟೆ ಬರುತ್ತಿದ್ದದ್ದು ಮಾತ್ರ ಹಬ್ಬದ ಹಿಂದಿನ ದಿನವೇ. ನಾವು ದಿನಾ ಸಂಜೆ ಶಂಕರ್ ಮೋಟರ್ಸ್ ಡ್ರೈವರ್ ಹತ್ತಿರ ಹೋಗಿ ವಿಚಾರಿಸಿ ನಿರಾಶರಾಗಿ ಅದೇ ಸುತ್ತಿಗೆ ಹಿಡಿಶಾಪ ಹಾಕುತ್ತಾ ಮನೆಗೆ ಮರಳುತ್ತಿದ್ದೆವು. &lt;br /&gt;ಹಾಲಿನ ಸೊಸೈಟಿ ಪಕ್ಕದಲ್ಲಿ ಟೇಲರ್ ಒಬ್ಬ ಬಂದಿದಾನೆ ಅಂದಾಗ ನನಗೆ ಖುಷಿಯಾದದ್ದು, ಇನ್ನುಮೇಲೆ ಈ ರಗಳೆಗಳೆಲ್ಲಾ ಇರೋಲ್ಲ ಅನ್ನೋ ಕಾರಣಕ್ಕೆ. ಆವತ್ತು ಸ್ಕೂಲಿಂದ ವಾಪಸ್ಸು ಬರುವಾಗ ಅವನ ಅಂಗಡಿಯ ಮುಂದೆ ಸ್ವಲ್ಪ ಹೊತ್ತು ನಿಂತು ಎಲ್ಲವನ್ನು ಗಮನಿಸಿ ಮನೆಗೆ ಬಂದವಳೇ ಅಮ್ಮನ ಹತ್ತಿರ ಖುಶಿ ಖುಶಿಯಾಗಿ ಅವನ ಬಗ್ಗೆ, ಅವನು ಇಂಗ್ಲೀಷಿನಲ್ಲಿ ಪರ್ಫೆಕ್ಟ್ ಟೇಲರ್ಸ್ ಅಂತ ಬರೆಸಿರುವ ಬೋರ್ಡಿನ ಬಗ್ಗೆ, ಅವನ ಚಂದದ ಗುಂಗುರು ಕೂದಲಿನ ಹೆಂಡತಿಯ ಬಗ್ಗೆ ಸ್ವಲ್ಪ ಉತ್ಪ್ರೇಕ್ಷೆ ಮಾಡೇ ಹೇಳಿದ್ದೆ. ಅಮ್ಮ ನಗುತ್ತಾ ಗಂಡು ಬೀರಿ ಅಂದಿದ್ದಳು. ನಾನು ಹೇಳಿದ್ದರಲ್ಲಿ ಗಂಡುಬೀರಿತನದ್ದು ಏನಿತ್ತು ಎಂದು ಇವತ್ತಿಗೂ ಗೊತ್ತಾಗಿಲ್ಲ. ಅಮ್ಮನಿಗೆ ನನ್ನನ್ನು ಹಾಗೆ ಅಂದು ಅಂದು ಅಭ್ಯಾಸವಾಗಿಹೋಗಿತ್ತೇನೋ.&lt;br /&gt;ಅವನು ಮಂಗಳೂರಿಂದ ಬಂದಿದ್ದಾನೆ ಎನ್ನುವುದೂ ಅವನ ಹೆಂಡತಿಗೆ ಕನ್ನಡ ಬರಲ್ಲ ಎನ್ನುವುದು ಹಾಲು ಸೊಸೈಟಿಯ ಇನ್ನೊಂದು ಪಕ್ಕದಲ್ಲಿ ಮನೆ ಮಾಡಿಕೊಂಡಿದ್ದ ವೆಂಕಮ್ಮನಿಂದ ಹುಲಿಕೆರೆಯ ಸಮಸ್ತ ಜನಕ್ಕೂ ವಿತರಣೆಯಾಗಿತ್ತು. ಸಿಕ್ಕಸಿಕ್ಕವರನ್ನು ಮಾತಾಡಿಸುವ ಅವರ ಎಂದಿನ ಚಾಳಿಯಂತೆ ದೇಜಿಯ ಹೆಂಡತಿಯನ್ನು ಮಾತಾಡಿಸಿದ್ದಕ್ಕೆ ಅಲ್ಲೇ ಏನೋ ಹೊಲೆಯುತ್ತಾ ಕೂತಿದ್ದ ದೇಜಿ, ‘ಅವಳಿಗೆ ಮಲಯಾಳಂ ಮತ್ತೆ ತುಳು ಮಾತ್ರ ಬರುವುದಾ, ಕನ್ನಡಮ್ ಗೊತ್ತಿಜ್ಜಿ.’ ಅಂದಿದ್ದನಂತೆ. ಇವನು ನನ್ನೇ ಪ್ರಶ್ನೆ ಕೇಳುತ್ತಿದ್ದಾನೋ ಇಲ್ಲಾ ಉತ್ತರಿಸುತ್ತಿದ್ದಾನ ಎಂದು ಗೊಂದಲಕ್ಕೆ ಬಿದ್ದ ವೆಂಕಮ್ಮ ಸುಮ್ಮನಾಗಿದ್ದರಂತೆ. &lt;br /&gt;&lt;br /&gt;                                        ೩&lt;br /&gt;ತನ್ನ ಅಂಗಡಿಗೆ ಬಂದವರ ಹತ್ತಿರ ವಿಚಿತ್ರವಾದ ಅವನ ತುಳುಮಿಶ್ರಿತ ಕನ್ನಡದಲ್ಲಿ ಮಾತನಾಡುತ್ತಾ ಅಲತೆ ತೆಗೆದುಕೊಳ್ಳುವಾಗ ‘ನೋಡಿ, ನಿಮಗೆ ಇಲ್ಲಿ ಸ್ವಲ್ಪ ಉದ್ದ ಇಟ್ರೆ ಆಗ್ತದೆ. ಓ.. ಅವರ ರೀತಿ ಹೊಲಿಸಿಕೊಂಡರೆ ಚಂದ ಕಾಣೋದಿಲ್ಲ. ನಿಮ್ಮ ಶೇಪಿಗೆ ಹೀಗೇ ಹೊಲಿಯಬೇಕು’ ಎನ್ನುತ್ತಲೋ ‘ನೋಡಿ ಇಷ್ಟು ಜಾಸ್ತಿ ಬಟ್ಟೆ ಬೇಡ ನಿಮಗೆ. ನೀವು ಸುಮ್ನೆ ಬಟ್ಟೆಗೆ ದುಡ್ಡು ಹಾಕುವುದು ಎಂತಕ್ಕೆ? ನಿಮ್ಮ ಚಿಕ್ಕ ಮಗನಿಗೂ ಇದರಲ್ಲೇ ಒಂದು ಶರ್ಟ್ ಹೊಲಿದುಕೊಡುವಾ’ ಎನ್ನುತ್ತಾ ತನ್ನ ಟೇಲರಿಂಗ್ ಪ್ರತಿಭೆಯನ್ನ ತೋರಿಸುವುದರ ಜೊತೆಗೇ, ಅವರ ವಿಶ್ವಾಸವನ್ನೂ ಸಂಪಾದಿಸುತ್ತಿದ್ದ. ತಾನು ಹೇಳಿದಂತೆ ಹೊಲಿಸಿಕೊಳ್ಳುವ ಹಾಗೆ ಮಾಡಿ ಅಲ್ಲಿನ ಟ್ರೆಂಡ್ ಸೆಟ್ಟರ್ ಆಗಿಬಿಟ್ಟಿದ್ದ.&lt;br /&gt;‘ಏನೇ ಸುಂದ್ರಿ ಇಷ್ಟ್ ಚನ್ನಾಗ್ ಕಾಣ್ಸ್ತಿದಿಯಾ?’ ಅಂತ ಮನೆಯಿಂದ ಹೊರ ಬಂದ ತಕ್ಷಣ ಮೇಷ್ಟ್ರುಮನೆ ಶ್ರೀಧರ ಅಂದಾಗ ನನ್ನೆದೆ ಢಗ್ ಅಂದಿತ್ತು. ಅಯ್ಯೋ ಇವನು ಆಡ್ಕೊತಿದನ? ನಾನು ಮೈ ಅಳತೆ ಕೊಟ್ಟು ಲಂಗ ಬ್ಲೌಸು ಹೊಲಿಸಿಕೊಂಡಿದ್ದು ಗೊತ್ತಾಗ್ ಹೋಯ್ತಾ? ಇನ್ನು ಅಪ್ಪನಿಗೆ ಗೊತ್ತಾಗ್ಬಿಟ್ರೆ ನನ್ ಚರ್ಮ ಸುಲಿತಾರೆ ಎಂದೆಲ್ಲಾ ಯೋಚಿಸಿ ಕಣ್ಣು ತುಂಬಿಕೊಂಡಿತು. ‘ಏ ಹೋಗ..’ ಎನ್ನುತ್ತಾ ದೇವಸ್ತಾನದ ಕಡೆಗೆ ಹೊರಟೆ. ಯಾರು ಚೆನ್ನಾಗಿ ಕಾಣಿಸ್ತಿದಿಯ ಅಂದ್ರೂ ಎದೆ ಹೊಡೆದುಕೊಳ್ಳುತ್ತಿತ್ತು. ಜೊತೆಗೆ ಖುಷಿಯೂ.. &lt;br /&gt;ಮನೆಗೆ ಬಂದ ತಕ್ಷಣ ಬಿಚ್ಚಿಟ್ಟು ಹಳೇ ಬಟ್ಟೆ ಹಾಕಿಕೊಂಡಿದ್ದೆ. ಅಪ್ಪ ‘ಹೊಸಾ ಬಟ್ಟೆ ತೆಗ್ದಿಟ್ಬಿಟ್ಯಾ, ಈ ದೇಜಿ ಪರವಾಗಿಲ್ಲ, ಕಣ್ಣಲ್ಲೇ ಅಳತೆ ತಗೊಂಡ್ರೂ ಚನ್ನಾಗ್ ಹೊಲ್ದಿದಾನೆ, ಚನ್ನಾಗ್ ಕಾಣ್ತಿದ್ದೆ ಇವತ್ತು ಅಂದ್ರು. &lt;br /&gt;ನಾನು ಮಾತಾಡದೆ ಸುಮ್ಮನಿದ್ದೆ. ‘ಕಣ್ಣಲ್ಲೇ ಅಳ್ತೆ ತಗೊಂಡು ಹೊಲ್ದುಕೊಡ್ತಿನಿ ಬೇಕಿದ್ರೆ, ಆಮೇಲೆ ಅಲ್ಲಿ ಸರಿ ಇಲ್ಲ, ಇಲ್ಲಿ ಸರಿ ಇಲ್ಲ ಅಂತ ಮತ್ತೆ ನನ್ನ ಬಳಿ ಬರಬೇಡಿ ಆಯ್ತಾ? ಅದರ ಬದಲು ಒಂದೇ ಬಾರಿಗೆ ಅಳತೆ ಕೊಟ್ಟು ಹೊಲಿಸ್ಕೊಳಿ. ನೋಡಿ ಎಷ್ಟು ಚಂದ ಆಗ್ತದೆ ಅಂತ. ನಾನು ಹಾಗೆ ಕೆಟ್ಟ ಮನುಷ್ಯ ಅಲ್ಲವಾ.. ನನಗೆ ನಿಮ್ಮ ವಯಸ್ಸಿನ ತಂಗಿ ಇದಾಳೆ.. ಓ ಅಲ್ಲಿ ಪರ್ಕಳದಲ್ಲಿ. ಹೆದರಬೇಡಿ ಆಯ್ತಾ...’ ವಾರದ ಹಿಂದೆ ಬಟ್ಟೆ ಹೊಲಿಯಲು ಕೊಟ್ಟು ಬರಲು ಹೋದಾಗ ಅಂದ ದೇಜಿಯ ಮಾತುಗಳು ನೆನಪಾಗುತ್ತಿದ್ದವು. ‘ಅದಕ್ಕಲ್ಲ ದೇಜಿ, ದೊಡ್ಡೋರಿಗೆ ಗೊತ್ತಾದ್ರೆ ಇಷ್ಟ ಆಗಲ್ಲ’ ಅಂತ ಅನುಮಾನಿಸಿದ್ದೆ. ‘ಓ ಎಂತದಾ.. ನಾನು ಯಾರಿಗಾದರೂ ಹೇಳೋದುಂಟಾ? ಸತ್ಯವಾಗ್ಲೂ ಯಾರಿಗೂ ಹೇಳಲ್ಲ ಮಾರಾಯ್ರೆ’ ಅಂದಿದ್ದ ಅವನ ಮಾತಿಗೆ ಒಪ್ಪಿ ಹೊಲಿಸಿಕೊಂಡಿದ್ದೆ. &lt;br /&gt;ಹೊಲಿಸಲು ಕೊಟ್ಟು ಬಂದ ರಾತ್ರಿ ಕನಸು: ಅಳತೆ ಕೊಟ್ಟಿದ್ದು ಎಲ್ಲರಿಗೂ ಗೊತ್ತಾದ ಹಾಗೆ, ಅಪ್ಪ ಇದೇ ಅವಮಾನದಿಂದ ರೋಡಿನಲ್ಲಿ ತಲೆತಗ್ಗಿಸಿಕೊಂಡು ಬರುತ್ತಿರುವ ಹಾಗೆ, ನನ್ನ ಹತ್ರ ಮಾತು ಬಿಟ್ಟ ಹಾಗೆ.. ಎಚ್ಚರವಾದಾಗ ಸದ್ಯ ಕನಸು ಎನ್ನಿಸಿದರೂ ಯಾಕಾದರೂ ಅಳತೆ ಕೊಟ್ಟು ಬಂದೆನೋ ಪೇಚಾಡಿಕೊಂಡಿದ್ದೆ. &lt;br /&gt;&lt;br /&gt;ಬರಬರುತ್ತಾ ಊರಿನ ಹುಡುಗೀರೆಲ್ಲಾ ಯಾಕೋ ಚನ್ನಾಗಿ ಕಾಣ್ತಿದಾರಲ್ಲ ಅನ್ನಿಸ್ತಿತ್ತು ನನಗೆ. ಬರೀ ನನಗೆ ಮಾತ್ರ ಹಿಂಗನ್ನಿಸ್ತಿದಿಯಾ ಅಂತ ಮೊದಮೊದಲು ಅನುಮಾನವಾದರೂ ಶ್ರೀನಿವಾಸ ಚಿಕ್ಕಪ್ಪ ಮನೆಗೆ ಬಂದಾಗ ಅಪ್ಪನ ಜೊತೆ ಮಾತಾಡುತ್ತಿದ್ದು ಕಿವಿಗೆ ಬಿದ್ದಿತ್ತು. ‘ಬರೀ ಚಿಕ್ಕಮಗಳೂರು, ಮೈಸೂರು, ಬೆಂಗಳೂರಿನ ಮಕ್ಕಳ ಇರಿಕೆ ಚನ್ನಾಗಿದೆ. ನಮ್ಮೂರಿನವರು ಹೆಂಗ್ಹ್ಯಂಗೋ ಇರ್ತಾರೆ ಅನ್ನಿಸ್ತಿತ್ತು. ಆದ್ರೆ ಇಲ್ಲೂ ಎಲ್ಲಾ ಚಿಗತ್ಕೊಂಬಿಟ್ಟಿದಾರೆ’ ಅಂದಿದ್ದರು. &lt;br /&gt;ಎಲ್ಲರೂ ಅಳತೆ ಕೊಟ್ಟು ಹೊಲಿಸಿಕೊಂಡಿದ್ದಾರೆ ಅಂತ ಗೊತ್ತಾಗುತ್ತಿದ್ದರೂ ಯಾವ ಹುಡುಗಿಯ ಹತ್ರ ಕೇಳೋಣಾ ಅಂದ್ರೂ ಭಯ. ನಾನೇ ಸಿಕ್ಕಿಹಾಕಿಕೊಂಡುಬಿಟ್ರೆ ಅಂತ. ಆದರೆ ದೇಜಿ ಮೈ ಅಳತೆ ತೊಗೊಂಡು ಹೊಲಿತಾನೆ ಅಂತ ಎಲ್ಲರಿಗೂ ಗೊತ್ತಾಗಿದ್ದು ಲಕ್ಷ್ಮಿಯಿಂದ. ಅವಳದನ್ನು ತಾನು ಪ್ರೀತಿಸುತ್ತಿದ್ದ ರಾಘವನಿಗೆ ಹೇಳಿದ್ದೇ ತಪ್ಪಾಗಿ ಊರಿಗಿಡೀ ಗೊತ್ತಾಗಿತ್ತು. &lt;br /&gt;                                    ೪&lt;br /&gt;ಎಲ್ಲವೂ ಇದ್ದ ಹಾಗೇ ಇದ್ದಿದ್ದರೆ ದೇಜಿ ಬಹಳ ಶ್ರೀಮಂತನಾಗಿ ಒಂದಷ್ಟು ತೋಟವನ್ನೋ ಒಂದೆರೆಡು ಮನೆಗಳನ್ನೋ ಮಾಡಿಕೊಳ್ಳುತ್ತಿದ್ದನೇನೋ? ಆದರೆ ಇದ್ದಹಾಗೆ ಇರುವುದಾದರೂ ಯಾವುದು? ನಾವೆಲ್ಲಾ ಅರಕಲಗೂಡಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಹೊತ್ತಿಗೆ, ಬೆಂಗಳೂರಿನಲ್ಲಿ ಬೇಕರಿ ಇಟ್ಟಿದ್ದ ಶೇಶಿ ಒಂದೆರೆಡು ದಿನಗಳ ಮಟ್ಟಿಗೆ ಊರಿಗೆ ಬಂದಿದ್ದ. ಬಂದವನು ಎಲ್ಲಾ ರೀತಿಯಲ್ಲೂ ತುಂಬಾ ಬದಲಾಗಿದ್ದ. ಅವನು ಹಾಕಿಕೊಂಡಿದ್ದ ಬಟ್ಟೆಗಳನ್ನು ನೋಡಿ ನಮಗೆಲ್ಲಾ ಆಶ್ಚರ್ಯ. ದೇಜಿ ಹೊಲೆಯುವುದಕ್ಕಿಂತ ಚೆನ್ನಾಗಿ ಹೊಲಿದಂತಿತ್ತು. ಎಲ್ಲಿ ಹೊಲಿಸಿಕೊಂಡ್ಯೋ, ಎಷ್ಟಾಯ್ತೋ, ಎನ್ನುವ ಹುಡುಗರ ಪ್ರಶ್ನೆಗಳಿಗೆ, ‘ಹೊಲಿಸ್ಕೊಂಡಿದ್ದಲ್ಲ, ಅಲ್ಲೆಲ್ಲಾ ಈಗ ರಡೀಮೇಡ್ ಬಟ್ಟೆ ಸಿಗತ್ತೆ. ಅಲ್ಯಾಕೆ, ಈಗ ಹಾಸನದಲ್ಲೂ ಸಿಗತ್ತೆ. ನಾವು ಬಟ್ಟೆ ತೊಗೊಂಡು ದೇಜಿ ಕೈಯಲ್ಲಿ ಹೊಲಿಸ್ಕೊಂಡ್ರೆ ನೂರು ರುಪಾಯಾದ್ರೂ ಆಗತ್ತೆ. ಅಲ್ಲಿ ಹೊಲ್ದಿದ್ ಬಟ್ಟೆ ನಿಮ್ ನಿಮ್ ಅಳ್ತೆದೇ ಅರವತ್ತಕ್ಕೋ ಎಂಭತ್ತಕ್ಕೋ ಸಿಗತ್ತೆ. ಇನ್ನು ಕಮ್ಮಿದು ಬೇಕಾದ್ರೂ ಸಿಗುತ್ತೆ’ ಅಂದ. ಇಲ್ಲಿದ್ದ ಹುಡುಗರೆಲ್ಲಾ ಹಾಸನಕ್ಕೆ ಹೋದಾಗ ಒಂದೆರೆಡು ಶರ್ಟು ತೊಗೊಬೇಕು ಅಂತ ಮಾತಾಡಿಕೊಂಡರು. ಕೆಲವೇದಿನಗಳಲ್ಲಿ ನಮ್ಮೂರ ತುಂಬಾ ರಡಿಮೇಡ್ ಬಣ್ಣದ ಶರ್ಟು ಹಾಕಿಕೊಂಡ ಹುಡುಗರು ಹುಲಿವೇಷದಂತೆ ಓಡಾಡತೊಡಗಿದರು.&lt;br /&gt;ನಾವು ಹುಡುಗೀರು ಮಾತ್ರ ನಮ್ಮ ಬಟ್ಟೆ ಹೊಲಿಸಿಕೊಳ್ಳುವುದಕ್ಕೆ ದೇಜಿಯ ಬಳಿಯೇ ಹೋಗುತ್ತಿದ್ದೆವು. ನಾನು ಪಿ.ಯು.ಸಿ ಮುಗಿಸಿ ಬಿ.ಎಗೆ ಮೈಸೂರಿನಲ್ಲಿ ಸೇರಿದ ಮೇಲೆ ದೇಜಿಯ ಬಳಿ ಹೊಲಿಸಿಕೊಳ್ಳುವುದನ್ನು ಬಿಟ್ಟಿದ್ದೆ. ಮೈಸೂರಲ್ಲಿ ಸ್ವಲ್ಪ ಶ್ರೀಮಂತ ಹುಡುಗಿಯರೆಲ್ಲಾ ಚೂಡೀದಾರ್ ಹಾಕ್ತಿದ್ರು. ಬಹಳಷ್ಟು ಜನ ಲಂಗ ಬ್ಲೌಸು ಹಾಕಿಕೊಂಡು ಬರುತ್ತಿದ್ದರೂ, ಅದೂ ಸ್ವಲ್ಪ ಬೇರೆಯ ತರಹವೇ ಇದೆ, ನಾವು ಹಾಕಿಕೊಳ್ಳುವುದಕ್ಕಿಂತಾ ಚೆನ್ನಾಗಿದೆ ಅನ್ನಿಸುತ್ತಿತ್ತು. ನಾನು ಅಲ್ಲೇ ಹೊಲಿಸಿಕೊಳ್ಳಲು ಶುರು ಮಾಡಿದೆ. ಹೀಗಿರುತ್ತಾ ಜನ್ನ ನನಗೆ ಬರೆದ ಪತ್ರವೊಂದರಲ್ಲಿ, ‘ದೇಜಿಗೆ ಈಗ ವ್ಯಾಪಾರವೇ ಇಲ್ಲ. ದೇಜಿಗೆ ಮಾತ್ರ ಅಲ್ಲ, ಬಹಳಷ್ಟು ಚಿಕ್ಕ-ಪುಟ್ಟ ಅಂಗಡಿಗಳು, ಗುಡಿ ಕೈಗಾರಿಕೆಗಳು ಎಲ್ಲವೂ ಮುಚ್ಚಿಕೊಂಡು ಹೋಗುತ್ತಿವೆ. ಗಾಂಧಿ ತತ್ವಗಳಿಗೆ ಬೆಲೆಯೇ ಇಲ್ಲ, ಗಾಂಧೀಜಿ ಸ್ವಾತಂತ್ರಕ್ಕಾಗಿ ವಿದೇಶಿಗಳ ವಸ್ತುಗಳನ್ನು ಸುಟ್ಟರೆ, ಈಗ ವಿದೇಶಿ ವ್ಯಾಮೋಹಕ್ಕೆ ಬಲಿಯಾಗಿ ನಮ್ಮವರು ಗಾಂಧೀಜಿ ತತ್ವಗಳನ್ನ ಸುಡುತ್ತಿದ್ದಾರೆ.....’  ಅಂತೆಲ್ಲ ಬಹಳ ಬೇಸರದಿಂದ ಬರೆದಿದ್ದ. ಆಮೇಲೆ ನನ್ನ ಜೀವನ ಯಾವ್ಯಾವುದೋ ಹಳಿಗಳ ಮೇಲೆ ಓಡಲು ಶುರುವಾಗಿ ನಾನೇ ಎಲ್ಲೆಲ್ಲೊ ಕಳೆದು ಹೋದೆ.&lt;br /&gt;&lt;br /&gt;                                       ೫&lt;br /&gt;‘ಫೈನಲ್ ಇಯರ್ ಗೋಪಾಲ ನಿನ್ನೇ ಗುರಾಯಿಸ್ತಿದಾನೆ ಕಣೇ’ ಅಂತ ಕಾಲೇಜು ಗೇಟು ದಾಟುತ್ತಿದ್ದವಳ ಕೈ ಚಿವುಟಿದಳು ರೇಶ್ಮ. ಅವನನ್ನು ತಿರುಗಿ ನೋಡಿದ್ದೆ. ಅಬ್ಬಾ ಅನ್ನಿಸಿತ್ತು. ಇಷ್ಟ ಆಗಿ ಹೋಗಿದ್ದ. ಮೈತುಂಬ್ಬಿಕೊಂಡ ಎತ್ತರದ ಆಕಾರ, ನಾನು ಮೆಚ್ಚುವ ನಸುಗಪ್ಪು ಬಣ್ಣ.. ಅವನ ದೇಹದಿಂದ ಯಾವುದೋ ಬೆಳಕಿನ  ಸಂಚಲನವಾಗುತ್ತಿದೆ ಅನ್ನಿಸಿದ್ದು ಆ ಕ್ಷಣಕ್ಕೆ ಭ್ರಮೆ ಅಂದುಕೊಂಡಿದ್ದೆ. ಕ್ಲಾಸಿನ ಮುಂದೆ ಬಂದು ನನ್ನ ನೋಡುತ್ತಾ ಸಣ್ಣದಾಗಿ ನಗುತ್ತಾ ನಿಂತಿರುತ್ತಿದ್ದ. ನಗು ಬರುತ್ತಿದ್ದರೂ ಅವನ ಕಡೆ ನೋಡದೆ, ಪಾಠದಮನೆ ರಂಗಸಾಮಿ ಅಯ್ಯಂಗಾರ್ ಅವರ ಎರಡನೇ ಪುತ್ರಿ ಶ್ರೀದೇವಿ ಎಚ್. ಆರ್ ತನ್ನ ಪ್ರಪಂಚದ ಬಾಗಿಲನ್ನು ಅವನಿಗೆ ಮುಚ್ಚಿ ಭದ್ರವಾಗಿ ತನ್ನ ಪಾಡಿಗಿದ್ದಳು. ಅವನು ಫೈನಲ್ ಇಯರ್ ಮುಗಿಸಿ ಹೋದಮೇಲೆ, ‘ಛೆ! ಒಂದು ಸಲವಾದರೂ ಮಾತಾಡಿದ್ದರೆ ಏನಾಗೋದು?’ ಎಂದು ಹಳಿದುಕೊಂಡಿದ್ದು ಲೆಕ್ಕವಿಲ್ಲದಷ್ಟು ಸಲ. ಆದರೆ ನಾನು ಸೆಕೆಂಡ್ ಇಯರ್ ಕೊನೆಯಲ್ಲಿರುವ ಹೊತ್ತಿಗೆ, ಅವನನ್ನು ಮರೆತೇ ಬಿಟ್ಟಿದ್ದೆ ಅಥವಾ ಹಾಗೊಬ್ಬ ಇದ್ದ ಅಂತ ನೆನಪಾಗುತ್ತಿದ್ದ. ಆದರೆ ನನ್ನ ಕಾಲೇಜಿನ ನೆನಪುಗಳಲ್ಲಿ ಮಾತ್ರ ದಾಖಲಾಗುತ್ತಾನೆ ಅಂದುಕೊಂಡಿದ್ದವ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದ. ಮುಜುಗರವಿಲ್ಲದೆ ಬಂದು ಮಾತಾಡಿಸಿದವನನ್ನು ಮಾತಾಡಿಸುತ್ತಾ ನನ್ನ ಮುಜುಗರವೆಲ್ಲಾ ನೀರಾಗಿತ್ತು. ಎಲ್ಲಾ ಮಾತಾಡಿದಮೇಲೆ ‘ಸಿ. ಎ ಕಟ್ಟಿದ್ದೀನಿ. ಇನ್ನು ಮೂರ್ ವರ್ಷ ಆಗತ್ತೆ. ಅಷ್ಟರೊಳಗೆ ಯಾರನ್ನು ಒಪ್ಕೊಬೇಡ, ಪ್ಲೀಸ್. ನಾನು ಫೇಲ್ ಆದ್ರೆ ನಿನ್ ತಂಟೆಗ್ ಬರಲ್ಲ. ಅಲ್ಲಿವರ್ಗು ಕಾಯ್ತಿಯಾ? ನೀನ್ ನಂಗ್ ಇಷ್ಟ’ ಅಂದಿದ್ದ. ನಾನು ಮೊದಲು ಒಪ್ಪಲಿಲ್ಲ. ಫೈನಲ್ ಇಯರ್ ಡಿಗ್ರಿ ಮುಗಿಸಿ ಕಾಲೇಜು ಬಿಡುವ ಹೊತ್ತಿಗೆ ಮತ್ತೆ ಬಂದ ಅವನು, ‘ನಾನು ಆರ್ಟಿಕಲ್ಶಿಪ್ನಲ್ಲೇ ಸಿ.ಎ ಇಂಟರ್ ಮುಗ್ಸಿದೀನಿ. ನಂಗೆ ನಿನ್ನ ಬೇಡ್ಕೊಳಕ್ಕೆ ಇಷ್ಟ ಇಲ್ಲ, ಆದ್ರೆ ನಿನ್ ಜೊತೆ ಖುಷಿಯಾಗಿರ್ತಿನಿ ಅಂತ ಗೊತ್ತು. ಉತ್ತರ ಹೇಳಿ ಹೋಗು’ ಅಂದ. ಏನೂ ಮಾತಾಡದೆ ಬಂದ ನಾನು ಉತ್ತರ ಹೇಳಿದ್ದು ಅಪ್ಪನಿಗೆ. &lt;br /&gt;‘ಅದ್ಯಾವ್ದೋ ಸ್ಮಾರ್ತ ಮುಂಡೇಮಗನ್ನ ಪ್ರೀತಿಸಿ ಬಂದಿದಾಳೆ ನಿಮ್ ಮಗ್ಳು, ಬೀದಿ ರಂಡೆ.. ಬೀದಿ ರಂಡೆ..’ ಅಂತ ಅಮ್ಮ ಕೂಗಾಡಿದ್ದು ಇನ್ನೂ ಕಣ್ಣಿಗೆ ಕಟ್ಟಿದಂತೆ ಇದೆ. ಅಪ್ಪ ‘ಓದಿದ್ದು ಸಾಕು’ ಅಂದರು. ಹಿಂಗೆಲ್ಲಾ ಆಯಿತು ಅಂತ ಅವನಿಗೆ ಪತ್ರ ಬರೆದು ಹಾಕಿದೆ. ‘ತಲೆಕೆಡಿಸಿಕೊಳ್ಳಬೇಡ. ಬ್ಯಾಂಕ್ ಎಕ್ಸಾಂ ಕಟ್ಟು. ನಾ ಪುಸ್ತಕಗಳನ್ನು ಕಳ್ಸ್ಕೊಡ್ತಿನಿ. ಕಷ್ಟ ಆಗಲ್ಲ. ಇನ್ನೊಂದುವರೆ ವರ್ಷ ಅಷ್ಟೆ. ನಾನು ಸಿ.ಎ. ಫೈನಲ್ಸ್ ಮುಗಿಸಿದ ತಕ್ಷಣ ಮದುವೆಯಾಗೋಣ’ ಎಂದು ಸಮಾಧಾನ ಹೇಳುತ್ತಿದ್ದ. ಆ ಎರಡು ವರ್ಷಗಳು ನರಕ. ಅಮ್ಮನ ನಿರಂತರ ಗೊಣಗಾಟದ ನಡುವೆಯೂ ಸಾಹಿತ್ಯ ಓದಿಕೊಂಡಿದ್ದವಳು, ಹಠಕ್ಕಾಗಿಯೇ ಓದಿ ಪಾಸು ಮಾಡಿ ಅಕೌಂಟು ಸ್ಟಾಟಿಸ್ಟಿಕ್ಸ್ಗಳ ನಡುವೆ ಕರಗಿ ಹೋದೆ. ಆಗ ನೆಮ್ಮದಿ ತರುತ್ತಿದ್ದಿದ್ದು ಅವನ ಪತ್ರಗಳು ಮತ್ತು ಶ್ರೀನಿವಾಸ ಚಿಕ್ಕಪ್ಪನ ಸಮಾಧಾನದ ಮಾತುಗಳು. ‘ನಿನ್ನದು ಕುರುಡು ಪ್ರೀತಿ ಅಲ್ಲ ಅಂತ ಗೊತ್ತು ಮಗಳೇ. ಅವನು ಎಕ್ಸಾಮ್ ಪಾಸು ಮಾಡಲಿ, ನಾನು ನಿನ್ನಪ್ಪನನ್ನು ಒಪ್ಪಿಸುತ್ತೇನೆ’ ಅಂದಿದ್ದರು. ಅವನು ಒಂದೇ ಅಟೆಮ್ಟಿಗೆ ಸಿ.ಎ ಪಾಸು ಮಾಡಿದ.. ಅಪ್ಪನೂ ‘ಹೋಗಲಿ ಬ್ರಾಹ್ಮಣರೇ ತಾನೇ’ ಅನ್ನತೊಡಗಿದರು. ನನಗೇ ಆಶ್ಚರ್ಯವಾಗುವಂತೆ ಹೆಣ್ಣು ಕೇಳಲು ಬಂದವರಿಗೆ ಒಳ್ಳೆಯ ಸತ್ಕಾರ ಮಾಡಿ ಮದುವೆ ನಿಶ್ಚಯಿಸಿದರು. ‘ಈಗೆಲ್ಲಾ ತ್ರಿಮತಸ್ತರು ಒಂದಾಗದಿದ್ದರೆ ಆಗೋಲ್ಲ’ ಅಂತೆಲ್ಲಾ ಅಪ್ಪ, ಅವನ ತಂದೆ ಮಾತಾಡಿಕೊಳ್ಳುತ್ತಿದ್ದರೆ ಇವರ ಜಾತಿಯ ಭ್ರಮೆಗೆ ತಲೆಚಚ್ಚಿ ಕೊಳ್ಳುವ ಹಾಗಾಗುತ್ತಿತ್ತು. ಮದುವೆ ನಮ್ಮ ಇಷ್ಟದ ಪ್ರಕಾರವಾಗಿಯೇ ನಡೆಯಿತು. ಬಹಳಷ್ಟು ಜನ ಕುವೆಂಪುರವರ ಮಂತ್ರ ಮಾಂಗಲ್ಯದಿಂದ ಪ್ರಭಾವಿತರಾಗಿ ಮದುವೆಯಾದಂತೆ ನಾವೂ ಆದೆವು. ಇದೆಲ್ಲಾ ಆಗಿ ಹತ್ತು ಹನ್ನೆರೆಡು ವರ್ಷಗಳಾಗಿವೆ ಅಷ್ಟೆ. ಮೊದಲು ಹರಿಹರನ್ ಅಂಡ್ ಕೋ. ನಲ್ಲಿ ಕೆಲಸ ಮಾಡುತ್ತಿದ್ದವನು, ತನ್ನದೇ ಫರ್ಮ್ ಶುರುಮಾಡಿದ. ಅಪ್ಪ ಅಮ್ಮನಿಗೆ ಅಳಿಯ ಚಾರ್ಟೆಡ್ ಅಕೌಂಟೆಂಟ್ ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ.&lt;br /&gt;&lt;br /&gt;                                    ೬&lt;br /&gt;ತೋಟ ಸುತ್ತಿ ವಾಪಸ್ಸು ಬರುವ ದಾರಿಯಲ್ಲೇ ಜನ್ನನ ಶಾಲೆ. ಜನ್ನ ಮರದ ಟೇಬಲ್ಲಿನ ಮುಂದೆ ಕೂತು ಕೈಯಲ್ಲೊಂದು ರೀಫಿಲ್ ಹಿಡಿದುಕೊಂಡು ಪೇಪರಿನ ಮೇಲೆ ಎಂತದೋ ಬರೆಯುತ್ತಾ ಯಾವುದೋ ಲೆಕ್ಕಾಚಾರದಲ್ಲಿ ಮುಳುಗಿಹೋಗಿದ್ದ. ‘ನಿಂಗೆ ಪೆನ್ನಿಗೆ ಗತಿ ಇಲ್ವ? ರೀಫಿಲ್ನಲ್ಲಿ ಬರೀತಿದ್ಯಲ್ಲ’ ಚುಡಾಯಿಸುತ್ತಾ ಒಳಗೆ ಹೋದೆ. ‘ಅಯ್ಯೋ ತಕ್ಷಣಕ್ಕೆ ಏನೂ ಸಿಗಲಿಲ್ಲ ಅದಕ್ಕೇ ಈ ರೀಫಿಲ್ಲಿನಲ್ಲೇ ಲೆಕ್ಕ ಹಾಕ್ತಿದ್ದೆ’ ಅನ್ನುತ್ತಾ ನಕ್ಕ. ‘ಗಾಂಧಿ ಜಯಂತಿಯನ್ನ ವಿಜೃಂಭಣೆಯಿಂದ ಆಚರಿಸೋಣ. ಎಷ್ಟು ಖರ್ಚಾಗುತ್ತೆ ಲೆಕ್ಕ ಕೊಡಿ, ಅಂತ ಕೇಳಿದಾರೆ ಹೆಡ್ಮಾಷ್ಟ್ರು’ ಅಂದ. ಏನು ಮಾಡ್ತಾಇದಿಯಾ ಕೇಳಿದೆ ‘ಗಾಂಧಿ ಗ್ರಾಮ ಅಂತ ಒಂದು ನಾಟ್ಕ ಆಡ್ಸ್ತಿದಿನಿ, ಭಾರತದ ಹೋರಾಟದ ಕಥೆ, ಕಳೆದ ಐವತ್ತು ವರ್ಷಗಳಲ್ಲಿ ಹೇಗೆ ನಾವೆಲ್ಲಾ ಗೋಡ್ಸೆ ಆಗಿದ್ದೀವಿ ಬ್ರಿಟಿಷರಿಂದ ಪಾರಾಗುವುದಕ್ಕೆ ಅಷ್ಟೊಂದು ಹೋರಾಡಿದ ಕೆಲವೇ ವರ್ಷಗಳಲ್ಲಿ ಅಮೇರಿಕಾಕ್ಕೆ ನಮ್ಮನ್ನ ಹೇಗೆ ಮಾರಿಕೊಂಡು ಬಿಟ್ಟಿದ್ದೀವಿ ಅನ್ನೋದೆಲ್ಲಾ ಹೇಳೋಕೆ ಹೊರತಿದ್ದೀನಿ. ದುಬಾರಿ ಪ್ರೊಡಕ್ಷನ್ನು ಈ ಖಾದಿ ಜುಬ್ಬ ಖಾದಿ ಟೋಪಿ ಹೊಂದಿಸೋದೇ ಸಮಸ್ಯೆಯಾಗಿದೆ..’ ಅಂದ. ಜಗತ್ತಿನ ಎಲ್ಲಾ ಜವಬ್ದಾರಿಗಳೂ ತನ್ನ ಮೇಲಿದೆ ಎನ್ನುವ ಟೆನ್ಷನ್ನಲ್ಲಿ, ಸಂಭ್ರಮದಲ್ಲಿ ಇದ್ದ. ನನಗೆ ನಗು ಬರುತ್ತಿತ್ತು. ಸಂಜೆ ದೇಜಿ ಹತ್ರ ಹೊಲಿದು ಕೊಡ್ತೀಯಾ ಅಂತ ಕೇಳಬೇಕು ಅಂದ.&lt;br /&gt; ‘ದೇಜಿ ಈಗ್ಲೂ ಹೊಲೀತಾನಾ? ಅವನು ಅಂಗಡಿ ಮುಚ್ಚಿಯಾಗಿದೆ ಅಂದಿದ್ದೆ’ ಎಂದಿದ್ದಕ್ಕೆ ‘ಅಂಗ್ಡಿ ಮುಚ್ಚಿದ್ದ್ರೂ ನಾ ಕೇಳಿದ್ರೆ ಇಲ್ಲ ಅನ್ನಲ್ಲ’ ಅಂದ. ‘ಆಮೇಲೆ ಇಂಥ ಪ್ರೋಗ್ರಾಮುಗಳಿಂದಾದರೂ ಅವನಿಗೊಂದಷ್ಟು ಸಹಾಯ ಆಗಲಿ, ಉಸಿರಾಡಲೂ ತ್ರಾಣ ಇಲ್ಲದ ಇಂಥಾ ಗಾಂಧಿಯ ಮಕ್ಕಳನ್ನ ಗಾಂಧಿ ಜಯಂತಿಯಾದರೂ ಬದುಕಿಸಲಿ ಅಂತ’ ಅಂದ. ನನಗೂ ದೇಜಿಯನ್ನ ನೋಡಬೇಕೆನಿಸಿತು. ‘ನೀನು ದೇಜಿ ಹತ್ರ ಹೋದ್ರೆ ನನ್ನನ್ನೂ ಕರಿ’ ಅಂದೆ. ‘ಓಹೋ ನಿಂಗೇನು ಕೆಲ್ಸ ಅಲ್ಲಿ. ನಿಮ್ಮಂಥಾ ಜಾಗತೀಕರಣದ ಹಾಲು ಕುಡಿದು ಬೆಳೆದ ಕೂಸುಗಳು ಅಂಥವರ ಮೇಲೆ ಕರುಣೆ ತೋರಿಸೋದು ಬೇಡ.’ ಅಂದ ವ್ಯಂಗ್ಯವಾಗಿ. ‘ಸಿನಿಕನ ಥರ ಮಾತಾಡ್ಬೇಡ. ಹೋಗೋ ಮುಂಚೆ ಮನೆ ಕಡೆ ಬಾ. ಇಲ್ಲ ಅಂದ್ರೆ ನಾನೇ ಹೋಗ್ಬರ್ತಿನಿ’ ಅಂದೆ. ‘ಇಲ್ಲ ಮರಾಯ್ತಿ ಬರ್ತಿನಿ ಆರುವರೆಗೆ.’ ಅಂದು ನಕ್ಕ.&lt;br /&gt;ಮನೆಗೆ ಬಂದಾಗ ಅಮ್ಮ ಹೂ ಕಟ್ಟುತ್ತಾ ಕೂತಿದ್ದಳು. ದೇಜಿಯ ಬಗ್ಗೆ ಅಮ್ಮನ ಹತ್ತಿರ ಕೇಳಿದೆ. ಅವನು ಹೊಲಿಯೋದು ಬಿಟ್ಟಿರಬೇಕು. ನಾನಂತೂ ನೋಡ್ಲಿಲ್ಲಪ್ಪ. ಅವನ ಮಗ ಓಡಿ ಹೋದ ಮೇಲೆ ಹೊರಗೆ ಬರೋದೇ ಬಿಟ್ಟಿದ್ದ ಅಂದಳು ಅಮ್ಮ. ಈ ಬೆಳವಣಿಗೆಗಳೆಲ್ಲ ನನಗೆ ಗೊತ್ತೇ ಇರಲಿಲ್ಲ. &lt;br /&gt;                                       &lt;br /&gt;7&lt;br /&gt;ನಾನು, ಜನ್ನ ಹಾಲು ಸೊಸೈಟಿಯ ಮುಂದೆ ಬಂದು ನಿಂತಾಗ ಸರಿಯಾಗಿ ಏಳು ಗಂಟೆ. ‘ಹೇಗೂ ಅಲ್ಲೇ ಹೋಗ್ತಿರಲ್ಲ, ಹಾಗೇ ಹಾಲು ತೊಗೊಂಡು ಬಾ’ ಅಮ್ಮ ಪಾತ್ರೆ ಕೊಟ್ಟು ಕಳುಹಿಸಿದ್ದಳು. ದೇಜಿ ಮನೆಯ ಬಾಗಿಲ ಬಳಿ ‘ಪರ್ಫೆಕ್ಟ್ ಟೇಲರ್ಸ್’ ತಗಡಿನ ಬೋರ್ಡು ಬಣ್ಣಗೆಟ್ಟು ನಿಂತಿತ್ತು. ಜನ್ನ ಬಾಗಿಲು ಬಡಿದ. ಐದು ನಿಮಿಷ ಒಳಗಿನಿಂದ ಯಾವ ಚಲನೆಯೂ ಕಾಣಿಸಲಿಲ್ಲ. ನಂತರ ಅವನ ಹೆಂಡತಿ ಮನೆಯೊಳಗೆ ಬೆಳಕು ಬಂದುಬಿಟ್ಟರೆ ಅನಾಹುತವಾಗುತ್ತೆ ಎಂಬಂತೆ ಒಂದು ಚೂರೇ ಚೂರು ಬಾಗಿಲು ತೆರೆದು ಮುಖ ಹೊರಗಡೆ ಹಾಕಿದಳು. ‘ದೇಜಿ ಇಲ್ವಾ? ಒಂಚೂರ್ ಕೆಲ್ಸ ಇತ್ತು ಗಾಂಧಿಜಯಂತಿಗೆ ಬಟ್ಟೆ ಹೊಲ್ಸದಿತ್ತು’ ಅಂದ. ಅವಳಿಗೇನು ಅರ್ಥವಾಯಿತೋ ‘ಬಣ್ಣಿ’ ಎಂದು ಮಲೆಯಾಳಂಕನ್ನಡದಲ್ಲಿ ಕರೆದು ನಾವು ಒಳಗೆ ಬರುತ್ತಲೇ ಬಾಗಿಲು ಮುಚ್ಚಿದಳು. ಅವನ ಟೇಲರಿಂಗ್ ರೂಮಿಗೆ ಹೋಗಿ ಕಾಯುತ್ತಾ ಕೂತೆವು. &lt;br /&gt;ದೇಜಿ ಬಾಗಿಲ ಬಳಿ ಕಾಣಿಸಿಕೊಂಡ. ಒಂದು ಸುಧೀರ್ಘ ಪ್ರಯಾಣ ಮುಗಿಸಿದವನಷ್ಟು ಸುಸ್ತಾದವನಂತೆ ಕಂಡ. ಕೂದಲು ಬಣ್ಣಗೆಟ್ಟಿದ್ದವು. ಬಾಚಿ ವರ್ಷಗಳೇ ಕಳೆದಿರಬೇಕು. ಜನ್ನ ಅವನನ್ನು ನೋಡಿದ ತಕ್ಷಣ ‘ದೇಜಿ ಹೇಗಿದ್ಯ?’ ಎಂದು ಕೇಳ್ ಅವನ ಉತ್ತರಕ್ಕೂ ಕಾಯದೆ ‘ಒಂದು ದೊಡ್ಡ ಕಾರ್ಯಕ್ರಮ ಮಾಡ್ತಿದಿವಿ ನಾಟ್ಕ ಆಡಿಸ್ತೀವಿ. ಗಾಂಧಿ ಜಯಂತಿನ ತುಂಬ ಜೋರಾಗಿ ಮಾಡ್ತಿವಿ ನನ್ಗೆ ಎಂಟು ಜೊತೆ ಖಾದಿ ಜುಬ್ಬ, ಪೈಜಾಮ, ಗಾಂಧಿ ಟೋಪಿ ಬೇಕು. ನೀನೇ ಬಟ್ಟೆ ತಂದು ಹೊಲ್ದು ಕೊಡು. ಎಷ್ಟಾಗತ್ತೆ ಹೇಳು? ಗಾಂಧಿ ಜಯಂತಿ ಸಮಿತಿಯವರು ದುಡ್ಡು ಕೊಡ್ತಾರೆ. ನಾಳೆ ಬೆಳಗ್ಗೆ ಮಕ್ಕಳನ್ನ ಕಳಿಸ್ತಿನಿ. ಅವ್ರ ಅಳ್ತೆ ತೊಗೊ..’ ಎಂದೆಲ್ಲಾ ಎಡಬಿಡದೆ ಹೇಳಲು ಶುರು ಮಾಡಿದ. &lt;br /&gt;ನಾನು ದೇಜಿಯ ಟೇಲರಿಂಗ್ ಶಾಪನ್ನೇ ನೋಡುತ್ತಾ ನಿಂತಿದ್ದೆ. ಅವನು ಮೊದಲ ಸಲ ನನ್ನ ಅಳತೆ ತೆಗೆದುಕೊಳ್ಳುತ್ತಾ ನನ್ನ ಮುಜುಗರ ಕಳೆಯುತ್ತಾ ಆಡಿದ ಮಾತುಗಳು ನೆನಪಾದವು. ಯಾವತ್ತೂ ಬಟ್ಟೆ ಹೊಲಿಸಿಕೊಳ್ಳದ ನನ್ನ ಮಗಳು ಶ್ರಾವಣಿಗೆ ದೇಜಿ ಹತ್ತಿರ ಉದ್ದ ಲಂಗ ರವಕೆ ಹೊಲಿಸಿಕೊಡಬೇಕು ಅಂದುಕೊಂಡೆ. &lt;br /&gt;ಜನ್ನನ ಮಾತು ಮುಗಿದಿತ್ತು, ದೇಜಿ ಮಾತಾಡದೆ ಟೇಲರಿಂಗ್ ಮೆಷಿನ್ನನ್ನು ಮುಚ್ಚಿದ ಹಳೇ ಪಂಚೆಯನ್ನು ಸರಿಸಿದ. ನೋಡಿ ಎಂಬಂತೆ ನಮ್ಮ ಮುಖವನ್ನೇ ನೋಡಿದ.&lt;br /&gt;ಎಷ್ಟೋ ವರ್ಷಗಳಿಂದ ದೇಜಿ ಕೈಯಲ್ಲಿ ಏನನ್ನೂ ಹೊಲಿಸಿಕೊಂಡಿಲ್ಲವೆಂಬಂತೆ ಅದು ಕೂತಿತ್ತು. ನನ್ನ ಕಣ್ಣಿಗೆ ಯಾವುದೋ ಕಾಲದ ಮ್ಯೂಸಿಯಮ್ ಪೀಸಿನಂತೆ ಕಂಡಿತು. ಜನ್ನ ಒಂಚೂರೇ ಕಾಣಿಸುತ್ತಿದ್ದ ಅದರ ವೀಲನ್ನು ತಿರುಗಿಸಿದ. ವಿಚಿತ್ರವಾದ ಕರ್ಕಶ ಶಬ್ಧ ಹೊರಟಿತು.&lt;br /&gt;&lt;br /&gt;(ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ವಿದ್ಯಾರ್ಥಿ ವಿಭಾಗದಲ್ಲಿ ಬಹುಮಾನ ಸಿಕ್ಕಿದ ಕತೆ)&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4821500792131750259?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4821500792131750259/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4821500792131750259' title='11 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4821500792131750259'/><link rel='self' type='application/atom+xml' href='http://www.blogger.com/feeds/714642904810204846/posts/default/4821500792131750259'/><link rel='alternate' type='text/html' href='http://mrugnayanee.blogspot.com/2009/11/blog-post.html' title='ಒಂದು ಸೂಜಿಯ ಕಣ್ಣು'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>11</thr:total></entry><entry><id>tag:blogger.com,1999:blog-714642904810204846.post-2067188505901826572</id><published>2009-09-12T23:50:00.004+05:30</published><updated>2009-09-13T00:33:35.950+05:30</updated><category scheme='http://www.blogger.com/atom/ns#' term='ಕಥೆ'/><title type='text'>ಒಬ್ಬರು ಇಷ್ಟವಾಗುವ ಹಾಗೆ ಮತ್ತೊಬ್ಬರು ಇಷ್ಟವಾಗುತ್ತಾರಾ?</title><content type='html'>ಅವನಿಗೆ ಹೇಳ್ಬಿಡ್ಲಾ? ಪ್ರಶ್ನೆಯಾದಳು ಮಗಳು. ಹದಿನೆಂಟು ವರ್ಷದ ಬೆರಗು ಕಣ್ಗಳ ತುಂಬಾ ಅದೊಂದೇ ಪ್ರಶ್ನೆ. ಅವಳು ಹೇಳುವ ಮೊದಲೇ ಇಂಥದ್ದೇನೋ ಆಗಿದೆ ಅನ್ನಿಸಿತ್ತು. ಅವಳ ಚಡಪಡಿಕೆ, ಖುಶಿ, ತನ್ನೊಳಗೆಲ್ಲಾ ಕನಸುಗಳನ್ನು ತುಂಬಿಕೊಂಡ ಮನಸ್ಸು, ಕೊನೆಗೆ ಅವಳಾಗೇ ಬಂದು ಹೇಳಿದಳು. ಅವನ್ಯಾಕೆ ಇಷ್ಟ ಅಂತ ಕೇಳಿಕೊಂಡಿದ್ದೀಯ ಕೇಳಿದೆ. ಹೂಂ ಅಂದಳು ಅನುಮಾನಿಸುತ್ತಾ. ಹೇಳು ಅಂದರೆ ‘ಉಹು ಹೀಗೆ ಅಂತ ಹೇಳಲು ಗೊತ್ತಾಗುತ್ತಿಲ್ಲ’ ಅಂತ ಒಪ್ಪಿಕೊಂಡಳು. ಇಷ್ಟಪಡಲು ನಿಜವಾಗಲೂ ಅಂಥದ್ದೊಂದು ಕಾರಣವೇನು ಬೇಕಿಲ್ಲ. ಅಂಥ ಕಾರಣಗಳು ಕಳೆದುಹೋದರೂ ಪ್ರೀತಿಸಲು ಸಾಧ್ಯವಾ ಅನ್ನುವುದು ಮುಖ್ಯ. ನಿನ್ನದು ಪ್ರೀತಿಯಾ? ಆಕರ್ಷಣೆಯಾ? ಅಂತೆಲ್ಲಾ ಕೇಳುವುದಿಲ್ಲ. ಮಗಳು ಮೋಸ ಹೋಗಿಬಿಟ್ಟರೆ ಅಂತ ತಾಯಿ ಮನಸ್ಸು ಭಯ ಪಡುವುದು ಸಹಜ. ನಿನ್ನ ತಡೆಯೋಲ್ಲ. ಯಾರಿಗೂ ಉದಾಹರಣೆಗಳನ್ನು ಕೊಟ್ಟು ಹೆದರಿಸಿದರೆ ಉಪಯೋಗವಿಲ್ಲ ಅನ್ನುವುದು ಗೊತ್ತು. ಎಲ್ಲರಿಗೂ ಅವರವರದೇ ಅನುಭವಗಳಾಗಬೇಕು, ಅನುಭವಗಳಿಂದ ಕಲಿಯಬೇಕು. ಏನೂ ಆಗೋಲ್ಲ ನಿನಗೆ. ಜಾಗ್ರತೆಯಿಂದ ಇರು. ಏನಾದರೂ ಆದರೂ ಅಮ್ಮ ಯಾವತ್ತೂ ಇರುತ್ತಾಳೆ. ಅವನಿಗೆ ಹೇಳುತ್ತೀಯೋ ಬಿಡುತ್ತೀಯೋ ಅದು ನಿನಗೆ ಬಿಟ್ಟಿದ್ದು. ನೀನು ಹೇಳದೇ ಅದು ಅವನಿಗೆ ಅರ್ಥವಾದರೆ ಇನ್ನೂ ಖುಷಿ. ಹೇಳಿದರೆ ಮನೆಗೆ ಕರೆದುಕೊಂಡು ಬಾ ಅವನಿಗಿಷ್ಟವಾದ ತಿಂಡಿ ಮಾಡಿಕೊಡ್ತೀನಿ ಎಂದು ಹೇಳಿ ಎದ್ದು ಬಂದೆ.&lt;br /&gt;                                    * * *&lt;br /&gt;‘ನನ್ನ ಕಷ್ಟಗಳನ್ನ ಹೇಳಿಕೊಳ್ಳೋದರಲ್ಲಿ ನನಗೆ ನಂಬಿಕೆ ಇಲ್ಲ. ಹೇಳಿಕೊಳ್ಳೋದರಲ್ಲಿ ಮಾತ್ರವಲ್ಲ ಕೇಳೋದರಲ್ಲೂ. ಅವರ ಮಗ ಪಿ. ಯು. ಸಿ. ಯಲ್ಲಿ ಫೇಲಾದನಂತೆ, ಇವಳನ್ನು ನೋಡಿಕೊಂಡು ಹೋದ ಗಂಡು ಮೊದಲು ಒಪ್ಪಿದವನು ಆಮೇಲೆ ಬೇಡ ಅಂದ. ಉಹು ನನಗೆ ಅದರಲ್ಲೆಲ್ಲಾ ಆಸಕ್ತಿಯಿಲ್ಲ. ಹಾಗೆ ಕೇಳಿಸಿಕೊಳ್ಳುತ್ತಾ ಇದ್ದರೆ ಹೇಳಿಕೊಳ್ಳುವುದು ಅವರಿಗೆ ಒಂದು ತರಹದ ಪ್ಲೆಶರ್ ಕೊಡುತ್ತದೆ. ಅಂಥಾ ವಿಷಯಗಳಿಂದ ಏನೂ ಉಪಯೋಗವಿಲ್ಲ ಮಾತ್ರವಲ್ಲ ಆ ತರಹದಲ್ಲದಿದ್ದರೆ ಮತ್ತೊಂದು ತರಹದ ಕಷ್ಟ ಎಲ್ಲರಿಗೂ ಇದ್ದೇ ಇರುತ್ತೆ.  ಸೆಲ್ಫ್ ಸೆಂಟರ್ಡ್ ಪರ್ಸನಾಲಿಟಿಗಳ ಕಷ್ಟವೇ ಅದು. ಅವರಿಗೆ ಯಾರ ಕಷ್ಟಗಳನ್ನು ಕೇಳಲಾಗುವುದಿಲ್ಲ ಮಾತ್ರವಲ್ಲ ತಮ್ಮ ಕಷ್ಟಗಳನ್ನು ಹೇಳಿಕೊಳ್ಳುವುದೂ ಅವರಿಗೆ ಹಿಂಸೆ. ನನ್ನ ಕಷ್ಟಗಳನ್ನು ಹೇಳಿಕೊಂಡರೆ ನಾನು ಎಲ್ಲರ ಮುಂದೆ ಪೆಥೆಟಿಕ್ ಆಗಿಬಿಡುತ್ತೇನೇನೋ ಎಂದನಿಸುತ್ತೆ. ತೇಜಸ್ವಿ ಕಾದಂಬರಿಗಳನ್ನೋ ಟಾಲ್ಸಟಾಯ್ ಕಥೆಗಳನ್ನೋ ತೆಗೆದುಕೋ ಯಾವುದೇ ಪರ್ಸನಲ್ ವಿಷಯದ ಬಗ್ಗೆ ಅಲ್ಲಿನ ಎರೆಡು ಪಾತ್ರಗಳು ತುಂಬಾ ಇಂಟಿಮೇಟಾಗಿ ಮಾತಾಡಿಕೊಳ್ಳುವುದಿಲ್ಲ. ತೇಜಸ್ವಿಯ ಜುಗಾರಿ ಕ್ರಾಸಿನಲ್ಲಿಯಾಗಲೀ, ಚಿದಂಬರ ರಹಸ್ಯದಲ್ಲಾಗಲೀ ಯಾವ ಪಾತ್ರವೂ ತಮ್ಮ ಅತ್ಯಂತ ಇಂಟಿಮೇಟ್ ತುಂಬಾ ಪರ್ಸನಲ್ ಅನ್ನುವಂತಹ ಸಂಗತಿಗಳನ್ನ ಗೆಳೆಯನೊಡನೆ ಹೇಳಿಕೊಂಡು ಗೋಳಿಡುವುದಿಲ್ಲ. ಆದರೆ ಕುವೆಂಪು ಹಾಗೆ ಬರೆಯುತ್ತಿದ್ದರು, ಡಿಕನ್ಸ್ ಬರೆಯುವ ಅಂಥ ಕ್ಷಣಗಳನ್ನ ಆಸಕ್ತಿಯಿಂದ ಕಣ್ಣು ಒದ್ದೆ ಮಾಡಿಕೊಂಡು ಓದುತ್ತೇವೆ. ನಾನು ಆ ಲೇಖಕರ ಅಥವ ಅವರ ಪಾತ್ರಗಳ ಥರ ಎಂದು ಹೇಳುತ್ತಿಲ್ಲ. ನಿನಗೆ ಆ ತರಹದ ಎ಼ಕ್ಸಾಂಪಲ್ಸ್ ಕೊಟ್ಟರೆ ಅರ್ಥವಾಗುತ್ತೆ ಅನ್ನೋದಕ್ಕೆ ಹೇಳಿದೆ’ ಅಂದ ಅವನು. ಹೌದು ಇಷ್ಟು ದಿನವಾದರೂ ಒಮ್ಮೆಯೂ ತನ್ನ ಕಷ್ಟಗಳ ಬಗ್ಗೆ ಹೇಳಿಕೊಂಡಿಲ್ಲ ಅವನು. ಬರೀ ಕಷ್ಟಗಳ ಬಗ್ಗೆ ಅಲ್ಲ ಯಾವುದರ ಬಗ್ಗೆಯೂ ಏನನ್ನೂ ಅಷ್ಟು ಹತ್ತಿರವಾಗಿ ನನಗೊಬ್ಬಳಿಗೇ ಹೇಳುತ್ತಿರುವಂತೆ ಹೇಳಿಕೊಂಡಿಲ್ಲ. ನಾನು ಕೇಳಿ ಕೇಳಿ ಹಿಂಸೆ ಮಾಡುವುದರಿಂದ ಏನನ್ನಾದರೂ ಹೇಳುತ್ತಾನೇನೋ, ಹಾಗೆ ಹೇಳುವಾಗಲೂ ತನಗೊದಗಿರುವ ಕಷ್ಟ ಕಷ್ಟವೇ ಅಲ್ಲವೆನ್ನುವ ಥರ ಲೇವಡಿ ಮಾಡುತ್ತಾ ಹೇಳಿಕೊಳ್ಳುತ್ತಾನೆ. ‘ಇನ್ನು ಮುಂದಾದರೂ, ನನ್ನ ಬಳಿಯಾದರೂ ಹೇಳಿಕೊಳ್ಳೋ’ ಎನ್ನೋಣ ಎಂದುಕೊಂಡೆ. ನನ್ನ ಬಳಿಯಾದರೂ ಅಂದರೇನು? ‘ನನ್ನ ಬಳಿಯಾದರೂ ಹೇಳಿಕೊಳ್ಳೋ’ ಅನ್ನುವ ವಾಕ್ಯದಲ್ಲಿ ನಾನು ಅವನ ಜೀವನದಲ್ಲಿ ಪ್ರಾಮುಖ್ಯತೆಯನ್ನ ಪಡಿಯಬೇಕೆಂಬ ದೂರದ ಆಸೆಯೇನಾದರೂ ಇದೆಯೇ ಎಂದು ನನ್ನ ಮೇಲೆ ನನಗೇ ಅನುಮಾನವಾಗಿ ಹೇಳಲಾರದೇ ಹೋದೆ.&lt;br /&gt;&lt;br /&gt;ಏನೂ ಸರಿ ಇಲ್ಲದಿದ್ದಾಗಲೂ ಎಲ್ಲವೂ ಸರಿಯಿರುವಂತೆ ನಕ್ಕು ಆ ಕ್ಷಣಕ್ಕೆ ಅದೊಂದು ಕಷ್ಟವೇ ಅಲ್ಲವೆಂಬಂತೆ ನಟಿಸುವ ಕಲೆ ಅವನಿಗೆ ಸಿದ್ದಿಸಿಬಿಟ್ಟಿದೆ ಅನ್ನಿಸಿತು. ಅಥವಾ ತನ್ನ ಸ್ವಂತ ಭಾವನೆಗಳನ್ನು ವಿಮರ್ಷಿಸಲು ಎಡೆ ಕೊಡದೆ ಎಲ್ಲದನ್ನೂ ನಿರಾಕರಿಸುತ್ತಾ ಏನೂ ಆಗಿಲ್ಲವೆಂಬಂತೆ ನಟಿಸುವುದರಿಂದ ತನ್ನೊಳಗೆ, ತನ್ನ ಎದೆಯಲ್ಲಿ ನಡೆಯುತ್ತಿರುವ ಕೋಲಾಹಲಗಳನ್ನು ಮರೆಯಬಹುದು ಅನ್ನೋ ಭ್ರಮೆಯೋ? ಹಾಗಿರುವುದರಿಂದಲೇ ಯಾರೂ ಅವನ ಬಳಿ ಏನನ್ನೂ ಹೇಳಿಕೊಳ್ಳಲು ಬರುವುದಿಲ್ಲ ಹೇಳಿಕೊಳ್ಳಹೋದವರಿಗೆ ಭಾವನೆಗಳನ್ನ ಅರ್ಥಮಾಡಿಕೊಳ್ಳಲಾಗದ, ಭಾವನೆಗಳೇ ಇಲ್ಲದ ‘ಕೋಲ್ಡ್ ಮ್ಯಾನ್’ ಥರ ಕಾಣುತ್ತಾನಾ? ಆದರೆ ಅವನು ಹಾಗಲ್ಲ ಎಂದು ನನಗೆ ಗೊತ್ತು.&lt;br /&gt; &lt;br /&gt;“ನನಗೆ ಗೊತ್ತು” ಅನ್ನುವುದು ಅಹಂಕಾರ, ನನ್ನನ್ನೇ ನಾನು, ಅವನನ್ನು ಬೇರೆಯವರಿಗಿಂತ ಚನ್ನಾಗಿ ಅರ್ಥ ಮಾಡಿಕೊಂಡಿರೋಳು ಎಂದು ಹೇಳಿಕೊಳ್ಳುವುದರ ಇನ್ನೊಂದು ರೂಪ. ಆದರೆ ಇಂಥ ಅಹಂಕಾರಕ್ಕೆ ಅರ್ಥವಿಲ್ಲ. ಈ ಜಗತ್ತಿನಲ್ಲಿ ಪ್ರತಿಯೊಬ್ಬರೂ ತಮಗೆ ತೀರ ಇಷ್ಟವಾದವರನ್ನ ಹೀಗೇ ಅರ್ಥ ಮಾಡಿಕೊಂಡಿರುತ್ತಾರಲ್ಲವ? ಅಂಥವರಲ್ಲಿ ನಾನೂ ಒಬ್ಬಳು. ಅದರಲ್ಲಿ ವಿಶೇಷವಾದರೂ ಏನು? ಆದರೆ ನಾನೇಕೆ ಅವನಿಗಾಗಿ ಇಷ್ಟೊಂದು ಹಾತೊರೆಯುತ್ತೇನೆ? ಹಂಬಲಿಸುತ್ತೇನೆ? ನನಗೇಕೆ ಅವನ ಬಗ್ಗೆ ಧಾವಂತವಾಗುತ್ತಿದೆ? ನಾನವನನ್ನು ಪ್ರೀತಿಸುತ್ತಿದ್ದೇನಾ? ಅವನಿಗೆ ನನ್ನ ಪ್ರೀತಿಸಲು ಸಾಧ್ಯವಾ? ಅವನು ಯಾರನ್ನಾದರೂ ಯಾವತ್ತಾದರೂ ಪ್ರೀತಿಸುತ್ತಾನ? ಪ್ರೀತಿಸಿದ್ದಾನ? ಪ್ರೀತಿ ಹೀಗೆ ಏಕಾಎಕಿ ಜಾಗೃತವಾಗಿಬಿಡುತ್ತದ? ಅವನಿಗೆ ಹೇಳಿಬಿಡಲಾ? ಇಷ್ಟಕ್ಕೂ ಅದು ಹೇಳಿಕೊಳ್ಳುವುದಾ? ಅರ್ಥಮಾಡಿಕೊಳ್ಳುವುದಲ್ಲವ? ಅವನು ಯಾವತ್ತಾದರೂ ಅರ್ಥ ಮಾಡಿಕೊಳ್ಳುತ್ತಾನ? ನನಗ್ಯಾಕೆ ಹೀಗೆ ಸಂಕಟವಾಗುತ್ತಿದೆ? ಅಳು ಬರುತ್ತಿದೆ? ನಾನು ಹೇಳಿಕೊಳ್ಳುವುದಿಲ್ಲ. ಪ್ರೀತಿಗೆ ಬದಲು ಪ್ರೀತಿ ಸಿಗಬೇಕಾಗಿಲ್ಲ.&lt;br /&gt;&lt;br /&gt;ಈ ದಿನಗಳಲ್ಲಿ ಅನುಭವಿಸಿದಷ್ಟು ಸಿಟ್ಟು, ಆತಂಕ, ಅನಿಶ್ಚಿತತೆ, ಅನುಮಾನ, ನಾನು ಅವನಿಗೆ ಬೇಡವಾಗಿರುವೆನೆಂದೆನಿಸುವ ಭಾವ. ಥು.. ಯಾಕಷ್ಟು ಗೋಳು ಹೊಯ್ದುಕೊಂಡೆ? ನಿಜಕ್ಕೂ ಅಡಿಕ್ಟಾಗೋಗಿದೀನಿ. ಯಾಕ್ ಹಾಗೆ ಆಡಿದೆ? ಬೇಕಿತ್ತಾ ನನಗೆ? ನನಗವನು ಯಾವತ್ತೂ ಸಿಗೋದಿಲ್ಲ ಅಂತ ಗೊತ್ತಲ್ಲವ? ಸಿಗೋದು ಅಂದರೇನು ಎಲ್ಲಾ ಸಮಯವೂ ನನ್ನ ಜೊತೆಗೇ ಇರುವುದು, ನಾನು ಕಣ್ಣು ಬಿಟ್ಟಾಗಲೆಲ್ಲಾ ನಾನವನನ್ನು ನೋಡುವಂತಾಗುವುದು, ಯಾರ ಹೆದರಿಕೆ ಭಯಗಳಿಲ್ಲದೆ ನನ್ನ ಉಸಿರನ್ನು ಅವನ ಉಸಿರಾಗಿಸುವಂತಾಗುವುದಾ? ನಾನು ಕೂಗಿದಾಗಲೆಲ್ಲ ಬರುವನೆನ್ನ ಹುಡುಗ.. ಅಂತಿದ್ದರೆ ಅವನು ನನ್ನವನಾ? ಪ್ರೀತಿ ಅನ್ನುವುದು ‘ಹೀಗೇ’ ಅಂತ ಅದಕ್ಕೊಂದು ಭಾಷ್ಯ ಕೊಡುವುದು ಎಷ್ಟು ಕಷ್ಟ? ಹೀಗೇ ಅಂತ ವಿಶ್ಲೇಶಿಸಿ ಹೇಳಬೇಕಾದದ್ದಾದರೂ ಯಾತಕ್ಕೆ? ನನಗೆ ಜೀವನ ಪೂರ್ತಿ ‘ಪ್ರೀತಿ’ ಇಡಿಯಾಗಿ ಸಿಕ್ಕುವುದಿಲ್ಲವಾ? ಹುಚ್ಚು...&lt;br /&gt;&lt;br /&gt;ಧಸಕ್ ಎಂದು ಎದ್ದು ಕೂತೆ. ಯಾರೋ ಹೊರಗೆಳೆದುಕೊಂಡು ಬಂದಂತೆ. ಇಷ್ಟು ವಿವರವಾಗಿ ಇಪ್ಪತ್ನಾಲ್ಕು ವರ್ಷದ ಹಿಂದೆ ನೆಡೆದ ಘಟನೆ ಯಾಕೆ ನೆನಪಾಗಬೇಕು. ಅದೆಲ್ಲಾ ಅನುಭವಗಳಿಂದ ಮತ್ತೆ ಹಾದು ಹೋದ ಹಾಗೆ? ಮಗಳು ಅವನಿಗೆ ಹೇಳಿಬಿಡುತ್ತಾಳ? ಯಾಕೋ ಮಲಗಿಯೇ ಇರೋಣ ಅನ್ನಿಸಿತು. ಓದಲು ತೆರೆದ ಪುಸ್ತಕದ ಒಂದು ಸಾಲೂ ಓದಲಾಗುತ್ತಿಲ್ಲ.&lt;br /&gt;&lt;br /&gt;                                             ೨ &lt;br /&gt;ಮದುವೆಯಾಗುತ್ತೀಯ ಅಂದ ಪ್ರೀತಿಯ ಮಾತೇ ಇಲ್ಲ. ಹಿಂಗೆಲ್ಲಾ ಕೇಳುತ್ತಾರ ಆಶ್ಚರ್ಯವಾಯಿತು. ಇಲ್ಲ ಎಂದು ಹೇಳುವುದಕ್ಕೂ ಹುಂ.. ಎಂದು ಹೇಳುವುದಕ್ಕೂ ಎರಡಕ್ಕೂ ಕಾರಣಗಳಿರಲಿಲ್ಲ. ಅಮ್ಮನನ್ನು ಕೇಳು ಅಂದೆ, ನಕ್ಕ. ಕಷ್ಟಗಳನ್ನೇನು ಕೊಡಲಿಲ್ಲ ಹುಡುಗ, ಸುಖ ಪಟ್ಟೆ ಅನ್ನಲಾ? ಸುಖ ಅಂದರೇನು? ಅದನ್ನು ಅರ್ಥೈಸುವುದಾದರೂ ಹೇಗೆ? ಹೊಟ್ಟೆ, ಬಟ್ಟೆ, ಲಗ್ಜುರಿಗಳಿಗೆ ಚಿಂತೆಯಿಲ್ಲದೆ ನೆಮ್ಮದಿಯಾಗಿರುವುದೇ ಸುಖವಾ? ಬರೀ ಅಷ್ಟಿದ್ದರೆ ನೆಮ್ಮದಿ ಬಂದು ಬಿಡುತ್ತಾ? ಹೋಗಲಿ ಅದೆಲ್ಲಿಂದಾದರೂ ಬರುವಂಥದಾ? ನಾನೇ ಕಂಡುಕೊಳ್ಳಬೇಕದದ್ದಲ್ಲವಾ? ಎಲ್ಲಾ ಇದ್ದರೂ ಏನೋ ಇಲ್ಲದಂತೆ ನನ್ನನ್ನು ಕಾಡುತ್ತಿದ್ದುದು ಕಾಡುತ್ತಿರುವುದಾದರೂ ಯಾವುದು? ಇಷ್ಟು ದಿನಗಳಾದರೂ ಮದುವೆಯಾದವನೊಂದಿಗೆ ಹಾಗಿರಲಾಗಲೇ ಇಲ್ಲವಲ್ಲ. ಇವನೊಡನೆ ಯಾವುದೇ ಭಿಡೆಗಳಿಲ್ಲದೆ ಬದುಕಲು ಬರಲೇ ಇಲ್ಲ. ಮೊದಲು ‘ಮುದ್ದಾಗಿದ್ದಾಳೆ’ ಎಂದು ನನ್ನ ಇಷ್ಟಪಟ್ಟು ಕಟ್ಟಿಕೊಂಡವನಿಗೆ, ಅವನ ವ್ಯಾವಹಾರಿಕ ಸ್ಪಂದನೆಗಳಿಗೆ ಸರಿಯಾಗಿ ಸ್ಪಂದಿಸದೆ, ನನ್ನ ಭಾವಲೋಕದಲ್ಲೇ, ಕಥೆ-ಕಾದಂಬರಿ ಆರ್ಟ್ ಸಿನೆಮಾಗಳಂಥಹ ಸಂಗತಿಗಳಲ್ಲಿ ಅವನ ಮಾತಿನಲ್ಲಿ ಹೇಳೋದಾದರೆ ‘ಕೆಲಸಕ್ಕೆ ಬಾರದ’ ವಿಷಯಗಳಲ್ಲೇ ಮುಳುಗಿ ಹೋಗಿರುತ್ತಿದ್ದ ನನ್ನನ್ನು ಕಂಡು ಮೊದ್ದು-ಮೊದ್ದು ಅನ್ನಿಸಿ, ತಪ್ಪು ಮಾಡಿದೆ ಅನ್ನಿಸಿರಬೇಕು. ಆಮೇಲಾಮೇಲೆ ದೈಹಿಕ ಅಗತ್ಯತೆಗಳು ಕಡಿಮೆಯಾಗುತ್ತಾ ಹೋದ ಹಾಗೆ ದೂರವಾಗುತ್ತಾ ಹೋದೆವು. ‘ಬೇರೆಯಾವುದಾದರೂ ಸಂಭಂದದಲ್ಲಿ ತೊಡಗುತ್ತಾನ?’ ಎಂದು ಆಸಕ್ತಿಯಿಂದ ಕಾದೆ. ಹಾಗವನು ಮಾಡಿದ್ದರೆ, ಅವನಿಗೆ ‘ನಿನ್ನ ಇನ್ನೊಂದು ಸಂಭಂದದ ಬಗ್ಗೆ ನನಗೆ ಗೊತ್ತು ಆದರೆ ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ, ಅದಕ್ಕೂ ನನಗೂ ಸಂಭಂಧವಿಲ್ಲ, ಬೇಕಾದರೆ, ನಿನಗೆ ಸಹಾಯವಾಗುವುದಾದರೆ, ನಿನ್ನಿಂದ ದೂರ ಸರಿಯುತ್ತೇನೆ.’ ಎಂದು ಹೇಳಿ ಅವನ ಮುಂದೆ ಉದಾತ್ತವಾಗುವ ಕನಸು ಕಂಡಿದ್ದೆ. ಕೆಲವರಿಗಾದರೂ ತಮಗೆ ಯಾರಾದರೂ ಹತ್ತಿರದವರು ಮೋಸ ಮಾಡಲಿ ಎಂದು ಕಾಯ್ದು (ಅದಕ್ಕೆ ಮೋಸ ಅನ್ನಬೇಕ?) ಮೋಸ ಹೋಗುತ್ತಿದ್ದೇವೆಂದು ಗೊತ್ತಾದಾಗ ದೊಡ್ದ ರಂಪಾಟ ಮಾಡದೆ ದೊಡ್ಡ ಮಾತಿನಲ್ಲಿ ಹೇಳೋದಾದರೆ ಕ್ಷಮಿಸಿ, ಎಲ್ಲರಿಂದ ಸಿಂಪತಿಯನ್ನ ಪಡೆಯಬೇಕೆಂಬ ಸುಪ್ತ ಆಸೆಯಿರುತ್ತದೇನೋ? ನನ್ನ ದೊಡ್ಡವಳಾಗಲು ಅವನು ಬಿಡಲಿಲ್ಲ. &lt;br /&gt;&lt;br /&gt;ಕಥೆಯಾಗಿದ್ದರೆ ಓದಿದ ಜನ ಕ್ಲೀಷೆ ಎನ್ನುತ್ತಿದ್ದರೇನೋ.. ಹಾಗೆನ್ನುವಂತೆ ಎಷ್ಟೋ ವರ್ಷಗಳ ಮೇಲೆ ಎದುರು ಸಿಕ್ಕ, ಹುಡುಗಿಯಂತೆ ತಲೆ ತಗ್ಗಿಸಿದ. ಮನೆಗೆ ಬರಲಾ ಮಾತಾಡಬೇಕು ಅಂದ. ಮನಸಿನಲ್ಲಿ ನೆಲೆಯಾದವನು ಮನೆಗೆ ಬರಲಾ ಎಂದರೆ ಬೇಡವೆನ್ನಲಾಗಲಿಲ್ಲ.. ನಾ ಕೊಟ್ಟ ಕಾಫಿಯನ್ನ ತೊಟ್ಟು ತೊಟ್ಟಾಗಿ ಹೀರುತ್ತಿದ್ದವನನ್ನು ಸರಿಯಾಗಿ ಗಮನಿಸಿದೆ.. ಕಬ್ಬಿಣದಂತಿದ್ದ ತೋಳುಗಳು, ಆಗ ಅದರಲ್ಲಿ ಕರಗಿಹೋಗಬೇಕೆನಿಸುತ್ತಿತ್ತು, ಇನ್ನೂ ಒಂದಷ್ಟು ಕೊಬ್ಬನ್ನು ಸೇರಿಸಿ ಪುಷ್ಟಿಯಾಗಿದ್ದವು. ನನಗೆ ನಿನ್ನ ಮನಸ್ಸು ಅರ್ಥ ಆಗುತ್ತಿತ್ತು, ನನ್ನ ಮನಸ್ಸೂ ಅದೇ ಆಗಿತ್ತು. ಆದರೆ ನಿನ್ನಂಥ ಹುಡುಗಿ ನನ್ನ ಜೊತೆ ಕಷ್ಟ ಪಡಬಾರದು ಎಂದು ನಿರ್ಧರಿಸಿದ್ದೆ. ಅಮ್ಮನನ್ನು ನೋಡಿದ್ದೆನಲ್ಲ, ಅಮ್ಮನಂಥವಳಿಗೆ ಅಪ್ಪನಿಗಿಂತ ಚನ್ನಾಗಿ ನೋಡಿಕೊಳ್ಳುವವರು ಸುಖದಲ್ಲಿ ಸಾಕುವವರು, ಅವಳನ್ನು ಕಷ್ಟಕ್ಕೆ ನೂಕದವರು ಸಿಗಬೇಕಿತ್ತು ಅನ್ನಿಸುತ್ತಿತ್ತು. ನಾವೇನಾದರೂ ಮದುವೆಯಾಗಿದ್ದರೆ ನನ್ನ ಮಗನಿಗೂ ಹಾಗೇ ಅನ್ನಿಸುತ್ತಿತ್ತು. ಹಾಗಾಗುವುದು ನನಗೆ ಬೇಕಿರಲಿಲ್ಲ. ಮದುವೆಯಾಗಿದ್ದರೆ ನಿನ್ನ ಕಣ್ಣಲ್ಲಿ ಈಗ ಕಾಣುವ ಪ್ರೀತಿ ಕಾಣುತ್ತಿರಲಿಲ್ಲ ಅಂದ. ಬೇರೆ ದಾರಿಯಲ್ಲಿ ಹೋಗಲು ನಿರ್ಧರಿಸಿ ಇನ್ನೆಲ್ಲೋ ಸೇರಿದ ಮೇಲೆ, ನಾವು ತುಳಿಯದ ದಾರಿಯಲ್ಲಿ ಮುಳ್ಳೇ ಇತ್ತೆಂದು ಅಂದುಕೊಳ್ಳುವುದಕ್ಕೆ ಏನನ್ನುತ್ತಾರೆ? (ಬುದ್ದಿವಂತಿಕೆ?) ಕೇಳೋಣವೆಂದುಕೊಂಡೆ, ವ್ಯರ್ಥ ಅನ್ನಿಸಿತು, ಸುಮ್ಮನಾದೆ. ಅದ್ಯಾಕೋ ಎಷ್ಟೋ ವರ್ಷಗಳಿಂದ ಹಿಡಿದಿಟ್ಟಿದ್ದನೇನೋ ಎನ್ನುವಂತೆ ನಿರುಮ್ಮಳವಾಗಿ, ಎದುರು ಕೂತ ಅವನಿಗೂ ನಿಚ್ಛಳವಾಗಿ ತಿಳಿಯುವಂತೆ ನಿಟ್ಟುಸಿರಿಟ್ಟೆ. ನನ್ನ ಇನ್ಯಾವುದೂ ಕಾಡಲು ಸಾಧ್ಯವಿಲ್ಲ ಅನ್ನಿಸಿತು. ಯಾಕೋ ಮಗಳು ನೆನಪಾದಳು. ಅಷ್ಟು ದಿನಗಳಿಂದ ‘ಇವತ್ತು ಹೇಳುತ್ತೇನೆ, ನಾಳೆ ಹೇಳುತ್ತೇನೆ’ ಅನ್ನುತ್ತಿದ್ದವಳು ಇವತ್ತು ಏನಾದರಾಗಲಿ ಹೇಳಿಯೇ ಬಿಡ್ತಿನಿ ಅಮ್ಮಾ ಅಂದಿದ್ದಳು. ಅವನು ಒಪ್ಪಿಕೊಂಡಿರುತ್ತಾನಾ? ಪ್ರಶ್ನೆಯಾಯಿತು ಮನಸ್ಸು. ಅವನು ಕಾಫಿ ಕಪ್ಪನ್ನು ಸದ್ದು ಮಾಡುತ್ತಾ ಟೇಬಲ್ಲಿನ ಮೇಲೆ ಇಟ್ಟ. ಅವನ ಮಾತುಗಳಿಗೆ ನಾನು ಉತ್ತರವನ್ನೇ ಕೊಡದೆ ಎಲ್ಲೋ ಕಳೆದು ಹೋಗಿದ್ದೆ. ನಾನೇನಾದರೂ ಅಂದಿದ್ದರೆ ಮಾತು ಬೆಳೆಯುತ್ತಿತ್ತು. ಮಾತುಗಳು ಬೆಳೆದರೆ ಏನಾಗುತ್ತದೆಂದು ಗೊತ್ತಿತ್ತು. ನನ್ನ ಗಂಡನನ್ನು ಸುಮ್ಮನೆ ಉದಾತ್ತನನ್ನಾಗಿಸುವುದು ನನಗೆ ಬೇಕಿರಲಿಲ್ಲ. ವಾದಗಳಿಂದ ಏನೂ ಪ್ರಯೋಜನವಿಲ್ಲ ವಾದ ಮಾಡುವವರು ಇಬ್ಬರೂ ಮಾತಾಡುತ್ತಾ ಹೋಗುತ್ತಾರಷ್ಟೇ ನಮ್ಮ ಅನಿಸಿಕೆ ನಂಬಿಕೆಗಳು ಯಾವರೀತಿಯಾದರೂ ಎದುರಿನವರ ಭಾವಕ್ಕೆ ತಟ್ಟಬೇಕಷ್ಟೇ. ಅದು ಮಾತಿನಿಂದಾಗುವಂಥದಲ್ಲ. ಅದೂ ಯಾವುದೋ ವಿಷಯದಲ್ಲಿ ಎದುರಿನವರು ನಮಗಿಂತಾ ಸಂಪೂರ್ಣ ಭಿನ್ನವಾದ ಅಭಿಪ್ರಾಯ ಹೊಂದಿದ್ದರೆ ಎಷ್ಟೇ ವಾದ ಮಾಡಿದರೂ ಆಗುವುದು  ಪದಗಳ ವ್ಯರ್ಥ ವೆಚ್ಚ. ಹೊರಟು ನಿಂತವನು ಮನೆಗೆ ಬಾ ಅಂದ. ಸುಮ್ಮನೆ ನಕ್ಕೆ. ಅವನಿಗೆ ನಾನು ಹೋಗುವುದಿಲ್ಲವೆಂದು ಗೊತ್ತು.&lt;br /&gt;&lt;br /&gt;ಮಗಳು ಮನೆಗೆ ಬಂದಳು ಖುಶಿಯಾಗಿದ್ದಳು. ‘ನಿನ್ನ ಹುಡುಗನಿಗೇನು ಇಷ್ಟ? ಯಾವತ್ತು ಮನೆಗೆ ಬರುತ್ತಾನೆ?’ ಕೇಳಿದೆ. ಇಲ್ಲಮ್ಮ ಅವನಿಗೆ ಈಗಾಗಲೇ ಗರ್ಲ್ ಫ್ರೆಂಡ್ ಇದಾಳಂತೆ ಅಂದಳು. ಅತ್ತಿದ್ದಾಳ ಕಣ್ನನ್ನು ಹುಡುಕಿದೆ. ಅದಕ್ಕೆಲ್ಲಾ ಅಳೋದಿಲ್ಲಮ್ಮಾ.. ಇನ್ಯಾರಾದರೂ ಅವನಷ್ಟೇ ಇಷ್ಟವಾಗುವವನನ್ನು ಹುಡುಕಿಕೊಳ್ಳುತ್ತೇನೆ ಅಂದಳು. ಒಬ್ಬರು ಇಷ್ಟವಾಗುವ ಹಾಗೆ ಮತ್ತೊಬ್ಬರು ಇಷ್ಟವಾಗುತ್ತಾರ? ಪ್ರಶ್ನೆ ನನ್ನಲ್ಲಿಯೇ ಉಳಿಯಿತು.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-2067188505901826572?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/2067188505901826572/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=2067188505901826572' title='19 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/2067188505901826572'/><link rel='self' type='application/atom+xml' href='http://www.blogger.com/feeds/714642904810204846/posts/default/2067188505901826572'/><link rel='alternate' type='text/html' href='http://mrugnayanee.blogspot.com/2009/09/blog-post_12.html' title='ಒಬ್ಬರು ಇಷ್ಟವಾಗುವ ಹಾಗೆ ಮತ್ತೊಬ್ಬರು ಇಷ್ಟವಾಗುತ್ತಾರಾ?'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>19</thr:total></entry><entry><id>tag:blogger.com,1999:blog-714642904810204846.post-8836986547211552564</id><published>2009-07-18T09:05:00.000+05:30</published><updated>2009-07-18T09:06:33.021+05:30</updated><title type='text'>ಸಾಹಿತ್ಯ ಯಾಕೆ ಬೇಕು ಎಂದು ಹೇಳಲು ಯತ್ನಿಸುತ್ತಾ...</title><content type='html'>‘ಸಾಹಿತ್ಯ ಯಾಕೆ ಬೇಕು?’ ಅನ್ನೋ ಸಾಲು ನೋಡುತ್ತಲೇ ಈ ಪ್ರಶ್ನೆಯನ್ನ ಯಾವತ್ತೂ ಕೇಳಿಕೊಳ್ಳಲೇ ಇಲ್ಲವಲ್ಲ ಅಂತ ನನ್ನ ಬಗ್ಗೆ ನನಗೇ ಆಶ್ಚರ್ಯವಾಯಿತು. ಸ್ಕೂಲಿಗೆ ಹೋಗುತ್ತಿದ್ದ ವಯಸ್ಸಿನಿಂದಲೂ ಸ್ಕೂಲಿಗೆ ಯಾಕೆ ಹೋಗಬೇಕು ಅಂತ ಗೊತ್ತಿತ್ತು. ಯಾಕೆ ಓದಬೇಕು ಅಂತ ಗೊತ್ತಿತ್ತು. ಅಪ್ಪ ‘ಡಾಕ್ಟರಾಗಬೇಕು ನೀನು, ಚನ್ನಾಗಿ ಓದು’ ಅನ್ನುತ್ತಿದ್ದರು. ಇವತ್ತು ಸ್ಕೂಲಿಗೆ ಹೋಗುವುದು ನಾಳೆ ಡಾಕ್ಟ್ರಾಗುವುದಕ್ಕೆ ಅಂದುಕೊಂಡಿದ್ದೆ. ಅಮ್ಮನಿಗೆ ಮನೆಕೆಲಸದಲ್ಲಿ, ಅಡುಗೆ ಮಾಡುವುದಕ್ಕೆ ಸಹಾಯ ಮಾಡುತ್ತಿದ್ದರೆ, ಈಗಲೇ ಎಲ್ಲಾ ಕಲಿತುಬಿಡು ಮುಂದೆ ನಿನಗೆ ಕಷ್ಟವಾಗುವುದಿಲ್ಲ ಅನ್ನುತ್ತಿದ್ದಳು. ಸ್ನಾನ ಮಾಡುವುದು ಕ್ಲೀನಾಗಿರುವುದಕ್ಕೆ, ಕ್ರೀಮು, ಪೌಡ್ರು ಹಚ್ಚಿಕೊಳ್ಳುವುದು ಚನ್ನಾಗಿ ಕಾಣೋದಕ್ಕೆ, ವಾಕಿಂಗು ಸೈಕ್ಲಿಂಗು ಆರೋಗ್ಯವಾಗಿರೋಕ್ಕೆ ಅಂತೆಲ್ಲಾ ಹೇಳಿಕೊಟ್ಟರು. ಆದರೆ ಮನೆಯಲ್ಲಿ ಅಷ್ಟೊಂದು ಪುಸ್ತಕಗಳನ್ನ ಅಪ್ಪ ಯಾಕೆ ಇಟ್ಟಿದ್ದರು ಅಂತ ಯಾವತ್ತೂ ಹೇಳಲಿಲ್ಲ. ಅಪ್ಪ ಅಂದ ತಕ್ಷಣ ನೆನಪಾಗುವುದು ಅವರು ಪುಸ್ತಕವೊಂದನ್ನು ಕಯ್ಯಲ್ಲಿ ಹಿಡಿದುಕೊಂಡು ಮಂಚದಮೇಲೆ ಆರಾಮಾಗಿ ಕೂತು ಓದುತ್ತಿದ್ದುದು. ಅಪ್ಪ ಯಾಕೆ ಹಾಗೆ ಓದುತ್ತಿದ್ದರು? ನಾನು ಹುಚ್ಚು ಹಿಡಿದವಳಂತೆ, ಪರೀಕ್ಷೆ ಹತ್ತಿರ ಬಂದರೂ ಬಯಾಲಜಿ, ಫ್ಹಿಸಿಕ್ಸ್ ಪುಸ್ತಕಗಳೊಳಗೆ ವೈದೇಹಿ, ಅನಂತಮೂರ್ತಿ, ಕುವೆಂಪು, ಬೈರಪ್ಪನವರ ಕಥೆ ಕಾದಂಬರಿಗಳನ್ನು ಕದ್ದಿಟ್ಟುಕೊಂಡು ಓದುತ್ತಿದ್ದುದು ಯಾಕೆ? ಲೈಬ್ರರಿಯಿಂದ ಎಲ್ಲರೂ ಸೈಕಾಲಜಿ ಪುಸ್ತಕವನ್ನೋ ಜರ್ನಲಿಸಂ ಪುಸ್ತಕವನ್ನೋ ತೆಗೆದು ಓದಿದರೆ ನಾನ್ಯಾಕೆ ಲಂಕೇಷರ ನಾಟಕಗಳನ್ನು, ಚಾರ್ಲ್ಸ್ ಡಿಕನ್ಸಿನ, ಟಾಲ್ಸ್‌ಟಾಯ್‌ನ ಕಾದಂಬರಿಗಳನ್ನು ಆರಿಸಿಕೊಂಡು ಓದುತ್ತೇನೆ? ಹೀಗೆ ನಾನ್ಯಾವತ್ತೂ ಕೇಳಿಕೊಂಡಿರಲಿಲ್ಲ.&lt;br /&gt;&lt;br /&gt;ಆದ್ಯತೆಗಳು ಬದಲಾಗಿವೆ ಹೌದು, ಆದ್ಯತೆಗೆಳು ಬದಲಾಗಿರುವುದು ಈಗ ಮಾತ್ರವಾ? ಪ್ರತಿಯೊಂದು ತಲೆಮಾರಿನ ಆದ್ಯತೆಯೂ ತನ್ನ ಹಿಂದಿನ ತೆಲೆಮಾರಿನ ಆದ್ಯತೆಗಿಂತ ಭಿನ್ನವಾಗಿರುತ್ತದೆ. ಹಾಗಂತ ಸಾಹಿತ್ಯಕ್ಕೆ ಅದರಿಂದ ಹೊಡೆತ ಬಿದ್ದಿದೆಯಾ? ಬೆಂಗಳೂರಿನ ಜನ ಟ್ರಾಫಿಕ್ಕಿನಲ್ಲೇ ದಿನದ ಅರ್ಧ ಕಳೆದುಕೊಳ್ಳುತ್ತಾರೆ, ನನ್ನ ಕೆಲವು ಸ್ನೇಹಿತರಿಗೆ ಏನನ್ನದರೂ ಓದುವುದಕ್ಕಿಂತ ಇಂಟರ್ನೆಟ್ಟಲ್ಲಿ ಚಾಟ್ ಮಾಡುವುದು, ಸ್ನೇಹಿತರ ಜೊತೆ ಸುತ್ತಾಡುವುದು, ಬೀಚಿಗೆ ಹೋಗೋದು, ಸಿನಿಮಾಗಳಿಗೆ ಹೋಗೋದು ಇಷ್ಟ ಆಗುತ್ತೆ. ಅದು ಅವರವರ ಇಷ್ಟ, ನನಗೆ ಓದುವುದು ಹೇಗೆ ಪ್ರೀತಿಯೋ ಹಾಗೆ ಅವರಿಗೆ ಇಂಟರ್ನೆಟ್ಟು ಪ್ರೀತಿ. ನಾನು ಲಂಕೇಶರ ‘ನನ್ನ ತಂಗಿಗೊಂದು ಗಂಡು ಕೊಡಿ’ ಹಿಡಿದುಕೊಂಡು ಕೂತಿದ್ದರೆ ನನ್ನ ಸ್ನೇಹಿತೆ ಎಮ್ ಟಿ.ವಿ ರೋಡೀಸ್‌ನಲ್ಲಿ ಯಾರು ಗೆಲ್ಲುತ್ತಾರೆ ಅಂತ ತಲೆಕೆಡಿಸಿಕೊಳ್ಳುತ್ತಾಳೆ. ಆಗ ಎಮ್ ಟಿ.ವಿ, ಇಂಟರ್ನೆಟ್ಟು, ಇಷ್ಟೊಂದು ಟ್ರಾಫಿಕ್ಕು ಇರಲಿಲ್ಲ ಆದರೂ ಎಷ್ಟೋ ಜನ ಏನನ್ನೂ ಓದುತ್ತಿರಲಿಲ್ಲ. ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ ಇರಲಿಲ್ಲ ಅಷ್ಟೆ. ಈಗಲೂ ಅದೇ ರೀತಿ ಸಾಹಿತ್ಯದಲ್ಲಿ ಆಸಕ್ತಿ ಇರುವವರು ಓದುತ್ತಾರೆ ಇಲ್ಲದವರು ತಮ್ಮ ಆಸಕ್ತಿಗಳೆಡೆಗೆ ಹೊರಳಿಕೊಳ್ಳುತ್ತಾರೆ. ಸ್ವಾತಂತ್ರ್ಯ ಪೂರ್ವದಲ್ಲಿ, ಸ್ವಾತಂತ್ರ್ಯ ಸಿಕ್ಕ ಹೊಸತರಲ್ಲಿ ಆ ವಿಶಯಕ್ಕೆ ಜನರು ಹೆಚ್ಚಿನ ಆದ್ಯತೆ ಕೊಟ್ಟರು, ಆಗ ಅಂಥ ಸಾಹಿತ್ಯ ಬಂತು. ಕೆಲವು ದಿನಗಳ ನಂತರ, ಪ್ರಕ್ರುತಿಗೆ ಆದ್ಯತೆ ಕೊಟ್ಟರು, ಮುಂದಿನವರು ಸಮಾನತೆ ಅಂದರು, ಸ್ತ್ರೀ ಶೋಶಿಸಲ್ಪಡುತ್ತಿದ್ದಾಳೆ ಅಂತ ಗೊತ್ತಾಯಿತು, ಹೀಗೆ ಜನರ ಗಮನ ಒಂದರಿಂದ ಇನ್ನೊಂದಕ್ಕೆ ಬದಲಾಗುತ್ತಾ ಹೋಯಿತು. ಪ್ರತೀ ಬಾರಿ ಹೀಗೆ ಆದಾಗಲೂ ಅದಕ್ಕೆ ಸಮಾನಾಂತರವಾಗಿ ಸಾಹಿತ್ಯವೂ ಬದಲಾಗಿದೆ. ಈಗಿನ ಆದ್ಯತೆಗಳಿಗೆ ತಕ್ಕಂತೆ, ರಿಯಲಿಸ್ಟಿಕ್ಕಾಗಿ, ಉತ್ಪ್ರೇಕ್ಷೆಗಳಿಲ್ಲದೆ, ಇಷ್ಟವಾಗುವಂತೆ, ಪೂ ಚಂ ತೆ ಬರೆದರಲ್ಲ. ವಸುದೇಂದ್ರ, ಜೋಗಿ, ವಿವೇಕ್ ಶಾನಭಾಗ ಬರೆದುದನ್ನು ಇಷ್ಟಪಟ್ಟು ಓದುತ್ತೇವಲ್ಲ. ಚೇತನ್ ಭಗತ್ ಕಾದಂಬರಿಗಳಲ್ಲಿ ಏನೂ ಇಲ್ಲ ಅನ್ನುವವರು ಕೂಡಾ ಅದನ್ನು ಓದುತ್ತಾರೆ, ಅರವಿಂದ್ ಅಡಿಗ ‘ಹೀಗೆಲ್ಲಾ ಭಾರತದ ಸ್ಥಿತಿ ಇದೆ’ ಅಂತ ಹೇಳಿ ನಮ್ಮನ್ನು ಆಶ್ಚರ್ಯ ಪಡಿಸುತ್ತಾನೆ. ಕೋಲ್‌ರಿಜ್‌ನ ‘ಕುಬ್ಲಾ ಖಾನ್’ ಆಶ್ಚರ್ಯ್ ಪಡಿಸುವಂತೆ ಈ ಥರ ಅದೆಲ್ಲೋ ಅದ್ಯಾವತ್ತೋ ನಡೆದಿರಬಹುದು ಅಂತ ಅಂದುಕೊಳ್ಳುವಂತೆ ‘ವೈಟ್ ಟೈಗರ್’ನಲ್ಲಿ ಅವನು ಹೇಳಿರುವ ಸ್ಥಿತಿ ಭಾರತದ ಕೆಲವು ಕಡೆಗಳಲ್ಲಾದರೂ ಇದೆ ಎಂದು ಅನಿಸುತ್ತದೆ.&lt;br /&gt;&lt;br /&gt;‘ಸಾಹಿತ್ಯದಿಂದ ಹೊಟ್ಟೆ ತುಂಬುವುದಿಲ್ಲ’ ಅಂತ ನಾನು ಸಣ್ಣವಳಿದ್ದಾಗ ಹೇಳಿದ್ದರೆ, ಬೇಡ ಒಂದು ಐದಾರು ವರ್ಷದ ಹಿಂದೆ ಹೇಳಿದ್ದರೂ ಸಹ ನನಗೆ ಈ ಸಾಲಿನ ಅರ್ಥ ತಿಳಿಯುತ್ತಿರಲಿಲ್ಲ. ನಾನು ಅಷ್ಟು ಆಸೆಯಿಂದ ಕಾದಂಬರಿ, ಕಥೆಗಳು, ಸಿಕ್ಕ ಸಿಕ್ಕ ಮ್ಯಾಗ್ಜೈನುಗಳನ್ನ ಓದುತ್ತಿರುವಾಗ, ಮುಂದೆ ನಾನೇನಾದ್ರೂ ಬರೀತಿನಿ, ಅದರಿಂದ ದುಡ್ಡು ಬರುತ್ತೆ ಅಂತ ಗೊತ್ತಿರಲಿಲ್ಲ. ಸಾಹಿತ್ಯ ಯಾಕೆ ಬೇಕು ಅಂತ ಯೋಚಿಸುವಾಗ ಕಥೆಯೋ ಕಾದಂಬರಿಯೋ ಪ್ರಭಂದವೋ ಬರೆದರೆ ಅದರಿಂದ ದುಡ್ಡು ಬರುತ್ತೆ ಅದಕ್ಕೆ ಬರೆಯುತ್ತೀನಿ ಅಂತ ಯಾರಾದರೂ ಯೋಚಿಸುತ್ತಾರ? ಸಾಹಿತ್ಯ ಸ್ರಷ್ಠಿಯಾಗುವುದು ಇನ್ನು ಬರೆಯದೇ ಇರಲು ಸಾಧ್ಯವಿಲ್ಲ ಅನ್ನೋ ಒತ್ತಡದಿಂದಲ್ಲವ, ಅದರಮೇಲಿನ ಪ್ರೀತಿ ಆಸಕ್ತಿಯಿಂದಲ್ಲವ? ಹಾಗೆ ಬರೆದದ್ದು ಮಾತ್ರ ಗೆಲ್ಲುತ್ತದೆ ಅನ್ನುವುದು ನನ್ನ ನಂಬಿಕೆ. ‘ಎನಿಥಿಂಗ್ ರಿಟನ್ ವಿದೌಟ್ ಇಂಟ್ರೆಸ್ಟ್ ಇಸ್ ಇನ್ ಜನರಲ್ ರೆಡ್ ವಿದೌಟ್ ಪ್ಲೆಶರ್’ ಅಂತ ಎಲ್ಲೋ ಓದಿದ ನೆನಪು. ಅದಲ್ಲದೆ ‘ಸಾಹಿತ್ಯ’ ಎನ್ನುವುದು ಬರೀ ಬರೆಯುವುದಕ್ಕಲ್ಲ ಓದುವುದಕ್ಕೂ ಸಂಭಂದ ಪಟ್ಟಿದೆ, ಹಾಗೆ ಓದುವುದಕ್ಕೆ ಯಾರಾದರೂ ದುಡ್ಡುಕೊಡುತ್ತಾರ? ಉಳ್ಟಾ ನಾವೇ ದುಡ್ಡು ಕೊಟ್ಟು ಖರೀದಿಸಿ ಓದಬೇಕು. ಅದಲ್ಲದೇ ಸಾಮಾನ್ಯವಾಗಿ ಈಗಿನ ಯಾವ ಸಾಹಿತಿಯೂ ಸಾಹಿತ್ಯ ತನ್ನ ಹೊಟ್ಟೆ ಹೊರೆಯುತ್ತೆ ಅಂತ ನಂಬಿಕೊಂಡಿಲ್ಲ. ಪ್ರತಿಯೊಬ್ಬರೂ ಬೇರ್ಯಾವುದೋ ಕೆಲಸದಲ್ಲಿದ್ದುಕೊಂಡು ಸಾಹಿತ್ಯವನ್ನ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ.  &lt;br /&gt;&lt;br /&gt;ಈಗಲೂ ಮತ್ತೆ ಸಾಹಿತ್ಯ ಯಾಕೆ ಬೇಕು ಅಂತ ಕೇಳಿಕೊಂಡಾಗ, ಸಾಹಿತ್ಯದಿಂದ ನಮ್ಮ ತಿಳುವಳಿಕೆ ಹೆಚ್ಚುತ್ತದೆ, ಎಷ್ಟೋ ವಿಷಯಗಳು ಗೊತ್ತಾಗುತ್ತದೆ, ಜನರನ್ನ ಅವರ ಮನಸ್ಸನ್ನ ಇನ್ನೂ ಚನ್ನಾಗಿ ಅರ್ಥ ಮಾಡಿಕೊಳ್ಳಬಹುದು, ರಸಾನುಭವಕ್ಕೆ, ಸಾಮಾಜಿಕ ಉನ್ನತಿಗೆ, ಹೀಗೇ ಯೋಚಿಸುತ್ತಾ ಏನೇನನ್ನೋ ಪಟ್ಟಿ ಮಾಡುತ್ತಾ ಹೋದರೂ, ಇಂಥಾ ಯಾವ ಕಾರಣಗಳು ಗೊತ್ತಿಲ್ಲದಿದ್ದಾಗಲೂ ಪ್ರೀತಿಯಿಂದ ಆಸೆಯಿಂದ ಓದುತ್ತಿದ್ದೆನಲ್ಲಾ ಅನ್ನುವುದು ಜ್ನಾಪಕವಗುತ್ತದೆ. ಬರೆಯದೆ ಇರಲು ಸಾಧ್ಯವಿಲ್ಲ ಅನ್ನಿಸಿದಾಗ ಬರೆದೆನಲ್ಲಾ ಅನ್ನುವುದು ಹೊಳೆಯುತ್ತದೆ. ಓದಿನ ಪ್ರೀತಿಗೆ, ಓದದೇ ಇರಲಾರದ ಕಾತರತೆಗೆ, ಬರೆಯದೇ ಇರಲಾರದಂತೆ ಹೊರಳಿಸುವ ಸಂಕಟಕ್ಕೆ ನನಗೆ ಸಾಹಿತ್ಯ ಬೇಕು.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-8836986547211552564?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/8836986547211552564/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=8836986547211552564' title='9 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/8836986547211552564'/><link rel='self' type='application/atom+xml' href='http://www.blogger.com/feeds/714642904810204846/posts/default/8836986547211552564'/><link rel='alternate' type='text/html' href='http://mrugnayanee.blogspot.com/2009/07/blog-post.html' title='ಸಾಹಿತ್ಯ ಯಾಕೆ ಬೇಕು ಎಂದು ಹೇಳಲು ಯತ್ನಿಸುತ್ತಾ...'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>9</thr:total></entry><entry><id>tag:blogger.com,1999:blog-714642904810204846.post-4304132737752620717</id><published>2009-05-15T07:59:00.005+05:30</published><updated>2009-05-15T12:12:36.964+05:30</updated><category scheme='http://www.blogger.com/atom/ns#' term='ಕಥೆ? ಕಾಣ್ಕೆ?'/><title type='text'>ಸಂಜಯದೃಷ್ಟಿ</title><content type='html'>ಇದ್ದಕ್ಕಿದ್ದಹಾಗೆ ನಾನು ಧೃತರಾಷ್ಟ್ರ ಅನಿಸತೊಡಗಿತು ನನಗೆ. ಸಂಜಯ ನನ್ನ ಮುಂದೆ ನನಗೆ ಬೇಕಾದ ಕಣ್ಣುಗಳನ್ನು ತೆರೆದುಕೊಳ್ಳಲು ಸಿದ್ಧನಾಗಿ ಕೂತಿದ್ದ. ಹೀಗೆ ಅನ್ನಿಸಿದ ತಕ್ಷಣ ಟೀವಿ ಹಾಕಲು ಮನಸಾಗಲೇ ಇಲ್ಲ. ಮಗಳ ಬಳಿ ಹೋದೆ ಸಂಜಯನ ಹತ್ತಾರು ಕಣ್ಣುಗಳನ್ನು ತೆರೆದುಕೊಂಡು ಧೃತರಾಷ್ಟ್ರಳಾಗಿ ಮಗಳು ಬ್ರೌಸ್ ಮಾಡುತ್ತಾ ಕೂತಿದ್ದಳು. ಭಯವಾಯಿತು.&lt;br /&gt;‘ಕಿಮಕುರ್ವತ ಸಂಜಯ?’ ಅಂತ ಕುರುಡ(ದೃಷ್ಟಿಹೀನ ಇನ್ನೂ ಒಳ್ಳೆಯ ಪದವಾ?) ಧೃತರಾಷ್ಟ್ರ ಅಂದಾಗಲೆಲ್ಲಾ ಸಂಜಯನು ಯಥಾವತ್ತಾಗಿ ರೋಬೋಟಿನ ಥರ ಯುದ್ದದ ಸ್ಥಿತಿಗತಿಗಳನ್ನು ವಿವರಿಸಿದ್ದನಾ? ಅಥವಾ ಒಂದೊಂದು ಪಕ್ಷವನ್ನು ಸಮರ್ಥಿಸುವ ಪತ್ರಿಕೆಯ ಥರ, ಟೀವಿ ಚಾನಲ್ಲಿನ ಥರ ತನ್ನೆಲ್ಲಾ ಪೂರ್ವಾಗ್ರಹಗಳು, ಅನುಮಾನ, ಆತಂಕ, ಅಭೀಪ್ಸೆ, ಸಮಯಸಾಧಕತನಗಳೊಡನೆ ನೋಡಿ ಹೇಳುತ್ತಿದ್ದನಾ? ಧೃತರಾಷ್ಟ್ರನ ಮಕ್ಕಳು ಸಾಯುತ್ತಾ ಬಂದಹಾಗೆಲ್ಲಾ ಹೇಳುವುದು ಎಷ್ಟು ಕಷ್ಟವಾಗಿರಬೇಕು? ಹಾಗೆ ನೋಡಿದರೆ ಮಹಾಭಾರತವನ್ನ ಯಾರ ಕಣ್ಣಿನಿಂದ ನೋಡಬೇಕು? ಹೊರಗಿನವನಾದ ಕೃಷ್ಣನ ಚಾಣಾಕ್ಷತನದಿಂದ? ಕೊನೆಗೂ ತಣಿಯದ ದ್ರೌಪದಿಯ ರೋಷದಿಂದ? ಯಾವಾಗಲೂ ಕಡೆಗಣಿಸಲ್ಪಟ್ಟ ದುರ್ಯೋಧನನ ಅತೃಪ್ತಿಯಿಂದ? ಅಥವಾ ಯಾವುದೋ ಪೂರ್ವ ಜನ್ಮದ ಶಾಪದಂತೆ ಯಾವ ಗಂಡಸಿನ ಪ್ರೀತಿಯನ್ನೂ ಅವಳದನ್ನಾಗಿಸಿಕೊಳ್ಳಾಗದ ಅತೃಪ್ತೆ ಕುಂತಿಯ ಕಣ್ಣಿನಿಂದಲೋ? ಇಲ್ಲಾ ನಲ್ಲಪಿಳ್ಳೈ? ರನ್ನ? ಪಂಪ? ಕುಮಾರವ್ಯಾಸ? ಯಾರಿಗಾದರೂ ನನಗೂ ಅದಕ್ಕೂ ಸಂಬಂಧವಿಲ್ಲ ಹಾಗೆ ಸುಮ್ಮನೆ ನೋಡ್ತಿದಿನಿ ಅಂತ ನೋಡೋದಕ್ಕೆ ಸಾಧ್ಯವಾ? ಯಾರಿಗೆ ಹಾಗೆ ಎಲ್ಲವನ್ನೂ ನಿರ್ವಿಕಾರವಾಗಿ ಯಾರ ಪಕ್ಷವನ್ನೂ ವಹಿಸದೆ, ಬಿಟ್ಟುಕೊಡದೆ, ವೈಭವೀಕರಿಸದೆ, ಹೀಗಳೆಯದೆ ಸುಮ್ಮನೆ ನೋಡಲು ಸಾಧ್ಯವಿದೆ?&lt;br /&gt;&lt;br /&gt;&lt;br /&gt;ಹಿಂಗೆಲ್ಲಾ ಕೇಳಿಕೊಂಡಮೇಲೆ ಹಾಗೆ ನೋಡಬೇಕಾದದ್ದಾದರೂ ಏನಕ್ಕೆ ಪ್ರಶ್ನೆ ಮುಡುತ್ತೆ. ಅನುಮಾನವಾಗುತ್ತಿದೆ, ನಾನೇ ಎಲ್ಲವನ್ನೂ ನೋಡಬೇಕು ಅನ್ನಿಸುತ್ತಿದೆ.ಇಷ್ಟು ವರ್ಶವೂ ಬೇರೆಯವರ ಕಣ್ಣುಗಳಿಂದ ಲೋಕವನ್ನು ನೋಡುವುದೇ ಅಭ್ಯಾಸವಾಗಿಹೋಗಿದೆ. ಅಪ್ಪ ಅಮ್ಮ ಟೀಚರಿನಿಂದ ಮೊದಲುಗೊಂಡು ಪ್ರತಿಯೊಬ್ಬರೂ ಕಣ್ಣು ತೆರೆಯಲು ಬಿಡಲೇ ಇಲ್ಲ. ಮದುವೆಯಾದಮೇಲಂತೂ ಆ ಲೋಕವೆ ಬೇರೆ. ಅವನ ಕಣ್ಗಳಿಂದ ನೋಡಲು ಖುಶಿಯಾಗುತ್ತಿತ್ತು. ಅವನು ತನ್ನ ಕಣ್ಣುಗಳಿಂದ ತೋರಿಸಿದ್ದನ್ನು ನಾನೇ ನೋಡಿದಂತೆ ನನ್ನ ಸ್ನೇಹಿತೆಯರಿಗೆಲ್ಲಾ ಹೇಳುತ್ತಿದ್ದೆ. ಅವನಾದರೂ ತನ್ನ ಕಣ್ಣುಗಳಿಂದ ನೋಡುತ್ತಾನಾ ಅಥವಾ ಅವನಿಗೂ ಧೃತರಾಷ್ಟ್ರನ ಕುರುಡುಗಣ್ಣು, ಸಂಜಯನ ಸಹಾಯವೋ? ಹಾಗೆ ನೋಡಿದರೆ ಯಾರು ಸಂಜಯ ಯಾರು ಧೃತರಾಷ್ಟ್ರ? ಪ್ರತಿಯೊಬ್ಬ ಧೃತರಾಷ್ಟ್ರನಿಗೂ ಲಕ್ಷಾಂತರ ಸಂಜಯರು. ನಿಜವಾಗಲೂ ಎಲ್ಲದನ್ನೂ ನೋಡುವವರ್ಯಾರು? ನನಗೆ ಹಾಗೆ ಎಲ್ಲದನ್ನೂ ಮೇಲಿನಿಂದ ನೋಡಲು, ನಿರ್ಧರಿಸಲು ಸಾಧ್ಯವಾ? ಬೇರೆಯವರೆಲ್ಲರ ಕಣ್ಣುಗಳಿಂದ ನೋಡಿದುದರಿಂದ ದೃಷ್ಟಿ ಮಂಜಾಗಿದೆ ಕಣ್ಣುಗಳಿಗೆ ಪೊರೆ ಬಂದಿವೆ. ಸತ್ಯ ಯಾವುದು ಸುಳ್ಳ್ಯಾವುದು ತಿಳಿಯುತ್ತಿಲ್ಲ. ಹೋಗಲಿ ನನಗೇನನ್ನಿಸುತ್ತಿದೆ ಎಂದೂ ಗೊತ್ತಾಗುತ್ತಿಲ್ಲ. ಗಾಂಧಾರಿ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ಕಳಚಬೇಕು. ಧೃತರಾಷ್ಟ್ರ ಕಾಡಿನಲ್ಲಿ ಧೀರ್ಘ ತಪಸ್ಸು ಮಾಡಿಯಾದರೂ ದೃಷ್ಟಿ ಪಡೆಯಬೇಕು.&lt;br /&gt;&lt;br /&gt;&lt;br /&gt;ಸ್ವಲ್ಪ ಹೊತ್ತು ಕಣ್ಣುಮುಚ್ಚಿಕೊಂಡು ಕೂತೆ. ಕಣ್ಣುಮುಚ್ಚಿಕೊಂಡಾಗ ಹೇಗೆ ಕಾಣುತ್ತೀನಿ ನೋಡಬೇಕೆನ್ನಿಸಿತು. ಮೊಬೈಲ್ನಲ್ಲಿ ಫೋಟೋ ತೆಗೆದುಕೊಂಡು ನೋಡಿದೆ. ಫೋಟೋ ಯಾಕೋ ನೀನು ಕಣ್ಣು ಮುಚ್ಚಿಕೊಂಡರೂ ಅಷ್ಟೇ ಕಣ್ಣುಬಿಟ್ಟಿದ್ದರೂ ಅಷ್ಟೆ ಎರೆಡೂ ಒಂದೇ! ಅಣಗಿಸಿದ ಹಾಗಾಯಿತು. ಮಗ ಕಾಲೇಜಿನಿಂದ ಬಂದ, ಬಾಗಿಲು ತೆರೆದೆ ಥೇಟ್ ಸಂಜಯನಂತೆ ಕಂಡ. ಅತ್ತೆಯ ಕಣ್ಣಲ್ಲಿ ಸಂಜಯನ ನೆರಳು. ಆಫೀಸಿನಿಂದ ಬರುತ್ತಲೇ ಇವರು ಅಂದಿದ್ದೇನು ‘ಸೇನಯೋರುಭಯೋರ್ ಮಧ್ಯೇ ರಥಂ ಸ್ಥಾಪಯಮೇಚ್ಚ್ಯುತಾ’ ಅಂತಲಾ?&lt;br /&gt;&lt;br /&gt;&lt;span style="font-size:85%;color:#cc0000;"&gt;&lt;strong&gt;{ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿತ್ತು :-)}&lt;/strong&gt;&lt;/span&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4304132737752620717?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4304132737752620717/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4304132737752620717' title='20 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4304132737752620717'/><link rel='self' type='application/atom+xml' href='http://www.blogger.com/feeds/714642904810204846/posts/default/4304132737752620717'/><link rel='alternate' type='text/html' href='http://mrugnayanee.blogspot.com/2009/05/blog-post.html' title='ಸಂಜಯದೃಷ್ಟಿ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>20</thr:total></entry><entry><id>tag:blogger.com,1999:blog-714642904810204846.post-7721186094812087968</id><published>2009-03-18T09:20:00.003+05:30</published><updated>2009-03-18T09:29:41.038+05:30</updated><title type='text'>ನದಿಯ ಕಣ್ಣಿನಲ್ಲಿ ಕಡಲು</title><content type='html'>&lt;span style="font-weight: bold;"&gt;ನವೆಂಬರ್ 20, 2008, ಭಾನುವಾರ.&lt;/span&gt;&lt;br /&gt;ಪ್ರದ್ಯುಮ್ನ ಬೆಳಗ್ಗೆ ಏಳುವ ಹೊತ್ತಿಗೆ ಅಮ್ಮ, ತಂಗಿ ಲಲಿತಳನ್ನು ಪೈಪಿನಲ್ಲಿ ಹೊಡೆಯುತ್ತಿದ್ದರು.&lt;br /&gt;&lt;br /&gt;ಭಾನುವಾರವೆಂದರೆ ದ್ವೇಷಿಸುವ ಹಾಗೆ ಆಗೋಗಿದೆ ನನಗೆ. ಥೂ... ಇವರಿಬ್ಬರ ಅಬ್ಬರವನ್ನು ಸಹಿಸುವುದಾದರೂ ಹೇಗೆ? ಮನೆಯಿಂದ ಯಾವಾಗ ಹೊರಬಂದೆನೋ ಗೊತ್ತಿಲ್ಲ ಮನಸ್ಸು ತುಡಿಯುತ್ತಿದೆ. ಅಣ್ಣನಾದರೂ ಹೇಗೆ ಇದನ್ನೆಲ್ಲಾ ಸಹಿಸಿಕೊಳ್ಳುತ್ತಿದ್ದ? ಎರೆಡು ವರ್ಷದಿಂದ ಇದನ್ನೆಲ್ಲಾ ನೋಡಿ ನೋಡಿ ಸಹಿಸಿಕೊಳ್ಳುವುದನ್ನು ಕಲಿತಿಕೊಂಡುಬಿಟ್ಟಿದ್ದನಾ? ಇಲ್ಲ ಅಣ್ಣನ ಸ್ವಭಾವವೇ ಅಂಥದ್ದು. ಸುಮ್ಮನಿದ್ದುಬಿಡುತ್ತಾನೆ, ಎಲ್ಲವನ್ನು ನೋಡಿಕೊಂಡೂ!&lt;br /&gt;ನನಗೇಕೆ ಹಾಗೆ ಸಾಧ್ಯವಾಗುವುದಿಲ್ಲ? ಆವತ್ತು ಮನೆಯಲ್ಲಿ ನೆಡೆದ ಘಟನೆಗಳು ಬೇಡವೆಂದರೂ ಕಣ್ಣಮುಂದೆ ಬರತೊಡಗಿದವು.&lt;br /&gt;ಬೆಳಗ್ಗೆ ಏಳುತ್ತಲೇ ಕೇಳಿದ್ದು ಲಲಿತಾಳ ಕಿರುಚಾಟ ‘ನಾನಿದನ್ನ ತಿನ್ನಲ್ಲ ಒಂದ್ ಕೇಜಿ ಎಣ್ಣೆ ಸುರ್ದಿದಿಯ, ಇದನ್ನ ತಿಂದ್ರೆ ಆನೆ ಥರ ಊದ್ಕೊತಿನಿ. ಇಷ್ಟ್ ವರ್ಶ ಆದ್ರೂ ನಿಂಗೊಂದ್ ಉಪ್ಪಿಟ್ ಮಾಡಕ್ ಬರಲ್ಲ. ಎಲ್ಲಾ ಅಜ್ಜಿ ಕೈಲೇ ಮಾಡ್ಸಿದ್ರೆ ಹೇಗ್ ಬರತ್ತೆ ಹೇಳು? ಅಪ್ಪ ಅದ್ ಹೇಗೆ ನಿನ್ ಜೊತೆ ಸಂಸಾರ ಮಾಡ್ತಿದಾರೋ? ಅಜ್ಜಿಗೆ ಹುಶಾರ್ ತಪ್ಪಿದ್ರೆ ನೀನು ಮಾಡಿದ್ ಅಡುಗೆ ತಿನ್ನೋ ಖರ್ಮ ನಮ್ಗೆ...’&lt;br /&gt;ನಿಲ್ಲುವುದೇ ಇಲ್ಲವೆನೋ ಅನ್ನಿಸಿತ್ತು. ಬಾತ್ ರೂಮಿನಿಂದ ಪೈಪ್ ತಂದ ಅಮ್ಮ ಅದರಲ್ಲೇ ಬಾರಿಸಿದ್ಧಳು. ಒಬ್ಳೇ ಮಗ್ಳು ಅಂತ ಮುದ್ದು ಮಾಡಿ ಬೆಳ್ಸಿದ್ದಕ್ಕೆ ತಲೆ ಎಲ್ಲಾ ಮಾತಾಡ್ತೀಯ ರಾಸ್ಕಲ್’&lt;br /&gt;ಅಮ್ಮನ ಪೈಪಿನ ಏಟುಗಳನ್ನು ತಾಳಲಾರದೆ ತಟ್ತೆ ಬಿಸಾಡಿ ಎದ್ದು ಓಡಿದಳು ಲಲಿತ. ಯಾರಾದರೂ ಹೊರಗಿನವರು ನೋಡಿದರೆ ಅಮ್ಮ ಮಗಳೆಂದು ಯಾರೂ ನಂಬುತ್ತಿರಲಿಲ್ಲ. ನೆಡೆಯುತ್ತಿರುವುದೆಲ್ಲಾ ಯಾವುದೋ ಟಿ ವಿ ಸೀರಿಯಲ್ಲೊಂದರಲ್ಲಿ ಎಂಬಂತೆ ನೋಡುತ್ತಾ ಕುಳಿತಿದ್ದರು ಅಪ್ಪ. ಅಪ್ಪನ ನಿರ್ಭಾವುಕ ಮುಖ ಕಂಡಿತು. ನಿರ್ಭಾವುಕ ಮುಖವೂ ಅಷ್ಟೊಂದು ಸಿಟ್ಟು ತರಿಸಬಹುದೆಂಬ ಕಲ್ಪನೆಯಲ್ಲೂ ಇರಲಿಲ್ಲ.&lt;br /&gt;ಕೈಗೆ ಸಿಕ್ಕಿದ ಬ್ಯಾಟ್‌ನಲ್ಲೇ ಶೋಕೇಸ್ ಗ್ಲಾಸಿಗೆ ಬೀಸಿದೆ. ಇಡೀ ಮನೆ  ಒಂದು ನಿಮಿಷ ನಿಶ್ಯಬ್ಧವಾಯಿತು. ಅದುಮಿಕೊಂಡಿದ್ದ ಸಂಕಟವನ್ನ ಕಾರಿಕೊಂಡೆ. ‘ಥು ನಿಮ್ದಿಷ್ಟೇ ಆಗೋಯ್ತು ನಾನು ಮನೆ ಬಿಟ್ಟು ಹೋಗ್ತಿನಿ.’ ಬ್ಯಾಟ್ ಎಸೆದು ಹೊರಟೆ. ‘ಹೋಗು ಹೋಗು ನಾನೊಬ್ಳೇ ಸಾಯ್ತೀನಿ ಇಲ್ಲಿ. ನಂಗೆ ಇನ್ನು ಬದ್ಕೊಕ್ಕಾಗಲ್ಲ ವಿಷ ಕುಡ್ದು ಸತ್ತೋಗ್ತಿನಿ. ಎಲ್ಲಾದುಕ್ಕೂ ನಾನೇ ತಲೆಕೆಡ್ಸ್ಕೊಬೇಕು.&lt;br /&gt;ಅಮ್ಮ ಕೂಗಿಕೊಳ್ಳುತ್ತಿದ್ದಳೋ ಅಳುತ್ತಿದ್ದಳೋ ಗೊತ್ತಾಗಲಿಲ್ಲ. ತಿರುಗಿಯೂ ನೋಡಬೇಕೆನ್ನಿಸದೆ ನೆಡೆದು ಬಂದೆನಲ್ಲಾ.. ಹಾಗೆ ಮಾಡಬಾರದಿತ್ತು ಅನ್ನಿಸಿತು.&lt;br /&gt;&lt;br /&gt;&lt;span style="font-weight: bold;"&gt;ನವೆಂಬರ್ 23, 2008. ಬುಧವಾರ, ಹನುಮಜಯಂತಿ&lt;/span&gt;&lt;br /&gt;ತಲೆಗೆ ಶಾಂಪು ಹಚ್ಚುತ್ತಿರುವಾಗ ಪ್ರದ್ಯುಮ್ನನಿಗೆ ‘ಇವತ್ತು ಸಂಜೆ ಅವಳನ್ನು ಭೇಟಿ ಮಾಡಬೇಕು.’ ಎನ್ನುವುದು ಮತ್ತೆ ನೆನಪಾಗಿ ಅಕಾರಣವಾದೊಂದು ಸುಸ್ಥು ಅವನ ಮೈಯನ್ನು ಆವರಿಸಿಕೊಂಡಿತು.&lt;br /&gt;ಇಂಟರ್ನೆಟ್ಟಲ್ಲಿ ಸಿಕ್ಕಿ, ಗಾಂಧಿ ಬಜಾರಿನ ಐಸ್ ಥಂಡರಿನಲ್ಲಿ ಭೇಟಿಯಾದ ಹುಡುಗಿಯ ಮೇಲೆ ಸಣ್ಣದಾಗಿ ಶುರುವಾಗಿದ್ದ ಸೆಳೆತ ಬರೀ ಸೆಳೆತವಲ್ಲ ಅಂತ ಗೊತ್ತಾಗುತ್ತಿದ್ದ ಹಾಗೆ ನನಗೆ ಭಯವಾಯಿತು. ಹೀಗೇ ಭೇಟಿಯಾಗಿ ಮರೆತು ಬಿಡಬಹುದಾದ ಹುಡುಗಿಯಲ್ಲ ಅನ್ನುವ ಕಾರಣ ಮಾತ್ರವಲ್ಲದೆ ಆ ಹುಡುಗಿಯೂ ತನ್ನಲ್ಲಿ ಆಸಕ್ತಿ ತೋರಿಸುತ್ತಿದ್ದುದು ನೆನೆಸಿಕೊಳ್ಳುವ ಹೊತ್ತಿಗೇ ನಾನು ಅವಳಿಗೆ ಹೇಳಿದ ಸುಳ್ಳುಗಳು ನೆನಪಾಗುತ್ತಿವೆ.&lt;br /&gt;ನನಗೆ ಸುಳ್ಳು ಹೇಳುವುದರಲ್ಲೇನೂ ಆಸಕ್ತಿ ಇಲ್ಲ. ಆದರೆ ಎಲ್ಲರಿಗೂ ನಿಜ ಹೇಳಿಕೊಂಡು ಬರಬೇಕಾದ ಜರೂರತ್ತಾದರೂ ಏನು? ನೀವೇನಾದರೂ ಐವತ್ತು ವಯಸ್ಸಿಗಿಂತ ಮೇಲ್ಪಟ್ಟವರಾದರೆ ಮತ್ತು ಇಂಟರ್ನೆಟ್ಟಿನ ದ್ವೇಶಿಗಳಾದರೆ ನಾ ಹೇಳಿದ ಮಾತು ಅರ್ಥವಾಗುವುದು ಕಷ್ಟ. ನೀವೇನೋ ಇಂಟರ್ನೆಟ್ಟಲ್ಲಿ ನೋಡುತ್ತಾ ಇರುತ್ತೀರಿ ಹೀಗೇ ಯಾರಾದರೂ ಮಧ್ಯದಲ್ಲಿ ಸುಮ್ಮನೆ ಬಂದು ಮಾತಾಡಿಸುತ್ತಾರೆ, ನೀವೂ ಮಾತಾಡುತ್ತೀರಿ. ಅವರು ಕೇಳುವ ಪ್ರಶ್ನೆಗಳಿಗೆಲ್ಲಾ ನಿಜವನ್ನೇ ಹೇಳಬೇಕೆಂದಿದೆಯೇನು? ಅದೂ ನನಗೇನು ಕೆಲಸ ಇಲ್ಲ ಅನ್ನೋದನ್ನ ಹೇಳಿಕೊಳ್ಳಬೇಕ? ಸುಳ್ಳು ಹೇಳಿದ್ದೆ. ಆದರೆ ಈಗ? ಈ ಬುಧವಾರ ಸಂಜೆ ಭೇಟಿಯಾಗು ನಿಂಗೇನೋ ಹೇಳಬೇಕು ಅಂದಿದ್ದಳು.&lt;br /&gt;ಇವತ್ತು ಬುಧವಾರ. ಭಯವಾಗುತ್ತಿದೆ. ನಿಜ ಗೊತ್ತಾದರೆ ಅವಳಾಗಿಯೇ ದೂರ ಸರಿಯುತ್ತಾಳೆ ಅಂತ ಸಮಾಧಾನ ಪಟ್ಟುಕೊಂಡರೂ ಆ ಸಮಾಧಾನದಲ್ಲಿರುವ ಅವಳು ಬಿಟ್ಟು ಹೋಗುವಳೆಂಬ ಯೋಚನೆಯೇ ನೋವನ್ನುಂಟುಮಾಡಿ, ಸಮಾಧಾನವೇ ನೋವಾಗಿ ಮಾರ್ಪಡುವುದು ನನ್ನ ವಿಹ್ವಲಗೊಳಿಸುತ್ತಿದೆ. ಇವತ್ತು ಹೇಳಿಬಿಡುತ್ತೆನೆ ಅವಳು ನೀನು ಹೇಗಾದರೂ ಇರು ನಿನ್ನ ಜೊತೆ ಕೊಡುತ್ತೇನೆಂದರೆ ಸರಿಯಾದವಳನ್ನು ಪ್ರೀತಿಸಿದೆ ಎಂದರ್ಥ.&lt;br /&gt;&lt;br /&gt;ನೀನು ಹೇಗಾದರೂ ಇರು ನಿನ್ನ ನಾನು ಪ್ರೀತಿಸಿದ್ದು ನಿಜ ಅದಕ್ಕೆ ನಿನ್ನ ಜೊತೇಲಿರ್ತಿನಿ ಅಂತ ಹೇಳಿ ಬಿಡಬಹುದು ಹುಡ್ಗ, ಆದರೆ ಈ ಮೊದಲೇ ನಾನು ಈ ಥರ ತಪ್ಪು ಮಾಡಿದೀನಿ. ಮದುವೆಯಾದವನನ್ನು ಪ್ರೀತಿಸಿದಾಗ ಅವನು ಮದುವೆಯಾದವನೆಂದು ಗೊತ್ತಿರಲಿಲ್ಲ, ಗೊತ್ತಾದ ಮೇಲೂ ಯಾವ ಬದಲಾವಣೆಯಿಲ್ಲದೆಯೇ ಅವನನ್ನು ಪ್ರೀತಿಸುತ್ತಿದ್ದೆ. ನನ್ನ ದೇವತೆ ನೀನು, ಲಕ್ಷಕ್ಕೊಬ್ಬಳು ನಿನ್ನಂಥವಳು, ಎಂಥಾ ತ್ಯಾಗ ನಿನ್ನದು ಅಂತೆಲ್ಲಾ ಹಾಡಿ ಹೊಗಳಿದ್ದ. ಆದರೆ ನನಗೆ ಯಾವ ಹುಡುಗಿಯಾದರೂ ಪ್ರೀತಿಸಿದವನನ್ನು ಬಿಟ್ಟು ಹೋಗಬೇಕಾದದ್ದಾದರೂ ಏಕೆ ಎನ್ನುವ ಪ್ರಶ್ನೆಗೆ ಉತ್ತರವೇ ಸಿಗುತ್ತಿರಲಿಲ್ಲ. ಅವನು ನನಗೆ ರಾತ್ರಿಗಳಲ್ಲಿ ಸಿಗುತ್ತಿರಲಿಲ್ಲ, ಮಾತಾಡಲೂ ಕೂಡ. ಅವನನ್ನು ನಾನು ಅರ್ಥ ಮಾಡಿಕೊಂಡಂತೆ ಅವನಿಗೆ ನ್ಮನ್ನ ಅರ್ಥ ಮಾಡಿಕೊಳ್ಳಲಾಗಲಿಲ್ಲ, ನಾನು ಬೇರೆಯವರೊಡನೆ ಮಾತಾಡಿದರೂ ಸಹಿಸುತ್ತಿರಲಿಲ್ಲ. ಅವನಿಗೆ ನಾನು ಕೋಪಗೊಂಡಾಗ ಅಥವಾ ಕೋಪಗೊಳ್ಳದಿದ್ದರೂ ಹೆಂಡತಿಯಿದ್ದಳು ನನಗೆ ಉಹು.. ನಾನೊಬ್ಬಳೇ. ಬರಬರುತ್ತಾ ಅವನೇ ನನ್ನ ಉಸಿರುಉಕಟ್ಟಿಸ, ತೊಡಗಿದ ಹೆದರಿಸತೊಡಗಿದ. ನನ್ನ ಎಳೇ ಹುಡುಗಿಯ ಮನಸ್ಸು ಘಾಸಿಗೊಂಡಿತ್ತು. ನನ್ನ ಮುಗ್ಧತೆ ಜಾರಿ ಹೋಗಿತ್ತು. ಮುಗ್ಧತೆಯನ್ನು ಕಳೆದುಕೊಂಡು ಹೊರಬಂದ ಹುಡುಗಿ ಆ ಹಳೇ ಮುಗ್ಧ ಹುಡುಗಿಯ ಬಗ್ಗೆ ಮರುಕ ಪಟ್ಟುಕೊಳ್ಳುತ್ತಾಳೆ, ಅವಳನ್ನು ಪದೇ ಪದೇ ನೋಡಿ ಎಚ್ಚೆತ್ತುಕೊಳ್ಳುತ್ತಾಳೆ.&lt;br /&gt;ನಾನು ಅವನಿಂದ ದೂರವಾದ ಮೇಲೆ ನಿರ್ಧರಿಸಿದ್ದು ಒಂದು. ಪ್ರೀತಿ ಇಡಿಯಾಗಿ ಸಿಕ್ಕಬೇಕು, ಮತ್ತು ಪ್ರೀತಿಸುವವನ ಯಾವುದೇ ನ್ಯೂನ್ಯತೆಯನ್ನ ಒಪ್ಪಿಕೆsಂಡು ಪ್ರೀತಿಸಬಾರದು. ಅಂಥಾ ಪ್ರೀತಿ ಹೆಚ್ಚು ದಿನ ಬದುಕುವುದಿಲ್ಲ. ನೀನು ಕೆಲಸದಲ್ಲಿಲ್ಲದಿದ್ದರೂ ನಿನ್ನ ಪ್ರೀತಿಸುತ್ತೀನಿ ಅಂತ ಇವತ್ತು ನಾನು ನಿನ್ನ ಜೊತೆ ಬಂದು ಬಿಡಬಹುದು ಆದರೆ ಸ್ವಲ್ಪ ದಿನದ ನಂತರ ಪ್ರೀತಿಯ ಮೊದಲ ಆವೇಷಗಳು ಮುಗಿದ ಮೇಲೆ ನಿನ್ನ ಆರ್ಥಿಕ ಅಸಹಾಯಕತೆ ನಿನ್ನನ್ನು ದ್ವೇಷಿಸುವಂತೆ ಮಾಡುತ್ತದೆ ನಾವಿಬ್ಬರೂ ಒಟ್ಟಿಗೆ ಇರಲಾರದಂಥಹ ಅಂಚಿಗೆ ತಂದು ನಿಲ್ಲಿಸುತ್ತದೆ. ನಿನ್ನ ಈಗ ಪ್ರೀತಿಸಿ ಮುಂದೆ ದ್ವೇಶಿಸುವ ಬದಲು ಈಗಲೇ ಕಷ್ಟಪಟ್ಟಾದರೂ ಆ ಭಾವನೆಯನ್ನ ಚಿವುಟಿಹಾಕುತ್ತೇನೆಂದು ಹೇಳಿ ಎದ್ದು ಹೋದಳು. ಇಂಥಾ ಹುಡುಗಿಯನ್ನ ನನ್ನವಳಾಗಿಸಿಕೊಳ್ಳದ ಅಸಹಾಯಕತೆ ನನ್ನದು. ಪ್ರತೀ ದಿನ ಮನೆಯಲ್ಲಿ ಹೊರಗಡೆ ಇಂಥ ಘಾಸಿಗೊಳಿಸುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಬದುಕಲು ಕಾರಣಗಳೇ ಇಲ್ಲ. ಇನ್ನು ಕಾಯುವುದರಲ್ಲಿ ಅರ್ಥವಿಲ್ಲ. ಸಾವಿನ ಬಾಗಿಲು ತಟ್ಟಲು ಧೈರ್ಯ ಬೇಕು.&lt;br /&gt;&lt;br /&gt;&lt;span style="font-weight: bold;"&gt;ನವೆಂಬರ್ 25, 2008. ಶುಕ್ರವಾರ&lt;/span&gt;&lt;br /&gt;ಕಾಫಿ ಕಪ್ಪನ್ನು ಕೈಯ್ಯಲ್ಲಿ ಹಿಡಿದು ಕೂತ ಪ್ರದ್ಯುಮ್ನ ಹಳೆಯದನ್ನೆಲ್ಲಾ ನೆನಪಿಸಿಕೊಳ್ಳುತ್ತಾ ಕಾಫಿ ಕುಡಿಯುವುದನ್ನೇ ಮರೆತ.&lt;br /&gt;&lt;br /&gt;ಏಳು ತಿಂಗಳ ಹಿಂದೆ ಹೀಗಿರಲಿಲ್ಲ. ಅಥವ ಎಲ್ಲವೂ ಹೀಗೇ ಇದ್ದು ನನಗೆ ಗೊತ್ತಾಗುತ್ತಿರಲಿಲ್ಲವೋ? ಬೆಳಗ್ಗೆದ್ದರೆ ಕಾಲೇಜಿಗೆ, ಪ್ರಾಜೆಕ್ಟ್ ವರ್ಕಿಗೆ ಓಡುವ ತರಾತುರಿ, ಸಂಜೆ ಕಾಲೇಜು ಮುಗಿಸಿ ಅಲ್ಲಿಲ್ಲಿ ಅಲೆಯಬೇಕಾದ ಕಡೆಗಳಲ್ಲೆಲ್ಲಾ ಅಲೆದು ಮನೆ ತಲುಪುತ್ತಿದ್ದುದು ಯಾವಾಗಲೋ. ಭಾನುವಾರವೆಂದರೆ ಬರಗೆಟ್ಟವನಂತೆ ಕಾಯುತ್ತಿದ್ದೆ. ಬೆಳಗೇಳುತ್ತಲೇ ಅಜ್ಜಿಯನ್ನು ಗೋಳುಹೊಯ್ದುಕೊಳ್ಳುತ್ತಾ, ತಂಗಿಯನ್ನು ಕೀಟಲೆ ಮಾಡುತ್ತಿದ್ದವನ ಕೈಗೆ ಅಮ್ಮ ಅಶ್ವತ್ಥಾಮ, ಬಲಿರ್ವ್ಯಾಸ..... ಎನ್ನುತ್ತಾ ಹರಳೆಣ್ಣೆಯ ಬೊಟ್ಟುಗಳನ್ನು ಇಟ್ಟು ತಿಕ್ಕಿ, ಅವಳಿಗೆ ತೃಪ್ತಿಯಾಗುವಷ್ಟು ತಲೆಗೆ ಮಯ್ಯಿಗೆ ಎಣ್ಣೆ ಬಳಿದು ‘ನೋಡು ಹೆಂಗಾಗೋಗಿದೆ ತಲೆ ಕೂದ್ಲು ಕದಬೆ ಜುಂಗು’ ಎಂದು ಆತಂಕಪಟ್ಟುಕೊಂಡು ಮಧ್ಯಾನದವರೆಗೂ ‘ಎಣ್ಣೆ ಇಳೀಲಿ’ ಅಂತ ರೂಮಿನ ಟೀ.ವಿ ಮುಂದೆ ಕೂರಿಸಿ ನನ್ನ ಜೊತೆ ಮಾತಾಡುತ್ತಾ ಕಾಲ ಕಳೆದು, ಮಧ್ಯಾನ ಸುಡು ಸುಡು ನೀರಿನಲ್ಲಿ ಸ್ನಾನ ಮಾಡಿಸಿ, ‘ಹೋಗು ನಾನು ಸ್ನಾನ ಮಾಡ್ಕೊಂಡ್ ಬರ್ತಿನಿ’ ಅಂತ ಕಳುಹಿಸಿದರೆ ಮಲ್ಲಿಗೆಯಂಥಹ ಅನ್ನ, ಬಿಸಿ-ಬಿಸಿ ತಿಳಿಸಾರು ಪಲ್ಯ ಹಪ್ಪಳಗಳನ್ನ ಟೆಬಲ್ಲಿನ ಮೇಲಿಡುತ್ತಿರುವ ಅಜ್ಜಿ. ಅನ್ನ ತಿಳಿಸಾರು ಕಲಸಿಕೊಂಡು ತಿನ್ನುತ್ತಿದ್ದರೆ ಆಹಾ... ಮಧ್ಯಾನ ಗಡದ್ದಾದ ನಿದ್ದೆ, ಸಂಜೆ ಕ್ರಿಕೇಟೋ, ಶಟಲ್ ಕಾಕೋ ಆಡಲು ಗೆಳೆಯರು.&lt;br /&gt;ಇಳಿ ಸಂಜೆಯ ಹೊತ್ತಿಗೆ ಮನೆಗೆ ಬಂದರೆ ಯಾವುದಾದರೂ ಇಂಗ್ಲೀಷ್ ಮೂವಿಯನ್ನು ತಂದಿರುತ್ತಿದ್ದ ಅಣ್ಣ. ಈಗ ಭಾನುವಾರಗಳೆಂದರೆ ಅಗಾಧ ಹಿಂಸೆ. ಅಪ್ಪ ತಂಗಿ ಇರುತ್ತಾರಲ್ಲ.. ಅಪ್ಪ ಎದುರಿಗಿದ್ದರೆ ಇನ್ನೂ ಅಪ್ಪನ ಅನ್ನ ತಿನ್ನುತ್ತಿದ್ದೇನೆ ಅಂತ ಮನಸ್ಸು ಚುಚ್ಚುತ್ತಿರುತ್ತೆ, ಇದರ ಜೊತೆಗೆ ತಂಗಿಯ, ಅಮ್ಮನ ಕಿತ್ತಾಟ. ಇವಳು ಮೆಡಿಕಲ್ ಸೇರೋ ಮೊದಲು ಹೀಗಿರಲಿಲ್ಲ. ಅದ್ಯಾಕೆ ಹೀಗಾದಳೋ?’&lt;br /&gt;ತನ್ನ ಕಾಲೇಜಿನ ದಿನಗಳು ನೆನಪಾಗುತ್ತಿವೆ. ‘ನೀನು ಇಷ್ಟು ಚನ್ನಾಗಿರೋದನ್ನ ನೋಡೇ ನಿನ್ನ ಸೆಲೆಕ್ಟ್ ಮಾಡ್ಕೊಂಡ್ ಹೋಗ್ತಾರೆ ಅಂತಿದ್ದ ಹುಡುಗರೆಲ್ಲಾ ಸೆಲೆಕ್ಟಾಗಿ ಹೋದರೂ ನಾನು ಯಾವ ಇಂಟರ್ವ್ಯೂವಿನಲ್ಲೂ ಸೆಲೆಕ್ಟಾಗಲಿಲ್ಲ. ಬಂದವರೆಲ್ಲಾ ೭೦ ಎಂಡ್ ಅಬವ್ ಇದ್ದವರನ್ನು ಮಾತ್ರ ಆರಿಸಿಕೊಂಡು ಹೋದರು. ನಾನು ಇನ್ನಷ್ಟು ಗಮನವಿಟ್ಟು ಓದಬೇಕಿತ್ತು. ಈಗ ಎಷ್ಟು ಯೋಚಿಸಿದರೂ ಪ್ರಯೋಜನವಿಲ್ಲ. ನಾನು ಮಾಡಿರುವ ನಿರ್ಧಾರವೇ ಸರಿ.&lt;br /&gt;&lt;br /&gt;&lt;br /&gt;&lt;span style="font-weight: bold;"&gt;ನವೆಂಬರ್ 27, 2008, ಭಾನುವಾರ&lt;/span&gt;&lt;br /&gt;ಮಧ್ಯಾನ ಮೂರು ಘಂಟೆ. ಸ್ನೇಹಿತನ ಮನೆಯ ಬಾತ್ರೂಮಿನಲ್ಲಿ ವಿಷದ ಬಾಟಲಿಯನ್ನು ಮುಂದಿಟ್ಟುಕೊಂಡು ಕೂತ ಪ್ರದ್ಯುಮ್ನ ತನ್ನನ್ನು ಸಾಯಲೇಬೇಕಾದಂಥ ಪರಿಸ್ಥಿತಿಗೆ ನೂಕಿದ ಕಾರಣಗಳನ್ನೂ. ತಾನು ಸತ್ತ ನಂತರ ಆಗಬಹುದಾದ ಘಟನೆಗಳನ್ನು ಪಟ್ಟಿಮಾಡುತ್ತಾ ಪೋಲೀಸರಿಗೊಂದು ಪತ್ರ ಬರೆಯತೊಡಗಿದ.&lt;br /&gt;ಈ ಪತ್ರವನ್ನು ಮೊದಲು ಓದುವ ಪೊಲೀಸರೇ, ಆನಂತರ ಓದುವ ತೀರ್ಥರೂಪರೇ, ಓದೋಲ್ಲ  ಎಂದು ನಿರಾಕರಿಸಬಹುದಾದ ಅಮ್ಮ,, ಓದಲು ಬೋರಾಗಿ ಮುದುರಿ ಎಸೆಯುವ ಅಣ್ಣ..&lt;br /&gt;&lt;br /&gt;ಈ ಪತ್ರವನ್ನ ನಾನು ನನ್ನ ಸಾವಿಗೆ ಯಾರೂ ಕಾರಣರಲ್ಲ ಯಾರಿಗೂ ಹಿಂಸೆ ಕೊಡಬೇಡಿ. ನನ್ನ ಸ್ವ ಇಚ್ಛೆಯಿಂದ ನಾನು ಸಾಯುತ್ತಿದ್ದೇನೆ ಎಂದು ತಿಳಿಸುವುದಕ್ಕೆ ಬರೆಯುತ್ತಿಲ್ಲ. ಆತ್ಮ ಹತ್ಯೆ ಅನ್ನುವುದು ಆಕ್ಷಣದ ನಿರ್ಧಾರವಲ್ಲ ಅದು ಆ ಕ್ಷಣದ ಧೈರ್ಯ ಮಾತ್ರ ನಿರ್ಧಾರ ರೂಪುಗೊಳ್ಳಲು ದೊಡ್ಡ ದೊಡ್ಡಕಾರಣಗಳು ಬೇಕಾದರೆ ಅದು ಕಾರ್ಯರೂಪಕ್ಕೆ ಬರಲು ಅತ್ಯಂತ ಕ್ಷುಲ್ಲಕ ಕಾರಣ ಸಾಕು. ಇದೆಲ್ಲಾ ಆಗುವ ಹೊತ್ತಿಗೆ ಸಾಯಬೇಕೆಂದು ನಿರ್ಧರಿಸಿರುವವನ ಮನಸಿನಲ್ಲಿ ವ್ಯಕ್ತಿತ್ವದಲ್ಲ ಆಗುವ ಮಾರ್ಪಾಡುಗಳು ಅನೇಕ. ಇದೆಲ್ಲಾ ನಿಮಗೆ ಗೊತ್ತಿರುವಂಥದ್ದೇ ಆದರೂ ಹೇಳಬೇಕೆನ್ನಿಸಿತು. ನಿಮಗೆ ನಾನು ನನ್ನ ಕಥೆಯನ್ನ ಹೇಳಿ ತಲೆ ಚಿಟ್ಟು ಹಿಡಿಸುವುದಿಲ್ಲ. ನನ್ನ ಸಾವಿಗೆ ಕಾರಣವಾದವರ ಪಟ್ಟಿಯನ್ನ ನಿಮ್ಮ ಮುಂದೆ ಇಡುತ್ತಾ ಹೋಗುತ್ತೇನೆ. ಸಾಧ್ಯವಾದರೆ ಅವರನ್ನೆಲ್ಲಾ ಶಿಕ್ಷೆಗೆ ಒಳಪಡಿಸಿ.&lt;br /&gt;&lt;br /&gt;ಸಿಕ್ಕಸಿಕ್ಕವರಿಗೆಲ್ಲಾ ಮನಬಂದಂತೆ ಸಾಲಕೊಟ್ಟು ವಾಪಸ್ಸು ಪಡೆಯಲಾರದೆ ದಿವಾಳಿಯಾಗಿ, ಶೇರು ಹಣದಲ್ಲಿ ನಮ್ಮದೇಶದ ಲಕ್ಷಾಂತ ಜನರ ಕೋಟಿಗಟ್ಟಲೆ ಹಣವನ್ನ ಮುಳುಗಿಸಿ, ಸಾವಿರಾರು ಇಂಜಿನಿಯರುಗಳನ್ನು ಕೆಲ್ಸದಿಂದ ತೆಗೆದುಹಾಕುವಂತೆ ಮಾಡಿ, ನಿರುದ್ಯೋಗಿಗಳನ್ನಾಗಿಸಿದ ಅಮೇರಿಕಾದ ಪ್ರೈವೇಟ್ ಬ್ಯಾಂಕುಗಳನ್ನ, ಪ್ರತಿಯೊಂದಕ್ಕೂ ಅಮೇರಿಕಾ ಅಮೇರಿಕಾ ಎಂದು ಭಾರತವನ್ನ ಭಾರತದ ಆರ್ಥಿಕತೆಯನ್ನ ಅಮೇರಿಕಾದ ಬಾಲಂಗೋಚಿಯಾಗಿಸಿರುವ ಭಾರತದ ಆರ್ಥಿಕ ನೀತಿಯನ್ನ, ಬೆಳಗ್ಗೆ ಮನೆಯಿಂದ ಹೊರಹೋದರೆ ಸಂಜೆ ಮನೆಗೆ ಬರುತ್ತೇವೋ ಇಲ್ಲವೋ ಎಂದು ತಿಳಿಯದೆ ದಿನವೂ ಭಯದಲ್ಲಿ ಸಾಯುವಂತೆ ಮಾಡಿರುವ ಟೆರೆರಿಸ್ಟಗಳನ್ನ, ಅವರನ್ನು ಮಟ್ಟಹಾಕದೆ ಮೊಸಳೆ ಕಣ್ಣೀರು ಸುರಿಸುವ ನಮ್ಮ ಸರಕಾರವನ್ನ, ಇವರಲ್ಲಿ ಯಾರನ್ನಾದರೂ ಶಿಕ್ಷಿಸಲು ಸಾಧ್ಯವ ಹೇಳಿ? ಹ್ಮ್.. ಮ್‌ಮ್‌ಮ್.. ಖಂಡಿತ ಸಾಧ್ಯವಿಲ್ಲ ನನಗೆ ಗೊತ್ತು.&lt;br /&gt;&lt;br /&gt;ಬರೀ ಇದಿಷ್ಟೇ ಅಲ್ಲ ಇನ್ನೂ ಹೇಳುತ್ತೇನೆ ಕೇಳಿ. ಇಷ್ಟು ದಿನ ಬ್ಯಾಂಕುಗಳ ಸರದಿಯಾಯಿತು ಇನ್ನು ಕ್ರೆಡಿಟ್ ಕಾರ್ಡುಗಳ ಸರದಿ. ಎಲ್ಲರೂ ಸಿಕ್ಕಿಸಿಕ್ಕ್ದಂಗೆ ಕ್ರೆಡಿಟ್ ಕಾರ್ಡುಗಳನ್ನ ಉಜ್ಜಿ ಬೇಕಾದಷ್ಟು ತೀರಿಸಲಾರದಷ್ಟು ಸಾಲ ಮಾಡಿದ್ದಾರೆ. ಅವರೆಲ್ಲರೂ ಕೈಯೆತ್ತಿದರೆ ಭಾರತ ಮುಳುಗಿದಂತೆಯೇ. ಆಮೇಲೆ ಮತ್ತೊಂದಷ್ಟು ಜನ ನಿಮಗೆ ಈ ರೀತಿಯ ಪತ್ರಗಳನ್ನ ಬರೆದಿಟ್ಟು ಸಾಯುತ್ತಾರೆ.&lt;br /&gt;&lt;br /&gt;ನಮ್ಮಣ್ಣನಂಥವರಿಗಾದರೆ ಏನೂ ತೊಂದರೆ ಇಲ್ಲ ಚನ್ನಾಗಿ ಓದಿಕೊಂಡಿದ್ದರೂ ಮೊದಲೇ ಬುದ್ದಿ ಓಡಿಸಿ ಕೊಡಗಿನ ಬಳಿಯಲ್ಲಿ ಒಂದಿಷ್ಟು ತೋಟವನ್ನ ತೆಗೆದುಕೊಂಡು ನೆಮ್ಮದಿಯಾಗಿದ್ದಾನೆ. ಅವನಂತೆ ಆಗಲೇ ಬುದ್ದಿ ಓಡಿಸಿದ್ದರೆ ನನಗೀ ಸ್ಥಿತಿ ಬರುತ್ತಲೇ ಇರಲಿಲ್ಲವೇನೋ..&lt;br /&gt;&lt;br /&gt;ನನ್ನ ಫ಼್ರಸ್ಟ್ರೇಷನ್‌ಗೆ ನನ್ನದೇ ಆದ ಚಿಕ್ಕ ಚಿಕ್ಕ ಕಾರಣಗಳಿರಬಹುದು. ಬರೀ ಅದಷ್ಟೇ ಕಾರಣಗಳಾಗಿದ್ದರೆ ನಾನಿವತ್ತು ಸಾಯುತ್ತಿರಲಿಲ್ಲ. ಪ್ರತಿಯೊಬ್ಬನಿಗೂ ಅವನದೇ ಆದ ಸಣ್ಣ ಪುಟ್ಟ ತೊಂದರೆಗಳು ಕಷ್ಟಗಳು ಇರುತ್ತವೆ ಆದರೆ ಎಲ್ಲರೂ ಯಾಕೆ ಸಾಯುವುದಿಲ್ಲ ಹೇಳಿ? ಯಾಕೆಂದರೆ ಅವರಿಗೆ ಅವರವರ ಚಿಕ್ಕ ಪುಟ್ಟ ಕಷ್ಟಗಳನ್ನ ನಿವಾರಿಸಿಕೊಳ್ಳಲು ತೊಂದರೆಗಳಿಂದ ಹೊರಬರಲು ತಿಳಿದಿರುತ್ತದೆ. ಆದರೆ ಈ ತೊಂದರೆಗಳನ್ನು ನನ್ನಿಂದ ಸರಿಪಡಿಸಲು ಸಾಧ್ಯವಿಲ್ಲ ನನ್ನ ಅಳವನ್ನ ಮಿರಿದ ಕಷ್ತಗಳು ಇವು ಎಂದು ತಿಳಿದಾಗ ಅದನ್ನು ಸರಿಪಡಿಸಬೆಕಾದವರ ಮೇಲೆ ಭರವಸೆ ಇಟ್ಟು ಸುಮ್ಮನಾಗುತ್ತಾನೆ. ನನ್ನ ನಂಬಿಕೆ ಭರವಸೆಗಳು ನುಚ್ಚುನೂರಾಗಿವೆ. ನಮ್ಮಂಥ ಲಕ್ಷಾಂತರ ಜನರ ನಂಬಿಕೆಗಳ ಗೋರಿಯಮೇಲೆ ಸರಕಾರಗಳು ಎನೂ ಆಗಿಲ್ಲವೆಂಬಂತೆ ನೆಮ್ಮದಿಯಾಗಿ ಸೀಟು ಭದ್ರಪಡಿಸಿಕೊಳ್ಳುತ್ತಿವೆ. ಯಾರನ್ನ ನಂಬುವುದು ಯಾರಲ್ಲಿ ಭರವಸೆ ಇಡುವುದು ಗೊತ್ತಾಗುತ್ತಿಲ್ಲ.&lt;br /&gt;&lt;br /&gt;&lt;span style="font-weight: bold;"&gt;ನವೆಂಬರ್ 27, 2008, ಭಾನುವಾರ. ಮುಸ್ಸಂಜೆ.&lt;/span&gt;&lt;br /&gt;&lt;span style="font-weight: bold;"&gt;ಪ&lt;/span&gt;ತ್ರವನ್ನು ಬರೆದು ಮುಗಿಸಿದ ಪ್ರದ್ಯುಮ್ನ ತನ್ನ ಮೊಬೈಲ್ ಕಡೆ ಗಮನ ಹರಿಸಿದಾಗ ಅಲ್ಲಿ ಹದಿನೈದು ಮೆಸೇಜು ಮೂವತ್ತು ಮಿಸ್ ಕಾಲುಗಳಿದ್ದವು. ಮೆಸೇಜುಗಳನ್ನ ಒಂದೊಂದಾಗಿ ಓದತೊಡಗಿದ&lt;br /&gt;ಯಾಕೋ ಫೋನ್ ತೆಗೀತಿಲ್ಲ. ಸುರೇಶಣ್ಣ ಸತ್ತೋಗಿದ್ದಾನೆ ಕಣೋ.. ಫೋನ್ ತಗೊಳ್ಳೋ&lt;br /&gt;ಅಮ್ಮ ಆಳ್ತಿದ್ದಾಳೆ, ಬೇಗ ಬಾರೋ&lt;br /&gt;ಯುವರ್ ಬ್ರದರ್ ಕಮಿಟೆಡ್ ಸೂಸೈಡ್ ಇನ್ ಕಾಫಿ ಎಸ್ಟೇಟ್ ಹೌಸ್.&lt;br /&gt;&lt;br /&gt;ಎಲ್ಲಿದ್ದೀಯೋ&lt;br /&gt;..&lt;br /&gt;&lt;br /&gt;ವೇರ್ ಆರ್ ಯು? ಸ್ಟಾರ್ಟ್ ಇಮ್ಮಿಡಿಯೆಟ್ಲಿ..&lt;br /&gt;&lt;br /&gt;ಪ್ರದ್ಯುಮ್ನ ತಾನು ಬರೆದಿಟ್ಟ ಪತ್ರವನ್ನು ಸುಮ್ಮನೆ ನೋಡಿದ. ಪತ್ರದ ಕೊನೆಯಲ್ಲಿ ತಾನು ಮಾಡಿದ ಸಹಿ ಯಾಕೋ ಅಣ್ಣನ ಸಹಿಯಂತೆ ಕಾಣುತ್ತಿದೆಯಲ್ಲ ಅನ್ನಿಸಿತು.&lt;br /&gt;ಮತ್ತೆ ಫೋನ್ ಹೊಡಕೊಳ್ಳತೊಡಗಿತು. ಎತ್ತಿಕೊಂಡು ಬಂದೆ ಅಂತಷ್ಟೇ ಹೇಳಿ ಪೋನ್ ಕಟ್ ಮಾಡಿದ.&lt;br /&gt;&lt;span style="font-size:78%;"&gt;&lt;span style="font-weight: bold; color: rgb(255, 0, 0);"&gt;(ಕನ್ನಡಪ್ರಭದಲ್ಲಿ ಪ್ರಿಂಟಾಗಿತ್ತು ಕಣ್ರೀ)&lt;/span&gt;&lt;/span&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-7721186094812087968?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/7721186094812087968/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=7721186094812087968' title='11 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/7721186094812087968'/><link rel='self' type='application/atom+xml' href='http://www.blogger.com/feeds/714642904810204846/posts/default/7721186094812087968'/><link rel='alternate' type='text/html' href='http://mrugnayanee.blogspot.com/2009/03/blog-post.html' title='ನದಿಯ ಕಣ್ಣಿನಲ್ಲಿ ಕಡಲು'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>11</thr:total></entry><entry><id>tag:blogger.com,1999:blog-714642904810204846.post-8986391143007648374</id><published>2009-02-16T12:06:00.003+05:30</published><updated>2009-02-16T12:11:51.501+05:30</updated><category scheme='http://www.blogger.com/atom/ns#' term='ಪತ್ರ'/><category scheme='http://www.blogger.com/atom/ns#' term='The boy I love'/><category scheme='http://www.blogger.com/atom/ns#' term='ವ್ಯಾಲೆಂಟೈನ್ಸ್ ಡೇ'/><title type='text'>ಲವ್ ಅಟ್ ಫಸ್ಟ್ ರೀಡ್..</title><content type='html'>Soft eyes ಶಿಶಿರನಿಗೆ,&lt;br /&gt;&lt;br /&gt;ಲವ್ ಅಟ್ ಫಸ್ಟ್ ಸೈಟ್ ನಲ್ಲಿ ನಂಬಿಕೆಯಿದೆಯಾ ಅಂತ ನಿನ್ನಂಥವನನ್ನು ಕೇಳಿದರೆ ಅದಕ್ಕಿಂತ ಹುಚ್ಚುತನ ಬೇರೊಂದಿಲ್ಲ ಹುಡುಗಾ. ಅದರಲ್ಲೂ ಹಾಗೆ ನಿನ್ನ ಬಯಸಿ ಬಯಸಿ ಅರ್ಥ ಮಾಡಿಕೊಂಡ ನಾನಂತೂ ಅಂಥಾ ಎಡವಟ್ಟು ಪ್ರಶ್ನೆಯನ್ನ ಕೇಳಲೇ ಬಾರದು. ಆದರೆ ಲವ್ ಅಟ್ ಫಸ್ಟ್ ರೀಡ್ ನಲ್ಲಿ ನಂಬಿಕೆ ಇದೆಯೇನೋ ಅಂತ ಕೇಳಿದರೆ ನಗಬಹುದು ನೀನು. ಆದರೂ ನಂಬು ನನ್ನ.&lt;br /&gt;&lt;br /&gt;ತೀರಾ ಹತ್ತಿರಾಗುವ ಮೊದಲೇ ನಾನೆಷ್ಟು ಜನರನ್ನು ದೂರ ಮಾಡಿಲ್ಲ. ಫೋನಿನಲ್ಲಿ ಮಾತಾಡುತ್ತಾ ಬುದ್ದಿವಂತನೆನಿಸುತ್ತಿದ್ದ ಕರೀ ಹುಡುಗನನ್ನು ಭೇಟಿಯಾದಾಗ ಎಲ್ಲದಕ್ಕೂ ನೀ ಹೇಳಿದಂತೆ ಅನ್ನತೊಡಗಿದಾಗ ಈ ಹುಡುಗ ಭೈರಪ್ಪನವರ ಸಾಕ್ಷಿಯ ಅಪ್ಪಾಜಪ್ಪನ ಥರದವನಿರಬಹುದು ಎನ್ನಿಸಿ, 'ಐ ಕಾಂಟ್ ಲವ್ ಯು' ಎಂದು ನನ್ನಿಂದ ಹೇಳಿಸಿಕೊಂಡವನಿಂದ ಹಿಡಿದು ಮೊನ್ನೆ ಮೊನ್ನೆ ಅವನಿಗೆ ಭಾವನೆಗಳೇ ಅರ್ಥ ಆಗಲ್ಲ ಸೆಲ್ಫ್ ಸೆಂಟರ್ಡ್ ಪರ್ಸನಾಲಿಟಿ, ತಾನು ಹೇಳಿದ್ದೇ ನೆಡೆಯಬೇಕೆನ್ನುವ  ದಾಟು ಕಾದಂಬರಿಯ ವೆಂಕಟೇಶನ ಥರ, ಬುದ್ದಿವಂತ ಸರಿ ಆದರೆ ನನಗೆ ಹತ್ತಿರವಾಗಲಾರ ಎಂದು ಬಿಟ್ಟುಬಂದ ಹುಡುಗನವರೆಗೂ, ಅದೆಷ್ಟು ಜನ! ತುಂಬ ಮೊದ್ದ ಆಲನ ಹಳ್ಳಿಯವರ ಪರಸಂಗದ ಗೆಂಡೆ ತಿಮ್ಮನ ಥರ, ಇನ್ನೊಬ್ಬನ ಮಡಿ, ದೇವರು, ದಿಂಡರು, ಪೂಜೆ, ಪುನಸ್ಕಾರ, ಸಂಸ್ಕಾರದ ಪ್ರಾಣೆಷಾಚಾರ್ಯರ ರೀತಿ, ಚಾಕ್ಲೇಟ್ ಕಂಪನಿಯೊಂದರ ಸಿ. ಯಿ. ಓದು ಉದರಿಂಗ್ ಹೈಟ್ಸ್‌ನ ಹೀತ್ ಕ್ಲಿಫ್ ಥರಹದ ಪೈಶಾಚಿಕ ಪ್ರೀತಿಯ ನೆನಪು ತರಿಸಿದರೆ, ಇಷ್ಟವಾದ ಹುಡುಗನ ಅಲೌಕಿಕ ಆಸಕ್ತಿಯು ಮುಕ್ತದ ಸ್ವಾಮಿಜಿಯ ನೆನಪು ತರಿಸಿ ಹೆದರಿಸಿತ್ತು. ಇಂಗ್ಲಾಂಡಿನಿಂದ ಬಂದ ಹುಡುಗ ನೋಟದಲ್ಲಿ 'ದಿ ಕಂಪನಿ ಆಫ್ ವುಮೆನ್'ನ ಮೋಹನ್‌ನನ ಛಾಯೆ  ಕಂಡು ಬೇಡವೆನಿಸಿ ಯಾವ ಹುಡುಗನೂ ಯಾವುದೇ ರೀತಿಯಲ್ಲೂ ನಿನ್ನ ಥರ ಅನ್ನಿಸದೆ ಹೊಂದಿಕೆಯಾಗಲಾರದೆ ಹೋದರು. 'ಮುಚ್ಚಿದ ಬಾಗಿಲ ಮುಂದೆ ಭಿಕ್ಷೆ ಬೇಡಿದರು'. ಹೋಗಲಿ ಪರವಾಗಿಲ್ಲ ಇವನು ಸರಿಯಾಗಬಹುದು ಪ್ರಪೋಸು ಮಾಡಲಾ ಅಂದುಕೊಳ್ಳುತ್ತಿರುವಾಗಲೇ ಕೆಲವರು ಅವರೇ ಪ್ರಪೋಸ್ ಮಾಡಿ ನನ್ನ ನಿರೀಕ್ಷೆಯನ್ನ ಹುಸಿ ಮಾಡಿದ್ದರು. ನದಿಯ ಕಾಲುಬುಡದೆಡೆಗೆ ತೆವಳಿಕೊಂಡು ಬರುವ ಸಮುದ್ರವನ್ನ ಪ್ರೀತಿಸುವುದಾದರೂ ಹೇಗೆ?'ಎಷ್ಟೇ ದೂರದಿಂದಲಾದರೂ ಸರಿ ಮಹಾನದಿ ತನ್ನೆಡೆಗೆ ಧುಮ್ಮಿಕ್ಕಿ ಹರಿದು ಬರಬೇಕೇ ಹೊರತು, ಸಮುದ್ರವೇ ತೆವಳಿಕೊಂಡು ನದಿಯ ಮನೆಬಾಗಿಲಿಗೆ ಹೋಗಲೊಲ್ಲದು.'ಈ ನಿನ್ನ ಮಾತುಗಳು ಪ್ರತಿಯೊಬ್ಬ ಹುಡುಗ ಬಂದು ಪ್ರಪೋಸ್ ಮಾಡಿದಾಗಲೂ ನೆನಪಾಗುತ್ತಿತ್ತೋ. ಇಲ್ಲಿಯವರೆಗೂ ಬರೋಬ್ಬರಿ ಹದಿನಾಲ್ಕು ಜನರನ್ನ ನಿನ್ನ ಕಾರಣದಿಂದಾಗಿ ರಿಜೆಕ್ಟ್ ಮಾಡಿದೀನಿ.&lt;br /&gt;&lt;br /&gt;ಒಮ್ಮೆಯಾದರೂ ನಿನ್ನ ಕಷ್ಟಗಳನ್ನು ಹೇಳಿಕೊಳ್ಳುವುದಿಲ್ಲ ನೀನು, ಅವಡುಗಚ್ಚಿಕೊಂಡು ಎಂಥಾ ಪರಿಸ್ಥಿತಿಯಲ್ಲೂ ಸರಿಯಾಗಿ ಯೋಚಿಸುತ್ತೀಯ. ಹಾಗಿರಲು ಹೇಗೆ ಸಾಧ್ಯ ನಿಂಗೆ. ಯಾರ ಬಳಿಯಾದರೂ ನಿನ್ನ ಸಂಕಟಗಳನ್ನು ಹಂಚಿಕೊಳ್ಳಬೇಕು ಅನಿಸುತ್ತಿರಲಿಲ್ಲವೇನೋ? ನಿನ್ನ ಆತಂಕ ಸಂಕಟಗಳಿಗೆಲ್ಲಾ ಕಿವಿಯಾಗಬೇಕು ಅನ್ನಿಸುತ್ತಿತ್ತು ನನಗೆ. ಯಾರನ್ನಾದರೂ ಹಾಗೇ ಅವರಿರುವಂತೆಯೇ ಒಪ್ಪಿಕೊಳ್ಳುವುದನ್ನ, ಏನನ್ನಾದರೂ ಸಾಧಿಸಬೇಕಾದರೆ ರೂಢಿಸಿಕೊಳ್ಳಬೇಕಾದ ಧೃಡತೆಯನ್ನ ಸಂಕಲ್ಪವನ್ನ ಕಲಿಸಿಕೊಟ್ಟವನೇ ನೀನು. ನನ್ನ ವ್ಯಕ್ತಿತ್ವವದಲ್ಲಿ ನಿನ್ನ ಪ್ರಭಾವ ಎಷ್ಟಿದೆಯೆಂದು ಕಲ್ಪಿಸಿಕೊಳ್ಳಲೂ ಅಸಾಧ್ಯ ನಿನಗೆ. ನೀನೇ ಹೇಳಿದ ಮಾತು- ಸ್ಪರ್ಧೆಯಲ್ಲಿ ಪ್ರೀತಿ ಇರಬೇಕು. ಗೆದ್ದ ಗೆಲುವಿನಲ್ಲಿ ದುಷ್ಟ ಸಂತೋಷ ಇರಬಾರದು.&lt;br /&gt;&lt;br /&gt;ಕೇಳು ಹುಡ್ಗಾ, 'ಮಹಾನದಿ ಸಮುದ್ರದೆಡೆಗೆ ಹರಿಯಬೇಕು,  ಸಮುದ್ರ ನದಿಯೆಡೆಗೆ ತೆವಳಿಕೊಂಡು ಹೋಗಬಾರದು' ಎಲ್ಲಾ ಸರಿ. ಆದರೆ ನದಿ ಕೂಡಾ ಸಮುದ್ರವನ್ನ ನಿನ್ನೊಳಗೆ ಇಳಿಯಲಾ ಎಂದು ಕೇಳುವುದಿಲ್ಲ. ಸಮುದ್ರ ಬಾ ಅನ್ನುವುದೂ ಇಲ್ಲ ಆದರೆ ನದಿಯನ್ನ  ತನ್ನೊಳಗೆ ಕರಗಿಸಿಕೊಳ್ಳಲು ಎಲ್ಲಾ ಸಿಧ್ದತೆ ಮಾಡಿಕೊಂಡು ಕಾಯುತ್ತದಲ್ಲಾ, ಹಾಗೆ ಅವನು ಅರಳಿಕೊಳ್ಳಬೇಕು, ನಾನು ಅವನೆಡೆಗೆ ಹರಿದ ಸದ್ದಿಗೆ ಅವನು ಮಯ್ಯೆಲ್ಲಾ ಕಿವಿಯಾಗಿಸಿಕೊಂಡು ಕಾಯಬೇಕು. ಹುಡುಗ ಮಾತ್ರ ಅಲ್ಲ ಹುಡುಗಿಯೂ ನಿನ್ನ ಪ್ರೀತಿಸುತ್ತೇನೆ ಎಂದು ಇಷ್ಟವಾದ ಹುಡುಗನ ಬಳಿ ಹೇಳಿಕೊಳ್ಳಬಾರದು.ಇಷ್ಟಕ್ಕೂ ಪ್ರೀತಿ ಹೇಳಿಕೊಳ್ಳುವುದಲ್ಲ. ಅರ್ಥ ಮಾಡಿಕೊಳ್ಳುವುದು. ನಾನು ನನ್ನ ವ್ಯಕ್ತಿತ್ವವನ್ನು ಮಡಿಚಿಟ್ಟು ಯಾರಿಗೂ ಶರಣಾಗತಳಾಗುವುದಿಲ್ಲ. .`ಯಾವ ಮನುಷ್ಯ ಯಾವ ಸ್ತರದಲ್ಲಿ ನಿಂತು ಯಾರನ್ನು ಪ್ರೀತಿಸಬಾರದು' ಅನ್ನೋದನ್ನು ತಿಳ್ಕೋಬೇಕು ಅಂದಿದ್ದೆ. ತಿಳ್ಕೊಂಡಿದ್ದೀನಿ ಅಂದ್ಕೊಂಡಿದ್ದೀನಿ. ಅರ್ಥ ಮಾಡಿಕೊಳ್ಳುತ್ತೀಯಾ ಹುಡುಗಾ? ಅರ್ಥ ಮಾಡಿಕೊಳ್ಳಲಾಗದಿದ್ದರೂ ನೀ ಹಿಂಗ ನನ್ನ ನೋಡಬ್ಯಾಡ ನನ್ನ.&lt;br /&gt;&lt;br /&gt;(ರವಿ ಬೆಳೆಗೆರೆಯವರ ನೀ ಹಿಂಗ ನೋಡಬ್ಯಾಡ ನನ್ನ ಕಾದಂಬರಿಯ ನಾಯಕ ಶಿಶಿರ ಇಷ್ಟ ನಂಗೆ. ಅವನಿಗೆ ಬರೆದ ಪತ್ರ ಇದು, ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿತ್ತು)&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-8986391143007648374?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/8986391143007648374/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=8986391143007648374' title='14 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/8986391143007648374'/><link rel='self' type='application/atom+xml' href='http://www.blogger.com/feeds/714642904810204846/posts/default/8986391143007648374'/><link rel='alternate' type='text/html' href='http://mrugnayanee.blogspot.com/2009/02/blog-post.html' title='ಲವ್ ಅಟ್ ಫಸ್ಟ್ ರೀಡ್..'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>14</thr:total></entry><entry><id>tag:blogger.com,1999:blog-714642904810204846.post-7762443033276528514</id><published>2008-10-29T19:41:00.001+05:30</published><updated>2008-10-29T19:46:06.269+05:30</updated><title type='text'>ಯಾರೂ.....??</title><content type='html'>ಟೆರೇಸಿನ ಮೂಲೆಯೊಂದರಲ್ಲಿ ಜಾಗ ಹಿಡಿದು ಯಾವುದೋ ಯೋಚನೆಯಲ್ಲಿ ಮಗ್ನಳಾಗಿದ್ದ ಬಬ್ಲಿಯ ಬಳಿಗೆ ಹೋಗಿ ಕೂತೆ. ಅವಳಿಗೆ ಏನೋ ಹೇಳಬೇಕಿತ್ತು ನಾನು. ಹೇಗೆ ಹೇಳುವುದೆಂದು ತಿಳಿಯುತ್ತಿರಲಿಲ್ಲ, ಹೇಳುವುದು ಹೇಗೆಂದು ಯೋಚಿಸುತ್ತಾ ಟೆರೇಸಿನ ಗೋಡೆಯ ಒರಟು ಚರ್ಮಕ್ಕೆ ನನ್ನ ಬೆನ್ನೊರಗಿಸಿ ಕೂತು ನಿಟ್ಟುಸಿರಿಟ್ಟೆ.&lt;br /&gt;&lt;br /&gt;ಇದೆಲ್ಲಾ ಶುರುವಾಗಿದ್ದು ಮೂರುದಿನದ ಹಿಂದೆ, ನಾನು ಮಧು ರೂಮಿಗೆ ಹೋಗಿಬಂದಾಗಿನಿಂದ. ಮಾರನೇ ದಿನ ಸೈಕಾಲಜಿ ಇಂಟರ್ನಲ್ಸ್ ಇತ್ತು ನನ್ನ ಬಳಿ ಒಂದು ಪಾಠದ ನೋಟ್ಸ್ ಇರಲಿಲ್ಲ. ಇಡೀ ಹಾಸ್ಟಲ್ಲಿನ ಏಳ್ನೂರುಜನರಲ್ಲಿರುವ ನನ್ನ ಏಕೈಕ ಕ್ಲಾಸ್ ಮೇಟ್ ಎಂದರೆ ಮಧು. ಸರಿ ಈಗ ಮಲಗಿಬಿಡೋಣ ರಾತ್ರಿ ಒಂದು ಗಂಟೆಗೆ ಎದ್ದು ಮಧು ನೋಟ್ಸ್ ಓದಿದರಾಯ್ತು ಎಂದುಕೊಂಡು ಅವಳಿಗೆ ಮೆಸೇಜ್ ಮಾಡ್ದೆ. ಅವಳು ಸರಿ ನಾನು ರೂಮ್ ಬಾಗ್ಲ್ಲುತೆಗ್ದೇ ಇಟ್ಟಿರ್ತೀನಿ ನಾ ಮಲ್ಗಿದ್ರೂ ಫೋಟೋ ಕಾಪೀಸು ಟೇಬಲ್ ಮೇಲಿರುತ್ತೆ ತೊಗೊಂಡು ಹೋಗು ಎಂಬ ಉತ್ತರ ನೋಡಿ ಒಂದು ಗಂಟೆಗೆ ಅಲರಾಮ್ ಇಟ್ಟು ಮಲಗಿದೆ.&lt;br /&gt;&lt;br /&gt;ಒಂದು ಗಂಟೆಗೆ ಅಲರಾಮ್ ಹೊಡೀತು ಎದ್ದು ದಡಬಡಿಸಿ ಆರಿಸಿದೆ. ಲಾಲಿ ಪ್ಚ್… ಎಂದು ಸದ್ದು ಮಾಡುತ್ತಾ ಮಗ್ಗಲು ಬದಲಿಸಿದಳು. ಕತ್ತಲಲ್ಲಿ ಚಪ್ಪಲಿ ಹುಡುಕಿ ಹಾಕಿಕೊಂಡು ರೂಮ್ ಹೊರಗೆ ಬಂದು ಲಿಫ್ಟ್ ಮುಂದೆ ಹೋಗಿ ನಿಂತು ಅದರ ಸ್ವಿಚ್ ಒತ್ತಿದೆ. ಎರಡು ನಿಮಿಷದ ನಂತರ ಅದು ಕೆಟ್ಟು ಹೋಗಿರುವುದು ನೆನಪಿಗೆ ಬಂತು. ಗ್ರೌಂಡ್ ಫ್ಲೋರ್ನಲ್ಲಿರುವ ನನ್ನ ರೂಮಿನಿಂದ ಐದನೇ ಮಹಡಿಯಲ್ಲಿರುವ ಮಧು ರೂಮಿಗೆ ಹೋಗುತ್ತಾ ಕೆಟ್ಟು ನಿಂತಿರುವ ಲಿಫ್ಟನ್ನೂ ಕೆಟ್ಟು ನಿಂತು ನಾಲ್ಕು ದಿನವಾದರೂ ಸರಿಮಾಡಿಸುವ ಗೋಜಿಗೆ ಹೋಗದ ವಾರ್ಡನ್ನನ್ನೂ ಶಪಿಸುತ್ತಾ ಸೆಕೆಂಡ್ ಫ್ಲೋರ್ ತಲುಪಿದೆ.ಅಲ್ಲಿನ ಟ್ಯೂಬ್ ಲೈಟ್ ಬೆಳಕು ಎಲ್ಲಾ ಫ್ಲೋರುಗಳ ಬೆಳಕಿಗಿಂತ ಪ್ರಕಾಶಮಾನವಾಗಿದೆಯಾ ಎಂಬ ಅನುಮಾನವು ಬಗೆಹರಿಯುವ ಮೊದಲೇ ಮೂರನೇ ಮಹಡಿಯಲ್ಲಿ ಲೈಟೇ ಇಲ್ಲ ಎಂಬ ವಾಸ್ತವ ಲೈಟ್ ಆರಿಸಿದವರ ಮೇಲೆ ಸಿಟ್ಟು ತರಿಸಿತು. ಅದೇ ಸಿಟ್ಟಿನಲ್ಲಿ ಮೂರನೇ ಮಹಡಿ ತಲುಪಿ ಲೈಟ್ ಆನ್ ಮಾಡಲು ಸ್ವಿಚ್ ಬೋರ್ಡ್ ಬಳಿ ಹೋದರೆ ನನ್ನ ತಡೆದಿದ್ದು ಆಹ್… ಎಂದು ವಿಚಿತ್ರವಾಗಿ ನರಳುತ್ತಿರುವ ಸದ್ದು ಒಂದು ನಿಮಿಷ ಪ್ರೇತಾತ್ಮಗಳ ಕಲ್ಪನೆ ಬಂದು ಭಯವಾಗಿ ಸಹವಾಸ ಅಲ್ಲ ಎಂದುಕೊಂಡು ಲೈಟ್ ಹಾಕುವ ಸಾಹಸಕ್ಕೆ ಹೋಗದೆ ಅತ್ತಿತ್ತ ನೋಡದೆ ಮೆಟ್ಟಿಲುಗಳನ್ನು ತುಳಿದು ಮಧು ರೂಮ್ ಮುಟ್ಟಿ ಸಮಾಧಾನದ ಉಸಿರು ತೆಗೆದುಕೊಂಡೆ.&lt;br /&gt;&lt;br /&gt;ಆದರೆ ತಕ್ಷಣ ನನ್ನ ಕಲ್ಪನೆಗಳ ಬಗ್ಗೆ ನನಗೇ ನಗು ಬಂತು. ಕೆಳಗೆ ಹೋಗುವಾಗಲಾದರೂ ಆ ಏನಿರಬಹುದೆಂದು ನೋಡಿಕೊಂಡೇ ಹೋಗಬೇಕೆಂಬ ಧೃಡ ನಿರ್ಧಾರ ಮಾಡಿ ಫೋಟೋಕಾಪಿಗಳನ್ನು ತೆಗೆದುಕೊಂದು ಮೂರನೇ ಫ್ಲೋರ್ ತಲುಪಿದೆ. ಆದರೆ ಅಲ್ಯಾವ ಸದ್ದೂ ಇರಲಿಲ್ಲ ಆದರೂ ಅಲ್ಲೆಲ್ಲಾ ಅಡ್ದಾಡಿದೆ. ಎನೂ ಕಾಣಲಿಲ್ಲ. ನಿರಾಸೆಗೊಂಡು ರೂಮ್ ತಲುಪಿ ಓದುತ್ತಾ ಕೂತೆ.&lt;br /&gt;&lt;br /&gt;ಸುಮಾರು ಮೂರು ಗಂಟೆಯ ಹೊತ್ತಿಗೆ ಪಕ್ಕದ ರೂಮಿನಲ್ಲಿ ಯಾರೋ ಎದ್ದ ಸದ್ದಾಯಿತು. ಹೊರಬಂದು ನೋಡಿದೆ. ಬಬ್ಲಿ ಬ್ರಷು ಪೇಸ್ಟು ಹಿಡಿದುಕೊಂಡು ನಿದ್ದೆಗಣ್ಣಲ್ಲಿ ಬಾತ್ರೂಮ್ ಕಡೆಗೆ ಹೊರಟಿದ್ದಳು. ಅವಳಿಗೆ ನಾಳೆ ಬಿಸ್ನೆಸ್ ಎಕನಾಮಿಕ್ಸ್ ಪರೀಕ್ಷೆ ಇತ್ತು. ನಾನೂ ಅವಳೂ ಬೇರೆ ಬೇರೆ ಕೋರ್ಸ್ ತೆಗೆದುಕೊಂಡಿದ್ದರೂ ಚಿಕ್ಕಂದಿನಿಂದ ಒಳ್ಳೆಯ ಸ್ನೇಹಿತರು. ಅವಳಿಗೆ ದೇವರು ದೆವ್ವ ಎಲ್ಲದರಲ್ಲಿ ಅತ್ಯಂತ ನಂಬಿಕೆ. ನಾನು ನಂಬಿಕೆ ಇದೆಯೋ ಇಲ್ಲವೋ ಎಂದು ನನಗೇ ಗೊತ್ತಿಲ್ಲದ ಎಡಬಿಡಂಗಿ. ಅವಳನ್ನು ಸುಮ್ಮನೆ ಹೆದರಿಸೋಣವೆನ್ನಿಸಿತು. ‘ಬಬ್ಲಿ ಪ್ಲೀಸ್ ಕಣೇ ಈಗ ಮಾತ್ರ ಬಾತ್ರೂಮ್ಗಳ ಕಡೆ ಹೋಗ್ಬೇಡ ಎಂದೆ.’ ಇವಳಿಗೇನಾಗಿತು ಎನ್ನುವಂತೆ ವಿಚಿತ್ರವಾಗಿ ನೋಡಿದಳು. ‘ಹೋಗಬೇಡ ಅಷ್ಟೇ ನಾ ಹೇಳಿದ್ದನ್ನ ಕೇಳು.’ ಎಂದು ನನ್ನ ರೂಮಿಗೆ ಎಳೆದುಕೊಂಡು ಹೋಗಿ ನನಗಾದ ಅನುಭವವನ್ನ ವಿತ್ ಆಡಿಯೋ ವೀಡಿಯೋ ಎಫೆಕ್ಟ್ ವಿವರಿಸಿ ಹೇಳಿದೆ.&lt;br /&gt;&lt;br /&gt;ಆಮೇಲೆ ನಮ್ಮ ಸಂವಾದ ಹೀಗಿತ್ತು&lt;br /&gt;ಬಬ್ಲಿ: ಎಷ್ಟ್ ಗಂಟೆಗೆ ನೆಡೆದಿದ್ದು ಹೇಳು?&lt;br /&gt;ನಾನು: ಒಂದು ಗಂಟೆಗೆ!&lt;br /&gt;ಬಬ್ಲಿ: ಹಂಗಾದ್ರೆ ಆ ಸದ್ದು ಖಂಡಿತ ದೆವ್ವದ್ದೇ..&lt;br /&gt;ನಾನು: ಆಂ.. ಯಾಕೆ? (ನನಗೆ ನಗು ಬರುತ್ತಿತ್ತು)&lt;br /&gt;ಬಬ್ಲಿ: ಮಂಗನ್ ಥರ ಆಡ್ಬೇಡ ಸ್ವಲ್ಪ ಸೀರಿಯಸ್ಸಾಗಿರೋದು ಕಲಿ ರಾತ್ರಿ ಒಂದು ಗಂಟೆಗೆ ಈವಿಲ್ ಸ್ಪಿರಿಟ್ಸ್ ಇವೋಕ್ ಆಗುತ್ತೆ ಅಂತಾರೆ&lt;br /&gt;ನಾನು: ಯಾರು ಅಂತಾರೆ?&lt;br /&gt;ಬಬ್ಲಿ: ನಾನು ದಿ ಎಕ್ಸಾರ್ಸಿಸ್ಟ್  ಮೂವಿಲಿ ನೋಡಿದ್ದೆ (ನನಗೆ ನಗು ತಡೆಯಲಾಗಲಿಲ್ಲ) ನಗ್ಬೇಡ ಆ ಸಿನೆಮಾನ ನೈಜ ಘಟನೆ ಆಧರಿಸಿ ಮಾಡಿರೋದು.&lt;br /&gt;ನಾನು: ಸರಿ ಹಂಗಾದ್ರೆ ನಾಳೆನೂ ಒಂದ್ ಗಂಟೆಗೆ ಹೋಗಿ ನೋಡಣ ಬರ್ತೀಯಾ. ನಿನ್ ದೆವ್ವ ಕಾಣ್ಸುತ್ತಾ ಅಂತ? ಬಬ್ಲಿ: ಬೇಕಾದ್ರೆ ನಿಂಗ್ ತಲೆ ಕೆಟ್ಟಿದ್ರೆ ನೀ ಹೋಗು ನಾನು ಬರಲ್ಲ!&lt;br /&gt;ನಾನು: ಏ ಹೆದ್ರ್ಬೇಡ ಕಣೇ ಈ ಹುಡ್ಗೀರು ಹೊತ್ತಲದ್ ಹೊತ್ನಲ್ ಫೋನಲ್ ಮಾತಾಡ್ತಿರಲ್ವ? ಆ ಸೌಂಡೇ ಇರ್ಬೇಕು ಅದು. ದೆವ್ವ ಅಲ್ಲ ಅಂತ ನಾ ಪ್ರೂವ್ ಮಾಡ್ತಿನಿ ಬಾ ನನ್ಜೊತೆ.&lt;br /&gt;ಬಬ್ಲಿ: ನಾ ಬರಲ್ಲ! ನೀನೂ ಹೋಗಬಾರದು . ಸಾಕು ಆ ವಿಷ್ಯ ಮಾತಾಡಿದ್ದು ಓದ್ಕ. ಎಂದು ಎದ್ದು ಹೋಗಿ ಮತ್ತೆ ಮಲಗಿಕೊಂಡಳು!&lt;br /&gt;&lt;br /&gt;ಆ ಸದ್ದು ಹೇಗೆ ಬರುತ್ತಿತ್ತೆಂದು ಕಂಡುಹಿಡಿಯಲೇಬೇಕೆನ್ನಿಸಿತು ನನಗೆ. ಈ ಗೂಬೆ ಬರ್ದೇ ಹೋದ್ರೆ ಪರವಾಗಿಲ್ಲ ನಾನಂತೂ ಹೋಗಿ ನೋಡೋದೇ ಎಂದು ನಿರ್ಧರಿಸಿದೆ. ಇಂಟರ್ನಲ್ಸ್ ಮುಗಿದ ರಾತ್ರಿ ‘ಮೊಗ್ಗಿನ ಮನಸು’ ಸಿನೆಮಾ ನೋಡಿ ಬಂದು ಸುಮಾರು ಹತ್ತು ಗಂಟೆಯ ಹೊತ್ತಿಗೆ ಮಲಗಿದೆವು.&lt;br /&gt;&lt;br /&gt;ರಾತ್ರಿ ಒಂದು ಗಂಟೆಗೆ ಅಲರಾಮ್ ಹೊಡೀತು. ಎದ್ದು ರೂಮಿನಿಂದ ಹೊರಬರುವ ಹೊತ್ತಿಗೆ ಬಬ್ಲಿಯೂ ನಿಂತಿದ್ದಳು. ‘ನೀನೂ ಬರ್ತೀಯಾ? ‘ ನನಗೆ ಆಶ್ಚರ್ಯವಾಯಿತು. ‘ನಿನ್ ಫ್ರೆಂಡಾದ್ಮೇಲೆ ಇನ್ನೇನ್ ಮಾಡಕ್ಕಾಗತ್ತೆ ನನ್ ಕರ್ಮ!’ ಬೈದುಕೊಂಡಳು. ಇಬ್ಬರೂ ಸದ್ದು ಮಾಡದೆ ಮೂರನೇ ಫ್ಲೋರ್ಗೆ ಹೋದೆವು. ಅದೇ ರೀತಿಯ ಸದ್ದು ಬಬ್ಲಿ ನನ್ನ ಮುಖ ನೋಡಿ ಬಾರೆ ಹೋಗಣ ಇದು ಖಂಡಿತಾ ದೆವ್ವಾನೇ ಪಿಸುಗುಟ್ಟಿದಳು. ನೀನು ಬೇಕಾದ್ರೆ ಹೋಗು ನಂಗೆ ಡಿಸ್ಟರ್ಬ್ ಮಾಡ್ಬೇಡ ಬೈದೆ. ಅಲ್ಲೇ ನಿಂತಳು.&lt;br /&gt;&lt;br /&gt;ನೀ ಇಲ್ಲೇ ನಿಂತಿರು ನಾನು ಆ ಕಾರಿಡಾರಿನ ಕಡೆಯಲ್ಲಿ ನೋಡ್ಕೊಂಡ್ ಬರ್ತೀನಿ ಎಂದು ನಾನು ಹೇಳುವ ಹೊತ್ತಿಗೆ, ಸರಿ ನಾನು ಇಲ್ಲಿ ಬಾತ್ ರೂಮ್ಗಳ ಕಡೆ ನೋಡಿ ಬರ್ತೀನಿ ಅಂದ್ಲು. ಕೆಟ್ಟ ಧೈರ್ಯದಿಂದ ಉದ್ದದ ಕತ್ತಲೆ ಕಾರಿಡಾರಿನ ತುಂಬ ಅಲೆದಾಡಿದೆ. ಉದ್ದಕೆ ಚಾಚಿಕೊಂಡಿರುವ ಕಾರಿಡಾರು, ಕಾರಿಡಾರಿನ ಎರಡೂ ಬದಿಗೆ ರೂಮುಗಳು. ಅಲ್ಲಿ ಯಾರೂ ಇರಲ್ಲಿಲ್ಲ! ಬಾತ್ರೂಮ್ನ ಕಡೆಯಿಂದ ಬಬ್ಲಿ ಜೋರಾಗಿ ಕಿರುಚಿಕೊಂಡಳು! ಆ ದಿಕ್ಕಿಗೆ ಓಡಿದೆ. ಅಲ್ಲಿಂದ ಹೊರಬಂದ ಬಬ್ಲಿ ನನ್ನ ಕೈಹಿಡಿದುಕೊಂಡು ದಡ ದಡ ಕೆಳಗಿಳಿಯತೊಡಗಿದಳು! ‘ಏನಾಯ್ತು ಏನಿತ್ತು ಅಲ್ಲಿ..?’ ‘ಹೌದು ನೀ ಹೇಳಿದ್ದೇ ಸರಿ ಯಾವ್ದೋ ಹುಡ್ಗಿ ಫೋನ್ನಲ್ಲಿ ಮಾತಾಡ್ತಿದ್ಲು. ನಾನು ಅವ್ಳನ್ನೇ ಕಾನ್ಸಂಟ್ರೇಷನ್ನಿಂದ ನೋಡ್ತಾ ಏನ್ ಮಾತಾಡ್ತಿದಾಳೆ ಅಂತ ಕೇಳ್ತಿದ್ನಾ ಅಷ್ಟರೊಳಗೆ-’ ‘ಅಷ್ಟರೊಳಗೆ ದೆವ್ವಾ ಬಂದ್ಬಿಡ್ತಾ?’ ನನ್ನ ಪ್ರಶ್ನೆ. ‘ಥೂ ನಿನ್ನ! ಜಿರಳೆ .. ಜಿರಳೆ ಬಿತ್ತು ನನ್ ಮೇಲೆ! ಅದ್ಕೆ ಕಿರಿಚ್ಕೊಂಡೆ.’ ಅಂದ್ಲು.&lt;br /&gt;&lt;br /&gt;ಥೂ ಈ ಜಿರಳೆ ಹಲ್ಲಿಗಳಿಗೆಲ್ಲಾ ಹೆದ್ರುಕೊತೀಯಲ್ಲ ಎಂದು ಬೈದುಕೊಂಡರೂ ನಾನೂ ಅಂಥವಳೇ ಆದ್ದರಿಂದ ಸುಮ್ಮನಾದೆ.&lt;br /&gt;&lt;br /&gt;+++&lt;br /&gt;&lt;br /&gt;ಈ ಘಟನೆ ನೆಡೆದ ಮರುದಿನ ಸಂಜೆ ಕಾಲೇಜು ಮುಗಿದಮೇಲೆ ಕಾಲೇಜು ಬಸ್ಸಿಗೆ ಎಂದಿನಂತೆ ಕಾಯುತ್ತಾ ನಿಂತಿದ್ದೆ. ಬಸ್ಸು, ಬಾಧೂಳಿಯನ್ನು(ಗೋಧೂಳಿ ಥರ-ಬಸ್ಸು ಸೃಷ್ಟಿಸುವ ಧೂಳು) ಅಲ್ಲಿ ನಿಂತವರಿಗೆಲ್ಲಾ ಅಭಿಷೇಕ ಮಾಡಿಸುತ್ತಾ ಬಂದು ನಮ್ಮೆಲ್ಲರ ಮುಂದೆ ನಿಂತಿತು. ಹತ್ತಲು ಹೋದೆ ಯಾರೋ ಬ್ಯಾಗ್ ಹಿಡಿದು ಎಳೆಯುತ್ತಿದ್ದಾರೆ ಹತ್ತಲು ಬಿಡುತ್ತಿಲ್ಲ ಅನ್ನಿಸಿತು, ತಿರುಗಿ ನೋಡಿದೆ ಯಾರೂ ಇಲ್ಲ. ಆದರೆ ಹತ್ತಲು ಮಾತ್ರ ಆಗುತ್ತಿಲ್ಲ ‘ಎಂತದಾ ಬೇಗ ಬೇಗ ಹತ್ತಿ ಲೇಟ್ ಮಾಡದ್ ಎಂತಕ್ಕೆ’ ಅಂದರು ಡ್ರೈವರ್ ಅಣ್ಣ. ಅಣ್ಣಾ ಯಾರೋ ಬ್ಯಾಗ್ ಎಳೀತಿದಾರೆ ಹತ್ತಕ್ ಬಿಡ್ತಿಲ್ಲ ಅಂತ ಹೇಳಕ್ ಹೋದೋಳು ಹುಚ್ಚು ಅಂದುಕೊಂಡಾರೆಂದು, ಅಣ್ಣಾ ಹತ್ತಕ್ ಆಗ್ತಿಲ್ಲ ಅಂದೆ. ಅಲ್ಲಿಂದ ಧಡಾರೆಂದು ಎದ್ದ ಅಣ್ಣ ಮೇಲೆಳೆದು ಹತ್ತಿಸಿಕೊಂಡು ನನ್ನ ಕೈಗೆ ಬಸ್ ಕೀ ಕೊಟ್ಟು, ನೀರು ಬೇಕಾ? ಸುಸ್ತಾಗ್ತಿದೆಯಾ? ಅಂದರು ನನಗೆ ಒಂದೂ ಅರ್ಥವಾಗಲಿಲ್ಲ. ಪಾಪ ಎಷ್ಟು ವರ್ಷದಿಂದ ಫಿಟ್ಸ್ ಇದೆ ಅಂತ ಪರಿತಾಪ ಬೇರೆ. ನಾನು ತಲೆ ಚಚ್ಚಿಕೊಳ್ಳುವುದೊಂದು ಬಾಕಿ!&lt;br /&gt;&lt;br /&gt;ಹಾಸ್ಟಲ್ಲಿಗೆ ಬಂದು ಅಟೆಂಡೆನ್ಸ್ ಕೊಡಲು ಹೋದೆ ವಾರ್ಡನ್ನು ‘ನಯ್ನಿ ನಿನ್ ಫ್ರೆಂಡ್ ಬಬ್ಲಿಗ್ಯಾರೋ ಸಿ.ಡಿ ಕೊಟ್ಟೋಗಿದಾರೆ ಕೊಟ್ಬಿಡು ಅವ್ಳಿಗೆ. ಅವ್ಳಿನ್ನು ಕಾಲೇಜಿನಿಂದ ಬಂದಿಲ್ಲ ಅಲ್ವ?’ ಎನ್ನುತಾ ಸಿಡಿಯೊಂದನ್ನು ನನ್ನ ಕೈಗಿತ್ತರು. ಮ್ಯಾಮ್ ಯಾರ್ ಕೊಟ್ಟಿದ್ದು ಕೇಳಿದೆ. ಗೊತ್ತಿಲ್ಲ ನಾನು ಮೆಸ್ ಬಿಲ್ಲ್ ಬರೀತಿದ್ದೆ ಈ ಸಿ ಡಿನ ಬಬ್ಲಿಗೆ ಕೊಟ್ಬಿಡಿ ಅಂದ್ರು ಸರಿ ಅಂದೆ. ನಿಮ್ಮ್ ಹೆಸ್ರೇನು ಅಂತ ಕೇಳಬೇಕು ಅನ್ಕೊಳೋ ಹೊತ್ತಿಗೆ ಅವ್ರು ಹೋಗ್ಬಿಟ್ಟಿದ್ರು. ಯಾವ್ದೋ ಹುಡ್ಗಿ ಅಂದ್ರು. ಸಿಡಿ ಮೇಲೂ ಯಾವ ಹೆಸರೂ ಇರಲಿಲ್ಲ. ಥ್ಯಾಂಕ್ ಯೂ ಹೇಳಿ ತೆಗೆದುಕೊಂಡು ಬಂದೆ. ಬಬ್ಲಿ ಬಂದ ಮೇಲೆ ಅವಳಿಗೆ ಸಿ ಡಿ ಕೊಟ್ಟು ವಾರ್ಡನ್ ಹೇಳಿದ್ದನ್ನೇ ಹೇಳಿ, ಯಾವ ಸಿ ಡಿ ಹಾಕಿ ನೋಡು ಅಂದೆ ಅದಕ್ಕವಳು ನಾನು ಲ್ಯಾಪ್ ಟಾಪ್ ತಂದು ಒಂದು ವಾರನೂ ಆಗಿಲ್ಲ ನನ್ ಹತ್ರ ಲ್ಯಾಪ್ ಟಾಪ್ ಇದೆ ಅಂತ ನಿನ್ಗೆ ಲಾಲಿಗೆ ಬಿಟ್ರೆ ಯಾರಿಗೂ ಗೊತ್ತಿಲ್ಲ. ಲಾಲಿಗೆ ಏನಾದ್ರೂ ಕೊಡಕ್ಕಿದ್ರೆ ನಂಗೇ ಡೈರೆಕ್ಟಾಗಿ ಕೊಟ್ಟಿರೋಳು ಮತ್ತ್ಯಾರು ನಂಗೆ ಕೊಡ್ತಾರೆ ಇದನ್ನ ಅಂತ ತಲೆಕೆಡೆಸಿಕೊಂಡಳು. ಯಾರಾದ್ರೂ ತಂದು ಕೊಟ್ಟಿರಲಿ ಏನಿದೆ ನೋಡಣ ಹಾಕು ಅಂದೆ. ಬೇಡ ಕಣೇ ಪ್ಲೀಸ್. ಆಮೇಲ್ ನೋಡಣ ಈಗ ಬೇಡ ಅಂದಳು. ಇವಳಿಗೇನೋ ಆಗಿದೆ ಅನ್ನಿಸಿತು. ಸಂಜೆ ಬಸ್ ಹತ್ತುವಾಗ ನಡೆದ ಘಟನೆಯನ್ನು ಹೇಳಬೇಕೆನಿಸಿದರೂ, ಇದಕ್ಕೂ ದೆವ್ವದ ಕೈವಾಡವೇ ಕಾರಣ ಎಂದಾಳೆಂದೆನ್ನಿಸಿ ಏನೂ ಹೇಳದೇ ಸುಮ್ಮನಾದೆ.&lt;br /&gt;&lt;br /&gt;ಅವತ್ತು ರಾತ್ರಿ ಒಂದು ಗಂಟೆಗೆ ಮತ್ತೆ ಎಚ್ಚರವಾಯಿತು, ಅಲರಾಮ್ ಇಟ್ಟಿರಲಿಲ್ಲ. ಎದ್ದು ಕೂತೆ ಮತ್ತೆ ಆ ಸದ್ದು ಥೇಟ್ ಅದೇ ರೀತಿ. ಲಾಲಿಗೂ ರಾತ್ರಿಯೆಲ್ಲಾ ಫೋನಲ್ಲಿ ಮಾತಾಡುತ್ತಾ ನರಳುವ ಬುದ್ದಿ ಅಂಟಿಕೊಂಡಿತಾ ಎಂದು ಅನುಮಾನವಾಗಿ ಲೈಟ್ ಆನ್ ಮಾಡಿದೆ, ಸದ್ದು ನಿಂತಿತು. ನೋಡಿದರೆ ಲಾಲಿ ಹೊದ್ದು ಮಲಗಿದ್ದಳು. ಬೆಡ್ಶೀಟ್ ಒಳಗೆ ನುಸುಳಿಕೊಂಡೇ ಮಾತಾಡುತ್ತಿರಬಹುದಾ ಎಂದು ಮತ್ತೊಂದು ಅನುಮಾನವಾಯಿತು. ಲಾಲಿ ನಿನ್ ಮೊಬೈಲ್ ಕೊಡು ಅಂದೆ. ಅದಕ್ಕೆ ಲಾಲಿ ಏನೇ ನಿಂದು ಹಿಂಸೆ ಈ ರಾತ್ರಿ ಹೊತ್ನಲ್ಲಿ ಮೊಬೈಲ್ ಅಲ್ಲೇ ಟೇಬಲ್ ಮೇಲಿದೆ ನೋಡು ಚಾರ್ಜ್ ಗೆ ಹಾಕಿದೀನಿ ಅಂದಳು. ನನಗೆ ನಿದ್ದೆ ಬರಲಿಲ್ಲ.&lt;br /&gt;&lt;br /&gt;+++&lt;br /&gt;&lt;br /&gt;ಮಾರನೇ ದಿನ ಮತ್ತೆ ಬಸ್ ಹತ್ತುವಾಗ ಅದೇ ಅನುಭವವಾಯಿತು. ‘ದಿಸ್ ಈಸ್ ಟೂ ಮಚ್’ ನನಗೇನಾಗಿದೆ ಸೈಕಾಲಜಿಕಲ್ ಡಿಸಾರ್ಡರ್ ಏನಾದರೂ ಶುರುವಾಗಿದೆಯೇನೋ ಅನುಮಾನವಾಯಿತು. ಖಂಡಿತ ಅದೇ ಇಲ್ಲಾಂದ್ರೆ ಹಿಂಗೆಲ್ಲಾ ಆಗೋಕ್ಕೆ ಸಾಧ್ಯನೇ ಇಲ್ಲ. ಅವತ್ತು ಸೈಕಾಲಜಿ ಲೆಕ್ಚರರ್ ಹೇಳುತ್ತಿದ್ದು ಜ್ನಾಪಿಸಿಕೊಂಡೆ. ವಿಸ್ಯುಯಲ್ ಹಾಲೋಸಿನೇಷನ್, ಆಡಿಟರಿ ಹಾಲೊಸಿನೇಷನ್, ಗಸ್ಟೇಟರೀ ಹಾಲೋಸಿನೇಷನ್… ಥೂ ನನಗೇ ಎಲ್ಲಾ ಕಷ್ಟಾ ಅಂತ ದುಃಖ ಬೇರೆ ಆಗುತ್ತಿತ್ತು… ಇದನ್ನೆಲ್ಲಾ ಹೇಳಿಕೊಳ್ಳೋಣವೆಂದೇ ಬಬ್ಲಿ ಬಳಿ ಕೂತಿದ್ದೆ. ಹೇಳೋದನ್ನು ಕೇಳಿ ನಕ್ಕುಬಿಟ್ಟರೆ ಅನುಮಾನವಾಯಿತು. ನಕ್ಕರೆ ನಗಲಿ ಎಂದುಕೊಂಡು ಹೇಳೂಬಿಟ್ಟೆ. ಬಾ ಎಂದು ರೂಮಿಗೆಳೆದುಕೊಂಡು ಹೋದಳು ಬಬ್ಲಿ. ಏನೆಂದು ಕೇಳಿದರೆ ಮಾತೇ ಆಡುತ್ತಿಲ್ಲ. ರೂಮ್ ಬಾಗಿಲ ಬೋಲ್ಟ್ ಜಡಿದು ಲ್ಯಾಪ್ ಟಾಪ್ ಆನ್ ಮಾಡಿದಳು. ಇದು ನೆನ್ನೆ ನೀನು ಕೊಟ್ಯಲ್ಲ, ನಂಗ್ಯಾರೋ ಕೊಟ್ಟುಹೋದರು ಅಂತ ಆ ಸಿಡಿ ಎನ್ನುತ್ತಾ ಅದನ್ನು ಹಾಕಿ ಪ್ಲೇ ಮಾಡಿದಳು. ಅಲ್ಲೂ ಅದೇ ಸದ್ದು ಅದೇ ನರಳುವ ಸದ್ದು. ನನ್ಗೆ ಚಿಟ್ಟು ಹಿಡಿಯುವುದೊಂದು ಬಾಕಿ.&lt;br /&gt;&lt;br /&gt;ಅಷ್ಟರೊಳಗೆ ಬಾಗಿಲು ಬಡಿದರು. ಲ್ಯಾಪ್ ಟಾಪ್ ಆಫ್ ಮಾಡಿ ರೂಮ್ ಬಾಗಿಲು ತೆರೆದರೆ ಲಾಲಿ ‘ಗೊತ್ತಾಯ್ತೇನ್ರೇ ವಿಶ್ಯಾ.. ಆ ಮಲೆಯಾಳಿ ಹುಡುಗೀರಿದ್ರಲ್ಲಾ ಯಾವಾಗ್ಲೂ ಜೊತೆಗೇ ಓಡಾಡ್ಕೊಂಡಿದ್ರಲ್ಲಾ ನರ್ಸಿಂಗ್ ಕಾಲೇಜೋರು ಅವ್ರಿಬ್ಬರ ಡೆಡ್ ಬಾಡೀಸ್ ಫಾರ್ಮರ್ ಫುಡ್ ಬಾವೀಲಿ ಸಿಕ್ಕಿದ್ಯಂತೇ ಪೋಲೀಸೆಲ್ಲಾ ಬಂದಿದಾರಂತೆ ನೋಡ್ಕೊಂಡ್ ಬರಣಾ ಬನ್ರೇ’ ಎಂದಳು ಏದುಸಿರಿಡುತ್ತಾ.. ನಂಗೆ ಆಶ್ಚರ್ಯವಾಯಿತು. ಬಾರೆ ಬಬ್ಲಿ ಹೋಗಣ ಅಂದ್ರೆ ಇಲ್ಲ ಬೇಡ ನಾ ಬರಲ್ಲ ನೀನೂ ಹೋಗ್ಬೇಡ. ಲಾಲಿ ನೀನು ಹೋಗು ನಾವು ಬರಲ್ಲ ಅಂದ್ಲು. ಎಲ್ಲದಕ್ಕೂ ಬೇಡ ಬೇಡ ಅಂತೀಯಲ್ಲ ಏನಾಗಿದೆ ನಿಂಗೆ ಅಂದೆ. ಅವಳ ಕಣ್ಣಲ್ಲಿ ಜಲಪಾತ.&lt;br /&gt;&lt;br /&gt;ನಯ್ನೀ ಎರೆಡು ದಿನದ ಹಿಂದೆ ಥರ್ಡ್ ಫ್ಲೋರ್ ಬಾತ್ ರೂಮಿನಿಂದ ಕಿರುಚಿಕೊಂಡು ಬಂದ್ನಲ್ಲ ಆವಾಗ ನಾನು ನೋಡಿದ್ದು ಜಿರಲೆನಲ್ಲ ಅಲ್ಲ್ಯಾರೂ ಫೋನ್ನಲ್ಲೂ ಮಾತಾಡುತ್ತಿರಲಿಲ್ಲ. ಈಗ ಲಾಲಿ ಹೇಳಿದ್ಲಲ್ಲ ಆ ಹುಡ್ಗೀರು ಬಾತ್ ರೂಮ್ನಲ್ಲಿ ಈ ಲೋಕದ ಪ್ರಗ್ನೇನೇ ಇಲ್ಲದೋರ ಥರ ಒಬ್ಬರ ಬೆತ್ತಲೆ ದೇಹನ ಇನ್ನೊಬ್ಬರು ತಬ್ಬಿಕೊಂಡು ಮಲ್ಗಿದ್ರು, ನಂಗೆ ಅಸಹ್ಯ ಆಗಿ ಕಿರುಚಿಕೊಂಡೆ. ನಾ ನೋಡಿದೆ ಅಂತಾನೇ ಅವ್ರು ಆತ್ಮಹತ್ಯೆ ಮಾಡ್ಕೊಂದಿರ್ಬೇಕು ಬಿಕ್ಕಳಿಸಿದಳು. ನನಗೆ ಆಘಾತ! ಹೇಗೆ ಪ್ರತಿಕ್ರಯಿಸಬೇಕೆಂದೇ ತಿಳಿಯಲಿಲ್ಲ.. ಇಬ್ಬರೂ ಆ ವಿಶಯವನ್ನು ಯಾರಿಗೂ ಹೇಳಬಾರದೆಂದು ನಿರ್ಧರಿಸಿದೆವು.&lt;br /&gt;&lt;br /&gt;ಮಾರನೇ ದಿನ ಕಾಲೇಜಿಗೆ ಹೊರಟೆ ಹೊರಡುವ ಮೊದಲು ಇಂಟರ್ನಲ್ಸ್ ಮಾಕ್ಸಿಗೆ ಸೈನ್ ಹಾಕಿಸಿಕೊಳ್ಳೋಣವೆಂದು ವಾರ್ಡನ್ ರೂಮಿಗೆ ಹೋದೆ. ವಾರ್ಡನ್ ಜೊತೆ ಪೋಲೀಸ್ ಮಾತಾಡುತ್ತಾ ಕೂತಿದ್ದರು ಅವರು ಹೇಳೋದು ಕೇಳಿಸಿತು ‘ಪೊಸ್ಟ್ ಮಾರ್ಟಮ್ ರಿಪೋರ್ತ್ಸ್ ಬಂದಿದೆ ಈ ಹುಡುಗೀರು ಸತ್ತು ಆಗ್ಲೇ ಐದು ದಿನ ಆಗಿದೆ…. ಮುಂದಿನದೇನು ಕೇಳಿಸಲಿಲ್ಲ. ಬಬ್ಲಿ ಎರಡು ದಿನದ ಹಿಂದಷ್ಟೇ ಅವರನ್ನು ನೋಡಿದೆ ಎಂದಳಲ್ಲ ಅವಳು ನೋಡಿದ್ದಾದರೂ ಏನು! ಅವಳು ಹೇಳಿದ್ದು ನಿಜವಾ ಏನೂ ಅರ್ಥ ಆಗಲಿಲ್ಲ ನನಗೆ. ನಾನು ಕುಸಿದು ಕೂತೆ!&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-7762443033276528514?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/7762443033276528514/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=7762443033276528514' title='12 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/7762443033276528514'/><link rel='self' type='application/atom+xml' href='http://www.blogger.com/feeds/714642904810204846/posts/default/7762443033276528514'/><link rel='alternate' type='text/html' href='http://mrugnayanee.blogspot.com/2008/10/blog-post_29.html' title='ಯಾರೂ.....??'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>12</thr:total></entry><entry><id>tag:blogger.com,1999:blog-714642904810204846.post-8264370750697076369</id><published>2008-10-24T08:39:00.002+05:30</published><updated>2008-10-24T08:45:49.055+05:30</updated><title type='text'>ಹಾಗೆ ಹಿಂಸೆಪಟ್ಟುಕೊಂಡು ಇರಬಾರದು ಹುಡುಗ...</title><content type='html'>ಮುಂಜಾವಿನ ಮುದ್ದು ಬಿಸಿಲೇ…&lt;br /&gt;&lt;br /&gt;ಇಷ್ಟೆಲ್ಲಾ ದೂರ ಹೋಗ್ತೀವಿ ಅಂದ್ಕೊಂಡಿರಲಿಲ್ಲ ಅನ್ನೋದಕ್ಕೆ ಇಷ್ಟು ದೂರ ಹೋಗಲ್ಲ ಅಂದುಕೊಂಡಿರಲೂ ಇಲ್ಲ. ಸುಮ್ಮನೆ ಹಾಗೇ ಏನಾದರೂ ಘಟಿಸಲಿ ಎನ್ನುವಂತೆ ಇದ್ದುಬಿಟ್ಟೆವಲ್ಲ ಇಬ್ಬರೂ.&lt;br /&gt;&lt;br /&gt;ನಾನು ನಿನ್ನ ಕೆನ್ನೆಗೆ ಮುತ್ತಿಟ್ಟು ಕಿವಿ ಕಚ್ಚಿದ್ದು, ನೀನು ಆಗತಾನೇ ಸಿಗರೇಟು ಸೇದಿದ ತುಟಿಯನ್ನೇ ನನ್ನ ತುಟಿಗೆ ಒತ್ತಿದ್ದು, ಅಂಥದ್ದು, ಅದಕ್ಕಿಂತ ಹೆಚ್ಚಿನದು ನೂರಾರು ಸಾರಿ ಆಗಿದ್ದು, ಉಹು ಅದನ್ನ ನೆನಪಿಸೋಕ್ಕೆ ಪತ್ರ ಬರೀತಿಲ್ಲ.&lt;br /&gt;&lt;br /&gt;ನೀನು ಆಗಾಗ ಫೋನ್ನಲ್ಲಿ ಕದ್ದು ಮಾತಾಡುವ ನಿನ್ನ ಗರ್ಲ್ ಫ್ರೆಂಡುಗಳ ಬಗ್ಗೆ ಮಾತಾಡಿದರೆ ಬುದ್ಧಿ  ಇಲ್ಲದವಳಾಗುತ್ತೇನೆ. ಗರ್ಲ್ ಫ್ರೆಂಡುಗಳು ಅಂತ ಹೇಳುವುದರಲ್ಲಿ ನನ್ನ ಸ್ವಂತದ್ದೊಂದು ಸಮಾಧಾನವಿದೆ. ಬಹಳಷ್ಟು ಜನ ಹುಡುಗಿಯರಿದ್ದಾರೆ ಯಾರನ್ನೂ ಹಚ್ಚಿಕೊಳ್ಳುವ ಜಾಯಮಾನವಲ್ಲ ಇವನದ್ದು ಅನ್ನೋ ನಂಬಿಕೆ. ಇಲ್ಲ ನಿನಗೆ ಒಬ್ಬಳೇ ಗರ್ಲ್ ಫ್ರೆಂಡ್ ಎಂದುಕೊಂಡುಬಿಟ್ಟರೆ ಈ ಪತ್ರಕ್ಕೂ ಅರ್ಥವಿರುವುದಿಲ್ಲ.&lt;br /&gt;&lt;br /&gt;ಅವನ ಜೊತೆ ಅವತ್ತು ನಾನು ಮೊಬೈಲ್ನಲ್ಲಿ ಮಾತಾಡುತ್ತಿದ್ದಾಗ ನೀನು ನನ್ನ ಕೈಯಿಂದ ಮೊಬೈಲ್ ಕಿತ್ತುಕೊಂಡು ಎಸೆದೆಯಲ್ಲಾ, ಆವಾಗಲೇ ಅರ್ಥವಾಗಿದ್ದು you can be so furious  ಅಂತ. ಆಮೇಲೆ ಇಬ್ಬರೂ ಅತ್ತೆವಲ್ಲಾ ಒಟ್ಟಿಗೇ ಕೂತು. ‘ನಾನು ಪೊಸೆಸ್ಸಿವ್ ಅನ್ನ್ಸ್ತೀನಾ ಚಿನ್ನ? ಹಿಂಸೆ ಮಾಡ್ತಿದೀನ ನಾನು ನಿಂಗೆ? ನಂಗೆ ಅವ್ನು ಇಷ್ಟ ಇಲ್ಲ ಕಣೇ, ನಂಗೆ ಕಷ್ಟ ಆಗುತ್ತೆ. ಸಾರಿ. ನನ್ನೆದುರಿಗೆ ಅವ್ನ ಜೊತೆ ಮಾತಾಡ್ಬೇಡ ಪ್ಲೀಸ್. ನಾನಿಲ್ದಿರೋವಾಗ ಎಷ್ಟ್ಬೇಕಾದ್ರೂ ಮಾತಾಡು ನಾನು ಬೇಡ ಅನ್ನಲ್ಲ.’ ಎನ್ನುತ್ತಿದ್ದ ನಿನ್ನ ಮುದ್ದುಗರೆಯಬೇಕೆನಿಸಿತ್ತು ನನಗೆ. ನಾವಿಬ್ಬರೂ ಜೊತೆಗಿರಲು ಶುರುವಾಗಿ ಏಳು ವರ್ಷದ ನಂತರ ಮೊದಲ ಸಾರಿ ಹೀಗಾಗಿದ್ದಲ್ಲವ? ನಿನ್ನ ಪೊಸೆಸಿವ್ ಎಂದು ಹೇಗೆ ಕರೆಯಲಿ ನಾನು?&lt;br /&gt;&lt;br /&gt;ನಾನು ಇಲ್ಲಿಗೆ ಬಂದದ್ದು ಯಾಕೆ ಗೊತ್ತಾ? ಇಬ್ಬರೂ ಒಬ್ಬರಿಗೊಬ್ಬರು ಬೋರಾಗಿಬಿಡುತ್ತಿದ್ದೇವೇನೋ ಅಂತ ಭಯ ಕಾಡತೊಡಗಿತ್ತು. ಒಬ್ಬರಿಗೊಬ್ಬರು ಬೋರಾದಾಗಲೂ ಒಟ್ಟಿಗೇ ಇರುವ ಹಿಂಸೆಯನ್ನು ಪಡಬಾರದು ಎಂಬ ಕಾರಣಕ್ಕೆನೇ ಮದುವೆಯ ಗೋಜಿಗೆ ಹೋಗದೆ ಸುಮ್ಮನೆ ಜೊತೆಗಿರಲು ಶುರು ಮಾಡಿದವರಲ್ಲವೇ ನಾವು, ಈಗ ಇನ್ನೊಬ್ಬರಿಗೆ ಬೇಜಾರಾಗಬಾರದು, ಹರ್ಟ್ ಮಾಡಬಾರದು ಎಂಬ ಕಾರಣಕ್ಕೆ ಒಟ್ಟಿಗೆ ಇರಬಾರದು.&lt;br /&gt;ನಿನಗೆ ನಾನು ಬೋರಾಗತೊಡಗಿದ್ದೇನೆ ಎಂದು ಸ್ಪಷ್ಟವಾಗತೊಡಗಿದ್ದು, ನೀನು ಅತ್ಯಂತ busy ಆಗಿ, ನನ್ನ ಜೊತೆ ಮಾತಾಡಿ ಕರ್ತವ್ಯವನ್ನು ಮುಗಿಸಬೇಕೆನ್ನುವಂತೆ ಎಣಿಸಿ ಐದು ನಿಮಿಷ ಎದುರು ಕೂತು ಎದ್ದು ಹೋಗತೊಡಗಿದೆಯಲ್ಲಾ ಆಗ. ಹಾಗೆ ಹಿಂಸೆಪಟ್ಟುಕೊಂಡು ಇರಬಾರದು ಹುಡುಗ. ನಿನಗೆ ಯಾವಾಗ ನನ್ನ ಜೊತೆ ಇರುವುದು ಕರ್ತವ್ಯವೆನಿಸತೊಡಗಿದೆ, ನಿನಗೆ ನನ್ನ ಸಾಂಗತ್ಯ ಯಾವ ರೀತಿಯ ಖುಷಿಯನ್ನೂ ಕೊಡುತ್ತಿಲ್ಲ ಎಂದು ತಿಳಿಯಿತೋ ನನಗೆ ಆ ಕ್ಷಣದಿಂದ ನಿನ್ನ ಜೊತೆಗೆ ಇರುವುದು ಉಸಿರು ಕಟ್ಟಿದ ಅನುಭವ.&lt;br /&gt;&lt;br /&gt;ಅದಕ್ಕೇ ಇಲ್ಲಿಗೆ ಬಂದು ಬಿಟ್ಟೆ. ತಾತ ನನ್ನ ಹೆಸರಿಗೆ ಬರೆದ ಈ ಕಾಫಿ ಎಸ್ಟೇಟ್ ಮಾತ್ರ ಸಮಾಧಾನ ಕೊಡುತ್ತೆ ಅನ್ನಿಸಿತು. ನಿನಗೆ ನಾನು ಬೇಕೆನ್ನಿಸಿದರೆ ಇಲ್ಲಿಗೆ ಬಂದೇ ಬರುತ್ತೀಯ ಎಂದು ಗೊತ್ತಿತ್ತು. ನೀನು ಬರದೇ ಹೋಗಿದ್ದರೆ ಜೀವನ ಪೂರ್ತಿ ನಿನಗಾಗಿ ಕಾಯುತ್ತಾ ಕೂರುತ್ತಿದ್ದೆ ಎನ್ನುವುದು ಸುಳ್ಳು. ಆದರೆ ಅವತ್ತಿನಿಂದ, ನಾನು ಅಲ್ಲಿಂದ ಇಲ್ಲಿಗೆ ಹೊರಟು ಬಂದ ದಿನದಿಂದ ನೆನ್ನೆಯವರೆಗೂ ಅಂದರೆ ಐವತ್ತೇಳು ದಿನ ಒಂಭತ್ತು ಗಂಟೆಗಳು ಬೇರೆ ಯಾರೂ ಬೇಕೆನಿಸಲಿಲ್ಲ.&lt;br /&gt;ನೆನ್ನೆ ನೀನು ಬಂದು ಎದುರು ಕೂತಾಗ ಅಳದೆ ಯಾವ ಭಾವನೆಗಳನ್ನೂ ತೋರಿಸದೆ ಸಹಜವಾಗಿರಲು ಎಷ್ಟು ಕಷ್ಟಪಟ್ಟೆ ಗೊತ್ತಾ? ನನ್ನ ನಾಟಕದ ಕಟ್ಟೆ ಒಡೆದು, ನಾನು ಭೋರ್ಗರೆದು ನೀರಾಗಿ ಸುರಿದದ್ದು ಕಾಫಿ ಬಟ್ಟಲ ಕೆಳಗೆ ಸಿಕ್ಕ ನಿನು ಬರೆದಿಟ್ಟು ಹೋದ ಚೀಟಿ ಓದಿದಾಗ..  ‘I can exist without you, but can’t live. I want to live please come’  ಹೌದು ಹುಡುಗ ನಾನೂ ಬದುಕಬೇಕು, ಬರುತ್ತೇನೆ.&lt;br /&gt;&lt;br /&gt;ತೇರೇ ಬಿನ್ ಮೆ ಯು ಕೈಸೆ ಜಿಯಾ&lt;br /&gt;ಕೈಸೆ ಜಿಯಾ ತೆರೆ ಬಿನ್&lt;br /&gt;&lt;br /&gt;ನಿನ್ನ&lt;br /&gt;ಬೆಚ್ಚಗಿನ ಉಸಿರು&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-8264370750697076369?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/8264370750697076369/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=8264370750697076369' title='12 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/8264370750697076369'/><link rel='self' type='application/atom+xml' href='http://www.blogger.com/feeds/714642904810204846/posts/default/8264370750697076369'/><link rel='alternate' type='text/html' href='http://mrugnayanee.blogspot.com/2008/10/blog-post_24.html' title='ಹಾಗೆ ಹಿಂಸೆಪಟ್ಟುಕೊಂಡು ಇರಬಾರದು ಹುಡುಗ...'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>12</thr:total></entry><entry><id>tag:blogger.com,1999:blog-714642904810204846.post-5940146356289968150</id><published>2008-10-05T09:50:00.002+05:30</published><updated>2008-10-05T10:11:21.307+05:30</updated><title type='text'>ನೋಟದೊಳು ತಾನಿಲ್ಲದೆ</title><content type='html'>ಯಾವುದರಿಂದಾದರೂ ಶಾಶ್ವತವಾಗಿ ಕಳಚಿಕೊಂಡೆ ಅಥವಾ ಇನ್ನೇನನ್ನೋ ಕಳೆದುಕೊಂಡೆ ಅಂತ ನಿಶ್ಚಿತವಾಗಿ ಗೊತ್ತಾದಾಗ ತನಗೆ ಅಸಾಧ್ಯವಾದ ಹಸಿವಾಗುತ್ತದೆ ಅನ್ನುವುದು ಅವಳಿಗೆ ಮತ್ತೆ ಸ್ಪಷ್ಟವಾಯಿತು. ಇನ್ನು ಅವನ ಜೊತೆ ಬದುಕುವುದು ಸಾಧ್ಯವೇ ಇಲ್ಲ ಎಂದು ಮನಸ್ಸಿನಲ್ಲೇ ತೀರ್ಮಾನಿಸಿದ ನಂತರ ಅಡುಗೆ ಮನೆಗೆ ಹೋಗಿ ತಾನೇ ಮಾಡಿಟ್ಟಿದ್ದ ಪುಲಾವನ್ನು ತಟ್ಟೆ ಭರ್ತಿ ಹಾಕಿಕೊಂಡು ಗಾಜಿನ ಬಟ್ಟಲು ತುಂಬ ಮೊಸರು ಸುರಿದುಕೊಂಡು ಸಾವಧಾನವಾಗಿ ಏನನ್ನೂ ಯೋಚಿಸದೆ ನಿಧಾನವಾಗಿ ತಿಂದಿದ್ದು ನೆನಪಾಯಿತು. ಹಾಗೆ ಹಸಿವಿನಿಂದ ತಿನ್ನುವಾಗ ತನ್ನ ಮನಸ್ಸು ಪೂರ್ತಿ ಖಾಲಿಯಾಗುತ್ತಿರುತ್ತಲ್ಲ, ಯಾವುದೇ ಭಾವನೆಗಳಿಲ್ಲದ ಖಾಲಿ- ಖಾಲಿ ಮನಸ್ಸಿಗೆ ಬರೀ ತನ್ನ ದೇಹದ ಹಸಿವು ಮಾತ್ರ ಗೊತ್ತಾಗುತ್ತಲ್ಲ ಅಂತ ಆಶ್ಚರ್ಯವಾಯಿತು. ಇಡೀ ತನ್ನ 34 ವರ್ಷದ ಜೀವನದಲ್ಲಿ ಹೀಗೆ ಆಗುತ್ತಿರುವುದು ಇದು ನಾಲ್ಕನೇ ಸಲ ಎಂದು ಎಣಿಸಿಕೊಂಡು ಹತ್ತನೇ ತರಗತಿಯ ಫಲಿತಾಂಶದ ಸಮಯದಲ್ಲಿ 'ಕನ್ನಡದಲ್ಲಿ ಫೇಲ್ ಆಗಿದಾಳೆ ' ಅಂತ ಅಪ್ಪ ಪೆಚ್ಚು ಮೋರೆ ಹಾಕಿಕೊಂಡು ಬಂದು ಹೇಳಿದಾಗ ತಾನು ಒಂದು ತೊಟ್ಟೂ ಕಣ್ಣೀರು ಸುರಿಸದೆ ಅಮ್ಮ ಮಾಡಿದ್ದ ಬೆಳಗಿನ ಉಪ್ಪಿಟ್ಟನ್ನೇ ಮತ್ತೆ ತಟ್ಟೆ ಭರ್ತಿ ಹಾಕಿಕೊಂಡು ತಿನ್ನುವಾಗಲೂ ತನಗೆ ಗೊತ್ತಾಗುತ್ತಿದ್ದುದು ಹಸಿವಾಗುತ್ತಿದೆ ಅನ್ನೋದು ಒಂದೇ. ಮುಂದೆ ಪಿಯುಸಿಯ ಫಿಸಿಕ್ಸ್ ಟ್ಯೂಷನ್‌ನಲ್ಲಿ ನಿದ್ದೆ ತಡೆಯಲಾರದೆ 'ನಿದ್ದೆ ಬರ್‍ತಿದೆ ಕಣೇ' ಅಂತ ನಂದಿನಿಯ ತೊಡೆಯ ಮೇಲೆ ಮಲಗಿದ್ದ ತನಗೆ, ಟ್ಯೂಷನ್ ಮುಗಿಸಿ, ಮನೆಗೆ ಹೋಗಿ,ತಿಂಡಿ ತಿಂದು, ಕಾಲೇಜಿಗೆ ಬಂದು ನಂದಿನಿಯನ್ನು ಹುಡುಕುತ್ತಿದ್ದರೆ ಸಿಕ್ಕಿದ್ದು ಅವಳ ಸಾವಿನ ಸುದ್ದಿ. ಎಲ್ಲರೂ ಅವಳು ಆಕ್ಸಿಡೆಂಟಾಗಿ ಸತ್ತುಬಿದ್ದಿದ್ದ ಜಾಗಕ್ಕೆ ಓಡಿಹೋಗುತ್ತಿದ್ದರೆ ತಾನು ಮಧ್ಯಾಹ್ನಕ್ಕೆಂದು ತಂದಿದ್ದ ಊಟವನ್ನು ತಿನ್ನತೊಡಗಿದ್ದೆ. ಆವಾಗಲೂ ತನ್ನ ಮನಸ್ಸಿಗೆ ಅಸಾಧ್ಯವಾಗಿ ಹಸಿವಾಗುತ್ತಿದೆ, ತಿನ್ನದಿದ್ದರೆ ಸತ್ತೇ ಹೋಗುತ್ತೇನೆ ಅನ್ನಿಸಿತ್ತು. ಮುಂದೆ ತನ್ನ ಮದುವೆ ನಿಶ್ಚಯವಾದಾಗ ಅಮ್ಮ ತನ್ನನ್ನು ತಬ್ಬಿಕೊಂಡು ನಮ್ಮನ್ನ ಬಿಟ್ಟೊಗ್ತಿಯಲ್ಲೆ ಕಂದ ಅಂತ ಬಿಕ್ಕಳಿಸುತ್ತಿದ್ದರೆ ತನಗೆ ಹಸಿವಿನ ಸಂಕಟದಿಂದ ಪ್ರಜ್ಞೆ ತಪ್ಪುತ್ತದೆ ಅನ್ನಿಸಿ ಅಮ್ಮಾ ತುಂಬಾ ಹಸಿವಾಗ್ತಿದ್ದೆ ಕಣೇ ಅಂದದ್ದು ನೆನಪಾಗಿ ನಿಟ್ಟುಸಿರಿಟ್ಟಳು.&lt;br /&gt;***&lt;br /&gt;"ನೀನು ಸಮುದ್ರದ ಥರ ಪರಿಪೂರ್ಣ ಹೆಣ್ಣು" ಅಂದಿದ್ದ ಅವನ ಮಾತುಗಳಿಗೆ ತನ್ನ ಕಣ್ಗಳು ಅರಳುಮಲ್ಲಿಗೆ. ಸಮುದ್ರ ಹುಡ್ಗ ಅಲ್ವೇನೋ ಅಂದಿದ್ದಕ್ಕೆ ಅವನ ನಗುವಿನ ಉತ್ತರ. ತನ್ನ ಹೆಗಲ ಮೇಲಿದ್ದ ಅವನ ಬಲಗೈ ಜಾರಿ ತೋಳುಗಳನ್ನು ಬಿಗಿಯಾಗಿ ಅಮುಕಿದ್ದವು.&lt;br /&gt;&lt;br /&gt;ನಮ್ಮ ಹಾಸ್ಟೆಲಿನ ಎತ್ತರದ ಕಾಂಪೌಂಡುಗಳ ಎದುರಿನ ಉದ್ದೋ ಉದ್ದದ ರಸ್ತೆಯ ಆ ತುದಿಯಿಂದ ಈ ತುದಿಗೆ ಈ ತುದಿಯಿಂದ ಆ ತುದಿಗೆ ನಡೆದಾಡುತ್ತಾ ಮಾತಾಡುತ್ತಿದ್ದೆವು ಸಮಯದ ಹಂಗನ್ನು ಮರೆತು. ನದಿಗಳು ಹೋಗಿ ಸಮುದ್ರವನ್ನು ಸೇರುತ್ತವೆ ಕಣೇ, ಗಮನಿಸು ಸಮುದ್ರ ಒಂದು, ನದಿಗಳು ಹಲವಾರು. ಪ್ರಕೃತಿಯಲ್ಲಿ ಯಾವಾಗಲೂ ಒಂದು ಹೆಣ್ಣಿಗೆ ಬಹಳಷ್ಟು ಜನ ಪೈಪೋಟಿ ನಡೆಸುತ್ತಿರುತ್ತಾರೆ. 'Competitive male and choosy female' ಒಂದು ಅಂಡಾಣುವಿಗೆ ಮಿಲಿಯಗಟ್ಟಲೆ ವೀರ್ಯ ಸ್ಪರ್ಧಿಸುತ್ತವೆ. ಹೊಂಬಾಳೆಯನ್ನು ಗಮನಿಸಿದ್ದಿಯಲ್ಲ ಒಂದು ಹರಳಿಗೆ ಹಲವಾರು ಕೇಸರಗಳು. ಡಿಸ್ಕವರಿ ಚಾನೆಲ್ ನೋಡಿರ್‍ತೀಯಾ... ಪ್ರಾಣಿಗಳ ಉದಾಹರಣೆ ಕೊಡೋದು ಬೇಡ. ಇನ್ನು ಮನುಷ್ಯರದು ನಿನ್ನ ಅನುಭವಕ್ಕೇ ಬಂದಿರುತ್ತೆ ಎಂದು ತುಂಟ ನಗೆ ಬೀರಿದ್ದ.&lt;br /&gt;&lt;br /&gt;ಆಕಾಶದಲ್ಲಿನ ನಕ್ಷತ್ರಗಳನ್ನು, ಅಷ್ಟು ಹೊತ್ತಾದರೂ ಇನ್ನು ಓಡಾಡುತ್ತಿರುವ ಜನಗಳನ್ನು ದೂರದಲ್ಲಿದ್ದ ಮರಗಳನ್ನು ಕಬ್ಬಿನಂಗಡಿಯ ಮುಚ್ಚಿದ ಬಾಗಿಲನ್ನು ನೋಡುತ್ತಾ ಮಾತಾಡುವ ರೀತಿ ನೋಡಿದಾಗ ಇವೆಲ್ಲವುಗಳಿಂದ ಅವನು ಪದಗಳನ್ನು ಹೆಕ್ಕುತ್ತಿದ್ದಾನೆ ಎಂದು ಅನುಮಾನವಾಗುತ್ತಿತ್ತು. ಮುಂದುವರೆಸಿದ್ದ, ಸಮುದ್ರ ಯಾವಾಗಲೂ receiving endನಲ್ಲಿರುತ್ತೆ. ಹೆಣ್ಣೂ ಅಷ್ಟೇ. ನದಿಗಳು ಸಮುದ್ರವನ್ನು ಸೇರಲು ಹುಡುಕಿಕೊಂಡು ಬರುತ್ತವೆ. ಪ್ರಕೃತಿಯಲ್ಲಿ ಹೆಣ್ಣು ಗಂಡಿಗಿಂತ ವಿಶಾಲವಾಗಿರುತ್ತಾಳೆ. ಅಂಡಾಣುವಿನ ಗಾತ್ರ 0.1 ಮಿ.ಮೀ. ಇದ್ದರೆ ಒಂದು ವೀರ್ಯಾಣುವಿನ ಗಾತ್ರ 0.05 ಮಿ.ಮೀ. ಇರುತ್ತೆ. ಇರುವೆಗಳ ಬಗ್ಗೆ ತಿಳಿದಿದ್ದೀಯ? ರಾಣಿ ಇರುವೆ ದೊಡ್ಡದಿರುತ್ತೆ. ಕಪ್ಪೆಗಳನ್ನು ತೆಗೆದುಕೋ ಹೆಣ್ಣು ಕಪ್ಪೆ ಗಾತ್ರ ದೊಡ್ಡದು.&lt;br /&gt;&lt;br /&gt;ಸಮುದ್ರ ವಿಶಾಲವಾಗಿರುತ್ತೆ ಎಂದಷ್ಟೇ ಹೇಳಿದರೆ ಅದರ ಅಗಲವಾದ ಹರವಿಗೆ ಅನ್ಯಾಯ ಮಾಡಿದ ಹಾಗೆ. ಬರೀ ಇಷ್ಟೇ ಅಲ, ಗಂಡಿಗೆ ಬಂದು ಸೇರುವುದೊಂದೇ ಗೊತ್ತು, ಹೆಣ್ಣು ಪೊರೆಯುತ್ತಾಳೆ. ವೀರ್ಯಾಣು ಮತ್ತು ಅಂಡಾಣುಗಳು ಸೇರಿ ಜೀವಾಣು ಅನ್ನಿಸಿಕೊಂಡು ಅದು ಗರ್ಭಾಶಯದ ಒಳಗೆ ನೆಲೆಗೊಳ್ಳುವವರೆಗೆ, ಅಂದರೆ ನಾಲ್ಕೈದು ದಿನಗಳು ಆ ಜೀವವನ್ನು ಪೊರೆಯುವುದು ಅಂಡಾಣುವಿನ ಒಳಗಿನ ಯೋಕ್(ಹಳದಿ ಲೋಳೆ). ತಾಯಿ ಒಂಬತ್ತು ತಿಂಗಳು ಮಗುವನ್ನು ಕಾಪಾಡುತ್ತಾಳೆ. ಸಮುದ್ರ ತನ್ನಲ್ಲಿ ನದಿಗಳಿದ್ದು ಕರಗಿಸಿಕೊಂಡು ಪೊರೆಯುತ್ತದೆ. ನದಿಗಳು ಹೇಗಿದ್ದರೂ ಸ್ವೀಕರಿಸುತ್ತದೆ, ಒಂದಾಗುತ್ತದೆ; ಒಂದಾಗಿ ಅವುಗಳ ಕೊಳಕನ್ನು ಶುದ್ಧವಾಗಿಸುತ್ತದೆ, ಶುದ್ಧವಾಗುತ್ತದೆ... ಹಾಗೇ ನೀನೂ ಅಂದಿದ್ದ. ಅವನ ಮಾತುಗಳು ಸರಿಯಾಗಿ ಅರ್ಥವಾಗದಿದ್ದರೂ ಕೆಲವಕ್ಕೆ ವಿರೋಧವಿದ್ದರೂ ಇಷ್ಟವಾಗಿದ್ದವು. ಆದರೆ ಈಗ ಯೋಚಿಸಿದರೆ ಅಂದೇ ಅವನು ನನ್ನಲ್ಲಿನ ಕೊಳಕುಗಳನ್ನು ಸಹಿಸಿಕೋ ಅಂದಿದ್ದನಾ ಎಂದು ಅನುಮಾನವಾಗುತ್ತದೆ.&lt;br /&gt;&lt;br /&gt;***&lt;br /&gt;&lt;br /&gt;'ಒಂದು ಹೆಣ್ಣಿಗೊಂದು ಗಂಡು ಹೇಗೋ ಸೇರಿ ಹೊಂದಿಕೊಂಡು...' ಕೆ.ಎಸ್.ಎನ್. ಅವರ ಸಾಲಿಗೆ ಅರ್ಥವೇ ಇಲ್ಲವಲ್ಲ. ಇಷ್ಟಪಟ್ಟು ಮದುವೆಯಾದ ಹುಡುಗ, ಹೇಗೋ ಏನೋ ಹೊಂದಿಕೊಂಡು ಹೋಗುವ ಪ್ರಮೇಯವೇ ಇರಲಿಲ್ಲ. ಆದರೆ ಒಂದು ಹೆಣ್ಣಿಗೊಂದು ಗಂಡು ಎನ್ನುವುದೂ ಸುಳ್ಳಾಯಿತಲ್ಲ. ಅವನ ಕಾಮಕ್ಕೆ ನಾನು ಸಾಕಾದರೆ ವಿಕೃತಕ್ಕೆ ಕಾರ್‌ಡ್ರೈವರ್...!&lt;br /&gt;&lt;br /&gt;ಪ್ರಕೃತಿಯಲ್ಲಿ ಸಹಜವಾದುದ್ದನ್ನು ನಾನ್ಯಾವತ್ತೂ ವಿರೋಧಿಸಿದ್ದೇ ಇಲ್ಲ. ಕ್ಷುದ್ರ ಜಂತುವಿನಿಂದ ಹಿಡಿದು ಹುಲಿ, ಜಿಂಕೆ, ಆನೆ ಕೊನೆಗೆ ಮನುಷ್ಯನವರೆಗೂ ಎಲ್ಲಾ ಪ್ರಾಣಿಗಳಿಗೆ ತನ್ನ ಸಂತಾನ ಎಷ್ಟು ಸಾಧ್ಯವೋ ಅಷ್ಟು ಬೆಳೆಯಲಿ ಎಂಬ ಗುಪ್ತ ಆಸೆಯೊಂದು ವಂಶವಾಹಿನಿಗಳಲ್ಲಿರುತ್ತದಂತೆ. ಅಂಥದಿರುವುದರಿಂದಲೇ ಮನುಷ್ಯರು ಸಾಮಾನ್ಯವಾಗಿ ಒಬ್ಬರಿಂದ ತೃಪ್ತರಾಗೋದಿಲ್ಲ. ಕ್ಷೇತ್ರವು ತಾನು ಸಂತಾನೋತ್ಪತ್ತಿಗೆ ಅರ್ಹವಾಗಿರುವಷ್ಟು ವರ್ಷಗಳೂ ಸತತವಾಗಿ ಸಶಕ್ತವಾದ ಬೀಜದ ಹುಡುಕಾಟದಲ್ಲಿದ್ದರೆ, ಬೀಜವು ಫಲವತ್ತಾದ ಕ್ಷೇತ್ರದ ಹುಡುಕಾಟದಲ್ಲಿರುತ್ತದೆ. ಅದಕ್ಕೇ ನನಗೆಂದೂ ಮದುವೆಯಾಚೆಗಿನ ಸಂಬಂಧಗಳು ತಪ್ಪೆನಿಸಿದ್ದೇ ಇಲ್ಲ. ನಿನಗೆ extra marital affaireಇದ್ದರೂ ನಾನು ಕೇಳಲು ಬರುವುದಿಲ್ಲ. ಆದರೆ ನೀನು ಯಾರೊಂದಿಗಾದರೂ ಭಾವನಾತ್ಮಕವಾಗಿ ಬೆಸೆದುಕೊಂಡಾಗ ಮಾತ್ರ ನಿನ್ನ ತೊರೆದು ಹೋಗುತ್ತೇನೆ ಎಂದು ಮದುವೆಗೆ ಮೊದಲೇ ಅವನಿಗೆ ಹೇಳಿದ್ದೆ. ಆದರೆ ಗಂಡು ಮತ್ತೊಂದು ಗಂಡಿನೊಡನೆ? ಅದು ವಿಕೃತಿ.&lt;br /&gt;&lt;br /&gt;ಬರೀ ಇಷ್ಟೇ ಆಗಿದ್ದರೆ ಅದು ಬೇರೆ. ಆ ವಿಷಯ ತಿಳಿದ ರಾತ್ರಿ ಹೇಗೆ ಶುರುಮಾಡುವುದೆಂದು ತಿಳಿಯದೆ ನೀನು ಯಾವಾಗನಿಂದ ಹೀಗೆ ಎಂದು ಕೇಳಿದವಳಿಗೆ ಆಘಾತ ಕಾದಿತ್ತು. "ನನಗೆ ನೀನು ಬೇಕಿರಲಿಲ್ಲ. ನೀನು ಹೇಳುತ್ತಿಯಲ್ಲ; ದೈಹಿಕ ಮಾನಸಿಕ ಸಾಂಗತ್ಯ ಅವೆಲ್ಲಾ ಬುರುಡೆ ಅನಿಸುತ್ತೆ. ಅವನ ಜೊತೆ ಇದ್ದರೆ ಯಾರಿಗೂ ಸಿಗದ ಅನೂಹ್ಯವಾದ ಸುಖ ನನಗೆ ಸಿಗುತ್ತೆ. ನೀನು ಅತೃಪ್ತಿಯಿಂದ ನರಳಬಾರದಲ್ಲ ಅಂತ ನಿನಗೋಸ್ಕರ ಆಗಾಗ ನಿನ್ನ ಸೇರುತ್ತೇನೆ" ಅಂದ. ಇಷ್ಟು ದಿನ ನಿನಗೆ ಭಿಕ್ಷೆ ಹಾಕುತ್ತಿದ್ದೆ ಅನ್ನುತ್ತಿದ್ದಾನೆ ಅನ್ನಿಸಿ ಕುಸಿದುಹೋದೆ.&lt;br /&gt;&lt;br /&gt;"ನಿನಗೋಸ್ಕರ" ಎಂಬ ಪದವನ್ನ ತಾನು ಮೊದಲಿನಿಂದಲೂ ಎಷ್ಟು ದ್ವೇಷಿಸುತ್ತಿದ್ದೆ. ಯಾರೂ ಯಾರಿಗೋಸ್ಕರವೂ ಏನನ್ನೂ ಮಾಡಬಾರದು. ಏನನ್ನೇ ಮಾಡಿದರೂ ಅದರಲ್ಲಿ ತನಗೆ ಖುಷಿ ಸಿಗದೆ ಬೇರೆಯವರಿಗೆ ಖುಷಿಯಾಗಲೆಂದು ಮಾಡುವುದು ಭಿಕ್ಷೆ ಹಾಕಿದಂತೆಯೇ. ನನಗೋಸ್ಕರ ಬಾ, ನನಗೋಸ್ಕರ ಊಟಮಾಡು, ನನಗೋಸ್ಕರ ಹಾಡು ಹೇಳು... ಊಹುಂ... ಸ್ಟುಪಿಡಿಟಿ. ಯಾರೂ ಯಾರಿಗೋಸ್ಕರವೂ ಏನನ್ನೂ ಮಾಡಬಾರದು. ಪ್ರೀತಿಯಂತೂ ಅಲ್ಲವೇ ಅಲ್ಲ, ಅವನ ಭಿಕ್ಷೆ ಬೇಕಾಗಿಲ್ಲ.&lt;br /&gt;&lt;br /&gt;***&lt;br /&gt;&lt;br /&gt;ಪರಿಚಿತರ ನಗು ಕಿರಿಕಿರಿಯನ್ನೂ ಅಥವಾ ಅಪರಿಚಿತರ ತುಟಿಯಂಚಿನ ಆಸೆ ಅಸಹ್ಯವನ್ನೂ ಉಂಟುಮಾಡುತ್ತಿಲ್ಲ ಎಂದು ಅರಿವಾದಾಗ ಹುಬ್ಬಳ್ಳಿಯ ಬಸ್‌ಸ್ಟಾಂಡಿನಲ್ಲಿ ಕುಳಿತ ಅವಳು ತೀರ ಕಣ್ಣಿಗೆ ಕಾಣುವಂತೆ ಕಂಪಿಸಿದಳು.&lt;br /&gt;ಬಸ್ಸು ಬಂದು ನಿಂತಾಗ ಉಂಟಾದ ಗಡಿಬಿಡಿಗೆ ತನ್ನನ್ನು ಒಡ್ಡಿಕೊಳ್ಳದೆ ಎಲ್ಲರೂ ಹತ್ತಿದ ಮೇಲೆ ನಿಧಾನವಾಗಿ ಬಸ್ಸಿನ ಕಡೆ ಚಲಿಸಿದಳು. ಸ್ವಲ್ಪವೇ ಸ್ವಲ್ಪ ಹರಿದು ಬಣ್ಣಗೆಟ್ಟಂತೆ ಕಾಣಿಸುತ್ತಿದ್ದ ಕುಷನ್, ಕೊನೆಯಿಂದ ಮೂರನೆಯ ಸೀಟು ಎಷ್ಟೋ ವರ್ಷಗಳಿಂದ ಇವಳಿಗಾಗಿಯೇ ಕಾದು ಕೂತಿರುವಂತೆ ಕಂಡಿತು. ಕುಳಿತವಳ ಮನಸ್ಸು ಬಸ್ಸಲ್ಲಿ ಕೂತು ಸರಿಯಾಗಿ ನಾಲ್ಕು ವರ್ಷವಾಯಿತಲ್ಲ ಎಂದು ಎಣಿಸಿಕೊಂಡಿತು. ಜೊತೆ-ಜೊತೆಗೆ ಕಾರ್ ಡ್ರೈವರ್‌ನ ನೆನಪಾಗಿ ಹೊರಟ ನಿಟ್ಟುಸಿರಿನ ಮೇಲೆ, ನೆನಪಿನ ಮೇಲೆ ಸಿಟ್ಟಾದಳು.&lt;br /&gt;&lt;br /&gt;ಇದ್ದಕ್ಕಿದ್ದಂತೆ ಮೀರಾ, ಅಕ್ಕಮಹಾದೇವಿಯವರ ಮೇಲೆ ಅಸಾಧ್ಯವಾದ ಹೊಟ್ಟೆಕಿಚ್ಚಾಯಿತು. ಇದ್ದವನನ್ನು ತೊರೆದು, ತಮ್ಮ ಸ್ಪರ್ಶಕ್ಕೆ ಸಿಗದೇಹೋದ ರಕ್ತ ಮಾಂಸಗಳಿಲ್ಲದ, ಬರೀ ಕಲ್ಪನೆಯಲ್ಲಿರುವ ವ್ಯಕ್ತಿಯನ್ನು ಅಷ್ಟು ತೀವ್ರವಾಗಿ ಹೇಗೆ ಪ್ರೀತಿಸಿದರು ಎಂದು ಗಲಿಬಿಲಿಗೊಂಡಳು.&lt;br /&gt;&lt;br /&gt;ಬುದ್ಧಿಗೆ ತಿಳಿಯುವ, ಮನಸ್ಸಿಗೆ ಇಳಿಯುವ, ಕಲ್ಪನೆಗೆ ಹೊಳೆಯುವ ಯಾವುದೇ ವಿಷಯವು ಬರೀ ಬುದ್ಧಿ- ಮನಸ್ಸು ಕಲ್ಪನೆಗಳಿಗೇ ಸೀಮಿತಗೊಂಡಿದ್ದರೆ, ಅವುಗಳ ಅನುಭವ ಇಲ್ಲದಿದ್ದರೆ, ತಿಳಿದ, ಇಳಿದ ಹೊಳೆದ ವಿಷಯಗಳ ತೀವ್ರತೆ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ. ಅದು ಪರಿಣಾಮಕಾರಿಯಾಗಬೇಕಾದರೆ ಇವೆಲ್ಲವುದರ ಜೊತೆಗೆ ದೇಹಕ್ಕೂ ಅದರ ಅನುಭವವಾಗಬೇಕು. ಉದಾಹರಣೆಗೆ, ಈಜು ಬರದವನಿಗೆ ತಾನು ನೀರಿಗೆ ಬಿದ್ದರೆ ಉಸಿರು ಕಟ್ಟುತ್ತೆ, ಸತ್ತು ಹೋಗುತ್ತೇನೆ ಎಂದು ತಿಳಿದಿರುತ್ತದೆ. ಉಸಿರು ಕಟ್ಟಿ ಸಾವನ್ನು ಸಮೀಪಿಸುವ ಕಲ್ಪನೆಯಿರಬಹುದು. ಆದರೆ ಒಮ್ಮೆ ಅವನು ನೀರಿಗೆ ಬಿದ್ದು ಸಾವನ್ನು ಹತ್ತಿರದಿಂದ ಕಂಡು ಬದುಕಿಕೊಂಡಾಗ ಸಿಕ್ಕ ಅನುಭವವಿರುತ್ತದಲ್ಲ; ಅದು ಬುದ್ಧಿ, ಮನಸ್ಸು, ಕಲ್ಪನೆಗಳ ಮೇಲೆ ಉಂಟುಮಾಡುವ ಪರಿಣಾಮ ಅನನ್ಯವಾದುದು. ತೀರಾ ದೈಹಿಕವಾಗಿ ಮನಸ್ಸು, ಬುದ್ಧಿ, ಕಲ್ಪನೆಗಳಿಗೆ ಇಳಿದ ಅನುಭವಗಳು ಹೆಚ್ಚು ಪರಿಣಾಮಕಾರಿಯಾಗುತ್ತವೆ.&lt;br /&gt;&lt;br /&gt;ಸಾವಿರ ಬಾರಿ ನಿನ್ನ ಪ್ರೀತಿಸುತ್ತೇನೆಂದು ಪರಿಪರಿಯಾಗಿ ಹೇಳಿದ್ದರೂ ಅರ್ಥಮಾಡಿಕೊಳ್ಳಲಾಗದ ಹುಡುಗನಿಗೆ ಇವಳು ಕೊಡುವ ಮುತ್ತೊಂದು ಪ್ರೀತಿಯ ದ್ಯೋತಕದಂತೆ, ದೃಢೀಕರಣದಂತೆ ಕಾಣುತ್ತದೆ. ಅನಿಶ್ಚಿತತೆಯಲ್ಲಿ ಹೊರಳಾಡುವ ಹುಡುಗ ನೆಮ್ಮದಿಯ ನಿಟ್ಟುಸಿರಾಗುತ್ತಾನೆ ಎನ್ನುವ ತನ್ನ ವಾದಕ್ಕೆ ಅಪವಾದವೆಂಬಂತೆ ಮೀರಾ, ಅಕ್ಕ ಕಂಡರು. ಇದನ್ನು ಮೀರಿದಂತೆ ಅವರನ್ನು ಆಳುತ್ತಿದ್ದುದು ಯಾವುದು? ಭಕ್ತಿಯಾ? ಭಯವ? ಎಂದು ಕಸಿವಿಸಿಯಾಯಿತು. ಬರೀ ಭಕ್ತಿಯೆಂದು ಮನಸ್ಸು ಒಪ್ಪಿಕೊಳ್ಳಲೇ ಇಲ್ಲ.&lt;br /&gt;ಇವನ ಪ್ರೀತಿ ಇಂದು ಇದ್ದು ನಾಳೆ ಸಾಯುವಂಥದ್ದು. ಅವನನ್ನು ಪ್ರೀತಿಸಿದರೆ ನಾವು ಸಾಯುವವರೆಗಾದರೂ ಪ್ರೀತಿಯನ್ನು ಕಳೆದುಕೊಳ್ಳುವ ಭಯವಿಲ್ಲವೆಂದುಕೊಂಡು ಇದ್ದವರನ್ನು ನೂಕಿ ಕಲ್ಪಿಸಿಕೊಂಡು ಪ್ರೀತಿಸಿದರು. ಅವರಲ್ಲೂ ಇದ್ದಿದ್ದು ಎಲ್ಲರಿಗೂ ಸಹಜವಾದ ಪ್ರೀತಿಸಿದವರನ್ನು, ಪ್ರೀತಿಯನ್ನು ಕಳೆದುಕೊಳ್ಳುವ ಭಯ ಎನಿಸಿತು. ತನ್ನ ಜೀವನದ ಇಂಥಾ ಗಳಿಗೆಯಲ್ಲೂ ಆಲೋಚನೆಗಳು ಹುಟ್ಟುತ್ತಿವೆಯಲ್ಲಾ ಎಂದು ಅವಳ ಮನಸ್ಸು ಖುಷಿಪಡುವ ಹೊತ್ತಿಗೆ ಅವಳು ಕುಳಿತಿದ್ದ ಬಸ್ಸು ದಾವಣಗೆರೆಯನ್ನು ದಾಟಿ ಶಿವಮೊಗ್ಗದ ಕಡೆಗೆ ಹೊರಳುತ್ತಿತ್ತು.&lt;br /&gt;&lt;br /&gt;***&lt;br /&gt;&lt;br /&gt;ಆಂಜನೇಯನ ಗೂಡಲ್ಲಿ ಹಚ್ಚಿಟ್ಟ ದೀಪ ಸಣ್ಣಗೆ ಕಂಪಿಸುತ್ತಿತ್ತು. ಮೇಲೆ ಲಕ್ಷ್ಮಿ ಜನಾರ್ಧನನ ಫೋಟೋ. ಕಾವೇರತ್ತೆಯ ಕೋಣೆಯ ಕಡೆಗಿದ್ದ ಜಾಲರಿ ಬಾಗಿಲ ತೂತುಗಳಲ್ಲಿ ಜೇಡರ ಬಲೆ, ಆ ಬಲೆಯಲ್ಲಿ ಸಿಕ್ಕು ಸ್ತಬ್ಧವಾಗಿ ರೂಪುಕಳೆದುಕೊಂಡು ಗುರುತಿಸಲಾರದಂತಾಗಿದ್ದ ಹುಳು, ಜಾಲರಿ ಬಾಗಿಲ ಹಿಂದೆ ಉದ್ದಕ್ಕೆ ಒಂದಿಂಚೂ ಬಿಡದಂತೆ ನೆಲದಮೇಲೆ ಹರಡಿದ ಅಡಿಕೆ... ಎಲ್ಲವೂ ಮೌನವನ್ನೇ ಆವಾಹನೆ ಮಾಡಿಕೊಂಡಂತೆ ಕಂಡವು.&lt;br /&gt;&lt;br /&gt;ತೊಟ್ಟಿಯ ಬಳಿ ಬಿಸಿಲಿಗೆ ಒಣಗಲೆಂದು ಚೀಲದ ಮೇಲೆ ಹರಡಿದ್ದ ಅಡಿಕೆ ಹೋಳುಗಳ ಮೇಲೆ ಕೈಯಾಡಿಸುತ್ತಾ ಕೂತ ಕನಕಲಕ್ಷ್ಮಿಗೆ ಬೆಳಿಗ್ಗೆ ಸಣ್ಣಗೆ ಶುರು ಆಗಿದ್ದ ಬಿಸಿಲು ಹೀಗೇ ಏಕಾಏಕಿ ಹಾರಿಹೋಗಿದ್ದು ಏಕೆಂದು ಆಶ್ಚರ್ಯವಾಯಿತು. ತೊಟ್ಟಿಯ ತೆರೆದು ಸೂರಿನಿಂದ ನೋಡಿದಳು. ಕಪ್ಪು ಮೋಡಗಳು... ಅದ್ಯಾಕೆ ಹಾಗೆನಿಸಿತ್ತೋ ಏನೋ. ಮುಗಿಲು ಅವುಡುಗಚ್ಚಿ ತಣ್ಣೀರನ್ನು ತಡೆಹಿಡಿದಿದೆ. ಭುವಿಗೆ ತನ್ನ ಸಂಕಟವನ್ನು ಭರಿಸುವ ಶಕ್ತಿಯಿಲ್ಲ ಎನ್ನುವಂತೆ ಅಳುವನ್ನು ತಡೆಹಿಡಿದುಕೊಂಡಂತೆ ಕಂಡಿತು, ಗಂಡನನ್ನು ನೋಡಿದರು. ಗಂಡ ಜಗತ್ತಿನ ಪರಿವೇ ಇಲ್ಲದಂತೆ ಪೇಪರಿನಲ್ಲಿ ಮುಳುಗಿಹೋದವನಂತೆ ಕಂಡ. ಅವನು ಕೂತಿರುವ ಕಪ್ಪನೆಯ ಕುರ್ಚಿಯೂ ಪೇಪರ್ ಓದುತ್ತಿದ್ದೆಯೋ ಏನೋ ಎಂಬ ವಿಲಕ್ಷಣವಾದ ಅನುಮಾನವಾಯಿತು ಕನಕಲಕ್ಷ್ಮಿಗೆ.&lt;br /&gt;&lt;br /&gt;ಬೀದಿಯ ತಿರುವಿನಲ್ಲಿ ಆಟೋ ಬಂದ ಸದ್ದಾಯಿತಲ್ಲಾ... ಅಂದುಕೊಳ್ಳುವ ಹೊತ್ತಿಗೆ ಪ್ರೊ.ಪಾಂಡುರಂಗ ಡೆಕ್ಕನ್ ಹೆರಾಲ್ಡ್‌ನ ಸಂಪಾದಕೀಯ ಪುಟ ಓದುತ್ತಿದ್ದರು. ಮೂಲೆ ಮನೆ, ಸಾಹುಕಾರ್ ಮನೆ, ಎಂಜಿನಿಯರ್ ಮನೆ ಹಾದು ತಮ್ಮ ಮನೆ ಮುಂದೆ ನಿಂತ ಆಟೋ ಸದ್ದು, ಅವನ ಕಿವಿಗಳಲ್ಲಿ ದಾಖಲಾಗಿ ಆಟೋದಲ್ಲಿ ಬಂದವರು ತಮ್ಮ ಮನೆಗೆ ಬಂದವರೋ ಅಥವಾ ದೇವಕಜ್ಜಿಯ ಮನೆಗೆ ಬಂದವರೋ ಎಂದು ಅನುಮಾನಪಡುತ್ತಿರುವಾಗಲೇ ತನ್ನ ಮನೆ ಕಡೆ ತಿರುಗಿದ್ದ ಹೆಜ್ಜೆಸಪ್ಪಳ ಇನ್ನೂ ಸ್ಪಷ್ಟವಾಗಿ ಇದು ಮೊದಲನೆಯ ಮಗಳು ನಡೆಯುವ ರೀತಿ ಅಲ್ಲವೇ... ಎಂದು ಆದ ಆಶ್ಚರ್ಯವು, ಬರುವ ಮೊದಲು ಒಂದು ಫೋನಾದರೂ ಮಾಡಿ ಬರುತ್ತಿದ್ದಳಲ್ಲಾ.. ಕಾರಲ್ಲಿ ಬರದೆ ಹೀಗೇ ಆಟೋದಲ್ಲಿ ಬಂದಿದ್ದಳಲ್ಲಾ... ಎಂದು ಅನುಮಾನವಾಗಿ ಪರಿವರ್ತನೆಯಾಗುವ ಮೊದಲೇ ಅವಳು ಒಳಗೆ ಬಂದು ತಮ್ಮನ್ನ ನೋಡಿದ ರೀತಿ, ಉಫ್... !! ಎಂದು ಹೆಗಲಿನ ಭಾರವನ್ನು ಕೆಳಗಿಳಿದ ಪರಿ, ಅವಳ ಕಣ್ಣುಗಳಲ್ಲಿದ್ದ ತಣ್ಣಗಿನ ನಿರುಮ್ಮಳತೆಯು ಅವಳು ಎಲ್ಲಾ ಭಾರವನ್ನು ನೀಗಿಕೊಂಡಂತೆ ಜೀವನಪರ್ಯಂತ ಇಲ್ಲೇ ಇರಲು ಬಂದವಳಂತೆ ಭಾಸವಾಯಿತು. ಇದ್ಯಾವುದರ ಪರಿವೆಯೂ ಇಲ್ಲದಂತೆ ಅಡಿಕೆ ಹೋಳುಗಳ ಮೇಲೆ ಕೈಯಾಡಿಸುತ್ತಾ ತನ್ನದೇ ಲೋಕದಲ್ಲಿ ಮುಳುಗಿ ಹೋಗಿದ್ದಳಲ್ಲಾ... ಅವಳಿಗೆ ಇದನ್ನೆಲ್ಲ ಹೇಗೆ ವಿವರಿಸುವುದೆಂಬ ಗಾಬರಿಯಲ್ಲಿ ಹೆಂಡತಿಯ ಕಡೆ ನೋಡಿದರು. ಆ ಎರಡೂ ಹೆಣ್ಣು ಕಣ್ಣುಗಳಲ್ಲಿ ನೆಲೆಯಾಗಿದ್ದ ಸಮಾಧಾನವೂ ಪ್ರಶ್ನೆಗಳನ್ನು ಮೀರಿ ಯಾವ ಉತ್ತರದ ಹಂಗಿಲ್ಲದೆ ನಿನ್ನ ಸಲಹಬಲ್ಲೆ ಎನ್ನುವಂತೆ ಇನ್ನೆರಡು ಹೆಣ್ಣುಕಣ್ಣುಗಳನ್ನು ನೋಡುತ್ತಾ ದೃಢತೆಯನ್ನು ಸಾರಿದ್ದವು. ಆಕಾಶದಲ್ಲಿ ಮಿಂಚು. ತಂದೆ, ಮಗಳ ಕಡೆ ನೋಡಿದರು ಅಲ್ಲಿ ಮಳೆ ಸದ್ದಿಲ್ಲದೆ ಸುರಿಯತೊಡಗಿತ್ತು.&lt;br /&gt;&lt;br /&gt;(ದಿ ಸಂಡೇ ಇಂಡಿಯನ್ ನಲ್ಲಿ ಪ್ರಕಟವಾದ ನನ್ನ ಕಥೆ)&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-5940146356289968150?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/5940146356289968150/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=5940146356289968150' title='17 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/5940146356289968150'/><link rel='self' type='application/atom+xml' href='http://www.blogger.com/feeds/714642904810204846/posts/default/5940146356289968150'/><link rel='alternate' type='text/html' href='http://mrugnayanee.blogspot.com/2008/10/blog-post.html' title='ನೋಟದೊಳು ತಾನಿಲ್ಲದೆ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>17</thr:total></entry><entry><id>tag:blogger.com,1999:blog-714642904810204846.post-6698437516657930020</id><published>2008-09-17T02:17:00.000+05:30</published><updated>2008-09-17T14:09:54.239+05:30</updated><title type='text'>ನಾನೂ ಬರೆಯುತ್ತೇನೆಂಬ ಸ್ವಗತ</title><content type='html'>(ನನ್ನಪ್ಪ ಬರ್ದಿದ್ ಕವಿತೆ ಇದು. ಎಷ್ಟೊಂದು ಬರೆದರೂ ಯಾರಿಗೂ ತೋರಿಸದೆ ಅಮ್ಮನಿಗೆ ಮಾತ್ರ ಓದಿಹೇಳಿ ಸುಮ್ಮನಾಗುತ್ತಿದ್ದರು. ಓದೋದೆಂದ್ರೆ ತುಂಬ ಇಷ್ಟ ಅಪ್ಪಂಗೆ. ಇತ್ತೀಚೆಗೆ ನಾನೂ ಅಲ್ಪಸ್ವಲ್ಪ ಬರೀತಿನಿ ಅದನ್ನ ಅಪ್ಪಿತಪ್ಪಿ ಪೇಪರಿನವರೂ ಹಾಕುತ್ತಾರೆ ಅಂತ ಗೊತ್ತಾದಮೇಲೆ ನನಗೂ ಓದಿ ಹೇಳಲು ಶುರು ಮಾಡಿದ್ದಾರೆ. ಅವರು ಓದಿ ಹೇಳುವಾಗ ಕದ್ದು ರೆಕಾರ್ಡ್ ಮಾಡಿ ಆಮೇಲೆ ಅವರಿಂದಲೇ ಒಪ್ಪಿಗೆ ಪಡೆದು ಇಲ್ಲಿ ಹಾಕುತ್ತಿರುವೆ. ಪ್ರೀತಿಯಿಂದ ಓದಿಕೊಳ್ಳುತ್ತೀರೆಂಬ ಭರವಸೆಯಿಂದ...)&lt;br /&gt;&lt;br /&gt;ನಾನೂ ಬರೆಯುತ್ತೇನೆ&lt;br /&gt;ಕೇಳಿಕೊಂಡೆ ನನಗೆ ನಾನೇ..&lt;br /&gt;ಏನನ್ನ?&lt;br /&gt;ಕವನವನ್ನೇ ಕಾವ್ಯವನ್ನೇ&lt;br /&gt;&lt;br /&gt;ಇಲ್ಲ ಇಲ್ಲ&lt;br /&gt;ಗುರು ಲಘು ಮಾತ್ರಾಗಣ ಏನನ್ನೂ ನಾ ಅರಿಯೆ&lt;br /&gt;ಚಂದಸ್ಸು-ಈ ಪದ ಕೇಳಿರುವೆ ಅದೇನೆಂದರಿಯೆ&lt;br /&gt;ಗೇಯತೆ, ಶ್ಲೇಷೆ,ಉಪಮೆ ಇದ್ಯಾವುದರ ತಿಳಿವಿಲ್ಲ ಎನಗೆ&lt;br /&gt;ನ ಬರೆಯಲಾರೆ ಕಾವ್ಯ ಕವನವನ್ನ&lt;br /&gt;&lt;br /&gt;ಮತ್ತೆನು ಕಥೆಯೋ&lt;br /&gt;ಇಲ್ಲ ಇಲ್ಲ&lt;br /&gt;ನ ಬರೆಯುವುದರಲ್ಲಿ ಯಾವ ಕಥೆಯೂ ಇಲ್ಲ&lt;br /&gt;ಓದಿದ್ದೇನೆ ಮಾಸ್ತಿಯವರ ಕಥೆಗಳನ್ನ&lt;br /&gt;ಕಾರಂತ ಅನಂತಮೂರ್ತಿ&lt;br /&gt;ಲಿಯೋ ಟಾಲ್ಸ್ ಟಾಯ್ ಅವರ ಕಥೆಗಳನ್ನ&lt;br /&gt;&lt;br /&gt;ನ ಬರೆಯುವುದರಲ್ಲಿ ಅಂಥ ವಸ್ತುಗಳೇ ಇಲ್ಲ&lt;br /&gt;ಮತ್ತೇನು ಬರೆಯುವೆ?&lt;br /&gt;ಪ್ರಭಂದವನ್ನೆ? ಇಲ್ಲ ಇಲ್ಲ&lt;br /&gt;ಮೂರ್ತಿರಾಯರ ಪ್ರಭಂಧ ಒದಿದ್ದೇನೆ&lt;br /&gt;ಪಾವೆಂ ಅಂತೆಯೇ ಅನೇಕರದ್ದು&lt;br /&gt;ಯಾವುದೋ ವಸ್ತು ಹಿಡಿದು&lt;br /&gt;ಏನೆಲ್ಲಾ ಬರೆಯುತ್ತಾರವರು&lt;br /&gt;ವಿಷಯ ಜ್ನಾನವಿಲ್ಲ ಎನಗೆ&lt;br /&gt;ನಾ ಬರೆಯುವುದು ಪ್ರಬಂಧವಲ್ಲ.&lt;br /&gt;&lt;br /&gt;ನನಗೆ ನಾನೇ ಮತ್ತೆ ಕೇಳಿಕೊಂಡೆ,&lt;br /&gt;ನಾ ಬರೆಯುವುದೇನು?&lt;br /&gt;ಅಡ್ಡಲಾಗಿ ಬರೆಯುತ್ತಾ ಹೋಗುವ&lt;br /&gt;ಗದ್ಯವ ಕತ್ತರಿಸಿ ಕತ್ತರಿಸಿ&lt;br /&gt;ಉದ್ದಕೆ ಬರೆಯುತ್ತೇನೆ&lt;br /&gt;ನವ್ಯ, ನವೋದಯ ಇದ್ಯಾವುದರ&lt;br /&gt;ಅರ್ಥ ಅರಿಯದ ನಾನು&lt;br /&gt;ನನ್ನದು ನವೀನ ಎಂದುಕೊಳ್ಳುತ್ತೇನೆ&lt;br /&gt;ಪ್ರಥಮ ಶ್ರೋತ್ರುವಾದ ನನ್ನಾಕೆ&lt;br /&gt;'ಇನ್ನೆಷ್ಟು ದಿನ ಈ ಶಿಕ್ಷೆ' ಎಂದು&lt;br /&gt;ಕೇಳಿದಾಗ ಸಿಟ್ಟು ಸಿಡಿಮಿಡಿಗೊಂಡು&lt;br /&gt;ಬರೆದಿದ್ದ ಪರಪರನೆ ಹರಿದು ಎಸೆಯುತ್ತೇನೆ&lt;br /&gt;ನಾನು ಬರೆದ್ದಿದ್ದೇನೆಂಬುದಕ್ಕೆ&lt;br /&gt;ಸಾಕ್ಷಿಯೇ ಉಳಿಸುವುದಿಲ್ಲ ನಾನು.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-6698437516657930020?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/6698437516657930020/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=6698437516657930020' title='5 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/6698437516657930020'/><link rel='self' type='application/atom+xml' href='http://www.blogger.com/feeds/714642904810204846/posts/default/6698437516657930020'/><link rel='alternate' type='text/html' href='http://mrugnayanee.blogspot.com/2008/09/blog-post_11.html' title='ನಾನೂ ಬರೆಯುತ್ತೇನೆಂಬ ಸ್ವಗತ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>5</thr:total></entry><entry><id>tag:blogger.com,1999:blog-714642904810204846.post-6036342737156375570</id><published>2008-09-11T10:44:00.007+05:30</published><updated>2008-09-11T16:23:08.143+05:30</updated><title type='text'>ಸಾವಿನ ಹುಟ್ಟು......</title><content type='html'>ಸಾವು ಹುಟ್ಟಿತು! ಹುಟ್ಟುತ್ತಲೇ ಅಳುವ ಮೂಲಕ ತನ್ನ ಹುಟ್ಟಿನ, ಜೀವದ ಮುಖವಾಡವನ್ನು ಧರಿಸಿತು. ಸಾವಿನ ಹುಟ್ಟಿಗೆ ಎಲ್ಲರೂ ಸಂಭ್ರಮಿಸಿದರು, ಸಿಹಿ ಹಂಚಿದರು. ಸಾವಿಗೆ ಇದು ತನ್ನ ಕಂಡಲ್ಲ ತನ್ನ ಮುಖವಾಡವನ್ನು ಕಂಡು ಪಡುತ್ತಿರುವ ಸಂಭ್ರಮವೆಂದು ತಿಳಿಯಿತು. ಅದಕ್ಕೆ ಜೀವದ ಮುಖವಾಡಕ್ಕೆ ಮತ್ತಷ್ಟು ಬಿಗಿಯಾಗಿ ಆತುಕೊಂಡಿತು. ಹಾಲು ಕುಡಿಯಿತು, ನಕ್ಕಿತು, ಅತ್ತಿತು ತನ್ನ ಎತ್ತಿ ಆಡಿಸುವವರಿಗೆ ಮೊಗದಷ್ಟು ಅಪ್ಪಿಕೊಂಡಿತು.&lt;br /&gt;&lt;br /&gt;&lt;br /&gt;ಮೊದಲನೆ ಹುಟ್ಟುಹಬ್ಬವಂತೆ. ಚಿರಾಯುವಾಗು ಎಂದು ಹಿರಿಯರು ಹರಸಿದರು. ಮುಖವಾಡಕ್ಕಲ್ಲ ತನಗೇ ಹರಸಿದ್ದು ಎಂಬ ಅರಿವಿನಿಂದ ಸಾವು ಹಿರಿಹಿರಿ ಹಿಗ್ಗಿತು.&lt;br /&gt;&lt;br /&gt;&lt;br /&gt;ತೊದಲು ನುಡಿಯಿತು, ಮಾತಾಯಿತು, ಸಾವು ಬೆಳೆಯಿತು. ಅಕ್ಷರ ಕಲಿಯಿತು, ಲೋಕವ ತಿಳಿದುಕೊಂಡೆ ಎಂದು ಮುಖವಾಡ ಬೀಗಿತು. ಅದೇ ಅಹಂಕಾರದಲ್ಲಿ ಏನೇನೋ ಮಾಡಿತು. ಕೂಡಿತು, ಕಳೆಯಿತು, ಅಳೆಯಿತು, ಸುರಿಯಿತು.&lt;br /&gt;&lt;br /&gt;&lt;br /&gt;ಮುಖವಾಡಕ್ಕೆ ಮತ್ತೊಂದು ಮುಖವಾಡವನ್ನು ತಂದು ಕಟ್ಟಿದರು. ಮುಖವಾಡಗಳೆರಡೂ ಸೇರಿ ಮತ್ತೊಂದಷ್ಟು ಮುಖವಾಡಗಳಿಗೆ ಜನ್ಮ ನೀಡಿದವು.ಒಮ್ಮೆ ಗಹಗಹಿಸಿ ನಕ್ಕು ಮತ್ತೊಮ್ಮೆ ಬಿಕ್ಕಳಿಸಿ ಅತ್ತಿತು. ಒಮ್ಮೆ ರೋಷಾವೇಷದಿಂದ ಯಾರಮೇಲೋ ಏರಿಹೋಗಿ ಇನ್ನೊಮ್ಮೆ ಅಟ್ಟಿಸಿಕೊಂಡು ಬಂದವರಿಂದ ದೂರ ಓಡಿ ಬಳಲಿತು ಬಲಿಯಿತು.&lt;br /&gt;&lt;br /&gt;&lt;br /&gt;ಮುಖವಾಡಕ್ಕೆ ತಾನು ಮುಖವಾಡವೆಂಬುತು ಮರತೇ ಹೋದಂತಿತ್ತು. ಮುಖವಾಡ ಕಳಚಿಕೊಂಡವರ ಕಂಡು ಮರುಗಿತು. ತಾನು ಶಾಶ್ವತವೆಂದುಕೊಂಡಿತು.&lt;br /&gt;&lt;br /&gt;ಸಾವು ಹುಟ್ಟಿ ಬಹಳಷ್ಟು ವರ್ಷಗಳಾಯಿತು. ಯಾರಿಗೂ ಅದು ಮುಖವಾಡವೆಂದು ಗೊತ್ತಾಗಲೇ ಇಲ್ಲ. ಮುಖವಾಡವನ್ನೇ ನಿಜವೆಂದುಕೊಂಡು ಸುತ್ತ ಸಂಸಾರ ಹೂಡಿದರು, ಸುಖಿಸಿದರು. ತನ್ನ ಮುಖವಾಡದ ಪ್ರತಿಯೊಂದು ಕೃಯೆಗೂ ಎಲ್ಲರೂ ಅಷ್ಟು ಹರ್ಷಿಸುವುದು ನೋಡಿ ಸಾವಿಗೆ ಮುಖವಾಡದ ಮೇಲೆ ಹೊಟ್ಟೆಕಿಚ್ಚಾಯಿತು. ನಿಜವಾಗಿ ಇದೆಲ್ಲಾ ತನ್ನ ಹಕ್ಕು ಎಂದುಕೊಂಡಿತು. ಮುಖವಾಡವನ್ನು ಕಿತ್ತೊಗೆಯಿತು!&lt;br /&gt;&lt;br /&gt;ಮುಖವಾಡವನ್ನು ಅದು ಕಿತ್ತೊಗೆದ ರಭಸಕ್ಕೆ, ಸುತ್ತಲಿನವರೆಲ್ಲಾ ಸ್ಥಬ್ಧರಾದರು. ಮೂಕರಾದರು.&lt;br /&gt;ಮುಖವಾಡಕ್ಕೇ ಬೆಲೆಕೊಡುವ ಈ ಲೋಕವ ಕಂಡು ಸಾವು ಅಚ್ಚರಿಪಟ್ಟಿತು. ಮತ್ತೆಲ್ಲೊ ಮುಖವಾಡವನ್ನು ಧರಿಸಿ ಮತ್ತೆ ಹುಟ್ಟಿತು!!&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-6036342737156375570?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/6036342737156375570/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=6036342737156375570' title='9 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/6036342737156375570'/><link rel='self' type='application/atom+xml' href='http://www.blogger.com/feeds/714642904810204846/posts/default/6036342737156375570'/><link rel='alternate' type='text/html' href='http://mrugnayanee.blogspot.com/2008/09/blog-post.html' title='ಸಾವಿನ ಹುಟ್ಟು......'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>9</thr:total></entry><entry><id>tag:blogger.com,1999:blog-714642904810204846.post-3637684207774244926</id><published>2008-08-31T11:16:00.006+05:30</published><updated>2008-09-01T12:41:47.445+05:30</updated><title type='text'>ನಿನ್ನ ಕುರಿತು</title><content type='html'>೧&lt;br /&gt;&lt;br /&gt;ಉಕ್ಕಿ ಹರಿಯಲು&lt;br /&gt;ತನಗೆ ಮಾತ್ರ ಸಾಧ್ಯ&lt;br /&gt;ಎಂದು ಅಹಂಕಾರ ಪಡುವ&lt;br /&gt;ನನ್ನ ನಲ್ಲ&lt;br /&gt;ಸದಾ ಭೊರ್ಗರೆಯುವ ನದಿಯನ್ನು&lt;br /&gt;ಹೆಣ್ಣೆಂದು ಕರೆದು&lt;br /&gt;ಪ್ರೀತಿಸಿದ&lt;br /&gt;&lt;br /&gt;೨&lt;br /&gt;&lt;br /&gt;ಅವನ ಹಾದಿ ಕಾಯುವಾಗ&lt;br /&gt;ಒಂದೊಂದು ಕ್ಷಣವೂ ಒಂದು&lt;br /&gt;ಯುಗದಂತೆ ಅಂದುಕೊಳ್ಳುತ್ತಿರುವಾಗಲೇ&lt;br /&gt;ಕೆಲವೇ ಕ್ಷಣಗಳ&lt;br /&gt;ಭೇಟಿಗಾಗಿ ಯುಗಗಟ್ಟಲೆ ಕಾದ&lt;br /&gt;ಶಬರಿಯ ನೆನಪಾಗಿ&lt;br /&gt;ನಾಚಿಕೆಯಿಂದ ತಲೆ ತಗ್ಗಿಸಿದೆ..&lt;br /&gt;&lt;br /&gt;೩&lt;br /&gt;&lt;br /&gt;ಶಬರಿಯ ಸಂಯಮವಿಲ್ಲ&lt;br /&gt;ಅಹಲ್ಯೆಯ ಆಸೆಗಳಿಲ್ಲ&lt;br /&gt;ನನಗೆ&lt;br /&gt;ಅವನ ಹಾದಿ ಕಾಯುವ&lt;br /&gt;ಸುಖ ಸುಕ್ಕುಗಟ್ಟುತ್ತಿದೆ&lt;br /&gt;ಕಾದ ಹಾದಿಯಲ್ಲಿ ಮಿಂಚಿದ ಕನಸುಗಳು&lt;br /&gt;ಮತ್ತೆ ಕರೆಯುತ್ತಿವೆ&lt;br /&gt;ತಿರುಗಿ ಹೋಗಲಾರದ&lt;br /&gt;ನನ್ನ ಅಸಹಾಯಕತೆಗೆ&lt;br /&gt;ಪಾತಿವ್ರತ್ಯದ ಹೊದಿಕೆ&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-3637684207774244926?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/3637684207774244926/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=3637684207774244926' title='13 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/3637684207774244926'/><link rel='self' type='application/atom+xml' href='http://www.blogger.com/feeds/714642904810204846/posts/default/3637684207774244926'/><link rel='alternate' type='text/html' href='http://mrugnayanee.blogspot.com/2008/08/blog-post_31.html' title='ನಿನ್ನ ಕುರಿತು'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>13</thr:total></entry><entry><id>tag:blogger.com,1999:blog-714642904810204846.post-5365288194803401362</id><published>2008-08-13T08:42:00.009+05:30</published><updated>2008-08-13T14:52:29.789+05:30</updated><title type='text'>ಕುಂತಿಯ ನೆನೆಯುತ್ತಾ ಕುಂತು..</title><content type='html'>&lt;a onblur="try {parent.deselectBloggerImageGracefully();} catch(e) {}" href="http://2.bp.blogspot.com/_CV70S6yiPjU/SKKngLbJnnI/AAAAAAAAAAo/tSu33CBTjCY/s1600-h/kunti.jpg"&gt;&lt;img style="margin: 0pt 0pt 10px 10px; float: right; cursor: pointer;" src="http://2.bp.blogspot.com/_CV70S6yiPjU/SKKngLbJnnI/AAAAAAAAAAo/tSu33CBTjCY/s320/kunti.jpg" alt="" id="BLOGGER_PHOTO_ID_5233929888222256754" border="0" /&gt;&lt;/a&gt;&lt;span style="font-weight: bold;"&gt;-1-&lt;/span&gt;&lt;br /&gt;&lt;div&gt;ದೂರ್ವಾಸನ ಬೆಚ್ಚನೆಯ ತಬ್ಬುಗೆಯನ್ನು&lt;br /&gt;&lt;/div&gt;&lt;div&gt;ನೆನಪಿಸಿಕೊಳ್ಳುತ್ತಾ ಕೂತವಳಿಗೆ&lt;br /&gt;&lt;/div&gt;&lt;div&gt;ಇವನಿಗೆ&lt;br /&gt;&lt;/div&gt;&lt;div&gt;ತಬ್ಬಿಕೊಳ್ಳುವುದಷ್ಟೇ ಸಾಧ್ಯ&lt;br /&gt;&lt;/div&gt;&lt;div&gt;ಎಂದು ಅರಿವಾದಾಗ&lt;br /&gt;&lt;/div&gt;&lt;div&gt;ಮನಸ್ಸಿನಲ್ಲಿ&lt;br /&gt;&lt;/div&gt;&lt;div&gt;ಇಂದ್ರ ಮರುತ್ತರು&lt;br /&gt;ಹಾದು ಹೋದರು ಎನ್ನುವುದು ಶುದ್ಧ ಕಲ್ಪನೆ.&lt;br /&gt;&lt;/div&gt;&lt;div style="font-weight: bold;"&gt;-2-&lt;br /&gt;&lt;/div&gt;&lt;div&gt;ಗಂಗೆಯಲಿ ತೇಲಿ ಬಿಟ್ಟವಳಿಗೆ&lt;br /&gt;&lt;/div&gt;&lt;div&gt;ಆ ನೆನಪೇ ಪೂರ್ವ ಜನ್ಮದ&lt;br /&gt;&lt;/div&gt;&lt;div&gt;ಶಾಪ&lt;br /&gt;&lt;/div&gt;&lt;div&gt;ವರ&lt;br /&gt;&lt;/div&gt;&lt;div&gt;ಪಡೆದು ಬಂದಳು&lt;br /&gt;&lt;/div&gt;&lt;div&gt;ಗಂಗೆಯಲಿ ನಿಂದವನ ಬಳಿ.&lt;br /&gt;&lt;/div&gt;&lt;div&gt;ಅಂದೇ ಮುಳುಗಿಸಿದರಾಗಿತ್ತು.&lt;/div&gt; &lt;span style="font-weight: bold;"&gt;-3&lt;/span&gt;-&lt;br /&gt;&lt;div&gt;ಅವನು ಅವಳಿಗಾಗಿ ಮತ್ತೆ&lt;br /&gt;&lt;/div&gt;&lt;div&gt;ಅನುಮತಿ ಕೇಳಲು ಬಂದ.&lt;br /&gt;&lt;/div&gt;&lt;div&gt;ಸಾಕೆಂದು ಮುಖ ತಿರುಗಿಸಿದಳು&lt;br /&gt;&lt;/div&gt;&lt;div&gt;ಇವಳು&lt;br /&gt;&lt;/div&gt;&lt;div&gt;ಒಪ್ಪಿದ್ದರೆ&lt;br /&gt;&lt;/div&gt;&lt;div&gt;ಅವನು ಸಾಯುತ್ತಲೇ ಇರಲಿಲ್ಲ,&lt;br /&gt;ಅವಳೂ.&lt;br /&gt;&lt;/div&gt;&lt;span style="font-weight: bold;"&gt;-4-&lt;/span&gt;&lt;br /&gt;&lt;div&gt;ಅವನಷ್ಟು ಕರೆದರೂ ಹೋಗದೆ&lt;br /&gt;&lt;/div&gt;&lt;div&gt;ಉಳಿದದ್ದು ಇವನಿಗಾಗಿಯಂತೆ&lt;br /&gt;&lt;/div&gt;&lt;div&gt;ಇವನೇ ಹೋದಾಗ ಅವಳು&lt;br /&gt;ಹೋದದ್ದೇಕೆಂದು&lt;br /&gt;&lt;/div&gt;&lt;div&gt;ಕೇಳಿದರೆ, ಕಂಡ ಕಂಡವರು&lt;br /&gt;&lt;/div&gt;&lt;div&gt;ಇವನು ಹೋಗಲು ಅವಳೇ&lt;br /&gt;ಕಾರಣವೆಂದು ಆಡಿಕೊಂಡರು.&lt;/div&gt;&lt;span style="font-weight: bold;"&gt;-5-&lt;/span&gt;&lt;br /&gt;&lt;br /&gt;&lt;div&gt;ಹಿಡಂಬಿಯ ಪ್ರೀತಿ ತಿಳಿಯದೇ&lt;br /&gt;&lt;/div&gt;&lt;div&gt;ಹೋದ&lt;br /&gt;&lt;/div&gt;&lt;div&gt;ಕುಂತಿ&lt;br /&gt;&lt;/div&gt;&lt;div&gt;ದ್ರೌಪದಿಗೆ ಐದು ಗಂಡಂದಿರ&lt;br /&gt;&lt;/div&gt;&lt;div&gt;ಪ್ರೀತಿ&lt;br /&gt;&lt;/div&gt;&lt;div&gt;ಕೊಡಿಸಿದಳಂತೆ!&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-5365288194803401362?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/5365288194803401362/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=5365288194803401362' title='29 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/5365288194803401362'/><link rel='self' type='application/atom+xml' href='http://www.blogger.com/feeds/714642904810204846/posts/default/5365288194803401362'/><link rel='alternate' type='text/html' href='http://mrugnayanee.blogspot.com/2008/08/blog-post.html' title='ಕುಂತಿಯ ನೆನೆಯುತ್ತಾ ಕುಂತು..'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><media:thumbnail xmlns:media='http://search.yahoo.com/mrss/' url='http://2.bp.blogspot.com/_CV70S6yiPjU/SKKngLbJnnI/AAAAAAAAAAo/tSu33CBTjCY/s72-c/kunti.jpg' height='72' width='72'/><thr:total>29</thr:total></entry><entry><id>tag:blogger.com,1999:blog-714642904810204846.post-6195463695940631436</id><published>2008-07-18T15:52:00.004+05:30</published><updated>2008-07-21T11:54:54.870+05:30</updated><title type='text'>ನಿನ್ನ ಚಾರ್ಲೀ ಸೆಂಟೂ ಅವನ ಪಿಜ್ಜಾ ಬರ್ಗರ್ರೂ</title><content type='html'>&lt;p&gt;&lt;br /&gt;ನಿನ್ನ &lt;a href="http://vikasavada.blogspot.com/2008/07/blog-post.html"&gt;ಪತ್ರ &lt;/a&gt;ಓದಿದೆ. ಹುಡುಗ ಇಷ್ಟ ಆಯ್ತು ಬಹಳ ಗಂಭೀರವಾಗಿ, ಚೊಕ್ಕವಾಗಿ ನಿಂಗೇನನ್ನಿಸುತ್ತೋ ಅದನ್ನು ಹೇಳಿದ್ದೀಯ. ಈಗಿನ ಕನ್ನಡ ಸಾಹಿತ್ಯದ ಬಗ್ಗೆ ನೀನು ಇಷ್ಟೆಲ್ಲಾ ತಲೆಕೆಡಿಸಿಕೊಂಡಿದ್ದೀಯ ಅಂತ ಗೊತ್ತಾದಾಗ ಸುಮ್ಮನೆ ಖುಷಿಯಾಯಿತು. It was witty and sarcastic.&lt;/p&gt;&lt;p&gt;ಮೊದಲು ನಾನು ನಿಂಗೆ ಕೊಟ್ಟ ಪುಸ್ತಕದ ಬಗ್ಗೆ ಮಾತಾಡೋಣ. ನಾನು ನಿಂಗೆ ಆ ಪುಸ್ತಕ ಕೊಡುವಾಗ ಹೇಳಿದ್ದು ‘ಚೆನ್ನಾಗಿದೆ ಓದು’ ಅಂತಲ್ಲ. ನಂಗೆ ಇಷ್ಟ ಆಯ್ತು ಓದು ಅಂತ. ಈಗ ಚೆನ್ನಾಗಿದೆ ಅಥವ ಚೆನ್ನಾಗಿಲ್ಲ ಅನ್ನೋದಿದೆಯಲ್ಲ it's a generalised comment. ಇಂಥ ಕಾಮೆಂಟುಗಳು ನನಗೆ ಅರ್ಥ ಆಗಲ್ಲ. ನನಗೆ ಗೊತ್ತಾಗೋದು “ನಂಗೆ ಇಷ್ಟ ಆಯ್ತು" ಅಥವ ‘ಇಷ್ಟ ಆಗ್ಲಿಲ್ಲ’ ಅನ್ನೋದು. ಚೆನ್ನಾಗಿದೆ ಅಥವ ಚೆನ್ನಾಗಿಲ್ಲ ಒಳ್ಳೆಯವನು ಅಥವ ಕೆಟ್ಟವನು ಅನ್ನೋದು ಎಷ್ಟೊಂದು ಸಾಪೇಕ್ಷವಾದದ್ದು ಅಲ್ಲವೆ? ಕೆಲವರಿಗೆ ಇಷ್ಟವಾದದ್ದು ಇನ್ನು ಕೆಲವರಿಗೆ ಇಷ್ಟವಾಗದೆ ಇರಬಹುದು. ಕೆಲವರಿಗೆ ಒಳ್ಳೆಯವನು ಅನಿಸಿದ್ದವನು ಇನ್ನೊಬ್ಬರಿಗೆ ಕೆಟ್ಟವನಾಗಿರಬಹುದು.&lt;br /&gt;&lt;/p&gt;&lt;p&gt;ವಿಷಯಕ್ಕೆ ಬರೋಣ. ನಾ ಕೊಟ್ಟ ಪುಸ್ತಕವಿದೆಯಲ್ಲ ಅದು ನಾನು ಹುಟ್ಟಿ ಬೆಳೆದ ಪರಿಸರಕ್ಕಿಂತ ಬಹಳ ಭಿನ್ನವಾದ ಬೇರೆಯದೇ ಆದ ಪರಿಸರದಲ್ಲಿ ನಡೆಯುತ್ತೆ. ಎಲ್ಲೆಲ್ಲೂ ನಡೆಯುವುದು ಅಂಥದೇ ಕಥೆಗಳು. ಅದನ್ನು ಹೇಳುವ ರೀತಿ, ಅದು ನಡೆಯುವ ಪರಿಸರ, ಅದು ನಡೆದ ಕಾಲಘಟ್ಟ ಪ್ರತಿಯೊಂದು ಕಾಲಘಟ್ಟದಲ್ಲೂ ಅಂಥ ಘಟನೆಗಳಿಗೆ ಅನುಭವಗಳಿಗೆ ಜನ ಹೇಗೆ ಸ್ಪಂದಿಸುತ್ತಿದ್ದರು ಎಂಬುದು ಮುಖ್ಯ ಆಗತ್ತೆ. ಅವರು ಬರೆದಿದ್ದು ಮೂವತ್ತು ವರ್ಷದ ಹಿಂದೆ ನಡೆದಿರಬಹುದಾದ ಕಥೆಯನ್ನು. ಅಲ್ಲಿ ಪರಿಸ್ಥಿತಿಗಳು ಆಗ ಹೇಗಿದ್ದವು ಎಂಬುದನ್ನು. ಅವರು ಎಷ್ಟು ಸಹಜವಾಗಿ ಬಿಂಬಿಸುತ್ತಾರೆಂದರೆ ಸುಮ್ಮನೆ ಇಷ್ಟ ಆಗುತ್ತಾ ಹೋಯಿತು. ಹೊಸದೇನಿದೆ ಅಂದೆಯಲ್ಲ ಹುಡುಗ, ಹೊಸತು ಪದವನ್ನು ಹೇಗೆ ಡಿಫೈನ್ ಮಾಡ್ತಿಯ ನೀನು? ನನಗೆ ಆ ಲೇಖಕರು ತೋರಿಸಿದ ಜಗತ್ತಿದೆಯಲ್ಲ ತುಂಬ ಹೊಸತದು.&lt;br /&gt;ಆ ಕಾದಂಬರಿಯ ಮೂಲಕ ಅದೇ ಜಾಗದ ಬಗ್ಗೆ ಜ್ಞಾನಪೀಠಿಯೊಬ್ಬರು ಬರೆಯುತ್ತಿದ್ದಾಗ ಇದ್ದ ಪರಿಸರಕ್ಕೂ ಇವರು ಬರೆದು ಕೈಗಿತ್ತಾಗ ನಾನು ಕಂಡ ಪರಿಸರಕ್ಕೂ ಎಷ್ಟೊಂದು ವ್ಯತ್ಯಾಸವಾಗಿದೆ ಅನಿಸಿತು ಗೊತ್ತಾ? ನಾವು ಈಗ ಹೋಗಿ ನೋಡಿದರೆ ನಮಗೆ ಅಲ್ಲಿ ಇನ್ಯಾವುದೋ ಪರಿಸರ ಕಾಣಿಸೀತು. ಬದಲಾದ ಕಾಲಘಟ್ಟಗಳಲ್ಲಿ ಅಲ್ಲಿನ ಸಮಾಜ ಪರಿಸರ ಹೇಗಿದ್ದವು ಎಂಬುದು ಹೀಗೇ ದಾಖಲಾಗಬೇಕು. ಅಲ್ವಾ&lt;br /&gt;&lt;/p&gt;&lt;p&gt;ಅಂಕಣಕಾರರೊಬ್ಬರು ಅಡಿಗರು ಹೀಗಂದರು ಬೇಂದ್ರೆ ಹಾಗಂದರು ಟೆನಿಸನ್ ಹೀಗೆ ಹೇಳುತ್ತಾನೆ, ವರ್ಡ್ಸ್ ವರ್ಥ್ ಹಾಗನ್ನುತ್ತಾನೆ ಎಂದು ಹೇಳಬೇಕಾದರೆ ಅವರು ಎಷ್ಟು ಓದಿಕೊಂಡಿರಬೇಕು ಎಂಬ ಕಲ್ಪನೆ ಇರುತ್ತೆ ಅಲ್ಲವ ನಿನಗೆ. ಬಹಳಷ್ಟು ಜನಕ್ಕೆ ಅಷ್ಟು ಅಗಾಧವಾಗಿ ಓದಲು ಸಮಯವಿರುವುದಿಲ್ಲ ಅಥವ ಇರುವ ಸಾಹಿತ್ಯ ಸಾಗರದಲ್ಲಿ ಯಾವ ನದಿಯ ನೀರು ಕುಡಿಯಬೇಕೆಂದು ತಿಳಿದಿರುವುದಿಲ್ಲ. ಎಲ್ಲರೂ ಸಾಹಿತ್ಯದ ವಿದ್ಯಾರ್ಥಿಗಳಾಗಿರುವುದಿಲ್ಲ. ಓದಿದವರು, ಇಂಥವರು ಹೀಗೆ ಬರೆದಿದ್ದರು ಅದನ್ನು ಓದಿದ ನನಗೆ ಹೀಗನಿಸಿತು, ಬೇರೊಂದು ಭಾಷೆಯ ಲೇಖಕ ಇದೇ ಕಾಂಟೆಕ್ಟಿನಲ್ಲಿ ಇನ್ನೆಂಥದೋ ಬರೆದಿದ್ದಾನೆ ಎಂದು ಹೇಳಿ ಆ ಹಿರಿಯ ಜೀವಿಗಳು, ಲೇಖಕರು ಬರೆದಿದ್ದ ಕವನದ, ಲೇಖನದ ಅಥವ ಕಥೆಯ ಕೆಲವು ಸಾಲುಗಳನ್ನು ಕೋಟ್ ಮಾಡಿದರೆ, ನಿಜವಾಗಿ ಸಾಹಿತ್ಯದಲ್ಲಿ ಆಸಕ್ತಿ ಕಾಳಜಿ ಇರುವವರು ಅದನ್ನು ಹುಡುಕಿಯಾದರೂ ಓದೋಲ್ಲವೆ...? ಬೇಂದ್ರೆಯವರ “ಇಳಿದು ಬಾ ತಾಯೆ, ಇಳಿದು ?...." ಅಂಥ ಪ್ರಸಿದ್ಧ ಕವನವೂ ಗೊತ್ತಿಲ್ಲದ ಸಾಹಿತ್ಯಾಸಕ್ತರಿಗೆ ಇಂಥ ಅಂಕಣಕಾರರಿಂದ ಸಹಾಯವಾಗೋಲ್ಲವಾ ಹೇಳು?&lt;br /&gt;&lt;/p&gt;&lt;p&gt;ಇನ್ನು? “ಡಿಫರೆಂಟಾಗಿ ಬರೆಯುವವರು..." ಎಂಬುದರ ಬಗ್ಗೆ ನಾನು ಏನೇ ಹೇಳಿದರೂ ಅದು “ಶುದ್ಧ ಸಮರ್ಥನೆ" ಅನಿಸಿಕೊಳ್ಳುತ್ತೆ ಅಲ್ಲವೆ?&lt;br /&gt;&lt;/p&gt;&lt;p&gt;ನಿನ್ನ ಚಾರ್ಲಿ ಸೆಂಟಿನ ಉದಾಹರಣೆಗೂ ಪಿಜ್ಜಾ ಬರ್ಗರ್ ಉದಾಹರಣೆಗೂ ಏನು ವ್ಯತ್ಯಾಸ ಹುಡುಗ ? ಈಗಲೂ ಮಲ್ಲಿಗೆ ಹೂವು ಮುಡಿಯುತ್ತಾರೆ. ಬದಲಾದ ಕಾಲಕ್ಕೆ ತಕ್ಕಂತೆ ನಿನ್ನ ಚಾರ್ಲಿ ಸೆಂಟಿನಲ್ಲಿ ಜಾಸ್ಮಿನ್ ಪರಿಮಳ ಇರುತ್ತದೆ.&lt;br /&gt;Five point someoneನ ಲೇಖನವನ್ನೇ ತೆಗೆದುಕೋ. ಅವನು ಬೆಳೆದ ವಾತಾವರಣವನ್ನು ಅವನ ಕಾಲೇಜ್ ದಿನಗಳನ್ನು ವರ್ಣಿಸುವ five point someone ಇಷ್ಟವಾಗುತ್ತದೆ. one night at call centre ಮನಸ್ಸಿಗೆ ತಟ್ಟುವುದೇ ಇಲ್ಲ.... ಬದಲಾದ ರಾಮಾಯಣಗಳು ಬಹಳಷ್ಟಿವೆ... ನಿನಗೆ ಯಾವುದು ತುಂಬ ಇಷ್ಟವಾಯಿತು?&lt;br /&gt;&lt;/p&gt;&lt;p&gt;ಉಹುಂ ನೀನು ಹೇಳಿದ್ದು ತಪ್ಪು ಅನ್ನುತ್ತಿಲ್ಲ ನಾನು. ನಿಜ ಕನ್ನಡದಲ್ಲಿ ಫ್ಯಾಂಟಸಿ, ರೋಮಾನ್ಸ್, ಫಿಕ್ಷನ್ ,ಪರಮಾಣು, ನಕ್ಷತ್ರ ,ಕೃಷಿ ಎಲ್ಲದರ ಬಗ್ಗೆ ಬರೆಯಬೇಕು. ಆದರೆ ಈಗ ಇರುವ, ಬರುತ್ತಿರುವ ಸಾಹಿತ್ಯವನ್ನು ಬರೀ ಕೋಸಂಬರಿ ಎಂದರೆ ಅರ್ಥಹೀನ. ನಿನಗೆ ಇಷ್ಟ ಆಗುತ್ತಿಲ್ಲ ಅಂತ ಹೇಳು ಬೇಕಾದರೆ. ನಿನಗೆ ಇಷ್ಟವಾದದ್ದನ್ನು ಆರಿಸಿಕೊಂಡು ಓದು. ಎಲ್ಲರೂ ತೇಜಸ್ವಿ, ಕಾರಂತ, ಬಿ.ಜಿ.ಎಲ್. ಸ್ವಾಮಿ ಆಗಲು ಸಾಧ್ಯವಿಲ್ಲ. ಅಂಥ ಪ್ರತಿಭಾವಂತರಿದ್ದರೆ ಏನೇ ತಿಪ್ಪರಲಾಗ ಹಾಕಿದರೂ ಅವರ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. survival of the fittest!&lt;br /&gt;&lt;/p&gt;&lt;p&gt;ಹೆಚ್ಚು ಹೇಳೋಲ್ಲ ನಾನು. ಇದಕ್ಕೆ ನೀನು ಉತ್ತರ ಬರೆಯಬಹುದು. ನಾನು ಉತ್ತರಿಸುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಮೂಗಿನ ನೇರಕ್ಕೆ ವಾದ ಮಾಡಿಕೊಂಡು ಹೋದರೆ ನನಗೆ ಅಂಥ ವಾದಗಳಲ್ಲಿ ನಂಬಿಕೆ ಇಲ್ಲ. ಭೈರಪ್ಪನವರ ವಂಶವೃಕ್ಷದಲ್ಲಿ ಶ್ರೀನಿವಾಸ ಶ್ರೋತ್ರಿಗಳು ಹೇಳುವಂತೆ “ಮೂಲ ದೃಷ್ಟಿಯಲ್ಲೇ ಭಿನ್ನತೆ ಇರುವಾಗ ಚರ್ಚೆಯಿಂದ ಯಾವ ಪ್ರಯೋಜನವೂ ಇಲ್ಲ".&lt;/p&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-6195463695940631436?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/6195463695940631436/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=6195463695940631436' title='17 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/6195463695940631436'/><link rel='self' type='application/atom+xml' href='http://www.blogger.com/feeds/714642904810204846/posts/default/6195463695940631436'/><link rel='alternate' type='text/html' href='http://mrugnayanee.blogspot.com/2008/07/blog-post_18.html' title='ನಿನ್ನ ಚಾರ್ಲೀ ಸೆಂಟೂ ಅವನ ಪಿಜ್ಜಾ ಬರ್ಗರ್ರೂ'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>17</thr:total></entry><entry><id>tag:blogger.com,1999:blog-714642904810204846.post-4151530951210506508</id><published>2008-07-10T13:07:00.002+05:30</published><updated>2008-07-19T14:40:45.300+05:30</updated><title type='text'>ನಿನಗಿದು ಅರ್ಥವಾಗುವುದಿಲ್ಲ ಎಂದು ಗೊತ್ತಿದ್ದೂ..</title><content type='html'>&lt;div align="left"&gt;'ಅವನು ಬಂದು ಇನ್ನೂ ಮೂರು ಗಳಿಗೆಗಳಾಗಿವೆ ಅಷ್ಟೇ..... ' ಎಂದು ನನ್ನ ಸಖಿಯರೊಂದಿಗೆ ನಾನು ಇಲ್ಲಿ ಉಸುರುತ್ತಿರುವಾಗಲೇ, ನೀನು ಅಲ್ಲಿ ನಿನ್ನ ಸ್ನೇಹಿತರ ಸಮ್ಮುಖದಲ್ಲಿ ನಾನು ಬಂದು ಮೂರು ವರುಷವಾಯಿತು ಎಂದು ಹೇಳುತ್ತಾ ಮೂರು ಪದವನ್ನು ಮೂರು ರಹದಾರಿ ಉದ್ದಕ್ಕೆ ಎಳೆದು ನಿಟ್ಟುಸಿರಿಟ್ಟೆ ಎಂಬ ಸುದ್ದಿ ಬಂದಿದೆ.&lt;br /&gt;&lt;/div&gt;&lt;div align="left"&gt;'ನನ್ನ ಹೆಂಡತಿಯನ್ನು ನೀಚನೊಬ್ಬ ಹೊತ್ತುಕೊಂಡು ಹೋಗಿದ್ದಾನೆ, ದಯವಿಟ್ಟು ಸಹಾಯ ಮಾಡಿ.' ಎಂದು ಕರೆದವನ ಕರೆಗೆ ತಕ್ಷಣ ಹೊರಟು ನಿಂತೆ. ಎಷ್ಟಾದರೂ ನೀ ಬಯಸಿದ ಹುಡುಗಿಯಲ್ಲವೇ ಅವಳು. ಯುದ್ಧಕ್ಕೆ ಸನ್ನದ್ಧನಾಗಿರುವ ಗಂಡನನ್ನು ತಡೆಯುವ ರಾಣಿ ರಾಣಿಯೇ? ಆದರೆ ಯುದ್ಧದ ಕಾರಣವೇ ನನ್ನ ಎದೆಯಲ್ಲಿ ಮತ್ಸರದ ಬೆಂಕಿಯನ್ನು ಹೊತ್ತಿಸಿತ್ತು. ಆದರೂ, ಚರಿತ್ರೆಯ ಅನೇಕ ನತದೃಷ್ಟ ರಾಣಿಯರಂತೆ ಎದೆಯುರಿಯನ್ನು ನಿರ್ಲಿಪ್ತ ಮುಖಭಾವದಲ್ಲೂ, ರಾಣೀತನದ ಗಾಂಭೀರ್ಯದಲ್ಲೂ ಬಚ್ಚಿಟ್ಟು ದೂರದೇಶಕ್ಕೆ ನಿನ್ನನ್ನು ಕಳುಹಿಸಿಕೊಟ್ಟೆ. ನಾನು ಹೋಗಬೇಡ ಎಂದಿದ್ದರೂ ನೀನು ಹೋಗದೇ ಉಳಿಯುತ್ತಿರಲಿಲ್ಲ ಅನ್ನುವದೂ ನನಗೆ ಗೊತ್ತಿತ್ತು.&lt;br /&gt;&lt;/div&gt;&lt;div align="left"&gt;ಸೇವಕ ಸೇವಕಿಯರು, ಸುರಿದುಕೊಳ್ಳುವಷ್ಟು ಸುಖ, ಸೌಕರ್ಯ, ಸಾಮ್ರಾಜ್ಯ, ಆದರೆ ಸಖನಿಲ್ಲ ಎಂದು ಮನಸ್ಸು ಯಾವುದೋ ಮೂಲೆಯಲ್ಲಿ ಕೊರಗುತ್ತಿದ್ದರೂ, ಎಲ್ಲರೂ ಹಾಗೇ ಕೊರಗುತ್ತಾರೆ, ನಾನು ಹಾಗಲ್ಲ ಎಂದು ನನ್ನನ್ನೇ ನಂಬಿಸಿಕೊಂಡೆ. ದೃಢವಾಗಿ ನಿಂತೆ. ಮಳೆಗಾಲದ ಹನಿಗಳು ಅಕ್ಷತೆಯಂತೆ ಎರಚಾಡುತ್ತಿದ್ದರೆ, ನನ್ನೊಳಗೆ ಕಡಲ ಆವೇಗ. ಅದಕ್ಕೆ ಕಾಳ್ಗಿಚ್ಚಿನಂತೆ ಹಬ್ಬುವ ವಿರಹದುರಿ. ನೀನು ನನ್ನನ್ನು ಅಪ್ಪಿ ಮುದ್ದಿಸಿದ ಸುಖದ ಹೊದಿಕೆ ನನ್ನನ್ನು ಸಂತೈಸುತ್ತಿತ್ತು.&lt;br /&gt;&lt;/div&gt;&lt;div align="left"&gt;ಯುದ್ಧ ಮುಗಿಯಿತು ಎಂಬ ಸುದ್ದಿ ಅಲ್ಲೆಲ್ಲಿಂದಲೋ ಬಂತು. ಉಳಿದ ಚೂರುಪಾರು ಕೌಮಾರ್ಯವನ್ನೇ ದಿಂಬಿನ ಕೆಳಗಿಟ್ಟು ಗರಿಗರಿಯಾಗಿಸಿಕೊಂಡು ಅಣಿಯಾದೆ. ಕ್ಷಣಕ್ಷಣವೂ ಕಾದೆ. ಬಳಸದೆ ಹೋದ ಲೋಹಕ್ಕೆ ಬೇಗ ತುಕ್ಕು ಹಿಡಿಯುವುದಂತೆ. ಬಳಸದೇ ಹೋದ ದೇಹ?&lt;br /&gt;&lt;/div&gt;&lt;div align="left"&gt;ತಡವಾಗಿ ಬಂದವನಿಗೆ ಸಾವಿರ ಕಾರಣಗಳಿದ್ದವು. ಮುಗಿಯದ ಯುದ್ಧ, ತಪ್ಪಿಹೋದ ದಾರಿ, ಗೆದ್ದ ಸಂಭ್ರಮ. ಕೊನೆಗೂ ಬಂದೆ; ಕೋಪದೊಳಗೂ ಖುಷಿಯಿತ್ತು. ಬಂದವನಿಗೆ ತನ್ನ ಸಾಹಸಗಳನ್ನು ವರ್ಣಿಸುವ ಹುರುಪು. ನಮಗೆ ಕೇಳಿಸಿಕೊಳ್ಳಲೇ ಬೇಕಾದ ಉತ್ಸಾಹ. ಹತ್ತು ವರ್ಷ ಅಹೋರಾತ್ರಿ ಹೇಳಿದರೂ ಮುಗಿಯದಷ್ಟು ಕತೆಯಿತ್ತು. ಕೇಳಿ ನಮಗೆ ಬೇಸರ ಆಗಲಿಲ್ಲ. ಹೇಳಿ ನಿನಗೆ ಬೇಸರವಾಯ್ತು. ಮತ್ತೆ ಹೊರಟು ನಿಂತಿರುವೆ.&lt;br /&gt;&lt;/div&gt;&lt;div align="left"&gt;ನನ್ನಲ್ಲೂ ಕತೆಗಳಿವೆ. ನನ್ನ ಯೌವನದುದ್ದಕ್ಕೂ ಅವು ಚಾಚಿಕೊಂಡಿವೆ. ಸವರದೇ ಉಳಿದ ನನ್ನ ದೇಹದ ಒಂದೊಂದು ಸುಕ್ಕೂ ಸಾವಿರ ಕತೆ ಹೇಳೀತು. ನೀನು ಬಿಟ್ಟು ಹೋದದ್ದನ್ನು ಆಳಿದ ಕತೆ, ಕೊಟ್ಟು ಹೋದದ್ದನ್ನು ಬೆಳೆಸಿದ ಕತೆ, ಬಿಟ್ಟು ಹೋದವನ ನೆನಪಲ್ಲಿ ಬೆಂದ ಕತೆ, ಅವನಿಗಾಗಿ ಕಾದ ಕತೆ. ಸಾವಿರ ಆಮಿಷಗಳ ಎದುರು ಅವನವಳಾಗಿಯೇ ಉಳಿದ ಕತೆ.&lt;br /&gt;ಕೇಳುವುದಕ್ಕೆ ನಿನಗೆ ಆಸಕ್ತಿಯಿಲ್ಲ. ಬಿಡುವಿಲ್ಲ. ಏಕಾಂತದಲ್ಲಿ ನಂಬಿಕೆಯಿಲ್ಲ. ನಾಯಕನಾದವನಿಗೆ ಜೊತೆಗೆ ಸಮೂಹ ಇರಬೇಕು. ಸಾಮೂಹಿಕವಾದದ್ದು ಪ್ರೀತಿ ಆಗಿರುವುದಿಲ್ಲ.&lt;br /&gt;ವರ್ಷಗಳ ಕಾಲ ಹೋರಾಡಿ, ಹಲವಾರು ಅನುಭವಗಳನ್ನು ಮೈಗೂಡಿಸಿಕೊಂಡ ಮನಸ್ಸು ಜಡ್ಡುಗಟ್ಟಿರುತ್ತದೆ. ಅದಕ್ಕೇ ನಿನಗೆ ನನ್ನ ದೇಹದ ಸುಕ್ಕು ಮಾತ್ರ ಕಾಣಿಸಿತು.&lt;br /&gt;ನನ್ನ ಯೌವನದಲ್ಲಿ ನೀನೆಲ್ಲಿದ್ದೆ?&lt;br /&gt;&lt;span style="color:#660000;"&gt;&lt;strong&gt;-ಪೆನಲೋಪೆ&lt;/strong&gt;&lt;/span&gt;&lt;/div&gt;&lt;div align="left"&gt;&lt;strong&gt;&lt;span style="color:#660000;"&gt;&lt;/span&gt;&lt;/strong&gt;&lt;/div&gt;&lt;div align="left"&gt;&lt;span style="color:#660000;"&gt;&lt;em&gt;&lt;span style="font-size:85%;"&gt;&lt;strong&gt;ಟಿಪ್ಪಣಿ- ಟೆನಿಸನ್ ಬರೆದ ಯೂಲಿಸಿಸ್ ಕವಿತೆ ಓದಿದ ತಕ್ಷಣ ಅನ್ನಿಸಿದ್ದು.&lt;/strong&gt; &lt;/span&gt;&lt;/em&gt;&lt;/span&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/714642904810204846-4151530951210506508?l=mrugnayanee.blogspot.com' alt='' /&gt;&lt;/div&gt;</content><link rel='replies' type='application/atom+xml' href='http://mrugnayanee.blogspot.com/feeds/4151530951210506508/comments/default' title='Post Comments'/><link rel='replies' type='text/html' href='http://www.blogger.com/comment.g?blogID=714642904810204846&amp;postID=4151530951210506508' title='7 Comments'/><link rel='edit' type='application/atom+xml' href='http://www.blogger.com/feeds/714642904810204846/posts/default/4151530951210506508'/><link rel='self' type='application/atom+xml' href='http://www.blogger.com/feeds/714642904810204846/posts/default/4151530951210506508'/><link rel='alternate' type='text/html' href='http://mrugnayanee.blogspot.com/2008/07/blog-post.html' title='ನಿನಗಿದು ಅರ್ಥವಾಗುವುದಿಲ್ಲ ಎಂದು ಗೊತ್ತಿದ್ದೂ..'/><author><name>mruganayanee</name><uri>http://www.blogger.com/profile/02254748139334543318</uri><email>noreply@blogger.com</email><gd:image rel='http://schemas.google.com/g/2005#thumbnail' width='24' height='32' src='http://4.bp.blogspot.com/_CV70S6yiPjU/S6uzaWbx3DI/AAAAAAAAACA/W7my_yd6ofY/S220/purple.jpg'/></author><thr:total>7</thr:total></entry></feed>
